Homeನಿಜವೋ ಸುಳ್ಳೋಸಹಾಯಕ ಪ್ರಾಧ್ಯಾಪಕ ಹುದ್ದೆಗೆ ವಯೋಮಿತಿ ಇಲ್ಲ. ಯುಜಿಸಿ ಸ್ಪಷ್ಟನೆ

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ವಯೋಮಿತಿ ಇಲ್ಲ. ಯುಜಿಸಿ ಸ್ಪಷ್ಟನೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕಳೆದ ಎರಡು ಮೂರು ದಿನಗಳಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆ ಆಕಾಂಕ್ಷಿಗಳಿಗೆ ಶಾಕ್ ನ್ಯೂಸ್, 35 ವರ್ಷ ಮೇಲ್ಪಟ್ಟವರು ಇನ್ನು ಮುಂದೆ ಪರೀಕ್ಷೆ ಬರೆಯುವಂತಿಲ್ಲ ಎಂಬ ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿತ್ತು.

ಇದನ್ನು ಭಾರತ ಸರ್ಕಾರವೇ ನಿರ್ಧರಿಸಿದ್ದು ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯವು ಯು.ಜಿ.ಸಿಗೆ ಆದೇಶ ನೀಡಲಾಗಿದೆ, ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಬರೆಯುವವರಿಗೆ 35ವರ್ಷದ ವಯೋಮಿತಿ (ಎಲ್ಲಾ ಜಾತಿಯವರಿಗೂ) ನಿಗಧಿಗೊಳಿಸಲಾಗಿದೆ ಎಂಬ ಸಂದೇಶ ಹರಿದಾಡಿತ್ತು.

01.06.2019ರಿಂದಲೇ ಈ ಆದೇಶ ಜಾರಿಗೆ ಬರಲಿದ್ದು ಮಾನವ ಸಂಪನ್ಮೂಲ ಸಚಿವರ ಹೆಸರಿನಲ್ಲಿ ಪ್ರೆಸ್ ನೋಟ್ ಬಂದ ರೀತಿಯ ಸಂದೇಶ ಇದಾಗಿದ್ದು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರು ಇದನ್ನು ಸಾಕಷ್ಟು ಸಂಖ್ಯೆಯಲ್ಲಿ ಷೇರ್ ಮಾಡಿದ್ದರು. ಇದನ್ನು ನೋಡಿ ಹಲವು ಆಕಾಂಕ್ಷಿಗಳು ಗಾಬರಿ ಬಿದ್ದಿದ್ದು ಸಹ ನಿಜ.

ಆದರೆ ಇದು ಸಂಪೂರ್ಣ ಸುಳ್ಳು ಸಂದೇಶವಾಗಿದೆ. ಈ ಕುರಿತು ಯು.ಜಿ.ಸಿ ಸದಸ್ಯರಾದ ಪ್ರೊ.ಜಿ ಗೋಪಾಲ ರೆಡ್ಡಿಯವರು ಸ್ಪಷ್ಟನೆ ನೀಡಿದ್ದು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಯಾವುದೇ ರೀತಿಯ ವಯೋಮಿತಿ ಇಲ್ಲ ಎಂದು ತಿಳಿಸಿದ್ದಾರೆ. ಯಾರೋ ಕಿಡಿಗೇಡಿಗಳು ಆಕಾಂಕ್ಷಿಗಳಲ್ಲಿ ಭಯ ಹುಟ್ಟಿಸಲು ಈ ಸಂದೇಶ ಹರಿಯಬಿಟ್ಟಿದ್ದಾರೆ ಅದನ್ನು ನಂಬಬೇಡಿ ಎಂದು ಹೇಳಿದ್ದಾರೆ.

