Homeಮುಖಪುಟರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

ರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

“ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿದ್ದು ಸರ್ವಾಧಿಕಾರಿ ನಡೆ”

- Advertisement -
- Advertisement -

“ಕಾಂಗ್ರೆಸ್ ನಾಯಕ, ಮಯನಾಡ್ ಸಂಸದ ರಾಹುಲ್‌ ಗಾಂಧಿಯವರ ವಿರುದ್ಧ ಸೂರತ್‌ ಕೋರ್ಟ್ ನೀಡಿದ ತೀರ್ಪಿನಲ್ಲೇ ತಪ್ಪಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್‌ ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್‌ ಅವರನ್ನು ಲೋಕಸಭಾ ಸೆಕ್ರೆಟರಿಯೇಟ್‌ ಅನರ್ಹಗೊಳಿಸಿರುವ ಸಂಬಂಧ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಅವರು, “ಕ್ರಿಮಿನಲ್ ಮಾನನಷ್ಟ ಎಂಬುದನ್ನು ಕಾನೂನಿನ ಪುಸ್ತಕದಿಂದಲೇ ತೆಗೆದುಹಾಕಬೇಕಿದೆ. ಬ್ರಿಟಿಷರ ಕಾಲದ ಕಾನೂನು ಇದಾಗಿದೆ. ರಾಹುಲ್ ಗಾಂಧಿಯವರ ವಿರುದ್ಧದ ಪ್ರಕರಣದಲ್ಲಿ ಕ್ರಿಮಿನಲ್‌ ಮಾನನಷ್ಟ ಅಂಶ ಒಳಗೊಂಡಿಲ್ಲ” ಎಂದು ತಿಳಿಸಿದರು. (‘ಮೋದಿ’ ಸರ್‌ನೇಮ್‌ ಬಳಸಿದ ಹಿನ್ನೆಲೆಯಲ್ಲಿ ರಾಹುಲ್‌ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ 2019ರಲ್ಲಿ ದಾಖಲಾಗಿತ್ತು.)

“ಹೀಗಾಗಿ ಸೂರತ್‌ ಕೋರ್ಟ್ ನೀಡಿರುವ ತೀರ್ಪು ತಪ್ಪಾಗಿದೆ. ಅಲ್ಲದೆ ಮೂವತ್ತು ದಿನಗಳ ಕಾಲ ತೀರ್ಪಿಗೆ ತಡೆಯನ್ನೂ ನೀಡಲಾಗಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವಾಗ, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸುವುದು ಅಪ್ರಜಾಸತ್ತಾತ್ಮಕ ಮತ್ತು ಸಂವಿಧಾನ ವಿರೋಧಿ ನಡೆ” ಎಂದು ಆತಂಕ ವ್ಯಕ್ತಪಡಿಸಿದರು.

“ವಿರೋಧ ಪಕ್ಷಗಳನ್ನು ಸದೆಬಡಿಯುವ ನೀತಿ ಇದಾಗಿದೆ. ಒಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷಗಳಷ್ಟೇ ವಿರೋಧ ಪಕ್ಷಗಳು ಮುಖ್ಯವಾಗಿವೆ. ವಿರೋಧ ಪಕ್ಷಗಳೇ ಇರಬಾರದು ಎಂಬಂತೆ ಈ ನಿಲುವು ತೆಗೆದುಕೊಳ್ಳಲಾಗಿದೆ. ಇದು ಸರ್ವಾಧಿಕಾರದ ಲಕ್ಷಣವಾಗಿದೆ” ಎಂದು ಎಚ್ಚರಿಸಿದರು.

“ಒಂದು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ, ಕಾನೂನು ಸುವ್ಯವಸ್ಥೆ ಇರುವ ದೇಶದಲ್ಲಿ ಇದನ್ನು ಒಪ್ಪಲು ಸಾಧ್ಯವಿಲ್ಲ” ಎಂದರು.

