Homeಮುಖಪುಟತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

ತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

- Advertisement -
- Advertisement -

ತಮಿಳುನಾಡಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫೆಬ್ರವರಿ 19ರಂದು ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಹುಕೋನ ಸ್ಪರ್ಧೆ ನಡೆಯುತ್ತಿದ್ದು, ರಾಜ್ಯ ವಿಧಾನಸಭೆಯಲ್ಲಿ ಎಐಎಡಿಎಂಕೆ ಜೊತೆಗಿದ್ದ ವಿರೋಧ ಪಕ್ಷಗಳಾದ ಎಐಎಡಿಎಂಕೆ ಜೊತೆಗಿದ್ದ ಬಿಜೆಪಿ, ಡಾ ಎಸ್ ರಾಮದಾಸ್ ನೇತೃತ್ವದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮತ್ತು ಡಿಎಂಡಿಕೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿವೆ.

ಈ ಎಲ್ಲಾ ಪಕ್ಷಗಳು ಸ್ಥಳೀಯ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ- ಕಾಂಗ್ರೆಸ್‌ ಮೈತ್ರಿಕೂಟವನ್ನು ಸ್ವತಂತ್ರವಾಗಿ ಎದುರಿಸಲು ಸಜ್ಜಾಗಿವೆ.

ಡಿಎಂಕೆ ತನ್ನ ಮಿತ್ರಪಕ್ಷಗಳ ಜೊತೆಗೇ ಸ್ಪರ್ಧಿಸುತ್ತಿದೆ. ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿದ ಪಕ್ಷವು ಮತ್ತದೇ ಜಯವನ್ನು ಪುನರಾವರ್ತಿಸುವ ಭರವಸೆಯೊಂದಿಗೆ ತನ್ನ ಮಿತ್ರಪಕ್ಷಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ರಾಜ್ಯ ರಾಜಧಾನಿ ಚೆನ್ನೈನ ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ ಒಟ್ಟು 200 ವಾರ್ಡ್‌ಗಳ ಪೈಕಿ 165 ವಾರ್ಡ್‌ಗಳಲ್ಲಿ ಸ್ಪರ್ಧಿಸುತ್ತಿರುವ ಡಿಎಂಕೆ, ಮಿತ್ರ ಪಕ್ಷಗಳೊಂದಿಗಿನ ಸೀಟು ಹಂಚಿಕೆಯಲ್ಲಿ ಸಿಂಹಪಾಲು ಪಡೆದಿದೆ. ಉಳಿದ 35 ಸ್ಥಾನಗಳನ್ನು ಮಿತ್ರಪಕ್ಷಗಳಾದ ಕಾಂಗ್ರೆಸ್, ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮತ್ತು ಎಡಪಕ್ಷಗಳಿಗೆ ಹಂಚಿದೆ.

ಕೊಯಮತ್ತೂರಿನಲ್ಲಿಯೂ ಎಡಪಕ್ಷಗಳಿಗೆ ಅಲ್ಪಸ್ವಲ್ಪ ಸೀಟುಗಳನ್ನು ಡಿಎಂಕೆ ಹಂಚಿದೆ. ಇದರಿಂದಾಗಿ ಅಸಮಾಧಾನಗೊಂಡಿದ್ದ ಎಡಪಕ್ಷಗಳು ಡಿಎಂಕೆಯ ಮತ್ತೊಂದು ಮಿತ್ರ ಪಕ್ಷ ಕೆಎಂಡಿಕೆ ಬೆಂಬಲ ಪಡೆದು ಕಣ್ಣಂಪಾಳ್ಯಂ ಪಟ್ಟಣ ಪಂಚಾಯತ್‌ನ 15 ವಾರ್ಡ್‌ಗಳ ಪೈಕಿ 11 ವಾರ್ಡ್‌ಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ.

ಚೆನ್ನೈ ಪಾಲಿಕೆಯ 200 ವಾರ್ಡ್‌ಗಳಲ್ಲಿಯೂ ಬಿಜೆಪಿ ಸ್ಪರ್ಧಿಸುತ್ತಿದೆ. ಎಐಎಡಿಎಂಕೆ ಮೈತ್ರಿಯಲ್ಲಿ ಸೀಟು ಹಂಚಿಕೆ ಮಾತುಕತೆಯ ವೇಳೆ ಬಿಜೆಪಿಗೆ ನೀರೀಕ್ಷಿಸಿದ್ದಷ್ಟು ಸೀಟುಗಳನ್ನು ಬಿಟ್ಟುಕೊಡಲು ಎಐಎಡಿಎಂಕೆ ನಿರಾಕರಿಸಿದ ಕಾರಣ ಮೈತ್ರಿಯಲ್ಲಿ ಬಿರುಕು ಮೂಡಿದೆ. ಹೀಗಾಗಿ, ಬಿಜೆಪಿ ಚೆನ್ನೈ ಪಾಲಿಕೆಯ ಎಲ್ಲಾ ವಾರ್ಡ್‌ಗಳಲ್ಲಿಯೂ ಸ್ಪರ್ಧಿಸಲು ಮುಂದಾಗಿದೆ. ಅದೇ ರೀತಿಯಲ್ಲಿ ಉಳಿದ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸುತ್ತಿವೆ.

