Homeಕರ್ನಾಟಕಬಿಜೆಪಿಗರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆಯಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಗರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆಯಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಬಿಜೆಪಿ ಮತ್ತು ಸಂಘ ಪರಿವಾರದವರು ತೋರಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಅವರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದ ಬಗ್ಗೆ ಎಷ್ಟು ಅಸಹನೆ ಇದೆ ಎಂಬುವುದಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿವೇಕಾನಂದರ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ಇಂದಿನ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್‌ ದಾಸ್‌ ಅಗರ್ವಾಲ್‌ ಅವರು ವೇದಿಕೆಯ ಮೇಲೆ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರ ಯಾಕಿದೆ? ಎಂದು ಪ್ರಶ್ನಿಸುವ ಮೂಲಕ ಮೂಲಕ ಬಹಿರಂಗವಾಗಿಯೇ ತಮ್ಮ ಅಸಮಧಾನ ಹೊರಹಾಕಿದ್ದಾರೆ. ವಿವೇಕಾನಂದರ ಪುಣ್ಯಸ್ಮರಣೆಯ ದಿನದಂದೇ ಅವರನ್ನು ಅವಮಾನಿಸುವ ಮೂಲಕ ಬಿಜೆಪಿ ಇಡೀ ಹಿಂದೂ ಸಮಾಜಕ್ಕೆ ಅವಮಾನಗೈದಿದೆ ಎಂದಿದ್ದಾರೆ.

ಸಂಘಪರಿವಾರದವರೂ ವಿವೇಕಾನಂದರನ್ನು ಎಷ್ಟೇ ಹೊತ್ತು ಮುದ್ದಾಡಿದರೂ ಅವರು ಇಂದಿಗೂ ಬಿಜೆಪಿಗೆ ಪೂರ್ಣವಾಗಿ ದಕ್ಕಿಲ್ಲ, ಮುಂದೆ ದಕ್ಕುವುದೂ ಇಲ್ಲ. ವಿವೇಕಾನಂದರು ದ್ವೇಷದ ಬದಲಾಗಿ ಸಹೋದರತ್ವವನ್ನು, ಮೌಢ್ಯದ ಬದಲಾಗಿ ವೈಜ್ಞಾನಿಕ ಚಿಂತನೆಯನ್ನು, ಕೋಮುಗಲಭೆಗಳಿಗೆ ಬದಲಾಗಿ ಸರ್ವಧರ್ಮ ಸಹಬಾಳ್ಬೆಯನ್ನು ಹಿಂದೂ ಧರ್ಮದ ನೆಲೆಗಟ್ಟಿನಲ್ಲಿ ಪ್ರಚುಪಡಿಸಿದವರು ಎಂದು ಹೇಳಿದ್ದಾರೆ.

ಜಾಗತಿಕ ಸರ್ವಧರ್ಮ ಸಮ್ಮೇಳನದಲ್ಲಿ ಜಗತ್ತಿನ ನೂರಾರು ದೇಶಗಳಿಂದ ಆಗಮಿಸಿದ್ದ ಹತ್ತು ಹಲವು ಧರ್ಮ, ಸಂಸ್ಕೃತಿ, ಭಾಷೆಯ ಜನರನ್ನು ಮೈ ಡಿಯರ್‌ ಬ್ರದರ್ಸ್‌ ಎಂಡ್‌ ಸಿಸ್ಟರ್ಸ್‌ ( ನನ್ನ ಪ್ರೀತಿಯ ಸಹೋದರ – ಸಹೋದರಿಯರೇ ) ಎಂದು ಸಂಬೋಧಿಸಿದ್ದ ವಿವೇಕಾನಂದರು, ವಿಶ್ವಮಾನವ ಚಿಂತನೆಯೇ ಹಿಂದೂ ಧರ್ಮವೆಂದು ಹೇಳಿದವರು. ಆದರೆ ಬಿಜೆಪಿ ನಾಯಕರು ಬಾಯಿ ತೆರೆದರೆ ಹೊಡಿ, ಬಡಿ, ಕೊಲ್ಲು ಎಂದು ಹಿಂಸೆಗೆ ಪ್ರಚೋದನೆ ನೀಡುತ್ತಾರೆ ಎಂದಿದ್ದಾರೆ.

ಧರ್ಮ ರಕ್ಷಣೆಯ ಹೆಸರಲ್ಲಿ ದ್ವೇಷ ಬಿತ್ತುವ ಬಿಜೆಪಿಗೆ ವಿವೇಕಾನಂದರ ಈ ಚಿಂತನೆಗಳು ರುಚಿಸದು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯೂ ಹೊರತಾಗಿಲ್ಲ. ಇದೇ ಕಾರಣಕ್ಕೆ ಸಾವಿರಾರು ಜನರು ತುಂಬಿದ್ದ ಸಭೆಯಲ್ಲೇ ವಿವೇಕಾನಂದರ ಫೋಟೊ ಯಾಕಿದೆ? ಎಂದು ಕೇಳುವ ಧೈರ್ಯವನ್ನು ರಾಧಾಮೋಹನ್‌ ದಾಸ್‌ ಅವರು ಮಾಡಿದ್ದಾರೆ ಎಂದ ಟೀಕಿಸಿದ್ದಾರೆ.

ಓರ್ವ ಸಂತನಾಗಿ, ದಾರ್ಶನಿಕರಾಗಿ, ಮಹಾನ್ ಮಾನವತಾವಾದಿಯಾಗಿ ಸರ್ವರಿಂದಲೂ ಗೌರವಿಸಲ್ಪಡುವ, ಅನುಸರಿಸಲ್ಪಡುವ ವಿವೇಕಾನಂದರಿಗೆ ಅವಮಾನ ಮಾಡಿರುವ ಬಿಜೆಪಿ ಪಕ್ಷ ಅದೇ ವೇದಿಕೆಯಲ್ಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿಶೇಷ ತನಿಖೆಗೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...