Homeಮುಖಪುಟಮಮತಾ ಮೇಲೆ ಹಲ್ಲೆ ನಡೆದಿಲ್ಲ: ಚುನಾವಣಾ ಆಯೋಗದ ಹೇಳಿಕೆ!

ಮಮತಾ ಮೇಲೆ ಹಲ್ಲೆ ನಡೆದಿಲ್ಲ: ಚುನಾವಣಾ ಆಯೋಗದ ಹೇಳಿಕೆ!

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಾಯಗಳನ್ನುಂಟು ಮಾಡಿದ ನಂದಿಗ್ರಾಮ್‌ನಲ್ಲಿ ನಡೆದ ಘಟನೆ ಅಪಘಾತ ಮತ್ತು ಯೋಜಿತ ದಾಳಿಯಲ್ಲ ಎಂದು ಚುನಾವಣಾ ಆಯೋಗ ಭಾನುವಾರ ತೀರ್ಮಾನಿಸಿದೆ. ಶನಿವಾರ ಇಬ್ಬರು ಮತದಾನ ವೀಕ್ಷಕರು ವರದಿಯನ್ನು ಸಲ್ಲಿಸಿದ ನಂತರ ಅದನ್ನು ಪರಿಶೀಲಿಸಿದ ಆಯೋಗ ಈ ತೀರ್ಮಾನಕ್ಕೆ ಬಂದಿದೆ.

ಅವರ ಭದ್ರತಾ ಉಸ್ತುವಾರಿಯ ಕೊರತೆಯಿಂದಾಗಿ ಬ್ಯಾನರ್ಜಿ ಗಾಯಗೊಂಡಿದ್ದಾರೆ ಎಂದು ಆಯೋಗ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಆಯೋಗ ನಿರ್ದೇಶನಗಳನ್ನು ನೀಡಲಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ.

ಸ್ಟಾರ್ ಪ್ರಚಾರಕರಾಗಿದ್ದರೂ ಬ್ಯಾನರ್ಜಿ ಬುಲೆಟ್ ಪ್ರೂಫ್ ಅಥವಾ ಶಸ್ತ್ರಸಜ್ಜಿತ ವಾಹನವನ್ನು ಬಳಸುತ್ತಿಲ್ಲ ಮತ್ತು ಇದು ಅವರ ಭದ್ರತೆ ನೋಡಿಕೊಳ್ಳುವವರ ಲೋಪ ಎಂದು ಆಯೋಗದ ಮೂಲಗಳು ಹೇಳಿವೆ.

ವಿಶೇಷ ಸಮೀಕ್ಷೆ ವೀಕ್ಷಕರಾದ ಅಜಯ್ ನಾಯಕ್ ಮತ್ತು ವಿವೇಕ್ ಡ್ಯೂಬ್ ಅವರ ವರದಿಯನ್ನು ಉಲ್ಲೇಖಿಸಿರುವ ಆಯೋಗ, ಮಮತಾ ಅವರು ಘಟನೆ ನಡೆದಾಗ ಸಾಮಾನ್ಯ ವಾಹನವನ್ನು ಬಳಸುತ್ತಿದ್ದರು, ಆದರೆ, ಅವರ ಭದ್ರತಾ ನಿರ್ದೇಶಕ ವಿವೇಕ್ ಸಹಾಯ್ ಅವರು ಗುಂಡು ನಿರೋಧಕ ಕಾರಿನಲ್ಲಿದ್ದರು ಎಂದು ಮೂಲಗಳು ಗಮನಿಸಿವೆ.

ಅಲ್ಲದೆ, ಘಟನೆ ನಡೆದ ಪ್ರದೇಶದ ರಿಟರ್ನಿಂಗ್ ಅಧಿಕಾರಿಯಿಂದ ಯಾವುದೇ ಅನುಮೋದನೆ ಪಡೆಯಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಕಾರಣದಿಂದಾಗಿ, ಮತದಾನದ ಅಧಿಕಾರಿಗಳಿಗೆ ವಿಡಿಯೋಗ್ರಾಫರ್‌ಗಳನ್ನು ಅಥವಾ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ನಿಯೋಜಿಸಲು ಸಾಧ್ಯವಾಗಲಿಲ್ಲ ಎಂದು ಆಯೋಗದ ಮೂಲಗಳು ತಿಳಿಸಿವೆ.

ಮಾರ್ಚ್ 10 ರಂದು ಪೂರ್ವ ಮಿಡ್ನಾಪೋರ್ ಜಿಲ್ಲೆಯ ನಂದಿಗ್ರಾಮದ ಬಿರುಲಿಯಾ ಬಜಾರ್‌ನಲ್ಲಿ ನಡೆದ ಘಟನೆ, ಬ್ಯಾನರ್ಜಿ ನಾಮಪತ್ರ ಸಲ್ಲಿಸಿದ ನಂತರ “ಹಠಾತ್ತನೆ” ನಡೆದಿದ್ದರೂ “ಪಿತೂರಿ ಸಿದ್ಧಾಂತ” ಇದರ ಹಿಂದಿದೆ ಎನ್ನಲಾಗಿದೆ. ಆದರೆ, ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಹಠಾತ್ ಸಂಭಸಿದ ಘಟನೆಯಲ್ಲಿ ಮಮತಾ ಗಾಯಗೊಂಡರು ಎನ್ನಲಾಗಿದೆ.