ರಾಹುಲ್‌ಗೆ ವಿಧಿಸಿದ ಶಿಕ್ಷೆ ಮಾನನಷ್ಟ ಅಪರಾಧದ ಮಿತಿಯಿಂದ ಹೊರಗಿರುವಂತಿದೆ – ಅರವಿಂದ್ ನಾರಾಯಣ್

ಸೂರತ್‌ನ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವುದು ಮಾನನಷ್ಟ ಅಪರಾಧದ ಮಿತಿಯಿಂದ ಹೊರಗಿರುವಂತಿದೆ. IPC ಯ ಸೆಕ್ಷನ್ 499 ರ ಪ್ರಕಾರ, ಮಾನನಷ್ಟವು ತನ್ನ ಖ್ಯಾತಿಗೆ ಧಕ್ಕೆಯಾಗಿದೆ ಎಂದು ಭಾವಿಸುವ ವ್ಯಕ್ತಿಗೆ ಮಾತ್ರ ಸಂಬಂಧಿಸಿದೆ. ಹಾಗಾಗಿ ಮಾನನಷ್ಟ ಮೊಕದ್ದಮೆ ಹೂಡಲು ಸಮರ್ಥರೆಂದರೆ ನರೇಂದ್ರ ಮೋದಿ, ನೀರವ್ ಮೋದಿ ಅಥವಾ ಲಲಿತ್ ಮೋದಿ ಮಾತ್ರ. ಮೋದಿ ಹೆಸರಿನ ಯಾವುದೇ ಮೂರನೇ ವ್ಯಕ್ತಿಗೆ ಮಾನನಷ್ಟ ಅಪರಾಧವನ್ನು ಆವಾಹಿಸಿಕೊಳ್ಳುವ ಅರ್ಹತೆ ಇಲ್ಲ. ಏಕೆಂದರೆ ಮೋದಿ ಉಪನಾಮವಿರುವ ಎಲ್ಲಾ ವ್ಯಕ್ತಿಗಳನ್ನು ಮಾನನಷ್ಟಗೊಳಿಸುವ ಯಾವುದೇ ಸಾಮಾನ್ಯ ಅಪರಾಧವಿಲ್ಲ ಎಂದು ಕಾನೂನು ತಜ್ಞರು ಮತ್ತು ವಕೀಲರಾದ ಅರವಿಂದ್ ನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿಯೊಂದಿಗೆ ಮಾತನಾಡಿದ ಅವರು “ಕಪಿಲ್ ಸಿಬಲ್ ವಿಲಕ್ಷಣ ತೀರ್ಪು ಎಂದು ವಿವರಿಸಿದ ಸೂರತ್ ನ್ಯಾಯಾಲಯದ ತೀರ್ಪು ಬಂದ ಒಂದು ದಿನದೊಳಗೆ ರಾಹುಲ್ ಅವರನ್ನು ಅನರ್ಹಗೊಳಿಸಲು ಲೋಕಸಭೆ ಸೆಕ್ರೆಟರಿಯೇಟ್ ಮುಂದಾಗಿರುವುದು ಅಸಹಜವಾದ ಆತುರದ ನಡೆಯಾಗಿದೆ” ಎಂದಿದ್ದಾರೆ.

ಸೆಕ್ರೆಟರಿಯೇಟ್‌ನ ಈ ಕ್ರಮವು ದುರುದ್ದೇಶದಿಂದ ಕೂಡಿದೆ ಎಂದು ತೋರುತ್ತದೆ, ವಿಶೇಷವಾಗಿ ಸೂರತ್ ನ್ಯಾಯಾಲಯವು ಸ್ವತಃ ತನ್ನ ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತುಗೊಳಿಸಿದೆ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿಗೆ ಅವಕಾಶವನ್ನು ನೀಡಿದೆ. ಅವರು ಮೇಲ್ಮನವಿ ಸಲ್ಲಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಂತಹ ಸಂದರ್ಭದಲ್ಲಿ ಜನಪ್ರತಿನಿಧಿ ಕಾಯಿದೆಯಡಿಯಲ್ಲಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಲು ಕಾನೂನು ಅಧಿಕಾರಗಳ ಅನಿಯಂತ್ರಿತ ಶೈಲಿಯ ಆತುರದ ಅಧಿಕಾರದ ಚಲಾವಣೆಯಾಗಿದೆ ಎಂದಿದ್ದಾರೆ.

