Homeಮುಖಪುಟಚುನಾವಣಾ ಆಯೋಗ ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ಪುರಾವೆಗಳಿವೆ: ರಾಹುಲ್ ಗಾಂಧಿ

ಚುನಾವಣಾ ಆಯೋಗ ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ಪುರಾವೆಗಳಿವೆ: ರಾಹುಲ್ ಗಾಂಧಿ

- Advertisement -
- Advertisement -

ಕರ್ನಾಟಕದ ಒಂದು ಕ್ಷೇತ್ರದಲ್ಲಿ ಚುನಾವಣಾ ಆಯೋಗವು ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ಕಾಂಗ್ರೆಸ್ ಬಳಿ ಶೇಕಡಾ 100 ರಷ್ಟು ದೃಢವಾದ ಪುರಾವೆ ಇದೆ ಎಂದು ರಾಹುಲ್ ಗಾಂಧಿ ಗುರುವಾರ ಹೇಳಿದರು. “ನಾವು ನಿಮಗಾಗಿ ಬರುತ್ತೇವೆ” ಎಂದು ಚುನಾವಣಾ ಆಯೋಗಕ್ಕೆ ಎಚ್ಚರಿಕೆ ನೀಡಿದರು.

ಚುನಾವಣಾ ಸಮಿತಿಯು ಭಾರತದ ಚುನಾವಣಾ ಆಯೋಗವಾಗಿ ಕಾರ್ಯನಿರ್ವಹಿಸುತ್ತಿಲ್ಲ, ತನ್ನ ಕೆಲಸವನ್ನು ಮಾಡುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಬಿಹಾರ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಆಯ್ಕೆ ಮುಕ್ತವಾಗಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ನೀಡಿರುವ ಹೇಳಿಕೆಯ ಬಗ್ಗೆ ಕೇಳಿದಾಗ, ಕರ್ನಾಟಕದ ಒಂದು ಸ್ಥಾನದಲ್ಲಿ ಚುನಾವಣಾ ಆಯೋಗ ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ತಮ್ಮ ಪಕ್ಷವು ಶೇಕಡಾ 100 ರಷ್ಟು ದೃಢ ಪುರಾವೆ ಹೊಂದಿದೆ ಎಂದು ರಾಹುಲ್ ಗಾಂಧಿ ವರದಿಗಾರರಿಗೆ ತಿಳಿಸಿದರು.

“ಶೇಕಡಾ 90 ಅಲ್ಲ, ನಾವು ಅದನ್ನು ನಿಮಗೆ ತೋರಿಸಲು ನಿರ್ಧರಿಸಿದಾಗ, ಅದು ಶೇಕಡ 100 ರಷ್ಟು ಪುರಾವೆಯಾಗಿರುತ್ತದೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು.

“ನಾನು ಒಂದೊಂದು ಕ್ಷೇತ್ರವನ್ನು ನೋಡಿದೆ, ಲೋಪವನ್ನು ನಾವು ಕಂಡುಕೊಂಡಿದ್ದೇವೆ. ಕ್ಷೇತ್ರದಿಂದ ಕ್ಷೇತ್ರಕ್ಕೆ ಇದೇ ನಡೆಯುತ್ತಿರುವ ನಾಟಕ ಎಂದು ನನಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ. ಸಾವಿರಾರು ಹೊಸ ಮತದಾರರು, ಅವರ ವಯಸ್ಸು ಎಷ್ಟು? ಒಂದು ಕ್ಷೇತ್ರದಲ್ಲಿ 45, 50, 60, 65 ಹಾಗೂ ಸಾವಿರಾರು ಮತ್ತು ಸಾವಿರಾರು. ಇದು ಒಂದು ವಿಷಯವಾದರೆ ಮತದಾರರ ಹೆಸರನ್ನು ಅಳಿಸುವಿಕೆ ಮತ್ತೊಂದು” ಎಂದು ಅವರು ಹೇಳಿದರು.

“ನಾನು ಚುನಾವಣಾ ಆಯೋಗಕ್ಕೆ ಒಂದು ಸಂದೇಶವನ್ನು ಕಳುಹಿಸಲು ಬಯಸುತ್ತೇನೆ, ಇದರಿಂದ ತಪ್ಪಿಸಿಕೊಳ್ಳುತ್ತೀದ್ದೇವೆ ಎಂದು ನೀವು ಭಾವಿಸಿದರೆ, ನಿಮ್ಮ ಅಧಿಕಾರಿಗಳು ಇದರಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ಭಾವಿಸಿದರೆ ಅದು ತಪ್ಪು. ನೀವು ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ, ನಾವು ನಿಮಗಾಗಿ ಬರುತ್ತೇವೆ” ಎಂದು ರಾಹುಲ್ ಗಾಂಧಿ ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಭಾರತದಲ್ಲಿ ಚುನಾವಣೆಗಳನ್ನು ಕದಿಯಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಬುಧವಾರ ಆರೋಪಿಸಿದ್ದರು. ಕರ್ನಾಟಕದ ಲೋಕಸಭಾ ಕ್ಷೇತ್ರವನ್ನು ಅಧ್ಯಯನ ಮಾಡುವ ಮೂಲಕ ತಮ್ಮ ಪಕ್ಷವು ಮತಗಳ ಕಳ್ಳತನದ ವಿಧಾನವನ್ನು ಕಂಡುಹಿಡಿದಿದೆ ಎಂದು ಹೇಳಿಕೊಂಡಿದ್ದರು.

“ಮತಗಳ ಕಳ್ಳತನ”ವನ್ನು ಹೇಗೆ ಮಾಡಲಾಗುತ್ತದೆ ಎಂಬುದರ ಕುರಿತು ಕಪ್ಪು-ಬಿಳಿ ಬಣ್ಣದಲ್ಲಿ ಜನರು ಮತ್ತು ಚುನಾವಣಾ ಆಯೋಗದ ಮುಂದೆ ಇಡುವುದಾಗಿ ರಾಹುಲ್ ಹೇಳಿದರು.

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ಪರಿಷ್ಕರಣೆಯಲ್ಲಿ ಮನೆ-ಮನೆಗೆ ಭೇಟಿ ನೀಡಿದಾಗ, ಚುನಾವಣಾ ಅಧಿಕಾರಿಗಳು ಇಲ್ಲಿಯವರೆಗೆ 52 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ವಿಳಾಸಗಳಲ್ಲಿ ಇಲ್ಲ ಎಂದು ಕಂಡುಕೊಂಡಿದ್ದಾರೆ ಎಂದು ಅವರು ಹೇಳಿದರು.

ವಿರೋಧ ಪಕ್ಷವು ಪರಿಷ್ಕರಣಾ ಕಾರ್ಯದ ವಿರುದ್ಧ ಸಂಸತ್ತಿನ ಎರಡೂ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ, ಇದು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಹಾರದಲ್ಲಿ ಮತದಾರರನ್ನು ಮತದಾನದಿಂದ ವಂಚಿತಗೊಳಿಸುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿದರು.

ಅಹಮಾದಾಬಾದ್ ವಿಮಾನ ಅಪಘಾತದ ಬಳಿಕ ಅನಾರೋಗ್ಯ ರಜೆ ತೆಗೆದುಕೊಂಡಿದ್ದ 112 ಏರ್ ಇಂಡಿಯಾ ಪೈಲಟ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....