Homeಆರೋಗ್ಯಕನ್ನಡಕ್ಕೆ ಕನ್ನಡದ್ದೆ ಊಟ ಉಂಟಾ? ಡಾ. ಕೆ.ಸಿ ರಘು

ಕನ್ನಡಕ್ಕೆ ಕನ್ನಡದ್ದೆ ಊಟ ಉಂಟಾ? ಡಾ. ಕೆ.ಸಿ ರಘು

ಆಹಾರ ಸಂಸ್ಕೃತಿಯೆಂದರೆ ಆಹಾರವನ್ನು ಸೇವಿಸುವಾಗ ಇಳಿವಯಸ್ಸಿನ ನೆನೆಪು ಮರುಕಳಿಸುವುದು. ಅಜ್ಜಿಯ ನೆನೆಪು ತರಿಸುವುದು. ತನ್ನ ಹುಟ್ಟೂರು ಮತ್ತು ಸಂಗಾತಿಗಳನ್ನು ಜೀವಂತಗೊಳಿಸುವುದು.

- Advertisement -
- Advertisement -

ಪ್ರತಿಯೊಂದು ದೇಶ, ರಾಜ್ಯ, ಜಿಲ್ಲೆ, ತಾಲೂಕು ಅಥವಾ ಗ್ರಾಮಗಳಲ್ಲಿನ ಸಮುದಾಯಗಳೆಲ್ಲವಕ್ಕೂ ತನ್ನದೇ ಆದ ಆಹಾರ ಸಂಸ್ಕೃತಿಯ ಬಗ್ಗೆ ಅಪಾರವಾದ ಗೌರವ ಮತ್ತು ಹೆಮ್ಮೆ ಇರುತ್ತದೆ. ಸ್ಥಳೀಯವಾಗಿ ಪ್ರಾಕೃತಿಕ ಪರಿಸರದಲ್ಲಿ ಲಭ್ಯವಿರುವ ಸಸ್ಯ, ಪ್ರಾಣಿ-ಮೀನುಗಳ ಆಧಾರದ ಮೇಲೆ ಆಹಾರ ಸಂಸ್ಕೃತಿಯೂ ವಿಕಾಸವಾಗಿರುತ್ತದೆ.

