Homeಮುಖಪುಟರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

ರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

“ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿದ್ದು ಸರ್ವಾಧಿಕಾರಿ ನಡೆ”

- Advertisement -
- Advertisement -

“ಕಾಂಗ್ರೆಸ್ ನಾಯಕ, ಮಯನಾಡ್ ಸಂಸದ ರಾಹುಲ್‌ ಗಾಂಧಿಯವರ ವಿರುದ್ಧ ಸೂರತ್‌ ಕೋರ್ಟ್ ನೀಡಿದ ತೀರ್ಪಿನಲ್ಲೇ ತಪ್ಪಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್‌ ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್‌ ಅವರನ್ನು ಲೋಕಸಭಾ ಸೆಕ್ರೆಟರಿಯೇಟ್‌ ಅನರ್ಹಗೊಳಿಸಿರುವ ಸಂಬಂಧ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಅವರು, “ಕ್ರಿಮಿನಲ್ ಮಾನನಷ್ಟ ಎಂಬುದನ್ನು ಕಾನೂನಿನ ಪುಸ್ತಕದಿಂದಲೇ ತೆಗೆದುಹಾಕಬೇಕಿದೆ. ಬ್ರಿಟಿಷರ ಕಾಲದ ಕಾನೂನು ಇದಾಗಿದೆ. ರಾಹುಲ್ ಗಾಂಧಿಯವರ ವಿರುದ್ಧದ ಪ್ರಕರಣದಲ್ಲಿ ಕ್ರಿಮಿನಲ್‌ ಮಾನನಷ್ಟ ಅಂಶ ಒಳಗೊಂಡಿಲ್ಲ” ಎಂದು ತಿಳಿಸಿದರು. (‘ಮೋದಿ’ ಸರ್‌ನೇಮ್‌ ಬಳಸಿದ ಹಿನ್ನೆಲೆಯಲ್ಲಿ ರಾಹುಲ್‌ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ 2019ರಲ್ಲಿ ದಾಖಲಾಗಿತ್ತು.)

“ಹೀಗಾಗಿ ಸೂರತ್‌ ಕೋರ್ಟ್ ನೀಡಿರುವ ತೀರ್ಪು ತಪ್ಪಾಗಿದೆ. ಅಲ್ಲದೆ ಮೂವತ್ತು ದಿನಗಳ ಕಾಲ ತೀರ್ಪಿಗೆ ತಡೆಯನ್ನೂ ನೀಡಲಾಗಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವಾಗ, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸುವುದು ಅಪ್ರಜಾಸತ್ತಾತ್ಮಕ ಮತ್ತು ಸಂವಿಧಾನ ವಿರೋಧಿ ನಡೆ” ಎಂದು ಆತಂಕ ವ್ಯಕ್ತಪಡಿಸಿದರು.

“ವಿರೋಧ ಪಕ್ಷಗಳನ್ನು ಸದೆಬಡಿಯುವ ನೀತಿ ಇದಾಗಿದೆ. ಒಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷಗಳಷ್ಟೇ ವಿರೋಧ ಪಕ್ಷಗಳು ಮುಖ್ಯವಾಗಿವೆ. ವಿರೋಧ ಪಕ್ಷಗಳೇ ಇರಬಾರದು ಎಂಬಂತೆ ಈ ನಿಲುವು ತೆಗೆದುಕೊಳ್ಳಲಾಗಿದೆ. ಇದು ಸರ್ವಾಧಿಕಾರದ ಲಕ್ಷಣವಾಗಿದೆ” ಎಂದು ಎಚ್ಚರಿಸಿದರು.

“ಒಂದು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ, ಕಾನೂನು ಸುವ್ಯವಸ್ಥೆ ಇರುವ ದೇಶದಲ್ಲಿ ಇದನ್ನು ಒಪ್ಪಲು ಸಾಧ್ಯವಿಲ್ಲ” ಎಂದರು.

