Homeಮುಖಪುಟರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

ರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

“ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿದ್ದು ಸರ್ವಾಧಿಕಾರಿ ನಡೆ”

- Advertisement -
- Advertisement -

“ಕಾಂಗ್ರೆಸ್ ನಾಯಕ, ಮಯನಾಡ್ ಸಂಸದ ರಾಹುಲ್‌ ಗಾಂಧಿಯವರ ವಿರುದ್ಧ ಸೂರತ್‌ ಕೋರ್ಟ್ ನೀಡಿದ ತೀರ್ಪಿನಲ್ಲೇ ತಪ್ಪಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್‌ ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್‌ ಅವರನ್ನು ಲೋಕಸಭಾ ಸೆಕ್ರೆಟರಿಯೇಟ್‌ ಅನರ್ಹಗೊಳಿಸಿರುವ ಸಂಬಂಧ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಅವರು, “ಕ್ರಿಮಿನಲ್ ಮಾನನಷ್ಟ ಎಂಬುದನ್ನು ಕಾನೂನಿನ ಪುಸ್ತಕದಿಂದಲೇ ತೆಗೆದುಹಾಕಬೇಕಿದೆ. ಬ್ರಿಟಿಷರ ಕಾಲದ ಕಾನೂನು ಇದಾಗಿದೆ. ರಾಹುಲ್ ಗಾಂಧಿಯವರ ವಿರುದ್ಧದ ಪ್ರಕರಣದಲ್ಲಿ ಕ್ರಿಮಿನಲ್‌ ಮಾನನಷ್ಟ ಅಂಶ ಒಳಗೊಂಡಿಲ್ಲ” ಎಂದು ತಿಳಿಸಿದರು. (‘ಮೋದಿ’ ಸರ್‌ನೇಮ್‌ ಬಳಸಿದ ಹಿನ್ನೆಲೆಯಲ್ಲಿ ರಾಹುಲ್‌ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ 2019ರಲ್ಲಿ ದಾಖಲಾಗಿತ್ತು.)

“ಹೀಗಾಗಿ ಸೂರತ್‌ ಕೋರ್ಟ್ ನೀಡಿರುವ ತೀರ್ಪು ತಪ್ಪಾಗಿದೆ. ಅಲ್ಲದೆ ಮೂವತ್ತು ದಿನಗಳ ಕಾಲ ತೀರ್ಪಿಗೆ ತಡೆಯನ್ನೂ ನೀಡಲಾಗಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವಾಗ, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸುವುದು ಅಪ್ರಜಾಸತ್ತಾತ್ಮಕ ಮತ್ತು ಸಂವಿಧಾನ ವಿರೋಧಿ ನಡೆ” ಎಂದು ಆತಂಕ ವ್ಯಕ್ತಪಡಿಸಿದರು.

“ವಿರೋಧ ಪಕ್ಷಗಳನ್ನು ಸದೆಬಡಿಯುವ ನೀತಿ ಇದಾಗಿದೆ. ಒಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷಗಳಷ್ಟೇ ವಿರೋಧ ಪಕ್ಷಗಳು ಮುಖ್ಯವಾಗಿವೆ. ವಿರೋಧ ಪಕ್ಷಗಳೇ ಇರಬಾರದು ಎಂಬಂತೆ ಈ ನಿಲುವು ತೆಗೆದುಕೊಳ್ಳಲಾಗಿದೆ. ಇದು ಸರ್ವಾಧಿಕಾರದ ಲಕ್ಷಣವಾಗಿದೆ” ಎಂದು ಎಚ್ಚರಿಸಿದರು.

“ಒಂದು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ, ಕಾನೂನು ಸುವ್ಯವಸ್ಥೆ ಇರುವ ದೇಶದಲ್ಲಿ ಇದನ್ನು ಒಪ್ಪಲು ಸಾಧ್ಯವಿಲ್ಲ” ಎಂದರು.

