Homeಮುಖಪುಟರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

ರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

“ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿದ್ದು ಸರ್ವಾಧಿಕಾರಿ ನಡೆ”

- Advertisement -
- Advertisement -

“ಕಾಂಗ್ರೆಸ್ ನಾಯಕ, ಮಯನಾಡ್ ಸಂಸದ ರಾಹುಲ್‌ ಗಾಂಧಿಯವರ ವಿರುದ್ಧ ಸೂರತ್‌ ಕೋರ್ಟ್ ನೀಡಿದ ತೀರ್ಪಿನಲ್ಲೇ ತಪ್ಪಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್‌ ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್‌ ಅವರನ್ನು ಲೋಕಸಭಾ ಸೆಕ್ರೆಟರಿಯೇಟ್‌ ಅನರ್ಹಗೊಳಿಸಿರುವ ಸಂಬಂಧ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಅವರು, “ಕ್ರಿಮಿನಲ್ ಮಾನನಷ್ಟ ಎಂಬುದನ್ನು ಕಾನೂನಿನ ಪುಸ್ತಕದಿಂದಲೇ ತೆಗೆದುಹಾಕಬೇಕಿದೆ. ಬ್ರಿಟಿಷರ ಕಾಲದ ಕಾನೂನು ಇದಾಗಿದೆ. ರಾಹುಲ್ ಗಾಂಧಿಯವರ ವಿರುದ್ಧದ ಪ್ರಕರಣದಲ್ಲಿ ಕ್ರಿಮಿನಲ್‌ ಮಾನನಷ್ಟ ಅಂಶ ಒಳಗೊಂಡಿಲ್ಲ” ಎಂದು ತಿಳಿಸಿದರು. (‘ಮೋದಿ’ ಸರ್‌ನೇಮ್‌ ಬಳಸಿದ ಹಿನ್ನೆಲೆಯಲ್ಲಿ ರಾಹುಲ್‌ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ 2019ರಲ್ಲಿ ದಾಖಲಾಗಿತ್ತು.)

“ಹೀಗಾಗಿ ಸೂರತ್‌ ಕೋರ್ಟ್ ನೀಡಿರುವ ತೀರ್ಪು ತಪ್ಪಾಗಿದೆ. ಅಲ್ಲದೆ ಮೂವತ್ತು ದಿನಗಳ ಕಾಲ ತೀರ್ಪಿಗೆ ತಡೆಯನ್ನೂ ನೀಡಲಾಗಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವಾಗ, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸುವುದು ಅಪ್ರಜಾಸತ್ತಾತ್ಮಕ ಮತ್ತು ಸಂವಿಧಾನ ವಿರೋಧಿ ನಡೆ” ಎಂದು ಆತಂಕ ವ್ಯಕ್ತಪಡಿಸಿದರು.

“ವಿರೋಧ ಪಕ್ಷಗಳನ್ನು ಸದೆಬಡಿಯುವ ನೀತಿ ಇದಾಗಿದೆ. ಒಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷಗಳಷ್ಟೇ ವಿರೋಧ ಪಕ್ಷಗಳು ಮುಖ್ಯವಾಗಿವೆ. ವಿರೋಧ ಪಕ್ಷಗಳೇ ಇರಬಾರದು ಎಂಬಂತೆ ಈ ನಿಲುವು ತೆಗೆದುಕೊಳ್ಳಲಾಗಿದೆ. ಇದು ಸರ್ವಾಧಿಕಾರದ ಲಕ್ಷಣವಾಗಿದೆ” ಎಂದು ಎಚ್ಚರಿಸಿದರು.

“ಒಂದು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ, ಕಾನೂನು ಸುವ್ಯವಸ್ಥೆ ಇರುವ ದೇಶದಲ್ಲಿ ಇದನ್ನು ಒಪ್ಪಲು ಸಾಧ್ಯವಿಲ್ಲ” ಎಂದರು.

