Homeಮುಖಪುಟಜಿಂದಾಲ್‌ ಮುಂದೆ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರಲೂ ಕಾರಣವಿದೆ:ಎಚ್.ಡಿ. ಕುಮಾರಸ್ವಾಮಿ

ಜಿಂದಾಲ್‌ ಮುಂದೆ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರಲೂ ಕಾರಣವಿದೆ:ಎಚ್.ಡಿ. ಕುಮಾರಸ್ವಾಮಿ

- Advertisement -
- Advertisement -

ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ…’ ಜಿಂದಾಲ್‌ ಕಂಪನಿಗೆ 3677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಜಿಂದಾಲ್‌ಗೆ ಭೂಮಿ ಮಾರಾಟ ಮಾಡಿರುವ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

’ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ’ ಎಂದು ಎಚ್ಚರಿಸಿದ್ದಾರೆ.

ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ ‘ಸಂಸ್ಕೃತಿ’. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

’ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ ಅನ್ನು ‘ಈಸ್ಟ್‌ ಇಂಡಿಯಾ ಕಂಪನಿ’ ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ..? ಎಂದು ಆನಂದ್‌ ಸಿಂಗ್‌ ವಿರುದ್ಧ ಕಿಡಿಕಾರಿದ್ದಾರೆ.

ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ..? ಎಂದು ಪ್ರಶ್ನಿಸಿದ್ದಾರೆ.

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ‘ಗೊತ್ತಿಲ್ಲ’ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ’ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

’ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ’ ಎಂದಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ.


ಇದನ್ನೂ ಓದಿ: ಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶವನ್ನೇ ಕೊಳ್ಳೆ ಹೊಡೆಯುತ್ತಿರುವವರಿಗೆ ಮೂರು ಸಾವಿರ ಎಕರೆ ನಗಣ್ಯ.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...