ಕೊಲಂಬಸ್ ದಕ್ಷಿಣ ಅಮೆರಿಕವನ್ನು ತಲುಪಿದ ಮೇಲೆ ಅಲ್ಲಿದ್ದ ಅಪಾರವಾದ ಆಹಾರ ವೈವಿಧ್ಯತೆ ಯುರೋಪ್ ಮತ್ತು ಏಷ್ಯಾ ಖಂಡಗಳಿಗೆ ತಲುಪುವಂತಾಯಿತು. ಇದನ್ನು ಕೊಲೊಂಬಿಯನ್ ಎಕ್ಸ್ಚೇಂಜ್ ಎನ್ನುತ್ತಾರೆ. ಅನಾನಸ್‍ಅನ್ನು ಹಿಂದೆಂದೂ ಕಾಣದ ಯುರೋಪಿಯನ್ನರು ಅದರ ಮೋಹದಿಂದ ಯುರೋಪಿನಲ್ಲಿ ಅನಾನಸ್ ತರದ ಕಟ್ಟಡಗಳನ್ನು ನಿರ್ಮಿಸಿ ಅದರ ವೈಭವವನ್ನು ಕೊಂಡಾಡಿದರು. ಅನೇಕ ಆರ್ಥಿಕ ತಜ್ಞರ ಪ್ರಕಾರ ದಕ್ಷಿಣ ಅಮೆರಿಕದ ಆಲೂಗಡ್ಡೆ ಯುರೋಪಿಯನ್ನರಿಗೆ ಸಿಕ್ಕದಿದ್ದಲ್ಲಿ ಅಲ್ಲಿ ಕೈಗಾರಿಕಾ ಕ್ರಾಂತಿಯೇ ಸಾಧ್ಯವಾಗುತ್ತಿರಲಿಲ್ಲ ಎನ್ನುತ್ತಾರೆ. ಹೊಟ್ಟೆಗೆ ಆಹಾರವಿದ್ದ ಕಾರಣ ಮನುಷ್ಯನ ಕ್ರಿಯಾತ್ಮಕ ಶಕ್ತಿ ನಗರ ನಿರ್ಮಾಣ ಮತ್ತು ಉತ್ಪಾದನೆಗೆ ಸಹಕರಿಸಿ ಕೈಗಾರಿಕಾ ಕ್ರಾಂತಿ ಉಂಟಾಯಿತು. ಬಿಜಿಎಲ್ ಸ್ವಾಮಿಯವರು ‘ನಮ್ಮ ಹೊಟ್ಟೆಯಲ್ಲಿ ದಕ್ಷಿಣ ಅಮೇರಿಕಾ’ ಎನ್ನುವ ಪುಸ್ತಕ ಬರೆದು ಇಂದು ನಾವು ನಮ್ಮದೇ ಎಂದುಕೊಳ್ಳುವ ಬ್ಯಾಡಗಿ ಮೆಣಸಿನಕಾಯಿ ಕೂಡ ದಕ್ಷಿಣ ಅಮೇರಿಕಾದ ಚಿಲಿಯಿಂದ ಬಂದಿದ್ದು ಎಂದ ಮೇಲೆ ಸ್ವಲ್ಪ ಮುಜುಗರವಾಗುತ್ತದೆ. ತಮಾಷೆಗಾಗಿ ಹೀಗೆ ಹೇಳುವುದುಂಟು. ಭಾರತೀಯರು ಏನೇ ತಿಂದರು ಅದು ಮೆಣಸಿನಕಾಯಿಗೋಸ್ಕರವೇ ಎಂದು.

ಅದೆಲ್ಲ ಹಾಗಿರಲಿ, ರಾಗಿ ಮುದ್ದೆ ನಮ್ಮದೆ ಅಲ್ಲವೇ ಎಂದು ಹೆಮ್ಮೆ ಪಡೋಣ ಎಂದುಕೊಂಡರೆ, ಮೂಲತಃ ರಾಗಿ ಆಫ್ರಿಕಾ ಖಂಡದ ಇಥಿಯೋಪಿಯಾದಿಂದ ಬಂದದ್ದು ಎನ್ನುವುದನ್ನು ಮರೆಯುವಂತಿಲ್ಲ. ಹಾಗೆ ನೋಡಿದರೆ ನಾವೆಲ್ಲರೂ ಸಹ ಸುಮಾರು ಎಪ್ಪತ್ತು ಸಾವಿರದ ವರ್ಷದ ಹಿಂದೆ ಆಫ್ರಿಕಾ ಖಂಡದಿಂದ ಹೊರಟು ಇಡೀ ಜಗತ್ತನ್ನು ಆವರಿಸಿಕೊಂಡ ಪ್ರಳಯಾಂತಕ ಪ್ರಾಣಿಗಳೆ. ಅಷ್ಟೇ ಅಲ್ಲ, ನಮ್ಮ ಕೃಷಿ ಕೂಡ ಕೇವಲ ಸುಮಾರು 15 ಸಾವಿರ ವರ್ಷ ಹಳೆಯದ್ದಷ್ಟು. ಅದಕ್ಕೂ ಹಿಂದೆ ನಾವೆಲ್ಲರೂ ಬೇಟೆಯಾಡಿ ಬದುಕುತ್ತಿದ್ದ ಪ್ರಾಣಿಗಳೆ. ಬೆನಿಡಿಕ್ಟ್ ಆಂಡರ್‍ಸನ್ ತನ್ನ ‘ಇಮ್ಯಾಜಿನ್ಡ್ ಕಮ್ಯುನಿಟಿ’ ಎನ್ನುವ ಪುಸ್ತಕದಲ್ಲಿ ರಾಷ್ಟ್ರ, ಜನಾಂಗ, ಸಮುದಾಯ ಎನ್ನುವುದೆಲ್ಲವೂ ಕಲ್ಪಿತವೇ ಎನ್ನುತ್ತಾನೆ. ಭಾಷೆ ಕೂಡ ನಮ್ಮದು ಎಂದು ಬಹಳ ಹೆಗ್ಗಳಿಕೆಯಿಂದ ಹೇಳುವಾಗ ನೋಮ್ ಚಾಮ್ಸ್‌ಕಿಯ ಯೂನಿವರ್ಸಲ್ ಗ್ರಾಮರ್ ಸಿದ್ಧಾಂತದ ಪ್ರಕಾರ ಭಾಷೆಗಿಂತ ಮೊದಲು ವ್ಯಾಕರಣದ ಹುಟ್ಟು ಎನ್ನುವುದನ್ನ ಮರೆಯುವಂತಿಲ್ಲ. ವ್ಯಾಕರಣ ನಮ್ಮ ಮೆದುಳಿನ ಭೌತಿಕ ಹೆಣಿಕೆ ಹುಟ್ಟಿನಿಂದಲೇ ಇರುವಂತದ್ದು. ಮನುಷ್ಯನ ಅಡುಗೆ ಕೂಡ ಬಹಳ ಪುರಾತನವಾದದ್ದೇನು ಅಲ್ಲ. ಮತ್ತೆ ಬೇಯಿಸದೇ ಇರುವ ಆಹಾರ ಸಂಸ್ಕೃತಿಯೂ (Paleo diet ) ಇದೆ ಎನ್ನುವುದನ್ನು ಮರೆಯುವಂತಿಲ್ಲ.

