Homeಅಂಕಣಗಳುಮನೋರೋಗಕ್ಕೆ ಚಿಕಿತ್ಸೆಯುಂಟು: ಅದನ್ನು ಗುರುತಿಸಿದರೆ ಮಾತ್ರ : ಯೋಗೇಶ್ ಮಾಸ್ಟರ್

ಮನೋರೋಗಕ್ಕೆ ಚಿಕಿತ್ಸೆಯುಂಟು: ಅದನ್ನು ಗುರುತಿಸಿದರೆ ಮಾತ್ರ : ಯೋಗೇಶ್ ಮಾಸ್ಟರ್

ತನ್ನಲ್ಲಿ ಮತ್ತು ಇತರರಲ್ಲಿ ರೋಗಲಕ್ಷಣಗಳನ್ನು ಕಂಡುಕೊಂಡು, ಎಚ್ಚೆತ್ತುಕೊಂಡು ಮಾನಸಿಕವಾಗಿ ಎಲ್ಲರೂ ಗುಣಮುಖರಾಗಲಿ ಎಂಬುದೇ ಸಿ ಆರ್ ಚಂದ್ರಶೇಖರ್ ಅವರ ಈ ಕೃತಿಯ ಉದ್ದೇಶ.

- Advertisement -
- Advertisement -

ಮನೋರೋಗ ಅಂದರೆ ಯಾವುದು? ಮನೋರೋಗಿಗಳು ಎಂದರೆ ಯಾರು?

ಯಾರನ್ನೂ ಸೇರದೇ, ತಮ್ಮ ಪಾಡಿಗೆ ತಾವು ಏನೇನೋ ಮಾತಾಡಿಕೊಂಡು, ಯಾವುದೋ ಮೂಲೆಯಲ್ಲಿ, ಕತ್ತಲೆಯಲ್ಲಿ, ಯಾರಿಗೂ, ಯಾವುದಕ್ಕೂ ಸ್ಪಂದಿಸದೇ, ಅಥವಾ ಎಲ್ಲಕ್ಕೂ ಭಯಂಕರವಾಗಿ ಪ್ರತಿಕ್ರಿಯಿಸುತ್ತಾ ಇರುವವರೋ ಅಥವಾ ಬಟ್ಟೆ ಹರಿದುಕೊಂಡು, ಯಾರನ್ನೂ ಗುರುತಿಸದೇ, ಯಾರೆಂದರೆ ಅವರಿಗೆ ಕಲ್ಲುಗಳಲ್ಲಿ ಹೊಡೆಯುತ್ತಾ ಇರುವವರು ಎಂದೇನಾದರೂ ಅಂದುಕೊಂಡಿದ್ದರೆ ಅವರ ಬಗ್ಗೆ ನನಗೆ ತೀವ್ರ ಅನುಕಂಪವಿದೆ.

