Homeಮುಖಪುಟಮಮತಾ ಮೇಲೆ ಹಲ್ಲೆ ನಡೆದಿಲ್ಲ: ಚುನಾವಣಾ ಆಯೋಗದ ಹೇಳಿಕೆ!

ಮಮತಾ ಮೇಲೆ ಹಲ್ಲೆ ನಡೆದಿಲ್ಲ: ಚುನಾವಣಾ ಆಯೋಗದ ಹೇಳಿಕೆ!

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಾಯಗಳನ್ನುಂಟು ಮಾಡಿದ ನಂದಿಗ್ರಾಮ್‌ನಲ್ಲಿ ನಡೆದ ಘಟನೆ ಅಪಘಾತ ಮತ್ತು ಯೋಜಿತ ದಾಳಿಯಲ್ಲ ಎಂದು ಚುನಾವಣಾ ಆಯೋಗ ಭಾನುವಾರ ತೀರ್ಮಾನಿಸಿದೆ. ಶನಿವಾರ ಇಬ್ಬರು ಮತದಾನ ವೀಕ್ಷಕರು ವರದಿಯನ್ನು ಸಲ್ಲಿಸಿದ ನಂತರ ಅದನ್ನು ಪರಿಶೀಲಿಸಿದ ಆಯೋಗ ಈ ತೀರ್ಮಾನಕ್ಕೆ ಬಂದಿದೆ.

ಅವರ ಭದ್ರತಾ ಉಸ್ತುವಾರಿಯ ಕೊರತೆಯಿಂದಾಗಿ ಬ್ಯಾನರ್ಜಿ ಗಾಯಗೊಂಡಿದ್ದಾರೆ ಎಂದು ಆಯೋಗ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಆಯೋಗ ನಿರ್ದೇಶನಗಳನ್ನು ನೀಡಲಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ.

ಸ್ಟಾರ್ ಪ್ರಚಾರಕರಾಗಿದ್ದರೂ ಬ್ಯಾನರ್ಜಿ ಬುಲೆಟ್ ಪ್ರೂಫ್ ಅಥವಾ ಶಸ್ತ್ರಸಜ್ಜಿತ ವಾಹನವನ್ನು ಬಳಸುತ್ತಿಲ್ಲ ಮತ್ತು ಇದು ಅವರ ಭದ್ರತೆ ನೋಡಿಕೊಳ್ಳುವವರ ಲೋಪ ಎಂದು ಆಯೋಗದ ಮೂಲಗಳು ಹೇಳಿವೆ.

ವಿಶೇಷ ಸಮೀಕ್ಷೆ ವೀಕ್ಷಕರಾದ ಅಜಯ್ ನಾಯಕ್ ಮತ್ತು ವಿವೇಕ್ ಡ್ಯೂಬ್ ಅವರ ವರದಿಯನ್ನು ಉಲ್ಲೇಖಿಸಿರುವ ಆಯೋಗ, ಮಮತಾ ಅವರು ಘಟನೆ ನಡೆದಾಗ ಸಾಮಾನ್ಯ ವಾಹನವನ್ನು ಬಳಸುತ್ತಿದ್ದರು, ಆದರೆ, ಅವರ ಭದ್ರತಾ ನಿರ್ದೇಶಕ ವಿವೇಕ್ ಸಹಾಯ್ ಅವರು ಗುಂಡು ನಿರೋಧಕ ಕಾರಿನಲ್ಲಿದ್ದರು ಎಂದು ಮೂಲಗಳು ಗಮನಿಸಿವೆ.

ಅಲ್ಲದೆ, ಘಟನೆ ನಡೆದ ಪ್ರದೇಶದ ರಿಟರ್ನಿಂಗ್ ಅಧಿಕಾರಿಯಿಂದ ಯಾವುದೇ ಅನುಮೋದನೆ ಪಡೆಯಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಕಾರಣದಿಂದಾಗಿ, ಮತದಾನದ ಅಧಿಕಾರಿಗಳಿಗೆ ವಿಡಿಯೋಗ್ರಾಫರ್‌ಗಳನ್ನು ಅಥವಾ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ನಿಯೋಜಿಸಲು ಸಾಧ್ಯವಾಗಲಿಲ್ಲ ಎಂದು ಆಯೋಗದ ಮೂಲಗಳು ತಿಳಿಸಿವೆ.

ಮಾರ್ಚ್ 10 ರಂದು ಪೂರ್ವ ಮಿಡ್ನಾಪೋರ್ ಜಿಲ್ಲೆಯ ನಂದಿಗ್ರಾಮದ ಬಿರುಲಿಯಾ ಬಜಾರ್‌ನಲ್ಲಿ ನಡೆದ ಘಟನೆ, ಬ್ಯಾನರ್ಜಿ ನಾಮಪತ್ರ ಸಲ್ಲಿಸಿದ ನಂತರ “ಹಠಾತ್ತನೆ” ನಡೆದಿದ್ದರೂ “ಪಿತೂರಿ ಸಿದ್ಧಾಂತ” ಇದರ ಹಿಂದಿದೆ ಎನ್ನಲಾಗಿದೆ. ಆದರೆ, ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಹಠಾತ್ ಸಂಭಸಿದ ಘಟನೆಯಲ್ಲಿ ಮಮತಾ ಗಾಯಗೊಂಡರು ಎನ್ನಲಾಗಿದೆ.

