Homeಮುಖಪುಟಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಪರಿಸ್ಥಿತಿಯನ್ನು ಹೊಸದಾಗಿ ಪರಿಶೀಲಿಸಿದ ನಂತರ ನಿಷೇಧವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಲೀನ್ ಕಬ್ರಾ ತಿಳಿಸಿದ್ದಾರೆ.

- Advertisement -
- Advertisement -

ಜಮ್ಮು ಕಾಶ್ಮೀರ ಆಡಳಿತವು ಗಂದರ್‌ಬಲ್ ಮತ್ತು ಉಧಂಪುರ್‌ ಎರಡು ಜಿಲ್ಲೆಗಳ ಹೊರಗೆ ಹೈಸ್ಪೀಡ್ ಮೊಬೈಲ್ ಇಂಟರ್ನೆಟ್ ಅಥವಾ 4 ಜಿ ಸೇವೆಗಳನ್ನು ವಿಸ್ತರಿಸಲು ನಿರಾಕರಿಸಿದೆ. ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಆಮಿಷವೊಡ್ಡಲು ಪ್ರಯತ್ನಿಸುತ್ತಿರುವ “ಭಯೋತ್ಪಾದಕ ಘಟಕಗಳ” ಬಗ್ಗೆ ಭದ್ರತಾ ಸಂಸ್ಥೆಗಳ ವರದಿ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ಆಗಸ್ಟ್ 5 ರಂದು ಕೇಂದ್ರವು ಸಂವಿಧಾನದ 370 ನೇ ವಿಧಿಯನ್ನು ಹಿಂತೆಗೆದುಕೊಂಡು ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು. ಇದಾಗೀ ಕೆಲವೇ ಗಂಟೆಗಳಲ್ಲಿ ರಾಜ್ಯದಲ್ಲಿ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸಲಾಗಿತ್ತು.

ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ.

4 ಜಿ ನೆಟ್‌ವರ್ಕ್‌ನ ಸಂಪೂರ್ಣ ನಿಷೇಧದ ಮಧ್ಯೆ ಈ ವರ್ಷ ಜನವರಿ 25 ರಂದು 2ಜಿ ಇಂಟರ್ನೆಟ್ ಸೇವೆಯನ್ನು ಪುನಃಸ್ಥಾಪಿಸಲಾಯಿತು. ಅದರ ಮುಂದುವರಿದ ಭಾಗವಾಗಿ ಆಗಸ್ಟ್‌ನಲ್ಲಿ ಸರ್ಕಾರವು ನಿರ್ಬಂಧಗಳನ್ನು  ಸರಾಗಗೊಳಿಸುವಿಕೆಯ ಭಾಗವಾಗಿ ಗಂದರ್‌ಬಲ್ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ “ಪ್ರಯೋಗ ಆಧಾರದ ಮೇಲೆ” ಹೈಸ್ಪೀಡ್ ಮೊಬೈಲ್ ಡೇಟಾ ಸೇವೆಯನ್ನು ಪುನರಾರಂಭಿಸಿತು. ಈ ಜಿಲ್ಲೆಗಳಲ್ಲಿ 4 ಜಿ ಸೇವೆಗಳು ಸೆಪ್ಟೆಂಬರ್ 30 ರವರೆಗೆ ಮುಂದುವರಿಯಲಿವೆ.

ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಲೀನ್ ಕಬ್ರಾ ತಮ್ಮ ಆದೇಶದಲ್ಲಿ ’ಪರಿಸ್ಥಿತಿಯನ್ನು ಹೊಸದಾಗಿ ಪರಿಶೀಲಿಸಿದ ನಂತರ ನಿಷೇಧವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಎರಡು ಜಿಲ್ಲೆಗಳಲ್ಲಿ 4ಜಿ ಇಂಟರ್ನೆಟ್ ಸೇವೆಗಳನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಯಾವುದೇ ವರದಿಗಳು ಬಂದಿಲ್ಲವಾದರೂ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಬೇಕಾಗಿದೆ’ ಎಂದಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ
PC:Reuters

ಭಯೋತ್ಪಾದಕ ಘಟಕ‌ಗಳ ಬಗ್ಗೆ ಕಾನೂನು ಜಾರಿ ಸಂಸ್ಥೆಗಳು ವಿಶ್ವಾಸಾರ್ಹ ಮಾಹಿತಿ ನೀಡಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭಯೋತ್ಪಾದಕ ಸಂಘಟನೆಗಳು ಯುವಕರಲ್ಲಿ ಭಾವನೆಗಳನ್ನು ಪ್ರಚೋದಿಸಿ ಮೋಸದಿಂದ ಸಂಘಟನೆಗಳಿಗೆ ಸೇರುವಂತೆ ಮಾಡುತ್ತವೆ. ಹೀಗಾಗಿ 4ಜಿ ಇಂಟರ್‌ನೆಟ್ ದುರುಪಯೋಗವಾಗುವ ಸಂಭಾವ್ಯವನ್ನು ಸೂಚಿಸುತ್ತದೆ ಎಂದು ತಿಳಿಸಿದೆ.

ಮುಂದುವರೆದು, ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರು ಒಳನುಸುಳುವ ಪ್ರಯತ್ನಗಳಿಗೆ ಸಹಾಯ ಮಾಡಲು ಹೈಸ್ಪೀಡ್ ಡೇಟಾ ಸೇವೆಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂದು ಏಜೆನ್ಸಿಗಳು ಆತಂಕ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಸಂಸತ್ತಿನ ಮಾನ್ಸೂನ್ ಅಧಿವೇಶನ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ !

ಸುಪ್ರೀಂ ಕೋರ್ಟ್ ಕೇಂದ್ರವನ್ನು ಹಿರಿಯ ಗೃಹ ಸಚಿವಾಲಯ ಮತ್ತು ಕೇಂದ್ರ ಪ್ರಾಂತ್ಯದ ಅಧಿಕಾರಿಗಳನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸುವಂತೆ ಕೇಳಿದ ಕೆಲವೇ ದಿನಗಳಲ್ಲಿ ‍ಆಗಸ್ಟ್ 16 ರಂದು ಗಂದರ್‌‌ಬಲ್ ಮತ್ತು ಉಧಂಪುರದಲ್ಲಿ 4 ಜಿ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿವಿಧ ಸಂಸ್ಥೆಗಳಿಂದ ಮತ್ತು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿತ್ತು. ಹಲವು ಪ್ರತಿಭಟನೆಗಳನ್ನು ಮೋದಿ ಸರ್ಕಾರ ಎದುರಿಸಬೇಕಾಯಿತು. ಈಗಲೂ 2 ಜಿಲ್ಲೆಗಳಲ್ಲಿ 4ಜಿ ಇಂಟರ್‌ನೆಟ್ ದುರುಪಯೋಗವಾಗಿಲ್ಲ ಎಂದರೂ ಹೈಸ್ಪೀಡ್ ಇಂಟರ್‌ನೆಟ್ ವಿಸ್ತರಣೆ ಮಾಡಲು ಸರ್ಕಾರ ಚಿಂತಿಸುತ್ತಿದೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...