Homeನಿಜವೋ ಸುಳ್ಳೋಸಹಾಯಕ ಪ್ರಾಧ್ಯಾಪಕ ಹುದ್ದೆಗೆ ವಯೋಮಿತಿ ಇಲ್ಲ. ಯುಜಿಸಿ ಸ್ಪಷ್ಟನೆ

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ವಯೋಮಿತಿ ಇಲ್ಲ. ಯುಜಿಸಿ ಸ್ಪಷ್ಟನೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕಳೆದ ಎರಡು ಮೂರು ದಿನಗಳಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆ ಆಕಾಂಕ್ಷಿಗಳಿಗೆ ಶಾಕ್ ನ್ಯೂಸ್, 35 ವರ್ಷ ಮೇಲ್ಪಟ್ಟವರು ಇನ್ನು ಮುಂದೆ ಪರೀಕ್ಷೆ ಬರೆಯುವಂತಿಲ್ಲ ಎಂಬ ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿತ್ತು.

ಇದನ್ನು ಭಾರತ ಸರ್ಕಾರವೇ ನಿರ್ಧರಿಸಿದ್ದು ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯವು ಯು.ಜಿ.ಸಿಗೆ ಆದೇಶ ನೀಡಲಾಗಿದೆ, ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಬರೆಯುವವರಿಗೆ 35ವರ್ಷದ ವಯೋಮಿತಿ (ಎಲ್ಲಾ ಜಾತಿಯವರಿಗೂ) ನಿಗಧಿಗೊಳಿಸಲಾಗಿದೆ ಎಂಬ ಸಂದೇಶ ಹರಿದಾಡಿತ್ತು.

01.06.2019ರಿಂದಲೇ ಈ ಆದೇಶ ಜಾರಿಗೆ ಬರಲಿದ್ದು ಮಾನವ ಸಂಪನ್ಮೂಲ ಸಚಿವರ ಹೆಸರಿನಲ್ಲಿ ಪ್ರೆಸ್ ನೋಟ್ ಬಂದ ರೀತಿಯ ಸಂದೇಶ ಇದಾಗಿದ್ದು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರು ಇದನ್ನು ಸಾಕಷ್ಟು ಸಂಖ್ಯೆಯಲ್ಲಿ ಷೇರ್ ಮಾಡಿದ್ದರು. ಇದನ್ನು ನೋಡಿ ಹಲವು ಆಕಾಂಕ್ಷಿಗಳು ಗಾಬರಿ ಬಿದ್ದಿದ್ದು ಸಹ ನಿಜ.

ಆದರೆ ಇದು ಸಂಪೂರ್ಣ ಸುಳ್ಳು ಸಂದೇಶವಾಗಿದೆ. ಈ ಕುರಿತು ಯು.ಜಿ.ಸಿ ಸದಸ್ಯರಾದ ಪ್ರೊ.ಜಿ ಗೋಪಾಲ ರೆಡ್ಡಿಯವರು ಸ್ಪಷ್ಟನೆ ನೀಡಿದ್ದು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಯಾವುದೇ ರೀತಿಯ ವಯೋಮಿತಿ ಇಲ್ಲ ಎಂದು ತಿಳಿಸಿದ್ದಾರೆ. ಯಾರೋ ಕಿಡಿಗೇಡಿಗಳು ಆಕಾಂಕ್ಷಿಗಳಲ್ಲಿ ಭಯ ಹುಟ್ಟಿಸಲು ಈ ಸಂದೇಶ ಹರಿಯಬಿಟ್ಟಿದ್ದಾರೆ ಅದನ್ನು ನಂಬಬೇಡಿ ಎಂದು ಹೇಳಿದ್ದಾರೆ.