ತಲೆಗೆ, ಕಣ್ಣಿಗೆ, ಹೊಟ್ಟೆಗೆ, ಬೆನ್ನಿಗೆ, ಚರ್ಮಕ್ಕೆ, ಕೈ ಕಾಲಿಗೆ ನೋವೋ, ಬಾವೋ, ತುರಿಕೆಯೋ, ಊತವೋ, ಉರಿಯೋ ಎಂತದ್ದೋ ಬರುತ್ತದೆ. ಯಾವುದೇ ಕಾರಣದಿಂದ ಸಮಸ್ಯೆ ಬಂದು ಅದು ಆ ಹೊತ್ತಿಗೆ, ಒಂದು ಮಟ್ಟಕ್ಕೆ ಕಾಣಿಸಿಕೊಳ್ಳುವುದು. ಅದಕ್ಕೆ ಬೇಕಾದ ಔಷಧವನ್ನು ತೆಗೆದುಕೊಳ್ಳುತ್ತೇವೆ. ನಿವಾರಿಸಿಕೊಳ್ಳುತ್ತೇವೆ. ನೋವು, ಬಾವು, ಊತ, ಉರಿ ಹೋಯಿತೆಂದರೆ ಸಮಸ್ಯೆ ಹೋಯಿತೆಂದರ್ಥ. ಒಂದು ವೇಳೆ ಯಾವುದೇ ಒಂದು ಸಮಸ್ಯೆ ಬಂದು, ಸಣ್ಣ ಪುಟ್ಟ ಮದ್ದುಗಳಿಂದ, ಉಪಚಾರಗಳಿಂದ ಹೋಗದೇ ಒಂದೇ ಸಮನೆ ಕಾಡುತ್ತಿದ್ದರೆ ಅದಕ್ಕೆ ರೋಗ ಎನ್ನಬಹುದೇನೋ. ಅದಕ್ಕೂ ದೀರ್ಘಕಾಲದ ಉಪಚಾರ, ನಿಯಮಿತ ಮದ್ದಿನ ಸೇವನೆ ಇರುತ್ತದೆ. ಒಟ್ಟಾರೆ ದೇಹಕ್ಕೆ ಏನಾದರೂ ಆದರೆ ಕಾಣುವಂತಹ ಲಕ್ಷಣಗಳಿಂದ ಸಮಸ್ಯೆಯನ್ನೋ, ರೋಗವನ್ನೋ ಪತ್ತೆ ಹಚ್ಚಿ ಅದಕ್ಕೆ ಅಗತ್ಯವಿರುವ ಚಿಕಿತ್ಸೆ ಮಾಡುತ್ತೇವೆ ಅಥವಾ ಮಾಡಿಕೊಳ್ಳುತ್ತೇವೆ. ಅದೇ ರೀತಿ ಮನಸ್ಸಿಗೂ ಆಗಾಗ ಸಮಸ್ಯೆ ಬರುತ್ತದೆ. ಆ ಸಮಸ್ಯೆಯನ್ನು, ಲಕ್ಷಣಗಳನ್ನು ನಿರ್ಲಕ್ಷಿಸಿದರೆ ಅದು ರೋಗವಾಗಿ ಮುಂದುವರಿಯುತ್ತದೆ. ವಿಪರ್ಯಾಸವೆಂದರೆ ತಮಗೆ ತಲೆನೋವು ಇದೆ ಎಂದು ಒಪ್ಪಿಕೊಂಡಂತೆ, ಸಕ್ಕರೆ ಖಾಯಿಲೆ ಅಥವಾ ರಕ್ತದೊತ್ತಡ ಇದೆ ಎಂದು ಒಪ್ಪಿಕೊಂಡಂತೆ ಮನೋರೋಗವಿದೆ ಎಂದು ಒಪ್ಪಿಕೊಳ್ಳಲು ಸಾಮಾನ್ಯವಾಗಿ ತಯಾರಿರುವುದಿಲ್ಲ. ಅದೇ ಸಮಸ್ಯೆ.

ಮೂಡುವ ಭಾವನೆಗಳಿಂದಾಗಿ, ಮಾಡುವ ಆಲೋಚನೆಗಳಿಂದಾಗಿ, ತೋರುವ ವರ್ತನೆಗಳಿಂದಾಗಿ, ನೀಡುವ ಪ್ರತಿಕ್ರಿಯೆಗಳಿಂದಾಗಿ, ಸ್ಪಂದಿಸುವ ರೀತಿಗಳಿಂದಾಗಿ ರೋಗಗ್ರಸ್ತ ಮನಸ್ಥಿತಿಯು ಕಾಣಿಸಿಕೊಳ್ಳುತ್ತಲೇ ಇರುತ್ತದೆ. ಆದರೆ ಅದನ್ನು ಆ ಹೊತ್ತಿನ ಸಂಗತಿ ಅಥವಾ ಸನ್ನಿವೇಶಕ್ಕೆ ತಮ್ಮ ಪ್ರತಿಕ್ರಿಯೆ ಅಥವಾ ತಮ್ಮ ಮೇಲಾಗಿರುವ ಪ್ರಭಾವ ಎಂದುಕೊಂಡು ಸುಮ್ಮನಾಗಿಬಿಡುತ್ತಾರೆ. ಅದು ಮತ್ತೂ ದೊಡ್ಡ ಸಮಸ್ಯೆ. ಹೀಗಾಗಿ ತಾವೇ ತಮ್ಮ ಮನೋರೋಗವನ್ನು ಪತ್ತೆ ಹಚ್ಚಿಕೊಳ್ಳುವುದಿಲ್ಲ. ಒಂದು ವೇಳೆ ಬೇರೆಯವರು ಪತ್ತೆ ಹಚ್ಚಿದರೆ ಒಪ್ಪಿಕೊಳ್ಳುವುದಿಲ್ಲ. ಹೀಗಾಗಿ ಸಮಾಜದಲ್ಲಿ ಮನೋರೋಗಿಗಳು ತುಂಬಾ ಸಹಜವಾಗಿ ಬಹಳ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನೋಡಿ ಸ್ವಾಮಿ ನಾವಿರೋದು ಹೀಗೆ ಅಂತ ಅವರೂ ಇರ್ತಾರೆ. ಅವರಿರೋದೇ ಹಾಗೆ ಅಂತ ಉಳಿದವರೂ ಇರ್ತಾರೆ.