“ಈ ಘಟನೆ ಯೋಜಿತ ದಾಳಿಯಲ, ಅಪಘಾತ. ಇದು ಇದ್ದಕ್ಕಿದ್ದಂತೆ ನಡೆದಿತ್ತು” ಎಂದು ವರದಿಯನ್ನು ಉಲ್ಲೇಖಿಸಿ ಮೂಲ ಹೇಳಿದೆ. ಈ ಘಟನೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಬ್ಯಾನರ್ಜಿಗೆ ಆದ ಗಾಯದ ಬಗ್ಗೆ, ವರದಿಯು “ಘಟನೆಯ ಹಠಾತ್ ಕಾರಣ ಇದಕ್ಕೆ ಕಾರಣವಾಯಿತು. ಘಟನೆಯ ಹಿಂದೆ ಯಾವುದೇ ಪಿತೂರಿ ನಡೆದಿಲ್ಲ’ ಎಂದಿದೆ.

ಘಟನೆಯ ಸಮಯದಲ್ಲಿ ಹಾಜರಿದ್ದ ಪ್ರತ್ಯಕ್ಷದರ್ಶಿಗಳು ಒದಗಿಸಿದ ವಿವರಗಳು ಮತ್ತು ಅವರಿಂದ ಸಂಗ್ರಹಿಸಲಾದ ವಿಡಿಯೋವನ್ನು ವರದಿಯು ಗಣನೆಗೆ ತೆಗೆದುಕೊಂಡಿದೆ.
ಮಮತಾರಿಗೆ “ತುಂಬಾ ಹತ್ತಿರ” ಬಂದ ಜನಸಮೂಹವನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿಯ ಭದ್ರತೆಯ ಉಸ್ತುವಾರಿ ಪೊಲೀಸ್ ಸಿಬ್ಬಂದಿಗಳ ವೈಫಲ್ಯವನ್ನೂ ಈ ವರದಿ ಉಲ್ಲೇಖಿಸಿದೆ.

“ಸ್ಥಳೀಯ ಪೊಲೀಸರು ಮತ್ತು ಸಿಎಂ ಅವರ ಭದ್ರತೆಯ ಉಸ್ತುವಾರಿಯವರು ಜನಸಂದಣಿಯನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅದು ಅನಪೇಕ್ಷಿತ ಪರಿಸ್ಥಿತಿಗೆ ಕಾರಣವಾಯಿತು” ಎಂದು ವರದಿ ಹೇಳಿದೆ.

ನಂದಿಗ್ರಾಮ್ ಘಟನೆಯ ನಂತರ, ರಾಜ್ಯ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ನೋಡಲ್ ಅಧಿಕಾರಿ ಜಗಮೋಹನ್, ಮುಖ್ಯಮಂತ್ರಿಗಳ ಪ್ರವಾಸದ ಸಮಯದಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ವ್ಯವಸ್ಥೆ ಮಾಡುವಂತೆ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದ್ದಾರೆ.

“ಸಿಎಂ ಸುತ್ತಲಿನ ಭದ್ರತಾ ಕ್ರಮಗಳು ಕಟ್ಟುನಿಟ್ಟಾಗಿರಬೇಕು. ಇತರ ಸ್ಟಾರ್ ಪ್ರಚಾರಕರ ಭದ್ರತೆಯನ್ನು ಬಿಗಿಗೊಳಿಸಬೇಕು. ನಂದಿಗ್ರಾಮ್ ಘಟನೆಯ ನಂತರ ನಾವು ಯಾವುದೇ ಚಾನ್ಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ”ಎಂದು ಸಿಇಒ ಮೂಲವು ಜಗಮೋಹನ್ ವರದಿ ಉಲ್ಲೇಖಿಸಿ ಹೇಳಿದೆ.

ಈ ನಡುವೆ, ರಾಜ್ಯ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಆಯೋಗಕ್ಕೆ ನೀಡಿದ ವಿವರವಾದ ವರದಿಯಲ್ಲಿ ನಂದಿಗ್ರಾಮದಲ್ಲಿ ನಡೆದ ಘಟನೆಗೆ ಏನು ಕಾರಣ ಎಂಬುದು ಲಭ್ಯ ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ ಎಂದಿದ್ದಾರೆ.

“ಸಿಎಂ ವಾಹನವು ಕಿಕ್ಕಿರಿದ ಪ್ರದೇಶದ ಮೂಲಕ ಹಾದುಹೋಗುತ್ತಿತ್ತು. ಆಗ ಅವರನ್ನು ಕಾರಿನ ಬಾಗಿಲಿನತ್ತ ತಳ್ಳಲಾಯಿತು. ಆದರೆ ತಳ್ಳುವಿಕೆಯು ಉದ್ದೇಶಪೂರ್ವಕವಾಗಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಸಂಗ್ರಹಿಸಿದ ವೀಡಿಯೊ ಹೆಚ್ಚು ಸ್ಪಷ್ಟವಾಗಿಲ್ಲ” ಎಂದು ಸಿಇಒ ಮೂಲವೊಂದು ಬಂಡೊಪಾಧ್ಯಾಯರ ಎರಡನೇ ವರದಿಯನ್ನು ಉಲ್ಲೇಖಿಸಿ ಹೇಳಿದೆ.

ಘಟನೆ ಕುರಿತು ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ಇಬ್ಬರು ವೀಕ್ಷಕರಿಂದ ವರದಿಗಳನ್ನು ಕೋರಿತ್ತು. ರಾಜ್ಯ ಆಡಳಿತ ಶುಕ್ರವಾರ ತನ್ನ ವರದಿಯನ್ನು ಸಲ್ಲಿಸಿತ್ತು.
ಪಶ್ಚಿಮ ಬಂಗಾಳದ 294 ವಿಧಾನಸಭಾ ಸ್ಥಾನಗಳಿಗೆ ಮಾರ್ಚ್ 27 ಮತ್ತು ಏಪ್ರಿಲ್ 29 ರ ನಡುವೆ ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...