ಬೆಳೆದ ಮತ್ತು ಪೃಕೃತಿಯಲ್ಲಿಯೇ ಸ್ಥಳೀಯವಾಗಿ ದಕ್ಕುವ ಆಹಾರ ಸಾಮಗ್ರಿಗಳನ್ನು ಬಳಸಿಕೊಂಡು ತನ್ನದೇ ಆಹಾರ ಸಂಸ್ಕೃತಿಯನ್ನು ಪ್ರತಿಯೊಂದು ಸಮುದಾಯವೂ ರೂಪಿಸಿಕೊಂಡಿರುವುದನ್ನು ಮತ್ತು ಅದು ವಿಕಾಸವಾಗಿರುವುದನ್ನು ಗಮನಿಸಬಹುದು. ಎಷ್ಟು ರೀತಿಯಲ್ಲಿ ಸಾಂಬಾರು ಮತ್ತು ರಸಂ ಮಾಡುಬಹುದೆನ್ನುವುದನ್ನು ಊಹಿಸಲಾಗದು. ಗುಲಾಬಿಯ ಬಗ್ಗೆ ಎಷ್ಟು ರೀತಿಯ ಕವಿತೆಗಳನ್ನು ಬರೆಯಬಹುದೆಂಬುದಕ್ಕೆ ಇತಿಮಿತಿ ಇರುವುದಿಲ್ಲವೋ ಹಾಗೆಯೆ ಒಂದೇ ಸಾಮಾಗ್ರಿಯನ್ನು ಹತ್ತು ಹಲವು ಬಗೆಯಲ್ಲಿ ಅಡುಗೆಯಲ್ಲಿ ಅಳವಡಿಸಿಕೊಳ್ಳುವ ಸಾಧ್ಯತೆ ಇದ್ದೇ ಇರುತ್ತದೆ. ಆಹಾರ ಸಂಸ್ಕೃತಿ ಎನ್ನುವಾಗ ಸಾಮಾನ್ಯವಾಗಿ ನಾವು ಹೆಗ್ಗಳಿಕೆಯಿಂದ ಮಾತನಾಡುವುದು, ನಾವು ಕಲ್ಪಿಸಿಕೊಂಡಿರುವ ಶ್ರೇಷ್ಠ, ಶುದ್ಧ, ಉಚ್ಛ ಎನ್ನುವ ಆಹಾರ ಸಂಸ್ಕೃತಿಯ ಬಗ್ಗೆ. ಬುಡಕಟ್ಟು ಜನಾಂಗಗಳ ಮತ್ತು ತಳ ಸಮುದಾಯಗಳ ಬಹು ಆಹಾರ ಸಂಸ್ಕೃತಿಯನ್ನು ನಾವು ಅಷ್ಟಾಗಿ ವಿಜೃಂಭಿಸುವುದಿಲ್ಲ ಮತ್ತು ಅವುಗಳ ಬಗ್ಗೆ ಬಹಳ ಕೀಳರಿಮೆ ಉಳಿಸಿಕೊಂಡಿದ್ದೇವೆ. ಕರ್ನಾಟಕದಲ್ಲಿಯೇ ಸುಮಾರು ಸಾವಿರ ರೀತಿಯ ಕೀಟಗಳ ಭಕ್ಷಣೆ ಉಂಟು. ಕಾಡಿನ ವೈವಿಧ್ಯಮಯ ಸಂಪತ್ತನ್ನು ಅಡುಗೆಗೆ ಬಳಸುವುದುಂಟು. ವಿ.ಗಾಯಿತ್ರಿಯವರ ಪುಟ್ಟೀರಮ್ಮನ ಪುರಾಣ ಎನ್ನುವ ಪುಸ್ತಕದಲ್ಲಿ ನಂಜನಗೂಡಿನ ಅವಿದ್ಯಾವಂತ ಮಹಿಳೆ ಪುಟ್ಟೀರಮ್ಮ ಸುಮಾರು 300ಕ್ಕೂ ಹೆಚ್ಚು ಕಾಡು ಸೊಪ್ಪುಗಳನ್ನ ಅಡುಗೆಗೆ ಬಳಸುತ್ತಾಳೆ ಎಂದು ದಾಖಲಿಸಿದ್ದಾರೆ. ಇದು ನಿಜವಾದ ಆಹಾರ ಸಂಸ್ಕೃತಿ. ಸಾಮಾನ್ಯವಾಗಿ ಔಷಧೀಯ ಗಿಡವನ್ನು ಕಳೆಯನ್ನಾಗಿ ನೋಡುವವರನ್ನು ಇಂದು ವಿದ್ಯಾವಂತ ನಾಗರಿಕ ಎಂದು ನಾವು ಪರಿಗಣಿಸುತ್ತೇವೆ. ಮಾರ್ಕ್ ಟ್ವೈನ್ Cauliflower is a cabbage with college education ಎಂದು ಹೇಳಿದ್ದಾನೆ. ಸಮಾಜ ಶಾಸ್ತ್ರಜ್ಞ ಎಂ.ಎನ್.ಶ್ರೀನಿವಾಸ್ ಇರುಳಾ ಸಮುದಾಯದೊಂದಿಗೆ ಮಾತನಾಡುತ್ತ, ನೀವು ಇಲಿ ತಿನ್ನುತ್ತೀರಾ ಎಂದಾಗ ಅವರು ಕೋಪಗೊಂಡು ಇಲಿಗಳಲ್ಲಿರುವ ಹತ್ತಾರು ಬಗೆಯನ್ನು ಹೇಳಿ ನಾವು ಬಳಸುವ ಇಲಿಯ ಮೇಲೆ ಮೂರು ಗೆರೆಗಳುಂಟು ಎಂದು ಬಣ್ಣಿಸುತ್ತಾರೆ. ಹೀಗೆ ಇಂತಹ ಆಹಾರ ಸಂಸ್ಕೃತಿಗಳ ಬಗ್ಗೆ ಸಮಾಜ ಶಾಸ್ತ್ರೀಯ ಅಧ್ಯಯನವೂ ಬಹಳ ಕಮ್ಮಿ.