photo courtesy: Amazon

ತನ್ನನ್ನು ತಾನು ಅರಿಯುವಂತಹ, ತನ್ನೊಳಗಿನ ಮತ್ತು ವಿಶ್ವದ ಆಂತರ್ಯದ ರಹಸ್ಯವನ್ನು ತಿಳಿಯುವಂತಹ ಆಧ್ಯಾತ್ಮದಲ್ಲಿ ಆತ್ಮ ಸಾಕ್ಷಾತ್ಕಾರ ಅತ್ಯಂತ ಮಹತ್ತರವಾದದ್ದು ಮತ್ತು ಉನ್ನತವಾದದ್ದು. ಹಾಗೆಯೇ ಯಾರೊಬ್ಬರೂ ವ್ಯಕ್ತಿಗತವಾಗಿ ಮತ್ತು ಸಾಮಾಜಿಕವಾಗಿ ತನ್ನನ್ನು ತಾನು ಮಾನಸಿಕ ನೆಲೆಯಿಂದ ತಿಳಿಯುವುದು ಮತ್ತು ಸಮಸ್ಯೆಗಳಿದ್ದಲ್ಲಿ ಪತ್ತೆ ಹಚ್ಚುವುದು, ರೋಗವಾಗಿದ್ದಲ್ಲಿ ಅದನ್ನು ಗುಣಪಡಿಸಿಕೊಳ್ಳೋದು ಬಹಳ ಮುಖ್ಯವಾದದ್ದು. ಇದು ಆಧ್ಯಾತ್ಮಿಕ ಸಾಧನೆಗಿಂತಲೂ ಬಹಳ ಹೆಚ್ಚಿನದು ಎಂದು ನನ್ನ ಅಭಿಪ್ರಾಯ. ತಾನೂ, ತನ್ನೊಂದಿಗೆ ಇತರರು, ಕುಟುಂಬ, ಸಮಾಜ, ದೇಶ ಎಲ್ಲವೂ ಆರೋಗ್ಯವಾಗಿರಲು ಸಾಧ್ಯವಾಗುವುದು ಇದರಿಂದ ಎಂದೇ ನನ್ನ ಅಂಬೋಣ.