ಇದನ್ನೂ ಓದಿ: ತಮಿಳುನಾಡು: ಫಾಕ್ಸ್‌ಕಾನ್ ಕಂಪನಿ ಕ್ಯಾಂಟೀನ್ ಊಟದಿಂದಾಗಿ 8 ಮಹಿಳೆಯರ ಸಾವು – ಭುಗಿಲೆದ್ದ ಪ್ರತಿಭಟನೆ

ಮಂಗಳವಾರ ಮಡಿಪಕ್ಕಂನಲ್ಲಿ ಹತ್ಯೆಗೀಡಾದ ಡಿಎಂಕೆ ಪಕ್ಷದ ಪದಾಧಿಕಾರಿ ಸೆಲ್ವಂ ಅವರ ಪತ್ನಿ ಸಮೀನಾ ಸೆಲ್ವಂ ಅವರನ್ನು ಚೆನ್ನೈ ಪಾಲಿಕೆಯ ಮಡಿಪಕ್ಕಂ ವಾರ್ಡ್ (ನಂ.188)ನಿಂದ ಡಿಎಂಕೆ ಕಣಕ್ಕಿಳಿಸಿದೆ.

ಮಾಜಿ ರಾಜ್ಯ ಸಚಿವ ಪರುತಿ ಇಳಂವಝುತಿ ಅವರ ಪುತ್ರ, ಡಿಎಂಕೆ ಯುವ ಘಟಕದ ಸದಸ್ಯ ಪರುತಿ ಇಳಮಸುರುತಿ ಅವರನ್ನು ಚೆನ್ನೈ ಪಾಲಿಕೆಯ ವಾರ್ಡ್ ನಂ.99ರಿಂದ ಡಿಎಂಕೆ ಕಣಕ್ಕಿಳಿಸಿದೆ. ಅವರು ಎಐಎಡಿಎಂಕೆಯಿಂದ ಕಣಕ್ಕಿಳಿದಿರುವ ಮಾಜಿ ಐಎಎಸ್ ಅಧಿಕಾರಿ ಶಿವಕಾಮಿ ಅವರನ್ನು ಎದುರಿಸಲಿದ್ದಾರೆ.

ಚೆನ್ನೈ ಕಾರ್ಪೊರೇಷನ್‌ನಲ್ಲಿ ಎಲ್ಲಾ ಸಮುದಾಯಗಳ ಸದಸ್ಯರಿಗೆ ಅವಕಾಶ ಕಲ್ಪಿಸಲು ತಮ್ಮ ಪಕ್ಷವು ಹೆಚ್ಚಿನ ಪ್ರಯತ್ನಗಳನ್ನು ಮಾಡಿದೆ ಎಂದು ಡಿಎಂಕೆ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಡಿಎಂಕೆ ಸೇರಿದಂತೆ ಎಐಎಡಿಎಂಕೆ ಮತ್ತು ಬಿಜೆಪಿ ಈ ಚುನಾವಣೆಗೆ ತೃತೀಯಲಿಂಗಿಗಳನ್ನೂ ಕಣಕ್ಕಿಳಿಸಿವೆ.

ಇದನ್ನೂ ಓದಿ: ತಮಿಳುನಾಡು: ವಿದ್ಯಾರ್ಥಿ ಮೇಲೆ ಪೊಲೀಸ್ ದೌರ್ಜನ್ಯ, 9 ಮಂದಿ ಪೊಲೀಸರ ಮೇಲೆ FIR

ಡಿಎಂಕೆಯ ಸದಸ್ಯೆ, ತೃತೀಯಲಿಂಗಿ ಆರ್ ಗಂಗಾ ಅವರು ವೆಲ್ಲೂರಿನ ವಾರ್ಡ್ 37 ರಿಂದ ಸ್ಪರ್ಧಿಸಿದರೆ, ಎಐಎಡಿಎಂಕೆಯ ಜಯದೇವಿ ವೆಲ್ಲೂರಿನ ವಾರ್ಡ್ 112ರಿಂದ ಮತ್ತು ಬಿಜೆಪಿಯ ರಾಜಮ್ಮ ಅವರು ತಿರುವಿ ಕಾ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಇತರ ಪಕ್ಷಗಳಾದ ನಟ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ, ನಟ-ನಿರ್ದೇಶಕ ಸೀಮಾನ್ ಅವರ ನಾಮ್ ತಮಿಳರ್ ಕಚ್ಚಿ ಮತ್ತು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಕೂಡ ಕಣದಲ್ಲಿವೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ 200 ವಾರ್ಡ್‌ಗಳಲ್ಲಿ 16 ಸ್ಥಾನಗಳು ಪರಿಶಿಷ್ಟ ಜಾತಿ (ಸಾಮಾನ್ಯ) ಮತ್ತು 16 ಸ್ಥಾನಗಳು ಎಸ್‌ಸಿ (ಮಹಿಳೆ) ಅಭ್ಯರ್ಥಿಗಳಿಗೆ ಮೀಸಲಾಗಿದ್ದು, 84 ಮಹಿಳೆಯರಿಗೆ (ಸಾಮಾನ್ಯ) ಮೀಸಲಾಗಿದೆ. 21 ಕಾರ್ಪೋರೇಷನ್‌ಗಳು, 138 ಪುರಸಭೆಗಳು, 490 ಪಟ್ಟಣ ಪಂಚಾಯಿತಿಗಳು ಮತ್ತು 649 ನಗರ ಸ್ಥಳೀಯ ಸಂಸ್ಥೆಗಳ 12,838 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಫೆಬ್ರವರಿ 7 ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿ, ಫೆಬ್ರವರಿ 19ರಂದು ಚುನಾವಣೆ ನಡೆಯಲಿದೆ. ಫೆಬ್ರವರಿ 22 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...