ಆಹಾರ ಸಂಸ್ಕೃತಿಯಲ್ಲಿ ಇದು ನಮ್ಮದೇ ಎಂದು ಹೇಳುವುದು ಬಹಳ ಕಷ್ಟ. ಉದಾಹರಣೆಗೆ ಪಶ್ಚಿಮ ಬಂಗಾಳಕ್ಕೆ ರಸಗುಲ್ಲಾದ ಭೌತಿಕ ಹಕ್ಕಾದ ಬೌಗೋಳಿಕ ಸೂಚ್ಯಂಕವನ್ನು (GI) ನೀಡಿದಾಗ ಒರಿಸ್ಸಾ ರಾಜ್ಯದವರು ತಕರಾರು ತಂದರು. ಏಕೆಂದರೆ ಅನೇಕ ವರ್ಷಗಳಿಂದ ರಸಗುಲ್ಲಾವನ್ನು ಪಕ್ಕದ ಹಳ್ಳಿಯೊಂದರಿಂದ ಪುರಿಯ ಜಗನ್ನಾಥ ದೇವಾಲಯಕ್ಕೆ ನೈವೇದ್ಯಕ್ಕೆ ತಂದುಕೊಡುತ್ತಿದ್ದ ತಿಂಡಿಯಾಗಿದೆ.