ಯಾವುದೇ ಒಬ್ಬ ವ್ಯಕ್ತಿಯು ತನ್ನನ್ನು ತಾನು ಮತ್ತು ಇತರರನ್ನು ಅವರವರ ವರ್ತನೆಗಳ, ಭಾವನೆಗಳ, ವಿಚಾರಗಳ, ಕ್ರಿಯೆ-ಪ್ರತಿಕ್ರಿಯೆಗಳ ಮೂಲಕ ಮನೋವೈಜ್ಞಾನಿಕವಾಗಿ ಅರಿಯುತ್ತಾನೋ ಆಗ ಅವನಿಗೆ ಸಮಸ್ಯೆಗಳನ್ನು, ಸಂಘರ್ಷಗಳ ಕಾರಣಗಳನ್ನು, ಸಂಬಂಧಗಳಲ್ಲಿನ ಬಿರುಕುಗಳನ್ನು, ಖಿನ್ನತೆಗೆ ಮೂಲಗಳನ್ನು, ಭಿನ್ನ ಮನಸ್ಥಿತಿಗಳನ್ನು ಅರಿಯಲು ಸಾಧ್ಯವಾಗುತ್ತದೆ. ಆಗ್ರಹ ತೋರುವ ಎಡೆಯಲ್ಲಿ ಅನುಕಂಪ ತೋರಲು ಸಾಧ್ಯವಾಗುತ್ತದೆ. ದ್ವೇಷ ಸಾಧಿಸುವ ಬದಲು ಪ್ರೀತಿಸಲು ಸಾಧ್ಯವಾಗುತ್ತದೆ. ದೂರುವ ಬದಲು ತಿದ್ದಲು ಸಾಧ್ಯವಾಗುತ್ತದೆ. ದೂಷಿಸುವ ಬದಲು ಅರಿಯಲು ಸಾಧ್ಯವಾಗುತ್ತದೆ. ವ್ಯಕ್ತಿಯೊಬ್ಬನ ಮಾತಿಗೆ, ಕೃತ್ಯಕ್ಕೆ ಆತನನ್ನೇ ಎತ್ತಿ ಎಸೆಯುವ ಬದಲು, ಅವನ ಯಾವುದೋ ದೋಷಪೂರಿತ ಗುಣದ ಕಣವನ್ನು ಹೆಕ್ಕಿ ಎಸೆಯಲು ಸಾಧ್ಯವಾಗುತ್ತದೆ. ಮೆತ್ತಿಕೊಂಡಿರುವ ಮಲಿನವನ್ನು ತೊಳೆಯಲು ಸಾಧ್ಯವಾಗುತ್ತದೆ. ಕಾಟ ಕೊಡುವ ಅವರ್ಯಾರದೋ ಹಟಕ್ಕೆ, ಮುಂದುವರಿಯಲು ಬಿಡದ ಇವರ್ಯಾರದೋ ಮೌಢ್ಯಕ್ಕೆ, ಎಷ್ಟೇ ತಿಳಿಯಾದ ತಿಳುವಳಿಕೆಯನ್ನು ನೀಡಿದರೂ ತಾವೆಂದಿಗೂ ಬಿಡದ ತಮ್ಮ ವಾದಕ್ಕೆ ಕಾರಣಗಳು ತಿಳಿಯುತ್ತವೆ.

ಹೀಗೆ ಮನೋವಿಜ್ಞಾನವು ವ್ಯಕ್ತಿಯ ಮತ್ತು ಸಮಾಜದ ಹೂರಣವನ್ನು ಅರಿವಿಗೆ ತರುತ್ತಾ ವ್ಯಕ್ತಿಗತವಾದ ಮಾನಸಿಕ ಮತ್ತು ಸಾಮಾಜಿಕ ಆರೋಗ್ಯವನ್ನು ಕಾಪಾಡುವುದರಲ್ಲಿ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ. ಈ ಕೃತಿಯನ್ನು ಓದುವಾಗ ಯಾವುದೇ ಸಮಾಜದ ಮಟ್ಟಿಗಾದರೂ ರಾಕೆಟ್ ವಿಜ್ಞಾನವು ಮನೋವಿಜ್ಞಾನದ ಅಗತ್ಯದ ಮುಂದೆ ಮೊದಲನೆಯ ಪ್ರಾಧಾನ್ಯತೆ ಆಗಲಾರದು ಎಂಬುದು ನಾನು ಗ್ರಹಿಸಿದ್ದು.

ಇರಲಿ, ತನ್ನಲ್ಲಿ ಮತ್ತು ಇತರರಲ್ಲಿ ರೋಗಲಕ್ಷಣಗಳನ್ನು ಕಂಡುಕೊಂಡು, ಎಚ್ಚೆತ್ತುಕೊಂಡು ಮಾನಸಿಕವಾಗಿ ಎಲ್ಲರೂ ಗುಣಮುಖರಾಗಲಿ ಎಂಬುದೇ ಸಿ ಆರ್ ಚಂದ್ರಶೇಖರ್ ಅವರ ಈ ಕೃತಿಯ ಉದ್ದೇಶ.

ಮನೋರೋಗಕ್ಕೆ ನಾನಾ ಕಾರಣಗಳಿದ್ದಂತೆ, ನಾನಾ ಆಯಾಮಗಳೂ, ಮುಖಗಳೂ, ರೀತಿಗಳೂ ಇವೆ. ಯಾವುದೇ ಆದರೂ ಗುರುತು ಹಚ್ಚಲು ಸಾಕಷ್ಟು ಸಾಧ್ಯವಿದೆ. ಮಾನಸಿಕ, ಭಾವನಾತ್ಮಕ ಮತ್ತು ಸಾಂದರ್ಭಿಕ ಸಮಸ್ಯೆಗಳು ಮನೋರೋಗವಾಗಿ ಉಲ್ಬಣಿಸುವ ಮುನ್ನವೇ ಎಚ್ಚೆತ್ತುಕೊಳ್ಳುವ ಮತ್ತು ಉಪಚರಿಸಿಕೊಳ್ಳುವ ಅಗತ್ಯವಿದೆ.

