Homeಮುಖಪುಟಮಮತಾ ಮೇಲೆ ಹಲ್ಲೆ ನಡೆದಿಲ್ಲ: ಚುನಾವಣಾ ಆಯೋಗದ ಹೇಳಿಕೆ!

ಮಮತಾ ಮೇಲೆ ಹಲ್ಲೆ ನಡೆದಿಲ್ಲ: ಚುನಾವಣಾ ಆಯೋಗದ ಹೇಳಿಕೆ!

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಾಯಗಳನ್ನುಂಟು ಮಾಡಿದ ನಂದಿಗ್ರಾಮ್‌ನಲ್ಲಿ ನಡೆದ ಘಟನೆ ಅಪಘಾತ ಮತ್ತು ಯೋಜಿತ ದಾಳಿಯಲ್ಲ ಎಂದು ಚುನಾವಣಾ ಆಯೋಗ ಭಾನುವಾರ ತೀರ್ಮಾನಿಸಿದೆ. ಶನಿವಾರ ಇಬ್ಬರು ಮತದಾನ ವೀಕ್ಷಕರು ವರದಿಯನ್ನು ಸಲ್ಲಿಸಿದ ನಂತರ ಅದನ್ನು ಪರಿಶೀಲಿಸಿದ ಆಯೋಗ ಈ ತೀರ್ಮಾನಕ್ಕೆ ಬಂದಿದೆ.

ಅವರ ಭದ್ರತಾ ಉಸ್ತುವಾರಿಯ ಕೊರತೆಯಿಂದಾಗಿ ಬ್ಯಾನರ್ಜಿ ಗಾಯಗೊಂಡಿದ್ದಾರೆ ಎಂದು ಆಯೋಗ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಆಯೋಗ ನಿರ್ದೇಶನಗಳನ್ನು ನೀಡಲಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ.

ಸ್ಟಾರ್ ಪ್ರಚಾರಕರಾಗಿದ್ದರೂ ಬ್ಯಾನರ್ಜಿ ಬುಲೆಟ್ ಪ್ರೂಫ್ ಅಥವಾ ಶಸ್ತ್ರಸಜ್ಜಿತ ವಾಹನವನ್ನು ಬಳಸುತ್ತಿಲ್ಲ ಮತ್ತು ಇದು ಅವರ ಭದ್ರತೆ ನೋಡಿಕೊಳ್ಳುವವರ ಲೋಪ ಎಂದು ಆಯೋಗದ ಮೂಲಗಳು ಹೇಳಿವೆ.

ವಿಶೇಷ ಸಮೀಕ್ಷೆ ವೀಕ್ಷಕರಾದ ಅಜಯ್ ನಾಯಕ್ ಮತ್ತು ವಿವೇಕ್ ಡ್ಯೂಬ್ ಅವರ ವರದಿಯನ್ನು ಉಲ್ಲೇಖಿಸಿರುವ ಆಯೋಗ, ಮಮತಾ ಅವರು ಘಟನೆ ನಡೆದಾಗ ಸಾಮಾನ್ಯ ವಾಹನವನ್ನು ಬಳಸುತ್ತಿದ್ದರು, ಆದರೆ, ಅವರ ಭದ್ರತಾ ನಿರ್ದೇಶಕ ವಿವೇಕ್ ಸಹಾಯ್ ಅವರು ಗುಂಡು ನಿರೋಧಕ ಕಾರಿನಲ್ಲಿದ್ದರು ಎಂದು ಮೂಲಗಳು ಗಮನಿಸಿವೆ.

ಅಲ್ಲದೆ, ಘಟನೆ ನಡೆದ ಪ್ರದೇಶದ ರಿಟರ್ನಿಂಗ್ ಅಧಿಕಾರಿಯಿಂದ ಯಾವುದೇ ಅನುಮೋದನೆ ಪಡೆಯಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಕಾರಣದಿಂದಾಗಿ, ಮತದಾನದ ಅಧಿಕಾರಿಗಳಿಗೆ ವಿಡಿಯೋಗ್ರಾಫರ್‌ಗಳನ್ನು ಅಥವಾ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ನಿಯೋಜಿಸಲು ಸಾಧ್ಯವಾಗಲಿಲ್ಲ ಎಂದು ಆಯೋಗದ ಮೂಲಗಳು ತಿಳಿಸಿವೆ.

ಮಾರ್ಚ್ 10 ರಂದು ಪೂರ್ವ ಮಿಡ್ನಾಪೋರ್ ಜಿಲ್ಲೆಯ ನಂದಿಗ್ರಾಮದ ಬಿರುಲಿಯಾ ಬಜಾರ್‌ನಲ್ಲಿ ನಡೆದ ಘಟನೆ, ಬ್ಯಾನರ್ಜಿ ನಾಮಪತ್ರ ಸಲ್ಲಿಸಿದ ನಂತರ “ಹಠಾತ್ತನೆ” ನಡೆದಿದ್ದರೂ “ಪಿತೂರಿ ಸಿದ್ಧಾಂತ” ಇದರ ಹಿಂದಿದೆ ಎನ್ನಲಾಗಿದೆ. ಆದರೆ, ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಹಠಾತ್ ಸಂಭಸಿದ ಘಟನೆಯಲ್ಲಿ ಮಮತಾ ಗಾಯಗೊಂಡರು ಎನ್ನಲಾಗಿದೆ.