ರಾಹುಲ್‌ಗೆ ವಿಧಿಸಿದ ಶಿಕ್ಷೆ ಮಾನನಷ್ಟ ಅಪರಾಧದ ಮಿತಿಯಿಂದ ಹೊರಗಿರುವಂತಿದೆ – ಅರವಿಂದ್ ನಾರಾಯಣ್

ಸೂರತ್‌ನ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವುದು ಮಾನನಷ್ಟ ಅಪರಾಧದ ಮಿತಿಯಿಂದ ಹೊರಗಿರುವಂತಿದೆ. IPC ಯ ಸೆಕ್ಷನ್ 499 ರ ಪ್ರಕಾರ, ಮಾನನಷ್ಟವು ತನ್ನ ಖ್ಯಾತಿಗೆ ಧಕ್ಕೆಯಾಗಿದೆ ಎಂದು ಭಾವಿಸುವ ವ್ಯಕ್ತಿಗೆ ಮಾತ್ರ ಸಂಬಂಧಿಸಿದೆ. ಹಾಗಾಗಿ ಮಾನನಷ್ಟ ಮೊಕದ್ದಮೆ ಹೂಡಲು ಸಮರ್ಥರೆಂದರೆ ನರೇಂದ್ರ ಮೋದಿ, ನೀರವ್ ಮೋದಿ ಅಥವಾ ಲಲಿತ್ ಮೋದಿ ಮಾತ್ರ. ಮೋದಿ ಹೆಸರಿನ ಯಾವುದೇ ಮೂರನೇ ವ್ಯಕ್ತಿಗೆ ಮಾನನಷ್ಟ ಅಪರಾಧವನ್ನು ಆವಾಹಿಸಿಕೊಳ್ಳುವ ಅರ್ಹತೆ ಇಲ್ಲ. ಏಕೆಂದರೆ ಮೋದಿ ಉಪನಾಮವಿರುವ ಎಲ್ಲಾ ವ್ಯಕ್ತಿಗಳನ್ನು ಮಾನನಷ್ಟಗೊಳಿಸುವ ಯಾವುದೇ ಸಾಮಾನ್ಯ ಅಪರಾಧವಿಲ್ಲ ಎಂದು ಕಾನೂನು ತಜ್ಞರು ಮತ್ತು ವಕೀಲರಾದ ಅರವಿಂದ್ ನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿಯೊಂದಿಗೆ ಮಾತನಾಡಿದ ಅವರು “ಕಪಿಲ್ ಸಿಬಲ್ ವಿಲಕ್ಷಣ ತೀರ್ಪು ಎಂದು ವಿವರಿಸಿದ ಸೂರತ್ ನ್ಯಾಯಾಲಯದ ತೀರ್ಪು ಬಂದ ಒಂದು ದಿನದೊಳಗೆ ರಾಹುಲ್ ಅವರನ್ನು ಅನರ್ಹಗೊಳಿಸಲು ಲೋಕಸಭೆ ಸೆಕ್ರೆಟರಿಯೇಟ್ ಮುಂದಾಗಿರುವುದು ಅಸಹಜವಾದ ಆತುರದ ನಡೆಯಾಗಿದೆ” ಎಂದಿದ್ದಾರೆ.

ಸೆಕ್ರೆಟರಿಯೇಟ್‌ನ ಈ ಕ್ರಮವು ದುರುದ್ದೇಶದಿಂದ ಕೂಡಿದೆ ಎಂದು ತೋರುತ್ತದೆ, ವಿಶೇಷವಾಗಿ ಸೂರತ್ ನ್ಯಾಯಾಲಯವು ಸ್ವತಃ ತನ್ನ ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತುಗೊಳಿಸಿದೆ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿಗೆ ಅವಕಾಶವನ್ನು ನೀಡಿದೆ. ಅವರು ಮೇಲ್ಮನವಿ ಸಲ್ಲಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಂತಹ ಸಂದರ್ಭದಲ್ಲಿ ಜನಪ್ರತಿನಿಧಿ ಕಾಯಿದೆಯಡಿಯಲ್ಲಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಲು ಕಾನೂನು ಅಧಿಕಾರಗಳ ಅನಿಯಂತ್ರಿತ ಶೈಲಿಯ ಆತುರದ ಅಧಿಕಾರದ ಚಲಾವಣೆಯಾಗಿದೆ ಎಂದಿದ್ದಾರೆ.