“ಈ ಘಟನೆ ಯೋಜಿತ ದಾಳಿಯಲ, ಅಪಘಾತ. ಇದು ಇದ್ದಕ್ಕಿದ್ದಂತೆ ನಡೆದಿತ್ತು” ಎಂದು ವರದಿಯನ್ನು ಉಲ್ಲೇಖಿಸಿ ಮೂಲ ಹೇಳಿದೆ. ಈ ಘಟನೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಬ್ಯಾನರ್ಜಿಗೆ ಆದ ಗಾಯದ ಬಗ್ಗೆ, ವರದಿಯು “ಘಟನೆಯ ಹಠಾತ್ ಕಾರಣ ಇದಕ್ಕೆ ಕಾರಣವಾಯಿತು. ಘಟನೆಯ ಹಿಂದೆ ಯಾವುದೇ ಪಿತೂರಿ ನಡೆದಿಲ್ಲ’ ಎಂದಿದೆ.

ಘಟನೆಯ ಸಮಯದಲ್ಲಿ ಹಾಜರಿದ್ದ ಪ್ರತ್ಯಕ್ಷದರ್ಶಿಗಳು ಒದಗಿಸಿದ ವಿವರಗಳು ಮತ್ತು ಅವರಿಂದ ಸಂಗ್ರಹಿಸಲಾದ ವಿಡಿಯೋವನ್ನು ವರದಿಯು ಗಣನೆಗೆ ತೆಗೆದುಕೊಂಡಿದೆ.
ಮಮತಾರಿಗೆ “ತುಂಬಾ ಹತ್ತಿರ” ಬಂದ ಜನಸಮೂಹವನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿಯ ಭದ್ರತೆಯ ಉಸ್ತುವಾರಿ ಪೊಲೀಸ್ ಸಿಬ್ಬಂದಿಗಳ ವೈಫಲ್ಯವನ್ನೂ ಈ ವರದಿ ಉಲ್ಲೇಖಿಸಿದೆ.

“ಸ್ಥಳೀಯ ಪೊಲೀಸರು ಮತ್ತು ಸಿಎಂ ಅವರ ಭದ್ರತೆಯ ಉಸ್ತುವಾರಿಯವರು ಜನಸಂದಣಿಯನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅದು ಅನಪೇಕ್ಷಿತ ಪರಿಸ್ಥಿತಿಗೆ ಕಾರಣವಾಯಿತು” ಎಂದು ವರದಿ ಹೇಳಿದೆ.

ನಂದಿಗ್ರಾಮ್ ಘಟನೆಯ ನಂತರ, ರಾಜ್ಯ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ನೋಡಲ್ ಅಧಿಕಾರಿ ಜಗಮೋಹನ್, ಮುಖ್ಯಮಂತ್ರಿಗಳ ಪ್ರವಾಸದ ಸಮಯದಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ವ್ಯವಸ್ಥೆ ಮಾಡುವಂತೆ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದ್ದಾರೆ.

“ಸಿಎಂ ಸುತ್ತಲಿನ ಭದ್ರತಾ ಕ್ರಮಗಳು ಕಟ್ಟುನಿಟ್ಟಾಗಿರಬೇಕು. ಇತರ ಸ್ಟಾರ್ ಪ್ರಚಾರಕರ ಭದ್ರತೆಯನ್ನು ಬಿಗಿಗೊಳಿಸಬೇಕು. ನಂದಿಗ್ರಾಮ್ ಘಟನೆಯ ನಂತರ ನಾವು ಯಾವುದೇ ಚಾನ್ಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ”ಎಂದು ಸಿಇಒ ಮೂಲವು ಜಗಮೋಹನ್ ವರದಿ ಉಲ್ಲೇಖಿಸಿ ಹೇಳಿದೆ.

ಈ ನಡುವೆ, ರಾಜ್ಯ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಆಯೋಗಕ್ಕೆ ನೀಡಿದ ವಿವರವಾದ ವರದಿಯಲ್ಲಿ ನಂದಿಗ್ರಾಮದಲ್ಲಿ ನಡೆದ ಘಟನೆಗೆ ಏನು ಕಾರಣ ಎಂಬುದು ಲಭ್ಯ ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ ಎಂದಿದ್ದಾರೆ.

“ಸಿಎಂ ವಾಹನವು ಕಿಕ್ಕಿರಿದ ಪ್ರದೇಶದ ಮೂಲಕ ಹಾದುಹೋಗುತ್ತಿತ್ತು. ಆಗ ಅವರನ್ನು ಕಾರಿನ ಬಾಗಿಲಿನತ್ತ ತಳ್ಳಲಾಯಿತು. ಆದರೆ ತಳ್ಳುವಿಕೆಯು ಉದ್ದೇಶಪೂರ್ವಕವಾಗಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಸಂಗ್ರಹಿಸಿದ ವೀಡಿಯೊ ಹೆಚ್ಚು ಸ್ಪಷ್ಟವಾಗಿಲ್ಲ” ಎಂದು ಸಿಇಒ ಮೂಲವೊಂದು ಬಂಡೊಪಾಧ್ಯಾಯರ ಎರಡನೇ ವರದಿಯನ್ನು ಉಲ್ಲೇಖಿಸಿ ಹೇಳಿದೆ.

ಘಟನೆ ಕುರಿತು ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ಇಬ್ಬರು ವೀಕ್ಷಕರಿಂದ ವರದಿಗಳನ್ನು ಕೋರಿತ್ತು. ರಾಜ್ಯ ಆಡಳಿತ ಶುಕ್ರವಾರ ತನ್ನ ವರದಿಯನ್ನು ಸಲ್ಲಿಸಿತ್ತು.
ಪಶ್ಚಿಮ ಬಂಗಾಳದ 294 ವಿಧಾನಸಭಾ ಸ್ಥಾನಗಳಿಗೆ ಮಾರ್ಚ್ 27 ಮತ್ತು ಏಪ್ರಿಲ್ 29 ರ ನಡುವೆ ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...