ಇಂತಹ ಸಂದರ್ಭದ ನಡುವೆಯೂ ನಮ್ಮ ಕನ್ನಡ ನಾಡಿನ ಆಹಾರ ಸಂಸ್ಕೃತಿಯನ್ನು ಅಲ್ಲಗಳೆಯುವುದು ಅಸಾಧ್ಯವೆ. ಕರ್ನಾಟಕದ ಆಹಾರ ಸಂಸ್ಕೃತಿಯೆಂದರೆ ನಮಗೆ ಎದ್ದು ಕಾಣುವುದು ದಕ್ಷಿಣ ಕರ್ನಾಟಕದ ಮುದ್ದೆ ಸೊಪ್ಪಿನ ಸಾರು, ಉತ್ತರ ಕರ್ನಾಟಕದ ಜೋಳದ ರೊಟ್ಟಿ ಎಣಗಾಯಿ ಪಲ್ಯ, ಮಂಗಳೂರಿನ ಕುಚ್ಚಲಕ್ಕಿ ಗಂಜಿ ಒಣಮೀನು, ಕೊಡವರ ಪಂದಿಕರಿ, ಮಲೆನಾಡಿನ ಅಕ್ಕಿರೊಟ್ಟಿ ಹೀಗೆ. ಮೂಲ ಊಟವನ್ನು ಬಿಟ್ಟು ಪರಿಗಣಿಸುವುದಾದರೆ ಧಾರವಾಡದ ಪೇಡ, ಬೆಳಗಾವಿಯ ಕುಂದಾ, ಮೈಸೂರು ಪಾಕ್, ಮಸಾಲಾ ದೋಸೆ, ಕರದಂಟು ಹೀಗೆ ಪಟ್ಟಿಮಾಡಬಹುದು. ಹಾಗೆಯೆ ಮಂಗಳೂರಿನ ಬ್ಯಾರಿ ಸಮುದಾಯದ ಊಟ, ಲಂಬಾಣಿಯವರ ಊಟ ಹೀಗೆ ಸಮುದಾಯದಿಂದ ಸಮುದಾಯಕ್ಕೆ ಸೂಕ್ಷ್ಮ ವ್ಯತ್ಯಾಸಗಳನ್ನು ಗಮನಿಸಬಹುದು.
ಉಡುಪಿಯ ಶಿವಳ್ಳಿ ಬ್ರಾಹ್ಮಣರು ಸೌಟು ಹಿಡಿದು ಇಡೀ ಭಾರತಕ್ಕೆ ತಮ್ಮ ಆಹಾರ ಸಂಸ್ಕೃತಿಯನ್ನು ಹೊಟೇಲ್ ವ್ಯಾಪಾರದ ಮೂಲಕ ಪಸರಿಸಿದ್ದಾರೆ. ಮುಂಬೈ ನಗರದಲ್ಲಿಯೇ ಸುಮಾರು 15 ಸಾವಿರ ಉಡುಪಿ ಹೋಟೆಲ್‍ಗಳಿವೆ ಎನ್ನುವ ಅಂದಾಜು. ದೆಹಲಿಯ ಮದ್ರಾಸ್ ಕೆಫೆ, ಚೆನ್ನೈನ ವುಡ್‍ಲ್ಯಾಂಡ್ಸ್ ಇವರು ಹುಟ್ಟುಹಾಕಿದ ಹೊಟೇಲ್‍ಗಳೆ.