ಮೇಲಿನ ಕೋರ್ಟುಗಳು ಮಾನನಷ್ಟ ನಿಬಂಧನೆಯ ನಿಯಮಗಳೊಳಗೆ ಯಾವುದೇ ಅಪರಾಧವನ್ನು ಮಾಡಿಲ್ಲ ಎಂಬುದನ್ನು ಗಮನಿಸಿ ಸೂರತ್ ನ್ಯಾಯಾಲಯದ ತೀರ್ಪಿಗೆ ತಡೆ ನೀಡುತ್ತವೆ ಎಂದು ಆಶಿಸುತ್ತೇನೆ ಎಂದು ಅರವಿಂದ್ ನಾರಾಯಣ್ ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

ಕ್ರಿಮಿನಲ್ ಮಾನನಷ್ಟ ಕಾಯ್ದೆಯೇ ಅನುಚಿತ: ಎಚ್.ಎನ್.ನಾಗಮೋಹನದಾಸ್‌

“ಭಾರತ ದೇಶದ ಸ್ವಾತಂತ್ರ್ಯ ಚಳವಳಿಯನ್ನು ಹತ್ತಿಕ್ಕಲು ಮೂರು ಮಾರ್ಗಗಳನ್ನು ಬ್ರಿಟಿಷರು ಅನುಸರಿಸಿದರು. ಮೊದಲನೇ ಮಾರ್ಗ- ಜನರ ಏಕತೆಯನ್ನು ಧರ್ಮ, ಜಾತಿ, ಭಾಷೆ, ಪ್ರದೇಶಗಳ ಆಧಾರದ ಮೇಲೆ ಒಡೆದು ಆಳುವುದು. ಎರಡನೇ ಅಂಶ- ಕ್ರೌರ್ಯ, ಹಿಂಸೆಯನ್ನು ನೀಡಿ ಜನರಲ್ಲಿ ಭಯ ಹುಟ್ಟಿಸುವುದು. ಮೂರನೇ ಅಂಶ- ದಮನಕಾರಿ ಬರ್ಬರ ಕಾಯ್ದೆಗಳನ್ನು ಜಾರಿಗೊಳಿಸುವುದು. ಈ ಮೂರನೇ ಅಂಶದಲ್ಲಿ ದೇಶದ್ರೋಹ, ನ್ಯಾಯಾಂಗ ನಿಂದನೆ, ಕ್ರಿಮಿನಲ್ ಮಾನನಷ್ಟ ಕಾನೂನುಗಳು ಸೇರಿವೆ. ಈ ಮೂರು ಕಾಯ್ದೆಗಳು ಮತ್ತು ಮೂರು ಕ್ರಮಗಳು ಬ್ರಿಟಿಷರು ಅನುಸರಿಸಿರುವ ನೀತಿಗಳಾಗಿವೆ” ಎಂದು ಎಚ್.ಎನ್.ನಾಗಮೋಹನದಾಸ್‌ ಅಭಿಪ್ರಾಯಪಟ್ಟರು.

“ಕ್ರಿಮಿನಲ್ ಮಾನನಷ್ಟ ಕಾಯ್ದೆಯನ್ನು ಈವರೆಗೆ ಸದ್ಬಳಕೆ ಮಾಡಿಕೊಂಡಿದ್ದಕ್ಕಿಂತ ದುರ್ಬಳಕೆ ಮಾಡಿಕೊಂಡಿದ್ದೇ ಹೆಚ್ಚು. ಸಿವಿಲ್‌ ಮಾನನಷ್ಟ ದಾಖಲಿಸಲು ಅವಕಾಶವಿದೆ. ಈ ಮೂಲಕ ವ್ಯಕ್ತಿಯೊಬ್ಬ ತನಗಾದ ನಷ್ಟವನ್ನು ವಸೂಲಿ ಮಾಡಿಕೊಳ್ಳಬೇಕು. ಇದಕ್ಕೆ ಕ್ರಿಮಿನಲ್‌ ಆಯಾಮವನ್ನು ಕೊಡುವ ಅವಶ್ಯಕತೆ ಏನಿದೆ? ಕ್ರಿಮಿನಲ್‌ ಆಯಾಮ ನೀಡಿದ್ದು ಬ್ರಿಟಿಷರ ಆಡಳಿತ. ಅದು ದಬ್ಬಾಳಿಕೆ ಮತ್ತು ದೌರ್ಜನ್ಯ ನೀತಿ. ಈ ಕಾನೂನನ್ನು ಮುಂದುವರಿಸಿಕೊಂಡು ಬರುವುದು ಸರಿಯಲ್ಲ” ಎಂದು ಹೇಳಿದರು.

“ಸಿವಿಲ್ ಮಾನನಷ್ಟ ಕಾನೂನು ಇರಲಿ, ಅದಕ್ಕೆ ಯಾರ ವಿರೋಧವೂ ಇಲ್ಲ; ಆದರೆ ಕ್ರಿಮಿನಲ್‌ ಮಾನನಷ್ಟದ ಅವಶ್ಯಕತೆ ಇಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....