Homeಮುಖಪುಟದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

- Advertisement -
- Advertisement -

ಲಖಿಂಪುರ್‌ ಖೇರಿಯಲ್ಲಿ ನಡೆದಂತಹ ಘಟನೆ ಭಾರತದ ಇತರ ಭಾಗಗಳಲ್ಲಿ ನಡೆಯುತ್ತಲೆ ಇರುತ್ತವೆ. ಅದನ್ನು ಕೂಡಾ ಎಲ್ಲರೂ ಪ್ರಶ್ನಿಸಬೇಕು ಎಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹಾರ್ವರ್ಡ್ ಕೆನಡಿ ಶಾಲೆಯಲ್ಲಿ ನಡೆದ ಸಂವಾದವೊಂದರಲ್ಲಿ ಮಾತನಾಡುತ್ತಿದ್ದರು.

ಲಖಿಂಪುರ್‌ ಖೇರಿಯಲ್ಲಿ ನಡೆದ ಘಟನೆ ಖಂಡನೀಯವಾಗಿದ್ದು, ಅದನ್ನು ಸಮರ್ಥಿಸುವುದಿಲ್ಲ. ಭಾರತದ ಇತರ ಭಾಗಗಳಲ್ಲಿಯೂ ಸಹಜವಾಗಿ ನಡೆಯುವ ಇಂತಹ ಘಟನೆಗಳ ಬಗ್ಗೆ ಯಾಕೆ ಚರ್ಚೆ ಆಗುತ್ತಿಲ್ಲ ಎಂದು ಕೇಳಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ಅದನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ ಕುರಿತು ರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವರ ವಜಾಗೆ ಕಾಂಗ್ರೆಸ್ ಆಗ್ರಹ

ಲಖಿಂಪುರ್ ಖೇರಿಯಲ್ಲಿ ನಾಲ್ವರು ರೈತರ ಹತ್ಯೆ ಮತ್ತು ಒಕ್ಕೂಟ ಸರ್ಕಾರದ ಸಚಿವರ ಪುತ್ರ ಆಶಿಶ್ ಮಿಶ್ರಾ ಬಂಧನದ ಕುರಿತು ಅವರಿಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. “ಘಟನೆಯ ಬಗ್ಗೆ ಪ್ರಧಾನ ಮಂತ್ರಿಯಾಗಲಿ, ಇತರ ಮಂತ್ರಿಯಾಗಲಿ ಯಾಕೆ ಮಾತನಾಡುತ್ತಿಲ್ಲ ಮತ್ತು ಘಟನೆಯ ಬಗ್ಗೆ ಪ್ರಶ್ನಿಸಿದಾಗ ಸಮರ್ಥನೆ ನೀಡುವಂತೆ ಪ್ರತಿಕ್ರಿಯೆ ಯಾಕೆ ನೀಡಲಾಗುತ್ತದೆ” ಎಂದು ಅವರನ್ನು ಪ್ರಶ್ನಿಸಲಾಗಿತ್ತು.

ಇದಕ್ಕೆ ಉತ್ತರಿಸಿದ ನಿರ್ಮಲಾ ಅವರು, “ಖಂಡಿತವಾಗಿ ಅಲ್ಲ…ನೀವು ಕೇಳಿರುವ ಈ ಘಟನೆ ಖಂಡಿತ ಸಂಪೂರ್ಣ ಖಂಡನೀಯವಾಗಿದೆ, ನಮ್ಮಲ್ಲಿ ಪ್ರತಿಯೊಬ್ಬರೂ ಅದನ್ನೆ ಹೇಳುತ್ತಾರೆ. ಅದೇ ರೀತಿ ಬೇರೆಡೆ ಕೂಡಾ ಇದೇ ರೀತಿಯ ಘಟನೆ ನಡೆಯುತ್ತದೆ, ಇದು ನನ್ನ ಕಾಳಜಿ” ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ರೀತಿಯ ಸಮಸ್ಯೆಗಳು ದೇಶದ ಅನೇಕ ಭಾಗಗಳಲ್ಲಿ ಸಮಾನವಾಗಿ ನಡೆಯುತ್ತಿದೆ. ನೀವು, ಇತರರು ಹಾಗೂ ಡಾ.ಅಮರ್ತ್ಯ ಸೇನ್‌ ಅವರು ಸೇರಿದಂತೆ ಭಾರತವನ್ನು ತಿಳಿದಿರುವ ಅನೇಕರಿಗೆ ಹೇಳಲು ಬಯಸುವುದು, ಇಂತಹ ಘಟನೆಗಳು ಪ್ರತಿ ಭಾರಿ ಸಂಭವಿಸಿದಾಗ ಪ್ರಶ್ನೆಗಳನ್ನು ಕೇಳಬೇಕು. ಕೇವಲ ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯದಲ್ಲಿ ಮಾತ್ರವೆ ನಡೆದಾಗ ಮತ್ತು ಅದರಲ್ಲಿ ನನ್ನ ಕ್ಯಾಬಿನೆಟ್ ಸಹೋದ್ಯೋಗಿಯ ಮಗನೊಬ್ಬ ಇದ್ದಾನೆಂಬುದನ್ನು ಊಹಿಸಿ ಪ್ರಶ್ನಿಸುವುದಲ್ಲ. ಘಟನೆಯ ಬಗ್ಗೆ ಸರಿಯಾದ ವಿಚಾರಣೆ ನಡೆಸಿ ನ್ಯಾಯವನ್ನು ಎತ್ತಿಹಿಡಿಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

“ಇದು ಕೇವಲ ನನ್ನ ಪಕ್ಷ ಅಥವಾ ನನ್ನ ಪ್ರಧಾನ ಮಂತ್ರಿಯ ಬಗ್ಗೆ ಸಮರ್ಥಿಸುವುದಲ್ಲ. ಇದು ಭಾರತವನ್ನು ಸಮರ್ಥಿಸುವುದು. ನಾನು ಭಾರತಕ್ಕಾಗಿ ಮಾತನಾಡುತ್ತೇನೆ, ಬಡವರ ನ್ಯಾಯಕ್ಕಾಗಿ ಮಾತನಾಡುತ್ತೇನೆ. ನನ್ನನ್ನು ಗೇಲಿ ಮಾಡಲಾಗುವುದಿಲ್ಲ, ಒಂದು ವೇಳೆ ಗೇಲಿ ಮಾಡುತ್ತಿದ್ದರೆ, ನಾನು ಎದ್ದು ನಿಂತು ‘ಕ್ಷಮಿಸಿ, ಸತ್ಯಗಳ ಬಗ್ಗೆ ಮಾತನಾಡೋಣ’ ಎಂದು ಸಮರ್ಥಿಸಿಕೊಳ್ಳುತ್ತೇನೆ. ಇದು ನಿಮಗೆ ನನ್ನ ಉತ್ತರ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 3 ರಂದು ಯುಪಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಲಖಿಂಪುರ್‌ ಖೇರಿಗೆ ನೀಡಿದ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದ ರೈತರ ಮೇಲೆ ಕಾರುಗಳನ್ನು ಹರಿಸಲಾಗಿತ್ತು. ಈ ಕಾರಿನಲ್ಲಿ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಇದ್ದರು ಎಂದು ರೈತರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಎಸ್‌ಐಟಿಯಿಂದ ಆರೋಪಿ ಕಾರು ಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...