Homeಮುಖಪುಟದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

- Advertisement -
- Advertisement -

ಲಖಿಂಪುರ್‌ ಖೇರಿಯಲ್ಲಿ ನಡೆದಂತಹ ಘಟನೆ ಭಾರತದ ಇತರ ಭಾಗಗಳಲ್ಲಿ ನಡೆಯುತ್ತಲೆ ಇರುತ್ತವೆ. ಅದನ್ನು ಕೂಡಾ ಎಲ್ಲರೂ ಪ್ರಶ್ನಿಸಬೇಕು ಎಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹಾರ್ವರ್ಡ್ ಕೆನಡಿ ಶಾಲೆಯಲ್ಲಿ ನಡೆದ ಸಂವಾದವೊಂದರಲ್ಲಿ ಮಾತನಾಡುತ್ತಿದ್ದರು.

ಲಖಿಂಪುರ್‌ ಖೇರಿಯಲ್ಲಿ ನಡೆದ ಘಟನೆ ಖಂಡನೀಯವಾಗಿದ್ದು, ಅದನ್ನು ಸಮರ್ಥಿಸುವುದಿಲ್ಲ. ಭಾರತದ ಇತರ ಭಾಗಗಳಲ್ಲಿಯೂ ಸಹಜವಾಗಿ ನಡೆಯುವ ಇಂತಹ ಘಟನೆಗಳ ಬಗ್ಗೆ ಯಾಕೆ ಚರ್ಚೆ ಆಗುತ್ತಿಲ್ಲ ಎಂದು ಕೇಳಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ಅದನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ ಕುರಿತು ರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವರ ವಜಾಗೆ ಕಾಂಗ್ರೆಸ್ ಆಗ್ರಹ

ಲಖಿಂಪುರ್ ಖೇರಿಯಲ್ಲಿ ನಾಲ್ವರು ರೈತರ ಹತ್ಯೆ ಮತ್ತು ಒಕ್ಕೂಟ ಸರ್ಕಾರದ ಸಚಿವರ ಪುತ್ರ ಆಶಿಶ್ ಮಿಶ್ರಾ ಬಂಧನದ ಕುರಿತು ಅವರಿಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. “ಘಟನೆಯ ಬಗ್ಗೆ ಪ್ರಧಾನ ಮಂತ್ರಿಯಾಗಲಿ, ಇತರ ಮಂತ್ರಿಯಾಗಲಿ ಯಾಕೆ ಮಾತನಾಡುತ್ತಿಲ್ಲ ಮತ್ತು ಘಟನೆಯ ಬಗ್ಗೆ ಪ್ರಶ್ನಿಸಿದಾಗ ಸಮರ್ಥನೆ ನೀಡುವಂತೆ ಪ್ರತಿಕ್ರಿಯೆ ಯಾಕೆ ನೀಡಲಾಗುತ್ತದೆ” ಎಂದು ಅವರನ್ನು ಪ್ರಶ್ನಿಸಲಾಗಿತ್ತು.

ಇದಕ್ಕೆ ಉತ್ತರಿಸಿದ ನಿರ್ಮಲಾ ಅವರು, “ಖಂಡಿತವಾಗಿ ಅಲ್ಲ…ನೀವು ಕೇಳಿರುವ ಈ ಘಟನೆ ಖಂಡಿತ ಸಂಪೂರ್ಣ ಖಂಡನೀಯವಾಗಿದೆ, ನಮ್ಮಲ್ಲಿ ಪ್ರತಿಯೊಬ್ಬರೂ ಅದನ್ನೆ ಹೇಳುತ್ತಾರೆ. ಅದೇ ರೀತಿ ಬೇರೆಡೆ ಕೂಡಾ ಇದೇ ರೀತಿಯ ಘಟನೆ ನಡೆಯುತ್ತದೆ, ಇದು ನನ್ನ ಕಾಳಜಿ” ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ರೀತಿಯ ಸಮಸ್ಯೆಗಳು ದೇಶದ ಅನೇಕ ಭಾಗಗಳಲ್ಲಿ ಸಮಾನವಾಗಿ ನಡೆಯುತ್ತಿದೆ. ನೀವು, ಇತರರು ಹಾಗೂ ಡಾ.ಅಮರ್ತ್ಯ ಸೇನ್‌ ಅವರು ಸೇರಿದಂತೆ ಭಾರತವನ್ನು ತಿಳಿದಿರುವ ಅನೇಕರಿಗೆ ಹೇಳಲು ಬಯಸುವುದು, ಇಂತಹ ಘಟನೆಗಳು ಪ್ರತಿ ಭಾರಿ ಸಂಭವಿಸಿದಾಗ ಪ್ರಶ್ನೆಗಳನ್ನು ಕೇಳಬೇಕು. ಕೇವಲ ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯದಲ್ಲಿ ಮಾತ್ರವೆ ನಡೆದಾಗ ಮತ್ತು ಅದರಲ್ಲಿ ನನ್ನ ಕ್ಯಾಬಿನೆಟ್ ಸಹೋದ್ಯೋಗಿಯ ಮಗನೊಬ್ಬ ಇದ್ದಾನೆಂಬುದನ್ನು ಊಹಿಸಿ ಪ್ರಶ್ನಿಸುವುದಲ್ಲ. ಘಟನೆಯ ಬಗ್ಗೆ ಸರಿಯಾದ ವಿಚಾರಣೆ ನಡೆಸಿ ನ್ಯಾಯವನ್ನು ಎತ್ತಿಹಿಡಿಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

“ಇದು ಕೇವಲ ನನ್ನ ಪಕ್ಷ ಅಥವಾ ನನ್ನ ಪ್ರಧಾನ ಮಂತ್ರಿಯ ಬಗ್ಗೆ ಸಮರ್ಥಿಸುವುದಲ್ಲ. ಇದು ಭಾರತವನ್ನು ಸಮರ್ಥಿಸುವುದು. ನಾನು ಭಾರತಕ್ಕಾಗಿ ಮಾತನಾಡುತ್ತೇನೆ, ಬಡವರ ನ್ಯಾಯಕ್ಕಾಗಿ ಮಾತನಾಡುತ್ತೇನೆ. ನನ್ನನ್ನು ಗೇಲಿ ಮಾಡಲಾಗುವುದಿಲ್ಲ, ಒಂದು ವೇಳೆ ಗೇಲಿ ಮಾಡುತ್ತಿದ್ದರೆ, ನಾನು ಎದ್ದು ನಿಂತು ‘ಕ್ಷಮಿಸಿ, ಸತ್ಯಗಳ ಬಗ್ಗೆ ಮಾತನಾಡೋಣ’ ಎಂದು ಸಮರ್ಥಿಸಿಕೊಳ್ಳುತ್ತೇನೆ. ಇದು ನಿಮಗೆ ನನ್ನ ಉತ್ತರ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 3 ರಂದು ಯುಪಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಲಖಿಂಪುರ್‌ ಖೇರಿಗೆ ನೀಡಿದ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದ ರೈತರ ಮೇಲೆ ಕಾರುಗಳನ್ನು ಹರಿಸಲಾಗಿತ್ತು. ಈ ಕಾರಿನಲ್ಲಿ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಇದ್ದರು ಎಂದು ರೈತರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಎಸ್‌ಐಟಿಯಿಂದ ಆರೋಪಿ ಕಾರು ಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...