ಮೊದಲನೇಯದಾಗಿ ಎಂ.ಎಚ್.ಆರ್.ಡಿ ಯಾಗಲಿ, ಯು.ಜಿ.ಸಿ ಯಾಗಲಿ ವಾಟ್ಸಾಪ್ ಬರಹದ ಮೂಲಕ ಪ್ರೆಸ್ ನೋಟ್ ಕಳಿಸುವುದಿಲ್ಲ. ಗೆಜೆಟ್ ಆದೇಶಗಳ ಮೂಲಕವೇ ಕಳಿಸುತ್ತಾರೆ. ಹಾಗಾಗಿ ಈ ರೀತಿಯ ಸಂದೇಶಗಳನ್ನು ನಂಬುವ ಮೊದಲು ಪುನರ್ ಪರಿಶೀಲನೆ ನಡೆಸಬೇಕು.

ಕಳೆದ 6-7 ವರ್ಷಗಳಿಂದ ಈ ಸುಳ್ಳು ಸುದ್ದಿಗಳು ಹರಿದಾಡುವುದು ಹೆಚ್ಚಾಗಿದೆ. ಅದರಲ್ಲೂ ಸಾಮಾಜಿಕ ತಾಲತಾಣಗಳ ಬಳಕೆ ಹೆಚ್ಚಾದ ಮೇಲಂತೂ ಇದು ಮಿತಿ ಮೀರಿದೆ. ಕೆಲ ಟಿವಿ ಚಾನೆಲ್, ಪತ್ರಿಕೆಗಳೂ ಈ ದುಷ್ಟತನಕ್ಕಿಳಿದಿರುವುದು ಅಪಾಯಕಾರಿಯಾಗಿದೆ. ಇದರಿಂದ ಮುಗ್ಧ ಜನರು ಮೋಸ ಹೋಗುತ್ತಿದ್ದಾರೆ. ಹಾಗಾಗಿ ವಿದ್ಯಾವಂತರಾದವರು ಯಾವುದೇ ಸಂದೇಶವನ್ನು ನಂಬುವ ಮತ್ತು ಫಾರ್ವಾಡ್ ಮಾಡುವ ಮೊದಲು ಫ್ಯಾಕ್ಟ್ ಚೆಕ್ ಮಾಡಬೇಕೆಂದು ನಾನುಗೌರಿ.ಕಾಂ ಮನವಿ ಮಾಡುತ್ತದೆ. ಜೊತೆಗೆ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲು ಈ ಕೆಳಗಿನ ವಿಧಾನಗಳನ್ನು ಬಳಸಲು ಸೂಚಿಸುತ್ತೇವೆ.

ಇದನ್ನು ತಡೆಗಟ್ಟುವುದು ಹೇಗೆ? ಅಂದರೆ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ

ಕಾನೂನಿನ ವ್ಯಾಪ್ತಿಯಲ್ಲಿ ಪೋಲಿಸ್ ಮತ್ತು ಇತರ ತನಿಖಾ ಏಜೆನ್ಸಿಗಳು ಇದರ ಸತ್ಯಾಸತ್ಯತೆ ಪತ್ತೆಹಚ್ಚುವ ಕೆಲಸ ಮಾಡುತ್ತಿರುತ್ತವೆ. ಜನ ಸಾಮಾನ್ಯರು ಮಾಡಬೇಕಾಗಿರುವುದು ಇಷ್ಟೇ:

  1. ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ. ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಖ್ಯೆ ಇದೆಯೇ ನೋಡಿ.
  2. ಕೇವಲ ಸುದ್ದಿಯ ತಲೆಬರಹ ಓದಬೇಡಿ, ಅವು ರೋಚಕವಾಗಿರುತ್ತವೆ, ಇದೀ ಸುದ್ದಿ ಓದಿ ನೋಡಿ.
  3. ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹ ಪೀಡಿತರಾಗಿರಬಹುದು.
  4. ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.
  5. ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮಕ್ಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.
  6. ಸುದ್ದಿಯ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.
  7. ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.
  8. ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ.
  9. ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...