Homeಕರ್ನಾಟಕರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

- Advertisement -
- Advertisement -

”ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ ಮುಂದೆ ಬಹಿರಂಗಪಡಿಸುತ್ತೇನೆ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ”ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡಲು, ಬಡವರಿಗೆ ಅಕ್ಕಿ ನೀಡದಿರಲು ಕೇಂದ್ರ ಸರಕಾರವು ತೀರ್ಮಾನಿಸಿದೆ. ಪುಕ್ಕಟೆಯಾಗಿ ಅಕ್ಕಿ ನೀಡಿ ಎಂದು ನಾವು ಅವರಿಗೆ ಕೇಳಿರಲಿಲ್ಲ. ಭಾರತೀಯ ಆಹಾರ ಪ್ರಾಧಿಕಾರ ದೇಶದಲ್ಲಿ ರೈತರಿಂದ ದವಸ ಧಾನ್ಯಗಳನ್ನು ಖರೀದಿ ಮಾಡಿ ದಾಸ್ತಾನು ಮಾಡುವ ವ್ಯವಸ್ಥೆ ಇದೆ” ಎಂದರು.

”ಸದ್ಯ ದಾಸ್ತಾನಿನಲ್ಲಿ ಅಕ್ಕಿ ಇದೆ. ಆರಂಭದಲ್ಲಿ ಅಕ್ಕಿ ನೀಡಲು ಒಪ್ಪಿದವರು, ನಂತರ ಅದನ್ನು ನಿರಾಕರಿಸಿದ್ದಾರೆ. ಹೀಗಾಗಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದಿಂದ ನಾಳೆ ಪ್ರತಿಭಟನೆ ಮಾಡಲಾಗುತ್ತಿದೆ. ಪಕ್ಷದ ಎಲ್ಲಾ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ನಾನು ಸಹ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇನೆ” ಎಂದು ತಿಳಿಸಿದರು.

ಅಶೋಕ್ ತಮ್ಮ ತಟ್ಟೆಯಲ್ಲಿರುವ ಹೆಗ್ಗಣ ತೆಗೆಯಲಿ:

ಆರ್ ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ”ಅಶೋಕ್ ಅವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ” ಎಂದರು.

”ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ” ಎಂದು ತಿಳಿಸಿದರು.

ಇದನ್ನೂ ಓದಿ: ಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ:

ಡಿ.ಕೆ. ಸುರೇಶ್ ಅವರು ರಾಜಕೀಯ ವೈರಾಗ್ಯದ ಕುರಿತು ಮಾತನಾಡಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆ ಉತ್ತರಿಸಿದ ಶಿಕೆ ಶಿವಕುಮಾರ್, ”ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ” ಎಂದರು.

”ಪಕ್ಷದ ಪ್ರಣಾಳಿಕೆ ಜಾರಿ, ನಾವು ಕೊಟ್ಟ ಮಾತು ಉಳಿಸಿಕೊಳ್ಳಬೇಕು, ಎಚ್ಚರಿಕೆಯಿಂದ ಜನರ ಸೇವೆ, ಸಂಸತ್ ಚುನಾವಣೆಯಲ್ಲಿ ಕಾರ್ಯಕರ್ತರ ಸಂಘಟನೆ ಮಾಡಲು ಜಿಲ್ಲಾ ಉಸ್ತುವಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಮತ್ತೆ ಕೆಲವರಿಗೆ ಜಾಬ್ದಾರಿ ನೀಡಬೇಕಿದೆ. ಉತ್ತಮ ಆಡಳಿತ ನೀಡುವುದು ಸೇರಿದಂತೆ ಅನೇಕ ವಿಚಾರವಾಗಿ ಚರ್ಚೆ ಮಾಡಲಾಗುವುದು. ನಮ್ಮ ನಾಯಕರುಗಳು ನಮ್ಮ ಅಧ್ಯಕ್ಷರು ಹಾಗೂ ಹೈಕಮಾಂಡ್ ಭೇಟಿಗೆ ಕಾಲವಕಾಶ ಕೇಳುತ್ತಿದ್ದರು. ಹೀಗಾಗಿ ಎಲ್ಲರನ್ನು ಒಟ್ಟಿಗೆ ಕರೆಸಲು ನಮ್ಮ ನಾಯಕರು ತೀರ್ಮಾನಿಸಿದ್ದಾರೆ. ಅವರು ಒಂದು ದಿನಾಂಕ ನೀಡಿದ್ದು, ಇನ್ನು ಅಂತಿಮವಾಗಿಲ್ಲ. ಇಂದು ಅಂತಿಮ ದಿನಾಂಕದ ಬಗ್ಗೆ ಮಾಹಿತಿ ನೀಡಲಿದ್ದಾರೆ” ಎಂದು ತಿಳಿಸಿದರು.

ಪರಿಷತ್ ಸ್ಥಾನಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಸಿ, ”ನಾಮಪತ್ರ ಸಲ್ಲಿಸಲು ನಾಳೆಯವರೆಗೂ ಕಾಲಾವಕಾಶವಿದೆ. ನಮ್ಮ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದರಂತೆ ಅವಕಾಶ ನೀಡಲಾಗುವುದು. ನಾಮಪತ್ರ ಸಲ್ಲಿಕೆ ಮಾಡುವಾಗ ಯಾರು ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದು ತಿಳಿಯಲಿದೆ” ಎಂದು ಡಿಕೆ ಶಿವಕುಮಾರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...