Homeಮುಖಪುಟಮಮತಾ ಮೇಲೆ ಹಲ್ಲೆ ನಡೆದಿಲ್ಲ: ಚುನಾವಣಾ ಆಯೋಗದ ಹೇಳಿಕೆ!

ಮಮತಾ ಮೇಲೆ ಹಲ್ಲೆ ನಡೆದಿಲ್ಲ: ಚುನಾವಣಾ ಆಯೋಗದ ಹೇಳಿಕೆ!

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಾಯಗಳನ್ನುಂಟು ಮಾಡಿದ ನಂದಿಗ್ರಾಮ್‌ನಲ್ಲಿ ನಡೆದ ಘಟನೆ ಅಪಘಾತ ಮತ್ತು ಯೋಜಿತ ದಾಳಿಯಲ್ಲ ಎಂದು ಚುನಾವಣಾ ಆಯೋಗ ಭಾನುವಾರ ತೀರ್ಮಾನಿಸಿದೆ. ಶನಿವಾರ ಇಬ್ಬರು ಮತದಾನ ವೀಕ್ಷಕರು ವರದಿಯನ್ನು ಸಲ್ಲಿಸಿದ ನಂತರ ಅದನ್ನು ಪರಿಶೀಲಿಸಿದ ಆಯೋಗ ಈ ತೀರ್ಮಾನಕ್ಕೆ ಬಂದಿದೆ.

ಅವರ ಭದ್ರತಾ ಉಸ್ತುವಾರಿಯ ಕೊರತೆಯಿಂದಾಗಿ ಬ್ಯಾನರ್ಜಿ ಗಾಯಗೊಂಡಿದ್ದಾರೆ ಎಂದು ಆಯೋಗ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಆಯೋಗ ನಿರ್ದೇಶನಗಳನ್ನು ನೀಡಲಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ.

ಸ್ಟಾರ್ ಪ್ರಚಾರಕರಾಗಿದ್ದರೂ ಬ್ಯಾನರ್ಜಿ ಬುಲೆಟ್ ಪ್ರೂಫ್ ಅಥವಾ ಶಸ್ತ್ರಸಜ್ಜಿತ ವಾಹನವನ್ನು ಬಳಸುತ್ತಿಲ್ಲ ಮತ್ತು ಇದು ಅವರ ಭದ್ರತೆ ನೋಡಿಕೊಳ್ಳುವವರ ಲೋಪ ಎಂದು ಆಯೋಗದ ಮೂಲಗಳು ಹೇಳಿವೆ.

ವಿಶೇಷ ಸಮೀಕ್ಷೆ ವೀಕ್ಷಕರಾದ ಅಜಯ್ ನಾಯಕ್ ಮತ್ತು ವಿವೇಕ್ ಡ್ಯೂಬ್ ಅವರ ವರದಿಯನ್ನು ಉಲ್ಲೇಖಿಸಿರುವ ಆಯೋಗ, ಮಮತಾ ಅವರು ಘಟನೆ ನಡೆದಾಗ ಸಾಮಾನ್ಯ ವಾಹನವನ್ನು ಬಳಸುತ್ತಿದ್ದರು, ಆದರೆ, ಅವರ ಭದ್ರತಾ ನಿರ್ದೇಶಕ ವಿವೇಕ್ ಸಹಾಯ್ ಅವರು ಗುಂಡು ನಿರೋಧಕ ಕಾರಿನಲ್ಲಿದ್ದರು ಎಂದು ಮೂಲಗಳು ಗಮನಿಸಿವೆ.

ಅಲ್ಲದೆ, ಘಟನೆ ನಡೆದ ಪ್ರದೇಶದ ರಿಟರ್ನಿಂಗ್ ಅಧಿಕಾರಿಯಿಂದ ಯಾವುದೇ ಅನುಮೋದನೆ ಪಡೆಯಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಕಾರಣದಿಂದಾಗಿ, ಮತದಾನದ ಅಧಿಕಾರಿಗಳಿಗೆ ವಿಡಿಯೋಗ್ರಾಫರ್‌ಗಳನ್ನು ಅಥವಾ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ನಿಯೋಜಿಸಲು ಸಾಧ್ಯವಾಗಲಿಲ್ಲ ಎಂದು ಆಯೋಗದ ಮೂಲಗಳು ತಿಳಿಸಿವೆ.

ಮಾರ್ಚ್ 10 ರಂದು ಪೂರ್ವ ಮಿಡ್ನಾಪೋರ್ ಜಿಲ್ಲೆಯ ನಂದಿಗ್ರಾಮದ ಬಿರುಲಿಯಾ ಬಜಾರ್‌ನಲ್ಲಿ ನಡೆದ ಘಟನೆ, ಬ್ಯಾನರ್ಜಿ ನಾಮಪತ್ರ ಸಲ್ಲಿಸಿದ ನಂತರ “ಹಠಾತ್ತನೆ” ನಡೆದಿದ್ದರೂ “ಪಿತೂರಿ ಸಿದ್ಧಾಂತ” ಇದರ ಹಿಂದಿದೆ ಎನ್ನಲಾಗಿದೆ. ಆದರೆ, ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಹಠಾತ್ ಸಂಭಸಿದ ಘಟನೆಯಲ್ಲಿ ಮಮತಾ ಗಾಯಗೊಂಡರು ಎನ್ನಲಾಗಿದೆ.