ರಾಹುಲ್‌ಗೆ ವಿಧಿಸಿದ ಶಿಕ್ಷೆ ಮಾನನಷ್ಟ ಅಪರಾಧದ ಮಿತಿಯಿಂದ ಹೊರಗಿರುವಂತಿದೆ – ಅರವಿಂದ್ ನಾರಾಯಣ್

ಸೂರತ್‌ನ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವುದು ಮಾನನಷ್ಟ ಅಪರಾಧದ ಮಿತಿಯಿಂದ ಹೊರಗಿರುವಂತಿದೆ. IPC ಯ ಸೆಕ್ಷನ್ 499 ರ ಪ್ರಕಾರ, ಮಾನನಷ್ಟವು ತನ್ನ ಖ್ಯಾತಿಗೆ ಧಕ್ಕೆಯಾಗಿದೆ ಎಂದು ಭಾವಿಸುವ ವ್ಯಕ್ತಿಗೆ ಮಾತ್ರ ಸಂಬಂಧಿಸಿದೆ. ಹಾಗಾಗಿ ಮಾನನಷ್ಟ ಮೊಕದ್ದಮೆ ಹೂಡಲು ಸಮರ್ಥರೆಂದರೆ ನರೇಂದ್ರ ಮೋದಿ, ನೀರವ್ ಮೋದಿ ಅಥವಾ ಲಲಿತ್ ಮೋದಿ ಮಾತ್ರ. ಮೋದಿ ಹೆಸರಿನ ಯಾವುದೇ ಮೂರನೇ ವ್ಯಕ್ತಿಗೆ ಮಾನನಷ್ಟ ಅಪರಾಧವನ್ನು ಆವಾಹಿಸಿಕೊಳ್ಳುವ ಅರ್ಹತೆ ಇಲ್ಲ. ಏಕೆಂದರೆ ಮೋದಿ ಉಪನಾಮವಿರುವ ಎಲ್ಲಾ ವ್ಯಕ್ತಿಗಳನ್ನು ಮಾನನಷ್ಟಗೊಳಿಸುವ ಯಾವುದೇ ಸಾಮಾನ್ಯ ಅಪರಾಧವಿಲ್ಲ ಎಂದು ಕಾನೂನು ತಜ್ಞರು ಮತ್ತು ವಕೀಲರಾದ ಅರವಿಂದ್ ನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿಯೊಂದಿಗೆ ಮಾತನಾಡಿದ ಅವರು “ಕಪಿಲ್ ಸಿಬಲ್ ವಿಲಕ್ಷಣ ತೀರ್ಪು ಎಂದು ವಿವರಿಸಿದ ಸೂರತ್ ನ್ಯಾಯಾಲಯದ ತೀರ್ಪು ಬಂದ ಒಂದು ದಿನದೊಳಗೆ ರಾಹುಲ್ ಅವರನ್ನು ಅನರ್ಹಗೊಳಿಸಲು ಲೋಕಸಭೆ ಸೆಕ್ರೆಟರಿಯೇಟ್ ಮುಂದಾಗಿರುವುದು ಅಸಹಜವಾದ ಆತುರದ ನಡೆಯಾಗಿದೆ” ಎಂದಿದ್ದಾರೆ.

ಸೆಕ್ರೆಟರಿಯೇಟ್‌ನ ಈ ಕ್ರಮವು ದುರುದ್ದೇಶದಿಂದ ಕೂಡಿದೆ ಎಂದು ತೋರುತ್ತದೆ, ವಿಶೇಷವಾಗಿ ಸೂರತ್ ನ್ಯಾಯಾಲಯವು ಸ್ವತಃ ತನ್ನ ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತುಗೊಳಿಸಿದೆ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿಗೆ ಅವಕಾಶವನ್ನು ನೀಡಿದೆ. ಅವರು ಮೇಲ್ಮನವಿ ಸಲ್ಲಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಂತಹ ಸಂದರ್ಭದಲ್ಲಿ ಜನಪ್ರತಿನಿಧಿ ಕಾಯಿದೆಯಡಿಯಲ್ಲಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಲು ಕಾನೂನು ಅಧಿಕಾರಗಳ ಅನಿಯಂತ್ರಿತ ಶೈಲಿಯ ಆತುರದ ಅಧಿಕಾರದ ಚಲಾವಣೆಯಾಗಿದೆ ಎಂದಿದ್ದಾರೆ.