ಮೊದಲನೇಯದಾಗಿ ಎಂ.ಎಚ್.ಆರ್.ಡಿ ಯಾಗಲಿ, ಯು.ಜಿ.ಸಿ ಯಾಗಲಿ ವಾಟ್ಸಾಪ್ ಬರಹದ ಮೂಲಕ ಪ್ರೆಸ್ ನೋಟ್ ಕಳಿಸುವುದಿಲ್ಲ. ಗೆಜೆಟ್ ಆದೇಶಗಳ ಮೂಲಕವೇ ಕಳಿಸುತ್ತಾರೆ. ಹಾಗಾಗಿ ಈ ರೀತಿಯ ಸಂದೇಶಗಳನ್ನು ನಂಬುವ ಮೊದಲು ಪುನರ್ ಪರಿಶೀಲನೆ ನಡೆಸಬೇಕು.

ಕಳೆದ 6-7 ವರ್ಷಗಳಿಂದ ಈ ಸುಳ್ಳು ಸುದ್ದಿಗಳು ಹರಿದಾಡುವುದು ಹೆಚ್ಚಾಗಿದೆ. ಅದರಲ್ಲೂ ಸಾಮಾಜಿಕ ತಾಲತಾಣಗಳ ಬಳಕೆ ಹೆಚ್ಚಾದ ಮೇಲಂತೂ ಇದು ಮಿತಿ ಮೀರಿದೆ. ಕೆಲ ಟಿವಿ ಚಾನೆಲ್, ಪತ್ರಿಕೆಗಳೂ ಈ ದುಷ್ಟತನಕ್ಕಿಳಿದಿರುವುದು ಅಪಾಯಕಾರಿಯಾಗಿದೆ. ಇದರಿಂದ ಮುಗ್ಧ ಜನರು ಮೋಸ ಹೋಗುತ್ತಿದ್ದಾರೆ. ಹಾಗಾಗಿ ವಿದ್ಯಾವಂತರಾದವರು ಯಾವುದೇ ಸಂದೇಶವನ್ನು ನಂಬುವ ಮತ್ತು ಫಾರ್ವಾಡ್ ಮಾಡುವ ಮೊದಲು ಫ್ಯಾಕ್ಟ್ ಚೆಕ್ ಮಾಡಬೇಕೆಂದು ನಾನುಗೌರಿ.ಕಾಂ ಮನವಿ ಮಾಡುತ್ತದೆ. ಜೊತೆಗೆ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲು ಈ ಕೆಳಗಿನ ವಿಧಾನಗಳನ್ನು ಬಳಸಲು ಸೂಚಿಸುತ್ತೇವೆ.

ಇದನ್ನು ತಡೆಗಟ್ಟುವುದು ಹೇಗೆ? ಅಂದರೆ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ

ಕಾನೂನಿನ ವ್ಯಾಪ್ತಿಯಲ್ಲಿ ಪೋಲಿಸ್ ಮತ್ತು ಇತರ ತನಿಖಾ ಏಜೆನ್ಸಿಗಳು ಇದರ ಸತ್ಯಾಸತ್ಯತೆ ಪತ್ತೆಹಚ್ಚುವ ಕೆಲಸ ಮಾಡುತ್ತಿರುತ್ತವೆ. ಜನ ಸಾಮಾನ್ಯರು ಮಾಡಬೇಕಾಗಿರುವುದು ಇಷ್ಟೇ:

  1. ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ. ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಖ್ಯೆ ಇದೆಯೇ ನೋಡಿ.
  2. ಕೇವಲ ಸುದ್ದಿಯ ತಲೆಬರಹ ಓದಬೇಡಿ, ಅವು ರೋಚಕವಾಗಿರುತ್ತವೆ, ಇದೀ ಸುದ್ದಿ ಓದಿ ನೋಡಿ.
  3. ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹ ಪೀಡಿತರಾಗಿರಬಹುದು.
  4. ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.
  5. ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮಕ್ಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.
  6. ಸುದ್ದಿಯ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.
  7. ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.
  8. ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ.
  9. ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...