ಮನೋರೋಗಕ್ಕೆ ಮದ್ದಿಲ್ಲ ಎಂಬ ಗಾದೆಯ ಮಾತು ತಿಳಿವಿನ ಕಾಲ ಪಕ್ವವಾಗಿಲ್ಲದಿದ್ದಾಗ ಹುಟ್ಟಿದೆ. ಆದರೆ ಇಂದು ಹಾಗಿಲ್ಲ. ವೇದ ಸುಳ್ಳಾದರೂ ಗಾದೆ ಸುಳ್ಳಲ್ಲ ಎಂಬುದೇನೂ ನಿಜವಲ್ಲ. ಆಯಾ ಕಾಲಘಟ್ಟದಲ್ಲಿ, ಆಯಾ ವ್ಯವಸ್ಥೆಗಳಿಗೆ ಅನುಗುಣವಾಗಿ ಹುಟ್ಟಿರುವ ಗಾದೆಗಳು ಎಲ್ಲ ಕಾಲಕ್ಕೂ ಸಲ್ಲುವುದಿಲ್ಲ. ಇರಲಿ, ಸಧ್ಯಕ್ಕೆ ಇಷ್ಟು ನಂಬೋಣ. ಯಾವುದೇ ಮನೋರೋಗಕ್ಕೆ ಮದ್ದಿದೆ. ಆದರೆ ಗುರುತಿಸಬೇಕು, ಒಪ್ಪಿಕೊಳ್ಳಬೇಕು ಮತ್ತು ಚಿಕಿತ್ಸೆ ನೀಡಬೇಕು. ವ್ಯಕ್ತಿಗತವಾಗಿ ಒಬ್ಬ ಮಾನಸಿಕವಾಗಿ ಆರೋಗ್ಯವಂತನಾದರೆ ಅವನು ಆರೋಗ್ಯಕರವಾದಂತಹ ಪರಿಸರ ನಿರ್ಮಿಸುವುದರಲ್ಲಿ, ಆರೋಗ್ಯಕರವಾದಂತಹ ವಾತಾವರಣವನ್ನು ಮೂಡಿಸುವುದರಲ್ಲಿ ತನ್ನ ಪಾತ್ರ ನಿರ್ವಹಿಸುತ್ತಾನೆ. ತಾನೂ ನೆಮ್ಮದಿಯಾಗಿ ಬಾಳುತ್ತಾನೆ, ಇತರರನ್ನೂ ಬಾಳಗೊಡುತ್ತಾನೆ. ಈ ದಿಕ್ಕಿನಲ್ಲಿ ಈ ಪುಸ್ತಕವೂ ಸೇರಿದಂತೆ ಡಾ ಸಿ ಆರ್ ಚಂದ್ರಶೇಖರ್ ಅವರ ಮನೋವಿಜ್ಞಾನಕ್ಕೆ ಸಂಬಂಧಪಟ್ಟ ಅನೇಕ ನವ ಕರ್ನಾಟಕ ಪ್ರಕಾಶನದಲ್ಲಿ ದೊರಕುತ್ತದೆ. ಕನ್ನಡದಲ್ಲಿ ಲಭ್ಯವಿರುವ ಈ ಪುಸ್ತಕಗಳು ನಮ್ಮ ಮಾನಸಿಕ ಸಮಸ್ಯೆಗಳನ್ನು ಗುರುತಿಸಿಕೊಳ್ಳಲು ಮತ್ತು ಪರಿಹರಿಸಿಕೊಳ್ಳಲು ನೆರವಾಗುತ್ತವೆ ಎಂಬುದರಲ್ಲಿ ಸಂಶಯವಿಲ್ಲ. ಹಾಗಂತ ಅರಿವಿನಿಂದ ಒಪ್ಪಿಕೊಳ್ಳುವುದೇ ಅಲ್ಲವೇ ನಮ್ಮ ಬಹು ದೊಡ್ಡ ಸಮಸ್ಯೆ!


ಇದನ್ನು ಓದಿ: ರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...