“ಈ ಘಟನೆ ಯೋಜಿತ ದಾಳಿಯಲ, ಅಪಘಾತ. ಇದು ಇದ್ದಕ್ಕಿದ್ದಂತೆ ನಡೆದಿತ್ತು” ಎಂದು ವರದಿಯನ್ನು ಉಲ್ಲೇಖಿಸಿ ಮೂಲ ಹೇಳಿದೆ. ಈ ಘಟನೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಬ್ಯಾನರ್ಜಿಗೆ ಆದ ಗಾಯದ ಬಗ್ಗೆ, ವರದಿಯು “ಘಟನೆಯ ಹಠಾತ್ ಕಾರಣ ಇದಕ್ಕೆ ಕಾರಣವಾಯಿತು. ಘಟನೆಯ ಹಿಂದೆ ಯಾವುದೇ ಪಿತೂರಿ ನಡೆದಿಲ್ಲ’ ಎಂದಿದೆ.

ಘಟನೆಯ ಸಮಯದಲ್ಲಿ ಹಾಜರಿದ್ದ ಪ್ರತ್ಯಕ್ಷದರ್ಶಿಗಳು ಒದಗಿಸಿದ ವಿವರಗಳು ಮತ್ತು ಅವರಿಂದ ಸಂಗ್ರಹಿಸಲಾದ ವಿಡಿಯೋವನ್ನು ವರದಿಯು ಗಣನೆಗೆ ತೆಗೆದುಕೊಂಡಿದೆ.
ಮಮತಾರಿಗೆ “ತುಂಬಾ ಹತ್ತಿರ” ಬಂದ ಜನಸಮೂಹವನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿಯ ಭದ್ರತೆಯ ಉಸ್ತುವಾರಿ ಪೊಲೀಸ್ ಸಿಬ್ಬಂದಿಗಳ ವೈಫಲ್ಯವನ್ನೂ ಈ ವರದಿ ಉಲ್ಲೇಖಿಸಿದೆ.

“ಸ್ಥಳೀಯ ಪೊಲೀಸರು ಮತ್ತು ಸಿಎಂ ಅವರ ಭದ್ರತೆಯ ಉಸ್ತುವಾರಿಯವರು ಜನಸಂದಣಿಯನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅದು ಅನಪೇಕ್ಷಿತ ಪರಿಸ್ಥಿತಿಗೆ ಕಾರಣವಾಯಿತು” ಎಂದು ವರದಿ ಹೇಳಿದೆ.

ನಂದಿಗ್ರಾಮ್ ಘಟನೆಯ ನಂತರ, ರಾಜ್ಯ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ನೋಡಲ್ ಅಧಿಕಾರಿ ಜಗಮೋಹನ್, ಮುಖ್ಯಮಂತ್ರಿಗಳ ಪ್ರವಾಸದ ಸಮಯದಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ವ್ಯವಸ್ಥೆ ಮಾಡುವಂತೆ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದ್ದಾರೆ.

“ಸಿಎಂ ಸುತ್ತಲಿನ ಭದ್ರತಾ ಕ್ರಮಗಳು ಕಟ್ಟುನಿಟ್ಟಾಗಿರಬೇಕು. ಇತರ ಸ್ಟಾರ್ ಪ್ರಚಾರಕರ ಭದ್ರತೆಯನ್ನು ಬಿಗಿಗೊಳಿಸಬೇಕು. ನಂದಿಗ್ರಾಮ್ ಘಟನೆಯ ನಂತರ ನಾವು ಯಾವುದೇ ಚಾನ್ಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ”ಎಂದು ಸಿಇಒ ಮೂಲವು ಜಗಮೋಹನ್ ವರದಿ ಉಲ್ಲೇಖಿಸಿ ಹೇಳಿದೆ.

ಈ ನಡುವೆ, ರಾಜ್ಯ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಆಯೋಗಕ್ಕೆ ನೀಡಿದ ವಿವರವಾದ ವರದಿಯಲ್ಲಿ ನಂದಿಗ್ರಾಮದಲ್ಲಿ ನಡೆದ ಘಟನೆಗೆ ಏನು ಕಾರಣ ಎಂಬುದು ಲಭ್ಯ ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ ಎಂದಿದ್ದಾರೆ.

“ಸಿಎಂ ವಾಹನವು ಕಿಕ್ಕಿರಿದ ಪ್ರದೇಶದ ಮೂಲಕ ಹಾದುಹೋಗುತ್ತಿತ್ತು. ಆಗ ಅವರನ್ನು ಕಾರಿನ ಬಾಗಿಲಿನತ್ತ ತಳ್ಳಲಾಯಿತು. ಆದರೆ ತಳ್ಳುವಿಕೆಯು ಉದ್ದೇಶಪೂರ್ವಕವಾಗಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಸಂಗ್ರಹಿಸಿದ ವೀಡಿಯೊ ಹೆಚ್ಚು ಸ್ಪಷ್ಟವಾಗಿಲ್ಲ” ಎಂದು ಸಿಇಒ ಮೂಲವೊಂದು ಬಂಡೊಪಾಧ್ಯಾಯರ ಎರಡನೇ ವರದಿಯನ್ನು ಉಲ್ಲೇಖಿಸಿ ಹೇಳಿದೆ.

ಘಟನೆ ಕುರಿತು ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ಇಬ್ಬರು ವೀಕ್ಷಕರಿಂದ ವರದಿಗಳನ್ನು ಕೋರಿತ್ತು. ರಾಜ್ಯ ಆಡಳಿತ ಶುಕ್ರವಾರ ತನ್ನ ವರದಿಯನ್ನು ಸಲ್ಲಿಸಿತ್ತು.
ಪಶ್ಚಿಮ ಬಂಗಾಳದ 294 ವಿಧಾನಸಭಾ ಸ್ಥಾನಗಳಿಗೆ ಮಾರ್ಚ್ 27 ಮತ್ತು ಏಪ್ರಿಲ್ 29 ರ ನಡುವೆ ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....