Homeಕರ್ನಾಟಕರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

- Advertisement -
- Advertisement -

”ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ ಮುಂದೆ ಬಹಿರಂಗಪಡಿಸುತ್ತೇನೆ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ”ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡಲು, ಬಡವರಿಗೆ ಅಕ್ಕಿ ನೀಡದಿರಲು ಕೇಂದ್ರ ಸರಕಾರವು ತೀರ್ಮಾನಿಸಿದೆ. ಪುಕ್ಕಟೆಯಾಗಿ ಅಕ್ಕಿ ನೀಡಿ ಎಂದು ನಾವು ಅವರಿಗೆ ಕೇಳಿರಲಿಲ್ಲ. ಭಾರತೀಯ ಆಹಾರ ಪ್ರಾಧಿಕಾರ ದೇಶದಲ್ಲಿ ರೈತರಿಂದ ದವಸ ಧಾನ್ಯಗಳನ್ನು ಖರೀದಿ ಮಾಡಿ ದಾಸ್ತಾನು ಮಾಡುವ ವ್ಯವಸ್ಥೆ ಇದೆ” ಎಂದರು.

”ಸದ್ಯ ದಾಸ್ತಾನಿನಲ್ಲಿ ಅಕ್ಕಿ ಇದೆ. ಆರಂಭದಲ್ಲಿ ಅಕ್ಕಿ ನೀಡಲು ಒಪ್ಪಿದವರು, ನಂತರ ಅದನ್ನು ನಿರಾಕರಿಸಿದ್ದಾರೆ. ಹೀಗಾಗಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದಿಂದ ನಾಳೆ ಪ್ರತಿಭಟನೆ ಮಾಡಲಾಗುತ್ತಿದೆ. ಪಕ್ಷದ ಎಲ್ಲಾ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ನಾನು ಸಹ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇನೆ” ಎಂದು ತಿಳಿಸಿದರು.

ಅಶೋಕ್ ತಮ್ಮ ತಟ್ಟೆಯಲ್ಲಿರುವ ಹೆಗ್ಗಣ ತೆಗೆಯಲಿ:

ಆರ್ ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ”ಅಶೋಕ್ ಅವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ” ಎಂದರು.

”ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ” ಎಂದು ತಿಳಿಸಿದರು.

ಇದನ್ನೂ ಓದಿ: ಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ:

ಡಿ.ಕೆ. ಸುರೇಶ್ ಅವರು ರಾಜಕೀಯ ವೈರಾಗ್ಯದ ಕುರಿತು ಮಾತನಾಡಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆ ಉತ್ತರಿಸಿದ ಶಿಕೆ ಶಿವಕುಮಾರ್, ”ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ” ಎಂದರು.

”ಪಕ್ಷದ ಪ್ರಣಾಳಿಕೆ ಜಾರಿ, ನಾವು ಕೊಟ್ಟ ಮಾತು ಉಳಿಸಿಕೊಳ್ಳಬೇಕು, ಎಚ್ಚರಿಕೆಯಿಂದ ಜನರ ಸೇವೆ, ಸಂಸತ್ ಚುನಾವಣೆಯಲ್ಲಿ ಕಾರ್ಯಕರ್ತರ ಸಂಘಟನೆ ಮಾಡಲು ಜಿಲ್ಲಾ ಉಸ್ತುವಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಮತ್ತೆ ಕೆಲವರಿಗೆ ಜಾಬ್ದಾರಿ ನೀಡಬೇಕಿದೆ. ಉತ್ತಮ ಆಡಳಿತ ನೀಡುವುದು ಸೇರಿದಂತೆ ಅನೇಕ ವಿಚಾರವಾಗಿ ಚರ್ಚೆ ಮಾಡಲಾಗುವುದು. ನಮ್ಮ ನಾಯಕರುಗಳು ನಮ್ಮ ಅಧ್ಯಕ್ಷರು ಹಾಗೂ ಹೈಕಮಾಂಡ್ ಭೇಟಿಗೆ ಕಾಲವಕಾಶ ಕೇಳುತ್ತಿದ್ದರು. ಹೀಗಾಗಿ ಎಲ್ಲರನ್ನು ಒಟ್ಟಿಗೆ ಕರೆಸಲು ನಮ್ಮ ನಾಯಕರು ತೀರ್ಮಾನಿಸಿದ್ದಾರೆ. ಅವರು ಒಂದು ದಿನಾಂಕ ನೀಡಿದ್ದು, ಇನ್ನು ಅಂತಿಮವಾಗಿಲ್ಲ. ಇಂದು ಅಂತಿಮ ದಿನಾಂಕದ ಬಗ್ಗೆ ಮಾಹಿತಿ ನೀಡಲಿದ್ದಾರೆ” ಎಂದು ತಿಳಿಸಿದರು.

ಪರಿಷತ್ ಸ್ಥಾನಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಸಿ, ”ನಾಮಪತ್ರ ಸಲ್ಲಿಸಲು ನಾಳೆಯವರೆಗೂ ಕಾಲಾವಕಾಶವಿದೆ. ನಮ್ಮ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದರಂತೆ ಅವಕಾಶ ನೀಡಲಾಗುವುದು. ನಾಮಪತ್ರ ಸಲ್ಲಿಕೆ ಮಾಡುವಾಗ ಯಾರು ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದು ತಿಳಿಯಲಿದೆ” ಎಂದು ಡಿಕೆ ಶಿವಕುಮಾರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...