Homeಸಿನಿಮಾಕ್ರೀಡೆಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯಲ್ಲಿ ಇಬ್ಬಂದಿತನವಿದೆ: ಸುನೀಲ್ ಗಾವಾಸ್ಕರ್‌

ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯಲ್ಲಿ ಇಬ್ಬಂದಿತನವಿದೆ: ಸುನೀಲ್ ಗಾವಾಸ್ಕರ್‌

ಈ ನಿಮಯಗಳ ಬಗ್ಗೆ ಯಾವ ಆಟಗಾರ ಆದರೂ ಆಶ್ಚರ್ಯಪಟ್ಟುಕೊಳ್ಳುತ್ತಾನೆ, ಆದರೆ ಹೊಸಬರು ಅದರ ಬಗ್ಗೆ ಶಬ್ದ ಎತ್ತುವ ಹಾಗಿಲ್ಲ ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯಲ್ಲಿ ಇಬ್ಬಗೆಯ ನೀತಿಯಿದೆ ಎಂದಿರುವ ಭಾರತ ಕ್ರಿಕೆಟ್ ತಂಡ ಮಾಜಿ ನಾಯಕ ಸುನೀಲ್ ಗಾವಸ್ಕರ್, “ಭಾರತದ ಡ್ರೆಸ್ಸಿಂಗ್ ರೂಮ್‌ನಲ್ಲಿ ಒಬ್ಬೊಬ್ಬರಿಗೆ ಒಂದೊಂದು ನಿಯಮವಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಪೋಟ್ಸ್‌ಸ್ಟಾರ್ ವೆಬ್‌ಸೈಟ್‌ತಮ್ಮ ಅಂಕಣದಲ್ಲಿ ಭಾರತೀಯ ಆಡಳಿತ ಮಂಡಳಿಯು ವಿಭಿನ್ನ ಆಟಗಾರರನ್ನು ವಿಭಿನ್ನ ರೀತಿಯಲ್ಲಿ ನಡೆಸಿಕೊಂಡ ರೀತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ತಮ್ಮ ಅಂಕಣದಲ್ಲಿ ಎಡಗೈ ವೇಗದ ಬೌಲರ್ ಟಿ.ನಟರಾಜನ್ ಅವರನ್ನು ಉಲ್ಲೇಖಿಸಿರುವ ಅವರು, ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯ ಈ ನಿಯಮಗಳು ಹೊಸ ಆಟಗಾರರಿಗೆ ಅಚ್ಚರಿಯಾಗಿರಬಹುದು, ಆದರೆ ಅವರು ಏನೂ ಹೇಳುವಂತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿರಾಟ್ ಕೋಹ್ಲಿಗೆ ಆಸೀಸ್ ಸರಣಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ತವರಿಗೆ ಹಿಂತಿರುಗಲು ಬಿಸಿಸಿಐ ಅವಕಾಶ ಮಾಡಿಕೊಟ್ಟಿದೆ. ಆದರೆ ಅತ್ತ ತಮ್ಮ ಚೊಚ್ಚಲ ಸರಣಿಯಲ್ಲೇ ಗಮನಾರ್ಹ ಪ್ರದರ್ಶನ ನೀಡಿರುವ ಯುವ ಎಡಗೈ ವೇಗಿ ತಂಗರಸು ನಟರಾಜನ್ ಅವರಿಗೆ ಈ ಅವಕಾಶವನ್ನು ಬಿಸಿಸಿಐ ನೀಡಿಲ್ಲ ಎಂದು ಗವಾಸ್ಕರ್‌ ಕಟುವಾಗಿ ಟೀಕಿಸಿದ್ದಾರೆ.

“ಐಪಿಎಲ್ ಪ್ಲೇ-ಆಫ್ ನಡೆಯುತ್ತಿರುವಾಗಲೇ ತಂಗರಸು ಮೊದಲ ಬಾರಿಗೆ ಅಪ್ಪನಾಗಿದ್ದರು. ಅವರನ್ನು ತಂಡದ ಭಾಗವಾಗಿಸದೆ ನೆಟ್ ಬೌಲರ್ ಆಗಿ, ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಮುಂದುವರಿಯಲು ಕೇಳಲಾಗಿದೆ. ಓರ್ವ ಮ್ಯಾಚ್ ವಿನ್ನರ್ ಬೌಲರ್‌ಗೆ ನೆಟ್ ಬೌಲರ್ ಆಗಿ ಉಳಿದುಕೊಳ್ಳಲು ಹೇಳಲಾಗುತ್ತಿದೆ, ಅದನ್ನುಊಹಿಸಿ ನೋಡಿ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಮೋಚನೆಯ ಆಟವಾಗಿದ್ದ ಕ್ರಿಕೆಟ್ ಕೇವಲ ಬ್ಯಾಟ್ಸ್‌ಮನ್‌ಗಳ ಆಟವಾಗಿದ್ದು ಹೇಗೆ?

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಂಡದ ಮೀಟಿಂಗ್‌ನಲ್ಲಿ ಮನಬಿಚ್ಚಿ ನೇರವಾಗಿ ಮಾತನಾಡುತ್ತಾರೆ. ಹಾಗಾಗಿ ಒಂದು ಪಂದ್ಯದಲ್ಲಿ ಅಶ್ವಿನ್ ವಿಕೆಟ್‌ಗಳನ್ನು ಪಡೆಯದಿದ್ದರೆ ಮುಂದಿನ ಪಂದ್ಯದಿಂದ ಕೈಬಿಡಲಾಗುತ್ತದೆ. ಆದರೆ ತಂಡದ ಹಿರಿಯ ಬ್ಯಾಟ್ಸ್‌ಮನ್‌ಗಳಿಗೆ ಹೀಗಾಗುವುದಿಲ್ಲ” ಎಂದು ಗವಾಸ್ಕರ್ ಬೊಟ್ಟು ಮಾಡಿದ್ದಾರೆ.

ಈ ನಿಮಯಗಳ ಬಗ್ಗೆ ಯಾವ ಆಟಗಾರ ಆದರೂ ಆಶ್ಚರ್ಯಪಟ್ಟುಕೊಳ್ಳುತ್ತಾನೆ, ಆದರೆ ಹೊಸಬರು ಅದರ ಬಗ್ಗೆ ಶಬ್ದ ಎತ್ತುವ ಹಾಗಿಲ್ಲ. ಇದುವೇ ಟೀಮ್ ಇಂಡಿಯಾ. ವಿಭಿನ್ನ ಆಟಗಾರರಿಗೆ ವಿಭಿನ್ನ ನಿಯಮಗಳು. ನೀವು ನನ್ನನ್ನು ನಂಬದಿದ್ದರೆ ಅಶ್ವಿನ್ ಹಾಗೂ ನಟರಾಜನ್ ಅವರನ್ನೇ ಕೇಳಿ ಎಂದು ಸುನೀಲ್ ಗವಾಸ್ಕರ್ ತಮ್ಮ ಅಂಕಣದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕ್ರಿಕೆಟ್ ದೇವರು ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳ ಪಟ್ಟಿ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...