Homeಮುಖಪುಟದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

- Advertisement -
- Advertisement -

ಲಖಿಂಪುರ್‌ ಖೇರಿಯಲ್ಲಿ ನಡೆದಂತಹ ಘಟನೆ ಭಾರತದ ಇತರ ಭಾಗಗಳಲ್ಲಿ ನಡೆಯುತ್ತಲೆ ಇರುತ್ತವೆ. ಅದನ್ನು ಕೂಡಾ ಎಲ್ಲರೂ ಪ್ರಶ್ನಿಸಬೇಕು ಎಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹಾರ್ವರ್ಡ್ ಕೆನಡಿ ಶಾಲೆಯಲ್ಲಿ ನಡೆದ ಸಂವಾದವೊಂದರಲ್ಲಿ ಮಾತನಾಡುತ್ತಿದ್ದರು.

ಲಖಿಂಪುರ್‌ ಖೇರಿಯಲ್ಲಿ ನಡೆದ ಘಟನೆ ಖಂಡನೀಯವಾಗಿದ್ದು, ಅದನ್ನು ಸಮರ್ಥಿಸುವುದಿಲ್ಲ. ಭಾರತದ ಇತರ ಭಾಗಗಳಲ್ಲಿಯೂ ಸಹಜವಾಗಿ ನಡೆಯುವ ಇಂತಹ ಘಟನೆಗಳ ಬಗ್ಗೆ ಯಾಕೆ ಚರ್ಚೆ ಆಗುತ್ತಿಲ್ಲ ಎಂದು ಕೇಳಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ಅದನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ ಕುರಿತು ರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವರ ವಜಾಗೆ ಕಾಂಗ್ರೆಸ್ ಆಗ್ರಹ

ಲಖಿಂಪುರ್ ಖೇರಿಯಲ್ಲಿ ನಾಲ್ವರು ರೈತರ ಹತ್ಯೆ ಮತ್ತು ಒಕ್ಕೂಟ ಸರ್ಕಾರದ ಸಚಿವರ ಪುತ್ರ ಆಶಿಶ್ ಮಿಶ್ರಾ ಬಂಧನದ ಕುರಿತು ಅವರಿಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. “ಘಟನೆಯ ಬಗ್ಗೆ ಪ್ರಧಾನ ಮಂತ್ರಿಯಾಗಲಿ, ಇತರ ಮಂತ್ರಿಯಾಗಲಿ ಯಾಕೆ ಮಾತನಾಡುತ್ತಿಲ್ಲ ಮತ್ತು ಘಟನೆಯ ಬಗ್ಗೆ ಪ್ರಶ್ನಿಸಿದಾಗ ಸಮರ್ಥನೆ ನೀಡುವಂತೆ ಪ್ರತಿಕ್ರಿಯೆ ಯಾಕೆ ನೀಡಲಾಗುತ್ತದೆ” ಎಂದು ಅವರನ್ನು ಪ್ರಶ್ನಿಸಲಾಗಿತ್ತು.

ಇದಕ್ಕೆ ಉತ್ತರಿಸಿದ ನಿರ್ಮಲಾ ಅವರು, “ಖಂಡಿತವಾಗಿ ಅಲ್ಲ…ನೀವು ಕೇಳಿರುವ ಈ ಘಟನೆ ಖಂಡಿತ ಸಂಪೂರ್ಣ ಖಂಡನೀಯವಾಗಿದೆ, ನಮ್ಮಲ್ಲಿ ಪ್ರತಿಯೊಬ್ಬರೂ ಅದನ್ನೆ ಹೇಳುತ್ತಾರೆ. ಅದೇ ರೀತಿ ಬೇರೆಡೆ ಕೂಡಾ ಇದೇ ರೀತಿಯ ಘಟನೆ ನಡೆಯುತ್ತದೆ, ಇದು ನನ್ನ ಕಾಳಜಿ” ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ರೀತಿಯ ಸಮಸ್ಯೆಗಳು ದೇಶದ ಅನೇಕ ಭಾಗಗಳಲ್ಲಿ ಸಮಾನವಾಗಿ ನಡೆಯುತ್ತಿದೆ. ನೀವು, ಇತರರು ಹಾಗೂ ಡಾ.ಅಮರ್ತ್ಯ ಸೇನ್‌ ಅವರು ಸೇರಿದಂತೆ ಭಾರತವನ್ನು ತಿಳಿದಿರುವ ಅನೇಕರಿಗೆ ಹೇಳಲು ಬಯಸುವುದು, ಇಂತಹ ಘಟನೆಗಳು ಪ್ರತಿ ಭಾರಿ ಸಂಭವಿಸಿದಾಗ ಪ್ರಶ್ನೆಗಳನ್ನು ಕೇಳಬೇಕು. ಕೇವಲ ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯದಲ್ಲಿ ಮಾತ್ರವೆ ನಡೆದಾಗ ಮತ್ತು ಅದರಲ್ಲಿ ನನ್ನ ಕ್ಯಾಬಿನೆಟ್ ಸಹೋದ್ಯೋಗಿಯ ಮಗನೊಬ್ಬ ಇದ್ದಾನೆಂಬುದನ್ನು ಊಹಿಸಿ ಪ್ರಶ್ನಿಸುವುದಲ್ಲ. ಘಟನೆಯ ಬಗ್ಗೆ ಸರಿಯಾದ ವಿಚಾರಣೆ ನಡೆಸಿ ನ್ಯಾಯವನ್ನು ಎತ್ತಿಹಿಡಿಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

“ಇದು ಕೇವಲ ನನ್ನ ಪಕ್ಷ ಅಥವಾ ನನ್ನ ಪ್ರಧಾನ ಮಂತ್ರಿಯ ಬಗ್ಗೆ ಸಮರ್ಥಿಸುವುದಲ್ಲ. ಇದು ಭಾರತವನ್ನು ಸಮರ್ಥಿಸುವುದು. ನಾನು ಭಾರತಕ್ಕಾಗಿ ಮಾತನಾಡುತ್ತೇನೆ, ಬಡವರ ನ್ಯಾಯಕ್ಕಾಗಿ ಮಾತನಾಡುತ್ತೇನೆ. ನನ್ನನ್ನು ಗೇಲಿ ಮಾಡಲಾಗುವುದಿಲ್ಲ, ಒಂದು ವೇಳೆ ಗೇಲಿ ಮಾಡುತ್ತಿದ್ದರೆ, ನಾನು ಎದ್ದು ನಿಂತು ‘ಕ್ಷಮಿಸಿ, ಸತ್ಯಗಳ ಬಗ್ಗೆ ಮಾತನಾಡೋಣ’ ಎಂದು ಸಮರ್ಥಿಸಿಕೊಳ್ಳುತ್ತೇನೆ. ಇದು ನಿಮಗೆ ನನ್ನ ಉತ್ತರ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 3 ರಂದು ಯುಪಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಲಖಿಂಪುರ್‌ ಖೇರಿಗೆ ನೀಡಿದ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದ ರೈತರ ಮೇಲೆ ಕಾರುಗಳನ್ನು ಹರಿಸಲಾಗಿತ್ತು. ಈ ಕಾರಿನಲ್ಲಿ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಇದ್ದರು ಎಂದು ರೈತರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಎಸ್‌ಐಟಿಯಿಂದ ಆರೋಪಿ ಕಾರು ಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...