Homeಮುಖಪುಟಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಪರಿಸ್ಥಿತಿಯನ್ನು ಹೊಸದಾಗಿ ಪರಿಶೀಲಿಸಿದ ನಂತರ ನಿಷೇಧವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಲೀನ್ ಕಬ್ರಾ ತಿಳಿಸಿದ್ದಾರೆ.

- Advertisement -
- Advertisement -

ಜಮ್ಮು ಕಾಶ್ಮೀರ ಆಡಳಿತವು ಗಂದರ್‌ಬಲ್ ಮತ್ತು ಉಧಂಪುರ್‌ ಎರಡು ಜಿಲ್ಲೆಗಳ ಹೊರಗೆ ಹೈಸ್ಪೀಡ್ ಮೊಬೈಲ್ ಇಂಟರ್ನೆಟ್ ಅಥವಾ 4 ಜಿ ಸೇವೆಗಳನ್ನು ವಿಸ್ತರಿಸಲು ನಿರಾಕರಿಸಿದೆ. ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಆಮಿಷವೊಡ್ಡಲು ಪ್ರಯತ್ನಿಸುತ್ತಿರುವ “ಭಯೋತ್ಪಾದಕ ಘಟಕಗಳ” ಬಗ್ಗೆ ಭದ್ರತಾ ಸಂಸ್ಥೆಗಳ ವರದಿ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ಆಗಸ್ಟ್ 5 ರಂದು ಕೇಂದ್ರವು ಸಂವಿಧಾನದ 370 ನೇ ವಿಧಿಯನ್ನು ಹಿಂತೆಗೆದುಕೊಂಡು ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು. ಇದಾಗೀ ಕೆಲವೇ ಗಂಟೆಗಳಲ್ಲಿ ರಾಜ್ಯದಲ್ಲಿ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸಲಾಗಿತ್ತು.

ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ.

4 ಜಿ ನೆಟ್‌ವರ್ಕ್‌ನ ಸಂಪೂರ್ಣ ನಿಷೇಧದ ಮಧ್ಯೆ ಈ ವರ್ಷ ಜನವರಿ 25 ರಂದು 2ಜಿ ಇಂಟರ್ನೆಟ್ ಸೇವೆಯನ್ನು ಪುನಃಸ್ಥಾಪಿಸಲಾಯಿತು. ಅದರ ಮುಂದುವರಿದ ಭಾಗವಾಗಿ ಆಗಸ್ಟ್‌ನಲ್ಲಿ ಸರ್ಕಾರವು ನಿರ್ಬಂಧಗಳನ್ನು  ಸರಾಗಗೊಳಿಸುವಿಕೆಯ ಭಾಗವಾಗಿ ಗಂದರ್‌ಬಲ್ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ “ಪ್ರಯೋಗ ಆಧಾರದ ಮೇಲೆ” ಹೈಸ್ಪೀಡ್ ಮೊಬೈಲ್ ಡೇಟಾ ಸೇವೆಯನ್ನು ಪುನರಾರಂಭಿಸಿತು. ಈ ಜಿಲ್ಲೆಗಳಲ್ಲಿ 4 ಜಿ ಸೇವೆಗಳು ಸೆಪ್ಟೆಂಬರ್ 30 ರವರೆಗೆ ಮುಂದುವರಿಯಲಿವೆ.

ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಲೀನ್ ಕಬ್ರಾ ತಮ್ಮ ಆದೇಶದಲ್ಲಿ ’ಪರಿಸ್ಥಿತಿಯನ್ನು ಹೊಸದಾಗಿ ಪರಿಶೀಲಿಸಿದ ನಂತರ ನಿಷೇಧವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಎರಡು ಜಿಲ್ಲೆಗಳಲ್ಲಿ 4ಜಿ ಇಂಟರ್ನೆಟ್ ಸೇವೆಗಳನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಯಾವುದೇ ವರದಿಗಳು ಬಂದಿಲ್ಲವಾದರೂ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಬೇಕಾಗಿದೆ’ ಎಂದಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ
PC:Reuters

ಭಯೋತ್ಪಾದಕ ಘಟಕ‌ಗಳ ಬಗ್ಗೆ ಕಾನೂನು ಜಾರಿ ಸಂಸ್ಥೆಗಳು ವಿಶ್ವಾಸಾರ್ಹ ಮಾಹಿತಿ ನೀಡಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭಯೋತ್ಪಾದಕ ಸಂಘಟನೆಗಳು ಯುವಕರಲ್ಲಿ ಭಾವನೆಗಳನ್ನು ಪ್ರಚೋದಿಸಿ ಮೋಸದಿಂದ ಸಂಘಟನೆಗಳಿಗೆ ಸೇರುವಂತೆ ಮಾಡುತ್ತವೆ. ಹೀಗಾಗಿ 4ಜಿ ಇಂಟರ್‌ನೆಟ್ ದುರುಪಯೋಗವಾಗುವ ಸಂಭಾವ್ಯವನ್ನು ಸೂಚಿಸುತ್ತದೆ ಎಂದು ತಿಳಿಸಿದೆ.

ಮುಂದುವರೆದು, ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರು ಒಳನುಸುಳುವ ಪ್ರಯತ್ನಗಳಿಗೆ ಸಹಾಯ ಮಾಡಲು ಹೈಸ್ಪೀಡ್ ಡೇಟಾ ಸೇವೆಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂದು ಏಜೆನ್ಸಿಗಳು ಆತಂಕ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಸಂಸತ್ತಿನ ಮಾನ್ಸೂನ್ ಅಧಿವೇಶನ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ !

ಸುಪ್ರೀಂ ಕೋರ್ಟ್ ಕೇಂದ್ರವನ್ನು ಹಿರಿಯ ಗೃಹ ಸಚಿವಾಲಯ ಮತ್ತು ಕೇಂದ್ರ ಪ್ರಾಂತ್ಯದ ಅಧಿಕಾರಿಗಳನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸುವಂತೆ ಕೇಳಿದ ಕೆಲವೇ ದಿನಗಳಲ್ಲಿ ‍ಆಗಸ್ಟ್ 16 ರಂದು ಗಂದರ್‌‌ಬಲ್ ಮತ್ತು ಉಧಂಪುರದಲ್ಲಿ 4 ಜಿ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿವಿಧ ಸಂಸ್ಥೆಗಳಿಂದ ಮತ್ತು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿತ್ತು. ಹಲವು ಪ್ರತಿಭಟನೆಗಳನ್ನು ಮೋದಿ ಸರ್ಕಾರ ಎದುರಿಸಬೇಕಾಯಿತು. ಈಗಲೂ 2 ಜಿಲ್ಲೆಗಳಲ್ಲಿ 4ಜಿ ಇಂಟರ್‌ನೆಟ್ ದುರುಪಯೋಗವಾಗಿಲ್ಲ ಎಂದರೂ ಹೈಸ್ಪೀಡ್ ಇಂಟರ್‌ನೆಟ್ ವಿಸ್ತರಣೆ ಮಾಡಲು ಸರ್ಕಾರ ಚಿಂತಿಸುತ್ತಿದೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...