Homeಮುಖಪುಟತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

ತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

- Advertisement -
- Advertisement -

ತಮಿಳುನಾಡಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫೆಬ್ರವರಿ 19ರಂದು ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಹುಕೋನ ಸ್ಪರ್ಧೆ ನಡೆಯುತ್ತಿದ್ದು, ರಾಜ್ಯ ವಿಧಾನಸಭೆಯಲ್ಲಿ ಎಐಎಡಿಎಂಕೆ ಜೊತೆಗಿದ್ದ ವಿರೋಧ ಪಕ್ಷಗಳಾದ ಎಐಎಡಿಎಂಕೆ ಜೊತೆಗಿದ್ದ ಬಿಜೆಪಿ, ಡಾ ಎಸ್ ರಾಮದಾಸ್ ನೇತೃತ್ವದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮತ್ತು ಡಿಎಂಡಿಕೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿವೆ.

ಈ ಎಲ್ಲಾ ಪಕ್ಷಗಳು ಸ್ಥಳೀಯ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ- ಕಾಂಗ್ರೆಸ್‌ ಮೈತ್ರಿಕೂಟವನ್ನು ಸ್ವತಂತ್ರವಾಗಿ ಎದುರಿಸಲು ಸಜ್ಜಾಗಿವೆ.

ಡಿಎಂಕೆ ತನ್ನ ಮಿತ್ರಪಕ್ಷಗಳ ಜೊತೆಗೇ ಸ್ಪರ್ಧಿಸುತ್ತಿದೆ. ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿದ ಪಕ್ಷವು ಮತ್ತದೇ ಜಯವನ್ನು ಪುನರಾವರ್ತಿಸುವ ಭರವಸೆಯೊಂದಿಗೆ ತನ್ನ ಮಿತ್ರಪಕ್ಷಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ರಾಜ್ಯ ರಾಜಧಾನಿ ಚೆನ್ನೈನ ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ ಒಟ್ಟು 200 ವಾರ್ಡ್‌ಗಳ ಪೈಕಿ 165 ವಾರ್ಡ್‌ಗಳಲ್ಲಿ ಸ್ಪರ್ಧಿಸುತ್ತಿರುವ ಡಿಎಂಕೆ, ಮಿತ್ರ ಪಕ್ಷಗಳೊಂದಿಗಿನ ಸೀಟು ಹಂಚಿಕೆಯಲ್ಲಿ ಸಿಂಹಪಾಲು ಪಡೆದಿದೆ. ಉಳಿದ 35 ಸ್ಥಾನಗಳನ್ನು ಮಿತ್ರಪಕ್ಷಗಳಾದ ಕಾಂಗ್ರೆಸ್, ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮತ್ತು ಎಡಪಕ್ಷಗಳಿಗೆ ಹಂಚಿದೆ.

ಕೊಯಮತ್ತೂರಿನಲ್ಲಿಯೂ ಎಡಪಕ್ಷಗಳಿಗೆ ಅಲ್ಪಸ್ವಲ್ಪ ಸೀಟುಗಳನ್ನು ಡಿಎಂಕೆ ಹಂಚಿದೆ. ಇದರಿಂದಾಗಿ ಅಸಮಾಧಾನಗೊಂಡಿದ್ದ ಎಡಪಕ್ಷಗಳು ಡಿಎಂಕೆಯ ಮತ್ತೊಂದು ಮಿತ್ರ ಪಕ್ಷ ಕೆಎಂಡಿಕೆ ಬೆಂಬಲ ಪಡೆದು ಕಣ್ಣಂಪಾಳ್ಯಂ ಪಟ್ಟಣ ಪಂಚಾಯತ್‌ನ 15 ವಾರ್ಡ್‌ಗಳ ಪೈಕಿ 11 ವಾರ್ಡ್‌ಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ.

ಚೆನ್ನೈ ಪಾಲಿಕೆಯ 200 ವಾರ್ಡ್‌ಗಳಲ್ಲಿಯೂ ಬಿಜೆಪಿ ಸ್ಪರ್ಧಿಸುತ್ತಿದೆ. ಎಐಎಡಿಎಂಕೆ ಮೈತ್ರಿಯಲ್ಲಿ ಸೀಟು ಹಂಚಿಕೆ ಮಾತುಕತೆಯ ವೇಳೆ ಬಿಜೆಪಿಗೆ ನೀರೀಕ್ಷಿಸಿದ್ದಷ್ಟು ಸೀಟುಗಳನ್ನು ಬಿಟ್ಟುಕೊಡಲು ಎಐಎಡಿಎಂಕೆ ನಿರಾಕರಿಸಿದ ಕಾರಣ ಮೈತ್ರಿಯಲ್ಲಿ ಬಿರುಕು ಮೂಡಿದೆ. ಹೀಗಾಗಿ, ಬಿಜೆಪಿ ಚೆನ್ನೈ ಪಾಲಿಕೆಯ ಎಲ್ಲಾ ವಾರ್ಡ್‌ಗಳಲ್ಲಿಯೂ ಸ್ಪರ್ಧಿಸಲು ಮುಂದಾಗಿದೆ. ಅದೇ ರೀತಿಯಲ್ಲಿ ಉಳಿದ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸುತ್ತಿವೆ.

