Homeನಿಜವೋ ಸುಳ್ಳೋಸಹಾಯಕ ಪ್ರಾಧ್ಯಾಪಕ ಹುದ್ದೆಗೆ ವಯೋಮಿತಿ ಇಲ್ಲ. ಯುಜಿಸಿ ಸ್ಪಷ್ಟನೆ

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ವಯೋಮಿತಿ ಇಲ್ಲ. ಯುಜಿಸಿ ಸ್ಪಷ್ಟನೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕಳೆದ ಎರಡು ಮೂರು ದಿನಗಳಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆ ಆಕಾಂಕ್ಷಿಗಳಿಗೆ ಶಾಕ್ ನ್ಯೂಸ್, 35 ವರ್ಷ ಮೇಲ್ಪಟ್ಟವರು ಇನ್ನು ಮುಂದೆ ಪರೀಕ್ಷೆ ಬರೆಯುವಂತಿಲ್ಲ ಎಂಬ ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿತ್ತು.

ಇದನ್ನು ಭಾರತ ಸರ್ಕಾರವೇ ನಿರ್ಧರಿಸಿದ್ದು ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯವು ಯು.ಜಿ.ಸಿಗೆ ಆದೇಶ ನೀಡಲಾಗಿದೆ, ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಬರೆಯುವವರಿಗೆ 35ವರ್ಷದ ವಯೋಮಿತಿ (ಎಲ್ಲಾ ಜಾತಿಯವರಿಗೂ) ನಿಗಧಿಗೊಳಿಸಲಾಗಿದೆ ಎಂಬ ಸಂದೇಶ ಹರಿದಾಡಿತ್ತು.

01.06.2019ರಿಂದಲೇ ಈ ಆದೇಶ ಜಾರಿಗೆ ಬರಲಿದ್ದು ಮಾನವ ಸಂಪನ್ಮೂಲ ಸಚಿವರ ಹೆಸರಿನಲ್ಲಿ ಪ್ರೆಸ್ ನೋಟ್ ಬಂದ ರೀತಿಯ ಸಂದೇಶ ಇದಾಗಿದ್ದು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರು ಇದನ್ನು ಸಾಕಷ್ಟು ಸಂಖ್ಯೆಯಲ್ಲಿ ಷೇರ್ ಮಾಡಿದ್ದರು. ಇದನ್ನು ನೋಡಿ ಹಲವು ಆಕಾಂಕ್ಷಿಗಳು ಗಾಬರಿ ಬಿದ್ದಿದ್ದು ಸಹ ನಿಜ.

ಆದರೆ ಇದು ಸಂಪೂರ್ಣ ಸುಳ್ಳು ಸಂದೇಶವಾಗಿದೆ. ಈ ಕುರಿತು ಯು.ಜಿ.ಸಿ ಸದಸ್ಯರಾದ ಪ್ರೊ.ಜಿ ಗೋಪಾಲ ರೆಡ್ಡಿಯವರು ಸ್ಪಷ್ಟನೆ ನೀಡಿದ್ದು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಯಾವುದೇ ರೀತಿಯ ವಯೋಮಿತಿ ಇಲ್ಲ ಎಂದು ತಿಳಿಸಿದ್ದಾರೆ. ಯಾರೋ ಕಿಡಿಗೇಡಿಗಳು ಆಕಾಂಕ್ಷಿಗಳಲ್ಲಿ ಭಯ ಹುಟ್ಟಿಸಲು ಈ ಸಂದೇಶ ಹರಿಯಬಿಟ್ಟಿದ್ದಾರೆ ಅದನ್ನು ನಂಬಬೇಡಿ ಎಂದು ಹೇಳಿದ್ದಾರೆ.