“ಈ ಘಟನೆ ಯೋಜಿತ ದಾಳಿಯಲ, ಅಪಘಾತ. ಇದು ಇದ್ದಕ್ಕಿದ್ದಂತೆ ನಡೆದಿತ್ತು” ಎಂದು ವರದಿಯನ್ನು ಉಲ್ಲೇಖಿಸಿ ಮೂಲ ಹೇಳಿದೆ. ಈ ಘಟನೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಬ್ಯಾನರ್ಜಿಗೆ ಆದ ಗಾಯದ ಬಗ್ಗೆ, ವರದಿಯು “ಘಟನೆಯ ಹಠಾತ್ ಕಾರಣ ಇದಕ್ಕೆ ಕಾರಣವಾಯಿತು. ಘಟನೆಯ ಹಿಂದೆ ಯಾವುದೇ ಪಿತೂರಿ ನಡೆದಿಲ್ಲ’ ಎಂದಿದೆ.

ಘಟನೆಯ ಸಮಯದಲ್ಲಿ ಹಾಜರಿದ್ದ ಪ್ರತ್ಯಕ್ಷದರ್ಶಿಗಳು ಒದಗಿಸಿದ ವಿವರಗಳು ಮತ್ತು ಅವರಿಂದ ಸಂಗ್ರಹಿಸಲಾದ ವಿಡಿಯೋವನ್ನು ವರದಿಯು ಗಣನೆಗೆ ತೆಗೆದುಕೊಂಡಿದೆ.
ಮಮತಾರಿಗೆ “ತುಂಬಾ ಹತ್ತಿರ” ಬಂದ ಜನಸಮೂಹವನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿಯ ಭದ್ರತೆಯ ಉಸ್ತುವಾರಿ ಪೊಲೀಸ್ ಸಿಬ್ಬಂದಿಗಳ ವೈಫಲ್ಯವನ್ನೂ ಈ ವರದಿ ಉಲ್ಲೇಖಿಸಿದೆ.

“ಸ್ಥಳೀಯ ಪೊಲೀಸರು ಮತ್ತು ಸಿಎಂ ಅವರ ಭದ್ರತೆಯ ಉಸ್ತುವಾರಿಯವರು ಜನಸಂದಣಿಯನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅದು ಅನಪೇಕ್ಷಿತ ಪರಿಸ್ಥಿತಿಗೆ ಕಾರಣವಾಯಿತು” ಎಂದು ವರದಿ ಹೇಳಿದೆ.

ನಂದಿಗ್ರಾಮ್ ಘಟನೆಯ ನಂತರ, ರಾಜ್ಯ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ನೋಡಲ್ ಅಧಿಕಾರಿ ಜಗಮೋಹನ್, ಮುಖ್ಯಮಂತ್ರಿಗಳ ಪ್ರವಾಸದ ಸಮಯದಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ವ್ಯವಸ್ಥೆ ಮಾಡುವಂತೆ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದ್ದಾರೆ.

“ಸಿಎಂ ಸುತ್ತಲಿನ ಭದ್ರತಾ ಕ್ರಮಗಳು ಕಟ್ಟುನಿಟ್ಟಾಗಿರಬೇಕು. ಇತರ ಸ್ಟಾರ್ ಪ್ರಚಾರಕರ ಭದ್ರತೆಯನ್ನು ಬಿಗಿಗೊಳಿಸಬೇಕು. ನಂದಿಗ್ರಾಮ್ ಘಟನೆಯ ನಂತರ ನಾವು ಯಾವುದೇ ಚಾನ್ಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ”ಎಂದು ಸಿಇಒ ಮೂಲವು ಜಗಮೋಹನ್ ವರದಿ ಉಲ್ಲೇಖಿಸಿ ಹೇಳಿದೆ.

ಈ ನಡುವೆ, ರಾಜ್ಯ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಆಯೋಗಕ್ಕೆ ನೀಡಿದ ವಿವರವಾದ ವರದಿಯಲ್ಲಿ ನಂದಿಗ್ರಾಮದಲ್ಲಿ ನಡೆದ ಘಟನೆಗೆ ಏನು ಕಾರಣ ಎಂಬುದು ಲಭ್ಯ ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ ಎಂದಿದ್ದಾರೆ.

“ಸಿಎಂ ವಾಹನವು ಕಿಕ್ಕಿರಿದ ಪ್ರದೇಶದ ಮೂಲಕ ಹಾದುಹೋಗುತ್ತಿತ್ತು. ಆಗ ಅವರನ್ನು ಕಾರಿನ ಬಾಗಿಲಿನತ್ತ ತಳ್ಳಲಾಯಿತು. ಆದರೆ ತಳ್ಳುವಿಕೆಯು ಉದ್ದೇಶಪೂರ್ವಕವಾಗಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಸಂಗ್ರಹಿಸಿದ ವೀಡಿಯೊ ಹೆಚ್ಚು ಸ್ಪಷ್ಟವಾಗಿಲ್ಲ” ಎಂದು ಸಿಇಒ ಮೂಲವೊಂದು ಬಂಡೊಪಾಧ್ಯಾಯರ ಎರಡನೇ ವರದಿಯನ್ನು ಉಲ್ಲೇಖಿಸಿ ಹೇಳಿದೆ.

ಘಟನೆ ಕುರಿತು ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ಇಬ್ಬರು ವೀಕ್ಷಕರಿಂದ ವರದಿಗಳನ್ನು ಕೋರಿತ್ತು. ರಾಜ್ಯ ಆಡಳಿತ ಶುಕ್ರವಾರ ತನ್ನ ವರದಿಯನ್ನು ಸಲ್ಲಿಸಿತ್ತು.
ಪಶ್ಚಿಮ ಬಂಗಾಳದ 294 ವಿಧಾನಸಭಾ ಸ್ಥಾನಗಳಿಗೆ ಮಾರ್ಚ್ 27 ಮತ್ತು ಏಪ್ರಿಲ್ 29 ರ ನಡುವೆ ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...