Homeಕರ್ನಾಟಕರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

- Advertisement -
- Advertisement -

”ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ ಮುಂದೆ ಬಹಿರಂಗಪಡಿಸುತ್ತೇನೆ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ”ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡಲು, ಬಡವರಿಗೆ ಅಕ್ಕಿ ನೀಡದಿರಲು ಕೇಂದ್ರ ಸರಕಾರವು ತೀರ್ಮಾನಿಸಿದೆ. ಪುಕ್ಕಟೆಯಾಗಿ ಅಕ್ಕಿ ನೀಡಿ ಎಂದು ನಾವು ಅವರಿಗೆ ಕೇಳಿರಲಿಲ್ಲ. ಭಾರತೀಯ ಆಹಾರ ಪ್ರಾಧಿಕಾರ ದೇಶದಲ್ಲಿ ರೈತರಿಂದ ದವಸ ಧಾನ್ಯಗಳನ್ನು ಖರೀದಿ ಮಾಡಿ ದಾಸ್ತಾನು ಮಾಡುವ ವ್ಯವಸ್ಥೆ ಇದೆ” ಎಂದರು.

”ಸದ್ಯ ದಾಸ್ತಾನಿನಲ್ಲಿ ಅಕ್ಕಿ ಇದೆ. ಆರಂಭದಲ್ಲಿ ಅಕ್ಕಿ ನೀಡಲು ಒಪ್ಪಿದವರು, ನಂತರ ಅದನ್ನು ನಿರಾಕರಿಸಿದ್ದಾರೆ. ಹೀಗಾಗಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದಿಂದ ನಾಳೆ ಪ್ರತಿಭಟನೆ ಮಾಡಲಾಗುತ್ತಿದೆ. ಪಕ್ಷದ ಎಲ್ಲಾ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ನಾನು ಸಹ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇನೆ” ಎಂದು ತಿಳಿಸಿದರು.

ಅಶೋಕ್ ತಮ್ಮ ತಟ್ಟೆಯಲ್ಲಿರುವ ಹೆಗ್ಗಣ ತೆಗೆಯಲಿ:

ಆರ್ ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ”ಅಶೋಕ್ ಅವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ” ಎಂದರು.

”ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ” ಎಂದು ತಿಳಿಸಿದರು.

ಇದನ್ನೂ ಓದಿ: ಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ:

ಡಿ.ಕೆ. ಸುರೇಶ್ ಅವರು ರಾಜಕೀಯ ವೈರಾಗ್ಯದ ಕುರಿತು ಮಾತನಾಡಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆ ಉತ್ತರಿಸಿದ ಶಿಕೆ ಶಿವಕುಮಾರ್, ”ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ” ಎಂದರು.

”ಪಕ್ಷದ ಪ್ರಣಾಳಿಕೆ ಜಾರಿ, ನಾವು ಕೊಟ್ಟ ಮಾತು ಉಳಿಸಿಕೊಳ್ಳಬೇಕು, ಎಚ್ಚರಿಕೆಯಿಂದ ಜನರ ಸೇವೆ, ಸಂಸತ್ ಚುನಾವಣೆಯಲ್ಲಿ ಕಾರ್ಯಕರ್ತರ ಸಂಘಟನೆ ಮಾಡಲು ಜಿಲ್ಲಾ ಉಸ್ತುವಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಮತ್ತೆ ಕೆಲವರಿಗೆ ಜಾಬ್ದಾರಿ ನೀಡಬೇಕಿದೆ. ಉತ್ತಮ ಆಡಳಿತ ನೀಡುವುದು ಸೇರಿದಂತೆ ಅನೇಕ ವಿಚಾರವಾಗಿ ಚರ್ಚೆ ಮಾಡಲಾಗುವುದು. ನಮ್ಮ ನಾಯಕರುಗಳು ನಮ್ಮ ಅಧ್ಯಕ್ಷರು ಹಾಗೂ ಹೈಕಮಾಂಡ್ ಭೇಟಿಗೆ ಕಾಲವಕಾಶ ಕೇಳುತ್ತಿದ್ದರು. ಹೀಗಾಗಿ ಎಲ್ಲರನ್ನು ಒಟ್ಟಿಗೆ ಕರೆಸಲು ನಮ್ಮ ನಾಯಕರು ತೀರ್ಮಾನಿಸಿದ್ದಾರೆ. ಅವರು ಒಂದು ದಿನಾಂಕ ನೀಡಿದ್ದು, ಇನ್ನು ಅಂತಿಮವಾಗಿಲ್ಲ. ಇಂದು ಅಂತಿಮ ದಿನಾಂಕದ ಬಗ್ಗೆ ಮಾಹಿತಿ ನೀಡಲಿದ್ದಾರೆ” ಎಂದು ತಿಳಿಸಿದರು.

ಪರಿಷತ್ ಸ್ಥಾನಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಸಿ, ”ನಾಮಪತ್ರ ಸಲ್ಲಿಸಲು ನಾಳೆಯವರೆಗೂ ಕಾಲಾವಕಾಶವಿದೆ. ನಮ್ಮ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದರಂತೆ ಅವಕಾಶ ನೀಡಲಾಗುವುದು. ನಾಮಪತ್ರ ಸಲ್ಲಿಕೆ ಮಾಡುವಾಗ ಯಾರು ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದು ತಿಳಿಯಲಿದೆ” ಎಂದು ಡಿಕೆ ಶಿವಕುಮಾರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...