Homeಸಿನಿಮಾಕ್ರೀಡೆಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯಲ್ಲಿ ಇಬ್ಬಂದಿತನವಿದೆ: ಸುನೀಲ್ ಗಾವಾಸ್ಕರ್‌

ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯಲ್ಲಿ ಇಬ್ಬಂದಿತನವಿದೆ: ಸುನೀಲ್ ಗಾವಾಸ್ಕರ್‌

ಈ ನಿಮಯಗಳ ಬಗ್ಗೆ ಯಾವ ಆಟಗಾರ ಆದರೂ ಆಶ್ಚರ್ಯಪಟ್ಟುಕೊಳ್ಳುತ್ತಾನೆ, ಆದರೆ ಹೊಸಬರು ಅದರ ಬಗ್ಗೆ ಶಬ್ದ ಎತ್ತುವ ಹಾಗಿಲ್ಲ ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯಲ್ಲಿ ಇಬ್ಬಗೆಯ ನೀತಿಯಿದೆ ಎಂದಿರುವ ಭಾರತ ಕ್ರಿಕೆಟ್ ತಂಡ ಮಾಜಿ ನಾಯಕ ಸುನೀಲ್ ಗಾವಸ್ಕರ್, “ಭಾರತದ ಡ್ರೆಸ್ಸಿಂಗ್ ರೂಮ್‌ನಲ್ಲಿ ಒಬ್ಬೊಬ್ಬರಿಗೆ ಒಂದೊಂದು ನಿಯಮವಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಪೋಟ್ಸ್‌ಸ್ಟಾರ್ ವೆಬ್‌ಸೈಟ್‌ತಮ್ಮ ಅಂಕಣದಲ್ಲಿ ಭಾರತೀಯ ಆಡಳಿತ ಮಂಡಳಿಯು ವಿಭಿನ್ನ ಆಟಗಾರರನ್ನು ವಿಭಿನ್ನ ರೀತಿಯಲ್ಲಿ ನಡೆಸಿಕೊಂಡ ರೀತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ತಮ್ಮ ಅಂಕಣದಲ್ಲಿ ಎಡಗೈ ವೇಗದ ಬೌಲರ್ ಟಿ.ನಟರಾಜನ್ ಅವರನ್ನು ಉಲ್ಲೇಖಿಸಿರುವ ಅವರು, ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯ ಈ ನಿಯಮಗಳು ಹೊಸ ಆಟಗಾರರಿಗೆ ಅಚ್ಚರಿಯಾಗಿರಬಹುದು, ಆದರೆ ಅವರು ಏನೂ ಹೇಳುವಂತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜೀನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿರಾಟ್ ಕೋಹ್ಲಿಗೆ ಆಸೀಸ್ ಸರಣಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ತವರಿಗೆ ಹಿಂತಿರುಗಲು ಬಿಸಿಸಿಐ ಅವಕಾಶ ಮಾಡಿಕೊಟ್ಟಿದೆ. ಆದರೆ ಅತ್ತ ತಮ್ಮ ಚೊಚ್ಚಲ ಸರಣಿಯಲ್ಲೇ ಗಮನಾರ್ಹ ಪ್ರದರ್ಶನ ನೀಡಿರುವ ಯುವ ಎಡಗೈ ವೇಗಿ ತಂಗರಸು ನಟರಾಜನ್ ಅವರಿಗೆ ಈ ಅವಕಾಶವನ್ನು ಬಿಸಿಸಿಐ ನೀಡಿಲ್ಲ ಎಂದು ಗವಾಸ್ಕರ್‌ ಕಟುವಾಗಿ ಟೀಕಿಸಿದ್ದಾರೆ.

“ಐಪಿಎಲ್ ಪ್ಲೇ-ಆಫ್ ನಡೆಯುತ್ತಿರುವಾಗಲೇ ತಂಗರಸು ಮೊದಲ ಬಾರಿಗೆ ಅಪ್ಪನಾಗಿದ್ದರು. ಅವರನ್ನು ತಂಡದ ಭಾಗವಾಗಿಸದೆ ನೆಟ್ ಬೌಲರ್ ಆಗಿ, ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಮುಂದುವರಿಯಲು ಕೇಳಲಾಗಿದೆ. ಓರ್ವ ಮ್ಯಾಚ್ ವಿನ್ನರ್ ಬೌಲರ್‌ಗೆ ನೆಟ್ ಬೌಲರ್ ಆಗಿ ಉಳಿದುಕೊಳ್ಳಲು ಹೇಳಲಾಗುತ್ತಿದೆ, ಅದನ್ನುಊಹಿಸಿ ನೋಡಿ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಮೋಚನೆಯ ಆಟವಾಗಿದ್ದ ಕ್ರಿಕೆಟ್ ಕೇವಲ ಬ್ಯಾಟ್ಸ್‌ಮನ್‌ಗಳ ಆಟವಾಗಿದ್ದು ಹೇಗೆ?

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಂಡದ ಮೀಟಿಂಗ್‌ನಲ್ಲಿ ಮನಬಿಚ್ಚಿ ನೇರವಾಗಿ ಮಾತನಾಡುತ್ತಾರೆ. ಹಾಗಾಗಿ ಒಂದು ಪಂದ್ಯದಲ್ಲಿ ಅಶ್ವಿನ್ ವಿಕೆಟ್‌ಗಳನ್ನು ಪಡೆಯದಿದ್ದರೆ ಮುಂದಿನ ಪಂದ್ಯದಿಂದ ಕೈಬಿಡಲಾಗುತ್ತದೆ. ಆದರೆ ತಂಡದ ಹಿರಿಯ ಬ್ಯಾಟ್ಸ್‌ಮನ್‌ಗಳಿಗೆ ಹೀಗಾಗುವುದಿಲ್ಲ” ಎಂದು ಗವಾಸ್ಕರ್ ಬೊಟ್ಟು ಮಾಡಿದ್ದಾರೆ.

ಈ ನಿಮಯಗಳ ಬಗ್ಗೆ ಯಾವ ಆಟಗಾರ ಆದರೂ ಆಶ್ಚರ್ಯಪಟ್ಟುಕೊಳ್ಳುತ್ತಾನೆ, ಆದರೆ ಹೊಸಬರು ಅದರ ಬಗ್ಗೆ ಶಬ್ದ ಎತ್ತುವ ಹಾಗಿಲ್ಲ. ಇದುವೇ ಟೀಮ್ ಇಂಡಿಯಾ. ವಿಭಿನ್ನ ಆಟಗಾರರಿಗೆ ವಿಭಿನ್ನ ನಿಯಮಗಳು. ನೀವು ನನ್ನನ್ನು ನಂಬದಿದ್ದರೆ ಅಶ್ವಿನ್ ಹಾಗೂ ನಟರಾಜನ್ ಅವರನ್ನೇ ಕೇಳಿ ಎಂದು ಸುನೀಲ್ ಗವಾಸ್ಕರ್ ತಮ್ಮ ಅಂಕಣದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕ್ರಿಕೆಟ್ ದೇವರು ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳ ಪಟ್ಟಿ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...