Homeಕರ್ನಾಟಕಬಿಜೆಪಿಗರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆಯಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಗರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆಯಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಬಿಜೆಪಿ ಮತ್ತು ಸಂಘ ಪರಿವಾರದವರು ತೋರಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಅವರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದ ಬಗ್ಗೆ ಎಷ್ಟು ಅಸಹನೆ ಇದೆ ಎಂಬುವುದಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿವೇಕಾನಂದರ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ಇಂದಿನ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್‌ ದಾಸ್‌ ಅಗರ್ವಾಲ್‌ ಅವರು ವೇದಿಕೆಯ ಮೇಲೆ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರ ಯಾಕಿದೆ? ಎಂದು ಪ್ರಶ್ನಿಸುವ ಮೂಲಕ ಮೂಲಕ ಬಹಿರಂಗವಾಗಿಯೇ ತಮ್ಮ ಅಸಮಧಾನ ಹೊರಹಾಕಿದ್ದಾರೆ. ವಿವೇಕಾನಂದರ ಪುಣ್ಯಸ್ಮರಣೆಯ ದಿನದಂದೇ ಅವರನ್ನು ಅವಮಾನಿಸುವ ಮೂಲಕ ಬಿಜೆಪಿ ಇಡೀ ಹಿಂದೂ ಸಮಾಜಕ್ಕೆ ಅವಮಾನಗೈದಿದೆ ಎಂದಿದ್ದಾರೆ.

ಸಂಘಪರಿವಾರದವರೂ ವಿವೇಕಾನಂದರನ್ನು ಎಷ್ಟೇ ಹೊತ್ತು ಮುದ್ದಾಡಿದರೂ ಅವರು ಇಂದಿಗೂ ಬಿಜೆಪಿಗೆ ಪೂರ್ಣವಾಗಿ ದಕ್ಕಿಲ್ಲ, ಮುಂದೆ ದಕ್ಕುವುದೂ ಇಲ್ಲ. ವಿವೇಕಾನಂದರು ದ್ವೇಷದ ಬದಲಾಗಿ ಸಹೋದರತ್ವವನ್ನು, ಮೌಢ್ಯದ ಬದಲಾಗಿ ವೈಜ್ಞಾನಿಕ ಚಿಂತನೆಯನ್ನು, ಕೋಮುಗಲಭೆಗಳಿಗೆ ಬದಲಾಗಿ ಸರ್ವಧರ್ಮ ಸಹಬಾಳ್ಬೆಯನ್ನು ಹಿಂದೂ ಧರ್ಮದ ನೆಲೆಗಟ್ಟಿನಲ್ಲಿ ಪ್ರಚುಪಡಿಸಿದವರು ಎಂದು ಹೇಳಿದ್ದಾರೆ.

ಜಾಗತಿಕ ಸರ್ವಧರ್ಮ ಸಮ್ಮೇಳನದಲ್ಲಿ ಜಗತ್ತಿನ ನೂರಾರು ದೇಶಗಳಿಂದ ಆಗಮಿಸಿದ್ದ ಹತ್ತು ಹಲವು ಧರ್ಮ, ಸಂಸ್ಕೃತಿ, ಭಾಷೆಯ ಜನರನ್ನು ಮೈ ಡಿಯರ್‌ ಬ್ರದರ್ಸ್‌ ಎಂಡ್‌ ಸಿಸ್ಟರ್ಸ್‌ ( ನನ್ನ ಪ್ರೀತಿಯ ಸಹೋದರ – ಸಹೋದರಿಯರೇ ) ಎಂದು ಸಂಬೋಧಿಸಿದ್ದ ವಿವೇಕಾನಂದರು, ವಿಶ್ವಮಾನವ ಚಿಂತನೆಯೇ ಹಿಂದೂ ಧರ್ಮವೆಂದು ಹೇಳಿದವರು. ಆದರೆ ಬಿಜೆಪಿ ನಾಯಕರು ಬಾಯಿ ತೆರೆದರೆ ಹೊಡಿ, ಬಡಿ, ಕೊಲ್ಲು ಎಂದು ಹಿಂಸೆಗೆ ಪ್ರಚೋದನೆ ನೀಡುತ್ತಾರೆ ಎಂದಿದ್ದಾರೆ.

ಧರ್ಮ ರಕ್ಷಣೆಯ ಹೆಸರಲ್ಲಿ ದ್ವೇಷ ಬಿತ್ತುವ ಬಿಜೆಪಿಗೆ ವಿವೇಕಾನಂದರ ಈ ಚಿಂತನೆಗಳು ರುಚಿಸದು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯೂ ಹೊರತಾಗಿಲ್ಲ. ಇದೇ ಕಾರಣಕ್ಕೆ ಸಾವಿರಾರು ಜನರು ತುಂಬಿದ್ದ ಸಭೆಯಲ್ಲೇ ವಿವೇಕಾನಂದರ ಫೋಟೊ ಯಾಕಿದೆ? ಎಂದು ಕೇಳುವ ಧೈರ್ಯವನ್ನು ರಾಧಾಮೋಹನ್‌ ದಾಸ್‌ ಅವರು ಮಾಡಿದ್ದಾರೆ ಎಂದ ಟೀಕಿಸಿದ್ದಾರೆ.

ಓರ್ವ ಸಂತನಾಗಿ, ದಾರ್ಶನಿಕರಾಗಿ, ಮಹಾನ್ ಮಾನವತಾವಾದಿಯಾಗಿ ಸರ್ವರಿಂದಲೂ ಗೌರವಿಸಲ್ಪಡುವ, ಅನುಸರಿಸಲ್ಪಡುವ ವಿವೇಕಾನಂದರಿಗೆ ಅವಮಾನ ಮಾಡಿರುವ ಬಿಜೆಪಿ ಪಕ್ಷ ಅದೇ ವೇದಿಕೆಯಲ್ಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿಶೇಷ ತನಿಖೆಗೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...