ಇಂದು ಆಹಾರ ಸಂಸ್ಕೃತಿ ಅನೇಕ ಕೊಡುಕೊಳ್ಳುವಿಕೆಗಳ ಹಂತದಲ್ಲಿದೆ. ಜಾಗತೀಕರಣ, ಮನುಷ್ಯನ ಓಡಾಟ ಮತ್ತು ವಿಭಿನ್ನ ಸಂಸ್ಕೃತಿಗಳು ಪಸರುವಿಕೆಯ ಕಾರಣದಿಂದ ಆಹಾರ ಸಂಸ್ಕೃತಿಯಲ್ಲಿ ಹೊಸ ಹೊಸ ಬೆಸುಗೆ ಸಾಧ್ಯವಾಗಿದೆ. ಬೆಂಗಳೂರು ನಗರದಲ್ಲಿಯೇ ಇಂದು ಸುಮಾರು 20 ಜಪಾನಿ ಹೊಟೆಲ್‍ಗಳಿವೆ. ಆಹಾರ ಸಂಸ್ಕೃತಿ ಎಂಬುದು ಸಹ ನಿಂತ ನೀರಲ್ಲ. ಹೊಸ ಅಡುಗೆ ತಂತ್ರಜ್ಞಾನಗಳ ಮತ್ತು ಯಂತ್ರಗಳ ಅಳವಡಿಕೆಯೂ ಸಹ ಆಹಾರ ಸಂಸ್ಕೃತಿಯನ್ನು ಹೊಸ ದಿಕ್ಕಿನತ್ತ ಹರಿಸಬಹುದು.

ಆಹಾರ ಸಂಸ್ಕೃತಿಯೆಂದರೆ ಆಹಾರವನ್ನು ಸೇವಿಸುವಾಗ ಇಳಿವಯಸ್ಸಿನ ನೆನೆಪು ಮರುಕಳಿಸುವುದು. ಅಜ್ಜಿಯ ನೆನೆಪು ತರಿಸುವುದು. ತನ್ನ ಹುಟ್ಟೂರು ಮತ್ತು ಸಂಗಾತಿಗಳನ್ನು ಜೀವಂತಗೊಳಿಸುವುದು. ಹೀಗೆ Eating is a massive memory.

ಡಾ.ಕೆ. ಸಿ. ರಘು ಚಿಂತಕರು, ಆಹಾರ ತಜ್ಞರು

ಇದನ್ನೂ ಓದಿ: ಹತ್ರಾಸ್ ಪ್ರಕರಣ:’ಸೇಡು ತೀರಿಸಿಕೊಳ್ಳುವುದಲ್ಲ, ಬದಲಾವಣೆ ಬೇಕು’; ಮಹಿಳಾ ಸಂಘಟನೆಗಳು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...