ಇದನ್ನೂ ಓದಿ: ತಮಿಳುನಾಡು: ಫಾಕ್ಸ್‌ಕಾನ್ ಕಂಪನಿ ಕ್ಯಾಂಟೀನ್ ಊಟದಿಂದಾಗಿ 8 ಮಹಿಳೆಯರ ಸಾವು – ಭುಗಿಲೆದ್ದ ಪ್ರತಿಭಟನೆ

ಮಂಗಳವಾರ ಮಡಿಪಕ್ಕಂನಲ್ಲಿ ಹತ್ಯೆಗೀಡಾದ ಡಿಎಂಕೆ ಪಕ್ಷದ ಪದಾಧಿಕಾರಿ ಸೆಲ್ವಂ ಅವರ ಪತ್ನಿ ಸಮೀನಾ ಸೆಲ್ವಂ ಅವರನ್ನು ಚೆನ್ನೈ ಪಾಲಿಕೆಯ ಮಡಿಪಕ್ಕಂ ವಾರ್ಡ್ (ನಂ.188)ನಿಂದ ಡಿಎಂಕೆ ಕಣಕ್ಕಿಳಿಸಿದೆ.

ಮಾಜಿ ರಾಜ್ಯ ಸಚಿವ ಪರುತಿ ಇಳಂವಝುತಿ ಅವರ ಪುತ್ರ, ಡಿಎಂಕೆ ಯುವ ಘಟಕದ ಸದಸ್ಯ ಪರುತಿ ಇಳಮಸುರುತಿ ಅವರನ್ನು ಚೆನ್ನೈ ಪಾಲಿಕೆಯ ವಾರ್ಡ್ ನಂ.99ರಿಂದ ಡಿಎಂಕೆ ಕಣಕ್ಕಿಳಿಸಿದೆ. ಅವರು ಎಐಎಡಿಎಂಕೆಯಿಂದ ಕಣಕ್ಕಿಳಿದಿರುವ ಮಾಜಿ ಐಎಎಸ್ ಅಧಿಕಾರಿ ಶಿವಕಾಮಿ ಅವರನ್ನು ಎದುರಿಸಲಿದ್ದಾರೆ.

ಚೆನ್ನೈ ಕಾರ್ಪೊರೇಷನ್‌ನಲ್ಲಿ ಎಲ್ಲಾ ಸಮುದಾಯಗಳ ಸದಸ್ಯರಿಗೆ ಅವಕಾಶ ಕಲ್ಪಿಸಲು ತಮ್ಮ ಪಕ್ಷವು ಹೆಚ್ಚಿನ ಪ್ರಯತ್ನಗಳನ್ನು ಮಾಡಿದೆ ಎಂದು ಡಿಎಂಕೆ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಡಿಎಂಕೆ ಸೇರಿದಂತೆ ಎಐಎಡಿಎಂಕೆ ಮತ್ತು ಬಿಜೆಪಿ ಈ ಚುನಾವಣೆಗೆ ತೃತೀಯಲಿಂಗಿಗಳನ್ನೂ ಕಣಕ್ಕಿಳಿಸಿವೆ.

ಇದನ್ನೂ ಓದಿ: ತಮಿಳುನಾಡು: ವಿದ್ಯಾರ್ಥಿ ಮೇಲೆ ಪೊಲೀಸ್ ದೌರ್ಜನ್ಯ, 9 ಮಂದಿ ಪೊಲೀಸರ ಮೇಲೆ FIR

ಡಿಎಂಕೆಯ ಸದಸ್ಯೆ, ತೃತೀಯಲಿಂಗಿ ಆರ್ ಗಂಗಾ ಅವರು ವೆಲ್ಲೂರಿನ ವಾರ್ಡ್ 37 ರಿಂದ ಸ್ಪರ್ಧಿಸಿದರೆ, ಎಐಎಡಿಎಂಕೆಯ ಜಯದೇವಿ ವೆಲ್ಲೂರಿನ ವಾರ್ಡ್ 112ರಿಂದ ಮತ್ತು ಬಿಜೆಪಿಯ ರಾಜಮ್ಮ ಅವರು ತಿರುವಿ ಕಾ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಇತರ ಪಕ್ಷಗಳಾದ ನಟ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ, ನಟ-ನಿರ್ದೇಶಕ ಸೀಮಾನ್ ಅವರ ನಾಮ್ ತಮಿಳರ್ ಕಚ್ಚಿ ಮತ್ತು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಕೂಡ ಕಣದಲ್ಲಿವೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ 200 ವಾರ್ಡ್‌ಗಳಲ್ಲಿ 16 ಸ್ಥಾನಗಳು ಪರಿಶಿಷ್ಟ ಜಾತಿ (ಸಾಮಾನ್ಯ) ಮತ್ತು 16 ಸ್ಥಾನಗಳು ಎಸ್‌ಸಿ (ಮಹಿಳೆ) ಅಭ್ಯರ್ಥಿಗಳಿಗೆ ಮೀಸಲಾಗಿದ್ದು, 84 ಮಹಿಳೆಯರಿಗೆ (ಸಾಮಾನ್ಯ) ಮೀಸಲಾಗಿದೆ. 21 ಕಾರ್ಪೋರೇಷನ್‌ಗಳು, 138 ಪುರಸಭೆಗಳು, 490 ಪಟ್ಟಣ ಪಂಚಾಯಿತಿಗಳು ಮತ್ತು 649 ನಗರ ಸ್ಥಳೀಯ ಸಂಸ್ಥೆಗಳ 12,838 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಫೆಬ್ರವರಿ 7 ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿ, ಫೆಬ್ರವರಿ 19ರಂದು ಚುನಾವಣೆ ನಡೆಯಲಿದೆ. ಫೆಬ್ರವರಿ 22 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...