ರಾಹುಲ್‌ಗೆ ವಿಧಿಸಿದ ಶಿಕ್ಷೆ ಮಾನನಷ್ಟ ಅಪರಾಧದ ಮಿತಿಯಿಂದ ಹೊರಗಿರುವಂತಿದೆ – ಅರವಿಂದ್ ನಾರಾಯಣ್

ಸೂರತ್‌ನ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವುದು ಮಾನನಷ್ಟ ಅಪರಾಧದ ಮಿತಿಯಿಂದ ಹೊರಗಿರುವಂತಿದೆ. IPC ಯ ಸೆಕ್ಷನ್ 499 ರ ಪ್ರಕಾರ, ಮಾನನಷ್ಟವು ತನ್ನ ಖ್ಯಾತಿಗೆ ಧಕ್ಕೆಯಾಗಿದೆ ಎಂದು ಭಾವಿಸುವ ವ್ಯಕ್ತಿಗೆ ಮಾತ್ರ ಸಂಬಂಧಿಸಿದೆ. ಹಾಗಾಗಿ ಮಾನನಷ್ಟ ಮೊಕದ್ದಮೆ ಹೂಡಲು ಸಮರ್ಥರೆಂದರೆ ನರೇಂದ್ರ ಮೋದಿ, ನೀರವ್ ಮೋದಿ ಅಥವಾ ಲಲಿತ್ ಮೋದಿ ಮಾತ್ರ. ಮೋದಿ ಹೆಸರಿನ ಯಾವುದೇ ಮೂರನೇ ವ್ಯಕ್ತಿಗೆ ಮಾನನಷ್ಟ ಅಪರಾಧವನ್ನು ಆವಾಹಿಸಿಕೊಳ್ಳುವ ಅರ್ಹತೆ ಇಲ್ಲ. ಏಕೆಂದರೆ ಮೋದಿ ಉಪನಾಮವಿರುವ ಎಲ್ಲಾ ವ್ಯಕ್ತಿಗಳನ್ನು ಮಾನನಷ್ಟಗೊಳಿಸುವ ಯಾವುದೇ ಸಾಮಾನ್ಯ ಅಪರಾಧವಿಲ್ಲ ಎಂದು ಕಾನೂನು ತಜ್ಞರು ಮತ್ತು ವಕೀಲರಾದ ಅರವಿಂದ್ ನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿಯೊಂದಿಗೆ ಮಾತನಾಡಿದ ಅವರು “ಕಪಿಲ್ ಸಿಬಲ್ ವಿಲಕ್ಷಣ ತೀರ್ಪು ಎಂದು ವಿವರಿಸಿದ ಸೂರತ್ ನ್ಯಾಯಾಲಯದ ತೀರ್ಪು ಬಂದ ಒಂದು ದಿನದೊಳಗೆ ರಾಹುಲ್ ಅವರನ್ನು ಅನರ್ಹಗೊಳಿಸಲು ಲೋಕಸಭೆ ಸೆಕ್ರೆಟರಿಯೇಟ್ ಮುಂದಾಗಿರುವುದು ಅಸಹಜವಾದ ಆತುರದ ನಡೆಯಾಗಿದೆ” ಎಂದಿದ್ದಾರೆ.

ಸೆಕ್ರೆಟರಿಯೇಟ್‌ನ ಈ ಕ್ರಮವು ದುರುದ್ದೇಶದಿಂದ ಕೂಡಿದೆ ಎಂದು ತೋರುತ್ತದೆ, ವಿಶೇಷವಾಗಿ ಸೂರತ್ ನ್ಯಾಯಾಲಯವು ಸ್ವತಃ ತನ್ನ ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತುಗೊಳಿಸಿದೆ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿಗೆ ಅವಕಾಶವನ್ನು ನೀಡಿದೆ. ಅವರು ಮೇಲ್ಮನವಿ ಸಲ್ಲಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಂತಹ ಸಂದರ್ಭದಲ್ಲಿ ಜನಪ್ರತಿನಿಧಿ ಕಾಯಿದೆಯಡಿಯಲ್ಲಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಲು ಕಾನೂನು ಅಧಿಕಾರಗಳ ಅನಿಯಂತ್ರಿತ ಶೈಲಿಯ ಆತುರದ ಅಧಿಕಾರದ ಚಲಾವಣೆಯಾಗಿದೆ ಎಂದಿದ್ದಾರೆ.

