Homeಮುಖಪುಟಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಪರಿಸ್ಥಿತಿಯನ್ನು ಹೊಸದಾಗಿ ಪರಿಶೀಲಿಸಿದ ನಂತರ ನಿಷೇಧವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಲೀನ್ ಕಬ್ರಾ ತಿಳಿಸಿದ್ದಾರೆ.

- Advertisement -
- Advertisement -

ಜಮ್ಮು ಕಾಶ್ಮೀರ ಆಡಳಿತವು ಗಂದರ್‌ಬಲ್ ಮತ್ತು ಉಧಂಪುರ್‌ ಎರಡು ಜಿಲ್ಲೆಗಳ ಹೊರಗೆ ಹೈಸ್ಪೀಡ್ ಮೊಬೈಲ್ ಇಂಟರ್ನೆಟ್ ಅಥವಾ 4 ಜಿ ಸೇವೆಗಳನ್ನು ವಿಸ್ತರಿಸಲು ನಿರಾಕರಿಸಿದೆ. ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಆಮಿಷವೊಡ್ಡಲು ಪ್ರಯತ್ನಿಸುತ್ತಿರುವ “ಭಯೋತ್ಪಾದಕ ಘಟಕಗಳ” ಬಗ್ಗೆ ಭದ್ರತಾ ಸಂಸ್ಥೆಗಳ ವರದಿ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ಆಗಸ್ಟ್ 5 ರಂದು ಕೇಂದ್ರವು ಸಂವಿಧಾನದ 370 ನೇ ವಿಧಿಯನ್ನು ಹಿಂತೆಗೆದುಕೊಂಡು ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು. ಇದಾಗೀ ಕೆಲವೇ ಗಂಟೆಗಳಲ್ಲಿ ರಾಜ್ಯದಲ್ಲಿ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸಲಾಗಿತ್ತು.

ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ.

4 ಜಿ ನೆಟ್‌ವರ್ಕ್‌ನ ಸಂಪೂರ್ಣ ನಿಷೇಧದ ಮಧ್ಯೆ ಈ ವರ್ಷ ಜನವರಿ 25 ರಂದು 2ಜಿ ಇಂಟರ್ನೆಟ್ ಸೇವೆಯನ್ನು ಪುನಃಸ್ಥಾಪಿಸಲಾಯಿತು. ಅದರ ಮುಂದುವರಿದ ಭಾಗವಾಗಿ ಆಗಸ್ಟ್‌ನಲ್ಲಿ ಸರ್ಕಾರವು ನಿರ್ಬಂಧಗಳನ್ನು  ಸರಾಗಗೊಳಿಸುವಿಕೆಯ ಭಾಗವಾಗಿ ಗಂದರ್‌ಬಲ್ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ “ಪ್ರಯೋಗ ಆಧಾರದ ಮೇಲೆ” ಹೈಸ್ಪೀಡ್ ಮೊಬೈಲ್ ಡೇಟಾ ಸೇವೆಯನ್ನು ಪುನರಾರಂಭಿಸಿತು. ಈ ಜಿಲ್ಲೆಗಳಲ್ಲಿ 4 ಜಿ ಸೇವೆಗಳು ಸೆಪ್ಟೆಂಬರ್ 30 ರವರೆಗೆ ಮುಂದುವರಿಯಲಿವೆ.

ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಲೀನ್ ಕಬ್ರಾ ತಮ್ಮ ಆದೇಶದಲ್ಲಿ ’ಪರಿಸ್ಥಿತಿಯನ್ನು ಹೊಸದಾಗಿ ಪರಿಶೀಲಿಸಿದ ನಂತರ ನಿಷೇಧವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಎರಡು ಜಿಲ್ಲೆಗಳಲ್ಲಿ 4ಜಿ ಇಂಟರ್ನೆಟ್ ಸೇವೆಗಳನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಯಾವುದೇ ವರದಿಗಳು ಬಂದಿಲ್ಲವಾದರೂ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಬೇಕಾಗಿದೆ’ ಎಂದಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ
PC:Reuters

ಭಯೋತ್ಪಾದಕ ಘಟಕ‌ಗಳ ಬಗ್ಗೆ ಕಾನೂನು ಜಾರಿ ಸಂಸ್ಥೆಗಳು ವಿಶ್ವಾಸಾರ್ಹ ಮಾಹಿತಿ ನೀಡಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭಯೋತ್ಪಾದಕ ಸಂಘಟನೆಗಳು ಯುವಕರಲ್ಲಿ ಭಾವನೆಗಳನ್ನು ಪ್ರಚೋದಿಸಿ ಮೋಸದಿಂದ ಸಂಘಟನೆಗಳಿಗೆ ಸೇರುವಂತೆ ಮಾಡುತ್ತವೆ. ಹೀಗಾಗಿ 4ಜಿ ಇಂಟರ್‌ನೆಟ್ ದುರುಪಯೋಗವಾಗುವ ಸಂಭಾವ್ಯವನ್ನು ಸೂಚಿಸುತ್ತದೆ ಎಂದು ತಿಳಿಸಿದೆ.

ಮುಂದುವರೆದು, ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರು ಒಳನುಸುಳುವ ಪ್ರಯತ್ನಗಳಿಗೆ ಸಹಾಯ ಮಾಡಲು ಹೈಸ್ಪೀಡ್ ಡೇಟಾ ಸೇವೆಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂದು ಏಜೆನ್ಸಿಗಳು ಆತಂಕ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಸಂಸತ್ತಿನ ಮಾನ್ಸೂನ್ ಅಧಿವೇಶನ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ !

ಸುಪ್ರೀಂ ಕೋರ್ಟ್ ಕೇಂದ್ರವನ್ನು ಹಿರಿಯ ಗೃಹ ಸಚಿವಾಲಯ ಮತ್ತು ಕೇಂದ್ರ ಪ್ರಾಂತ್ಯದ ಅಧಿಕಾರಿಗಳನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸುವಂತೆ ಕೇಳಿದ ಕೆಲವೇ ದಿನಗಳಲ್ಲಿ ‍ಆಗಸ್ಟ್ 16 ರಂದು ಗಂದರ್‌‌ಬಲ್ ಮತ್ತು ಉಧಂಪುರದಲ್ಲಿ 4 ಜಿ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿವಿಧ ಸಂಸ್ಥೆಗಳಿಂದ ಮತ್ತು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿತ್ತು. ಹಲವು ಪ್ರತಿಭಟನೆಗಳನ್ನು ಮೋದಿ ಸರ್ಕಾರ ಎದುರಿಸಬೇಕಾಯಿತು. ಈಗಲೂ 2 ಜಿಲ್ಲೆಗಳಲ್ಲಿ 4ಜಿ ಇಂಟರ್‌ನೆಟ್ ದುರುಪಯೋಗವಾಗಿಲ್ಲ ಎಂದರೂ ಹೈಸ್ಪೀಡ್ ಇಂಟರ್‌ನೆಟ್ ವಿಸ್ತರಣೆ ಮಾಡಲು ಸರ್ಕಾರ ಚಿಂತಿಸುತ್ತಿದೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...