ಮೇಲಿನ ಕೋರ್ಟುಗಳು ಮಾನನಷ್ಟ ನಿಬಂಧನೆಯ ನಿಯಮಗಳೊಳಗೆ ಯಾವುದೇ ಅಪರಾಧವನ್ನು ಮಾಡಿಲ್ಲ ಎಂಬುದನ್ನು ಗಮನಿಸಿ ಸೂರತ್ ನ್ಯಾಯಾಲಯದ ತೀರ್ಪಿಗೆ ತಡೆ ನೀಡುತ್ತವೆ ಎಂದು ಆಶಿಸುತ್ತೇನೆ ಎಂದು ಅರವಿಂದ್ ನಾರಾಯಣ್ ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

ಕ್ರಿಮಿನಲ್ ಮಾನನಷ್ಟ ಕಾಯ್ದೆಯೇ ಅನುಚಿತ: ಎಚ್.ಎನ್.ನಾಗಮೋಹನದಾಸ್‌

“ಭಾರತ ದೇಶದ ಸ್ವಾತಂತ್ರ್ಯ ಚಳವಳಿಯನ್ನು ಹತ್ತಿಕ್ಕಲು ಮೂರು ಮಾರ್ಗಗಳನ್ನು ಬ್ರಿಟಿಷರು ಅನುಸರಿಸಿದರು. ಮೊದಲನೇ ಮಾರ್ಗ- ಜನರ ಏಕತೆಯನ್ನು ಧರ್ಮ, ಜಾತಿ, ಭಾಷೆ, ಪ್ರದೇಶಗಳ ಆಧಾರದ ಮೇಲೆ ಒಡೆದು ಆಳುವುದು. ಎರಡನೇ ಅಂಶ- ಕ್ರೌರ್ಯ, ಹಿಂಸೆಯನ್ನು ನೀಡಿ ಜನರಲ್ಲಿ ಭಯ ಹುಟ್ಟಿಸುವುದು. ಮೂರನೇ ಅಂಶ- ದಮನಕಾರಿ ಬರ್ಬರ ಕಾಯ್ದೆಗಳನ್ನು ಜಾರಿಗೊಳಿಸುವುದು. ಈ ಮೂರನೇ ಅಂಶದಲ್ಲಿ ದೇಶದ್ರೋಹ, ನ್ಯಾಯಾಂಗ ನಿಂದನೆ, ಕ್ರಿಮಿನಲ್ ಮಾನನಷ್ಟ ಕಾನೂನುಗಳು ಸೇರಿವೆ. ಈ ಮೂರು ಕಾಯ್ದೆಗಳು ಮತ್ತು ಮೂರು ಕ್ರಮಗಳು ಬ್ರಿಟಿಷರು ಅನುಸರಿಸಿರುವ ನೀತಿಗಳಾಗಿವೆ” ಎಂದು ಎಚ್.ಎನ್.ನಾಗಮೋಹನದಾಸ್‌ ಅಭಿಪ್ರಾಯಪಟ್ಟರು.

“ಕ್ರಿಮಿನಲ್ ಮಾನನಷ್ಟ ಕಾಯ್ದೆಯನ್ನು ಈವರೆಗೆ ಸದ್ಬಳಕೆ ಮಾಡಿಕೊಂಡಿದ್ದಕ್ಕಿಂತ ದುರ್ಬಳಕೆ ಮಾಡಿಕೊಂಡಿದ್ದೇ ಹೆಚ್ಚು. ಸಿವಿಲ್‌ ಮಾನನಷ್ಟ ದಾಖಲಿಸಲು ಅವಕಾಶವಿದೆ. ಈ ಮೂಲಕ ವ್ಯಕ್ತಿಯೊಬ್ಬ ತನಗಾದ ನಷ್ಟವನ್ನು ವಸೂಲಿ ಮಾಡಿಕೊಳ್ಳಬೇಕು. ಇದಕ್ಕೆ ಕ್ರಿಮಿನಲ್‌ ಆಯಾಮವನ್ನು ಕೊಡುವ ಅವಶ್ಯಕತೆ ಏನಿದೆ? ಕ್ರಿಮಿನಲ್‌ ಆಯಾಮ ನೀಡಿದ್ದು ಬ್ರಿಟಿಷರ ಆಡಳಿತ. ಅದು ದಬ್ಬಾಳಿಕೆ ಮತ್ತು ದೌರ್ಜನ್ಯ ನೀತಿ. ಈ ಕಾನೂನನ್ನು ಮುಂದುವರಿಸಿಕೊಂಡು ಬರುವುದು ಸರಿಯಲ್ಲ” ಎಂದು ಹೇಳಿದರು.

“ಸಿವಿಲ್ ಮಾನನಷ್ಟ ಕಾನೂನು ಇರಲಿ, ಅದಕ್ಕೆ ಯಾರ ವಿರೋಧವೂ ಇಲ್ಲ; ಆದರೆ ಕ್ರಿಮಿನಲ್‌ ಮಾನನಷ್ಟದ ಅವಶ್ಯಕತೆ ಇಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...