ಮೇಲಿನ ಕೋರ್ಟುಗಳು ಮಾನನಷ್ಟ ನಿಬಂಧನೆಯ ನಿಯಮಗಳೊಳಗೆ ಯಾವುದೇ ಅಪರಾಧವನ್ನು ಮಾಡಿಲ್ಲ ಎಂಬುದನ್ನು ಗಮನಿಸಿ ಸೂರತ್ ನ್ಯಾಯಾಲಯದ ತೀರ್ಪಿಗೆ ತಡೆ ನೀಡುತ್ತವೆ ಎಂದು ಆಶಿಸುತ್ತೇನೆ ಎಂದು ಅರವಿಂದ್ ನಾರಾಯಣ್ ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

ಕ್ರಿಮಿನಲ್ ಮಾನನಷ್ಟ ಕಾಯ್ದೆಯೇ ಅನುಚಿತ: ಎಚ್.ಎನ್.ನಾಗಮೋಹನದಾಸ್‌

“ಭಾರತ ದೇಶದ ಸ್ವಾತಂತ್ರ್ಯ ಚಳವಳಿಯನ್ನು ಹತ್ತಿಕ್ಕಲು ಮೂರು ಮಾರ್ಗಗಳನ್ನು ಬ್ರಿಟಿಷರು ಅನುಸರಿಸಿದರು. ಮೊದಲನೇ ಮಾರ್ಗ- ಜನರ ಏಕತೆಯನ್ನು ಧರ್ಮ, ಜಾತಿ, ಭಾಷೆ, ಪ್ರದೇಶಗಳ ಆಧಾರದ ಮೇಲೆ ಒಡೆದು ಆಳುವುದು. ಎರಡನೇ ಅಂಶ- ಕ್ರೌರ್ಯ, ಹಿಂಸೆಯನ್ನು ನೀಡಿ ಜನರಲ್ಲಿ ಭಯ ಹುಟ್ಟಿಸುವುದು. ಮೂರನೇ ಅಂಶ- ದಮನಕಾರಿ ಬರ್ಬರ ಕಾಯ್ದೆಗಳನ್ನು ಜಾರಿಗೊಳಿಸುವುದು. ಈ ಮೂರನೇ ಅಂಶದಲ್ಲಿ ದೇಶದ್ರೋಹ, ನ್ಯಾಯಾಂಗ ನಿಂದನೆ, ಕ್ರಿಮಿನಲ್ ಮಾನನಷ್ಟ ಕಾನೂನುಗಳು ಸೇರಿವೆ. ಈ ಮೂರು ಕಾಯ್ದೆಗಳು ಮತ್ತು ಮೂರು ಕ್ರಮಗಳು ಬ್ರಿಟಿಷರು ಅನುಸರಿಸಿರುವ ನೀತಿಗಳಾಗಿವೆ” ಎಂದು ಎಚ್.ಎನ್.ನಾಗಮೋಹನದಾಸ್‌ ಅಭಿಪ್ರಾಯಪಟ್ಟರು.

“ಕ್ರಿಮಿನಲ್ ಮಾನನಷ್ಟ ಕಾಯ್ದೆಯನ್ನು ಈವರೆಗೆ ಸದ್ಬಳಕೆ ಮಾಡಿಕೊಂಡಿದ್ದಕ್ಕಿಂತ ದುರ್ಬಳಕೆ ಮಾಡಿಕೊಂಡಿದ್ದೇ ಹೆಚ್ಚು. ಸಿವಿಲ್‌ ಮಾನನಷ್ಟ ದಾಖಲಿಸಲು ಅವಕಾಶವಿದೆ. ಈ ಮೂಲಕ ವ್ಯಕ್ತಿಯೊಬ್ಬ ತನಗಾದ ನಷ್ಟವನ್ನು ವಸೂಲಿ ಮಾಡಿಕೊಳ್ಳಬೇಕು. ಇದಕ್ಕೆ ಕ್ರಿಮಿನಲ್‌ ಆಯಾಮವನ್ನು ಕೊಡುವ ಅವಶ್ಯಕತೆ ಏನಿದೆ? ಕ್ರಿಮಿನಲ್‌ ಆಯಾಮ ನೀಡಿದ್ದು ಬ್ರಿಟಿಷರ ಆಡಳಿತ. ಅದು ದಬ್ಬಾಳಿಕೆ ಮತ್ತು ದೌರ್ಜನ್ಯ ನೀತಿ. ಈ ಕಾನೂನನ್ನು ಮುಂದುವರಿಸಿಕೊಂಡು ಬರುವುದು ಸರಿಯಲ್ಲ” ಎಂದು ಹೇಳಿದರು.

“ಸಿವಿಲ್ ಮಾನನಷ್ಟ ಕಾನೂನು ಇರಲಿ, ಅದಕ್ಕೆ ಯಾರ ವಿರೋಧವೂ ಇಲ್ಲ; ಆದರೆ ಕ್ರಿಮಿನಲ್‌ ಮಾನನಷ್ಟದ ಅವಶ್ಯಕತೆ ಇಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...