Homeಕರ್ನಾಟಕಬಿಜೆಪಿಗರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆಯಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಗರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆಯಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಬಿಜೆಪಿ ಮತ್ತು ಸಂಘ ಪರಿವಾರದವರು ತೋರಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಅವರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದ ಬಗ್ಗೆ ಎಷ್ಟು ಅಸಹನೆ ಇದೆ ಎಂಬುವುದಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿವೇಕಾನಂದರ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ಇಂದಿನ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್‌ ದಾಸ್‌ ಅಗರ್ವಾಲ್‌ ಅವರು ವೇದಿಕೆಯ ಮೇಲೆ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರ ಯಾಕಿದೆ? ಎಂದು ಪ್ರಶ್ನಿಸುವ ಮೂಲಕ ಮೂಲಕ ಬಹಿರಂಗವಾಗಿಯೇ ತಮ್ಮ ಅಸಮಧಾನ ಹೊರಹಾಕಿದ್ದಾರೆ. ವಿವೇಕಾನಂದರ ಪುಣ್ಯಸ್ಮರಣೆಯ ದಿನದಂದೇ ಅವರನ್ನು ಅವಮಾನಿಸುವ ಮೂಲಕ ಬಿಜೆಪಿ ಇಡೀ ಹಿಂದೂ ಸಮಾಜಕ್ಕೆ ಅವಮಾನಗೈದಿದೆ ಎಂದಿದ್ದಾರೆ.

ಸಂಘಪರಿವಾರದವರೂ ವಿವೇಕಾನಂದರನ್ನು ಎಷ್ಟೇ ಹೊತ್ತು ಮುದ್ದಾಡಿದರೂ ಅವರು ಇಂದಿಗೂ ಬಿಜೆಪಿಗೆ ಪೂರ್ಣವಾಗಿ ದಕ್ಕಿಲ್ಲ, ಮುಂದೆ ದಕ್ಕುವುದೂ ಇಲ್ಲ. ವಿವೇಕಾನಂದರು ದ್ವೇಷದ ಬದಲಾಗಿ ಸಹೋದರತ್ವವನ್ನು, ಮೌಢ್ಯದ ಬದಲಾಗಿ ವೈಜ್ಞಾನಿಕ ಚಿಂತನೆಯನ್ನು, ಕೋಮುಗಲಭೆಗಳಿಗೆ ಬದಲಾಗಿ ಸರ್ವಧರ್ಮ ಸಹಬಾಳ್ಬೆಯನ್ನು ಹಿಂದೂ ಧರ್ಮದ ನೆಲೆಗಟ್ಟಿನಲ್ಲಿ ಪ್ರಚುಪಡಿಸಿದವರು ಎಂದು ಹೇಳಿದ್ದಾರೆ.

ಜಾಗತಿಕ ಸರ್ವಧರ್ಮ ಸಮ್ಮೇಳನದಲ್ಲಿ ಜಗತ್ತಿನ ನೂರಾರು ದೇಶಗಳಿಂದ ಆಗಮಿಸಿದ್ದ ಹತ್ತು ಹಲವು ಧರ್ಮ, ಸಂಸ್ಕೃತಿ, ಭಾಷೆಯ ಜನರನ್ನು ಮೈ ಡಿಯರ್‌ ಬ್ರದರ್ಸ್‌ ಎಂಡ್‌ ಸಿಸ್ಟರ್ಸ್‌ ( ನನ್ನ ಪ್ರೀತಿಯ ಸಹೋದರ – ಸಹೋದರಿಯರೇ ) ಎಂದು ಸಂಬೋಧಿಸಿದ್ದ ವಿವೇಕಾನಂದರು, ವಿಶ್ವಮಾನವ ಚಿಂತನೆಯೇ ಹಿಂದೂ ಧರ್ಮವೆಂದು ಹೇಳಿದವರು. ಆದರೆ ಬಿಜೆಪಿ ನಾಯಕರು ಬಾಯಿ ತೆರೆದರೆ ಹೊಡಿ, ಬಡಿ, ಕೊಲ್ಲು ಎಂದು ಹಿಂಸೆಗೆ ಪ್ರಚೋದನೆ ನೀಡುತ್ತಾರೆ ಎಂದಿದ್ದಾರೆ.

ಧರ್ಮ ರಕ್ಷಣೆಯ ಹೆಸರಲ್ಲಿ ದ್ವೇಷ ಬಿತ್ತುವ ಬಿಜೆಪಿಗೆ ವಿವೇಕಾನಂದರ ಈ ಚಿಂತನೆಗಳು ರುಚಿಸದು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯೂ ಹೊರತಾಗಿಲ್ಲ. ಇದೇ ಕಾರಣಕ್ಕೆ ಸಾವಿರಾರು ಜನರು ತುಂಬಿದ್ದ ಸಭೆಯಲ್ಲೇ ವಿವೇಕಾನಂದರ ಫೋಟೊ ಯಾಕಿದೆ? ಎಂದು ಕೇಳುವ ಧೈರ್ಯವನ್ನು ರಾಧಾಮೋಹನ್‌ ದಾಸ್‌ ಅವರು ಮಾಡಿದ್ದಾರೆ ಎಂದ ಟೀಕಿಸಿದ್ದಾರೆ.

ಓರ್ವ ಸಂತನಾಗಿ, ದಾರ್ಶನಿಕರಾಗಿ, ಮಹಾನ್ ಮಾನವತಾವಾದಿಯಾಗಿ ಸರ್ವರಿಂದಲೂ ಗೌರವಿಸಲ್ಪಡುವ, ಅನುಸರಿಸಲ್ಪಡುವ ವಿವೇಕಾನಂದರಿಗೆ ಅವಮಾನ ಮಾಡಿರುವ ಬಿಜೆಪಿ ಪಕ್ಷ ಅದೇ ವೇದಿಕೆಯಲ್ಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿಶೇಷ ತನಿಖೆಗೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...