ಮೇಲಿನ ಕೋರ್ಟುಗಳು ಮಾನನಷ್ಟ ನಿಬಂಧನೆಯ ನಿಯಮಗಳೊಳಗೆ ಯಾವುದೇ ಅಪರಾಧವನ್ನು ಮಾಡಿಲ್ಲ ಎಂಬುದನ್ನು ಗಮನಿಸಿ ಸೂರತ್ ನ್ಯಾಯಾಲಯದ ತೀರ್ಪಿಗೆ ತಡೆ ನೀಡುತ್ತವೆ ಎಂದು ಆಶಿಸುತ್ತೇನೆ ಎಂದು ಅರವಿಂದ್ ನಾರಾಯಣ್ ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

ಕ್ರಿಮಿನಲ್ ಮಾನನಷ್ಟ ಕಾಯ್ದೆಯೇ ಅನುಚಿತ: ಎಚ್.ಎನ್.ನಾಗಮೋಹನದಾಸ್‌

“ಭಾರತ ದೇಶದ ಸ್ವಾತಂತ್ರ್ಯ ಚಳವಳಿಯನ್ನು ಹತ್ತಿಕ್ಕಲು ಮೂರು ಮಾರ್ಗಗಳನ್ನು ಬ್ರಿಟಿಷರು ಅನುಸರಿಸಿದರು. ಮೊದಲನೇ ಮಾರ್ಗ- ಜನರ ಏಕತೆಯನ್ನು ಧರ್ಮ, ಜಾತಿ, ಭಾಷೆ, ಪ್ರದೇಶಗಳ ಆಧಾರದ ಮೇಲೆ ಒಡೆದು ಆಳುವುದು. ಎರಡನೇ ಅಂಶ- ಕ್ರೌರ್ಯ, ಹಿಂಸೆಯನ್ನು ನೀಡಿ ಜನರಲ್ಲಿ ಭಯ ಹುಟ್ಟಿಸುವುದು. ಮೂರನೇ ಅಂಶ- ದಮನಕಾರಿ ಬರ್ಬರ ಕಾಯ್ದೆಗಳನ್ನು ಜಾರಿಗೊಳಿಸುವುದು. ಈ ಮೂರನೇ ಅಂಶದಲ್ಲಿ ದೇಶದ್ರೋಹ, ನ್ಯಾಯಾಂಗ ನಿಂದನೆ, ಕ್ರಿಮಿನಲ್ ಮಾನನಷ್ಟ ಕಾನೂನುಗಳು ಸೇರಿವೆ. ಈ ಮೂರು ಕಾಯ್ದೆಗಳು ಮತ್ತು ಮೂರು ಕ್ರಮಗಳು ಬ್ರಿಟಿಷರು ಅನುಸರಿಸಿರುವ ನೀತಿಗಳಾಗಿವೆ” ಎಂದು ಎಚ್.ಎನ್.ನಾಗಮೋಹನದಾಸ್‌ ಅಭಿಪ್ರಾಯಪಟ್ಟರು.

“ಕ್ರಿಮಿನಲ್ ಮಾನನಷ್ಟ ಕಾಯ್ದೆಯನ್ನು ಈವರೆಗೆ ಸದ್ಬಳಕೆ ಮಾಡಿಕೊಂಡಿದ್ದಕ್ಕಿಂತ ದುರ್ಬಳಕೆ ಮಾಡಿಕೊಂಡಿದ್ದೇ ಹೆಚ್ಚು. ಸಿವಿಲ್‌ ಮಾನನಷ್ಟ ದಾಖಲಿಸಲು ಅವಕಾಶವಿದೆ. ಈ ಮೂಲಕ ವ್ಯಕ್ತಿಯೊಬ್ಬ ತನಗಾದ ನಷ್ಟವನ್ನು ವಸೂಲಿ ಮಾಡಿಕೊಳ್ಳಬೇಕು. ಇದಕ್ಕೆ ಕ್ರಿಮಿನಲ್‌ ಆಯಾಮವನ್ನು ಕೊಡುವ ಅವಶ್ಯಕತೆ ಏನಿದೆ? ಕ್ರಿಮಿನಲ್‌ ಆಯಾಮ ನೀಡಿದ್ದು ಬ್ರಿಟಿಷರ ಆಡಳಿತ. ಅದು ದಬ್ಬಾಳಿಕೆ ಮತ್ತು ದೌರ್ಜನ್ಯ ನೀತಿ. ಈ ಕಾನೂನನ್ನು ಮುಂದುವರಿಸಿಕೊಂಡು ಬರುವುದು ಸರಿಯಲ್ಲ” ಎಂದು ಹೇಳಿದರು.

“ಸಿವಿಲ್ ಮಾನನಷ್ಟ ಕಾನೂನು ಇರಲಿ, ಅದಕ್ಕೆ ಯಾರ ವಿರೋಧವೂ ಇಲ್ಲ; ಆದರೆ ಕ್ರಿಮಿನಲ್‌ ಮಾನನಷ್ಟದ ಅವಶ್ಯಕತೆ ಇಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...