ಮೊದಲನೇಯದಾಗಿ ಎಂ.ಎಚ್.ಆರ್.ಡಿ ಯಾಗಲಿ, ಯು.ಜಿ.ಸಿ ಯಾಗಲಿ ವಾಟ್ಸಾಪ್ ಬರಹದ ಮೂಲಕ ಪ್ರೆಸ್ ನೋಟ್ ಕಳಿಸುವುದಿಲ್ಲ. ಗೆಜೆಟ್ ಆದೇಶಗಳ ಮೂಲಕವೇ ಕಳಿಸುತ್ತಾರೆ. ಹಾಗಾಗಿ ಈ ರೀತಿಯ ಸಂದೇಶಗಳನ್ನು ನಂಬುವ ಮೊದಲು ಪುನರ್ ಪರಿಶೀಲನೆ ನಡೆಸಬೇಕು.

ಕಳೆದ 6-7 ವರ್ಷಗಳಿಂದ ಈ ಸುಳ್ಳು ಸುದ್ದಿಗಳು ಹರಿದಾಡುವುದು ಹೆಚ್ಚಾಗಿದೆ. ಅದರಲ್ಲೂ ಸಾಮಾಜಿಕ ತಾಲತಾಣಗಳ ಬಳಕೆ ಹೆಚ್ಚಾದ ಮೇಲಂತೂ ಇದು ಮಿತಿ ಮೀರಿದೆ. ಕೆಲ ಟಿವಿ ಚಾನೆಲ್, ಪತ್ರಿಕೆಗಳೂ ಈ ದುಷ್ಟತನಕ್ಕಿಳಿದಿರುವುದು ಅಪಾಯಕಾರಿಯಾಗಿದೆ. ಇದರಿಂದ ಮುಗ್ಧ ಜನರು ಮೋಸ ಹೋಗುತ್ತಿದ್ದಾರೆ. ಹಾಗಾಗಿ ವಿದ್ಯಾವಂತರಾದವರು ಯಾವುದೇ ಸಂದೇಶವನ್ನು ನಂಬುವ ಮತ್ತು ಫಾರ್ವಾಡ್ ಮಾಡುವ ಮೊದಲು ಫ್ಯಾಕ್ಟ್ ಚೆಕ್ ಮಾಡಬೇಕೆಂದು ನಾನುಗೌರಿ.ಕಾಂ ಮನವಿ ಮಾಡುತ್ತದೆ. ಜೊತೆಗೆ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲು ಈ ಕೆಳಗಿನ ವಿಧಾನಗಳನ್ನು ಬಳಸಲು ಸೂಚಿಸುತ್ತೇವೆ.

ಇದನ್ನು ತಡೆಗಟ್ಟುವುದು ಹೇಗೆ? ಅಂದರೆ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ

ಕಾನೂನಿನ ವ್ಯಾಪ್ತಿಯಲ್ಲಿ ಪೋಲಿಸ್ ಮತ್ತು ಇತರ ತನಿಖಾ ಏಜೆನ್ಸಿಗಳು ಇದರ ಸತ್ಯಾಸತ್ಯತೆ ಪತ್ತೆಹಚ್ಚುವ ಕೆಲಸ ಮಾಡುತ್ತಿರುತ್ತವೆ. ಜನ ಸಾಮಾನ್ಯರು ಮಾಡಬೇಕಾಗಿರುವುದು ಇಷ್ಟೇ:

  1. ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ. ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಖ್ಯೆ ಇದೆಯೇ ನೋಡಿ.
  2. ಕೇವಲ ಸುದ್ದಿಯ ತಲೆಬರಹ ಓದಬೇಡಿ, ಅವು ರೋಚಕವಾಗಿರುತ್ತವೆ, ಇದೀ ಸುದ್ದಿ ಓದಿ ನೋಡಿ.
  3. ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹ ಪೀಡಿತರಾಗಿರಬಹುದು.
  4. ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.
  5. ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮಕ್ಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.
  6. ಸುದ್ದಿಯ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.
  7. ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.
  8. ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ.
  9. ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....