Homeಮುಖಪುಟ'ಲವ್ ಜಿಹಾದ್' ಎಂದು ಆರೋಪಿಸಿ ಪ್ರಯಾಣಿಕರಿಬ್ಬರನ್ನು ರೈಲಿನಿಂದ ಹೊರಗೆಳೆದು ಹಲ್ಲೆಗೈದ VHP ದುಷ್ಕರ್ಮಿಗಳ ವಿರುದ್ಧ ಪ್ರಕರಣ...

‘ಲವ್ ಜಿಹಾದ್’ ಎಂದು ಆರೋಪಿಸಿ ಪ್ರಯಾಣಿಕರಿಬ್ಬರನ್ನು ರೈಲಿನಿಂದ ಹೊರಗೆಳೆದು ಹಲ್ಲೆಗೈದ VHP ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರು!

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿಯ ಕಾರ್ಯಕರ್ತರು ಮಧ್ಯಪ್ರದೇಶದ ಉಜ್ಜಯಿನಿ ರೈಲ್ವೇ ನಿಲ್ದಾಣದಲ್ಲಿ ಅಜ್ಮೀರ್‌ಗೆ ತೆರಳುತ್ತಿದ್ದ ರೈಲಿನಿಂದ ಮುಸ್ಲಿಂ ಯುವಕ ಮತ್ತು ಆತನೊಂದಿಗೆ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯನ್ನು ರೈಲಿನಿಂದ ಹೊರಗೆ ಎಳೆದು ಹಾಕಿದ್ದರು. ಜನವರಿ 14ರ ಸಂಜೆ ಈ ಘಟನೆ ನಡೆದಿದ್ದು, ಈ ವೇಳೆ ದುಷ್ಕರ್ಮಿಗಳು ಲವ್ ಜಿಹಾದ್ ಎಂದು ಆರೋಪಿಸಿ ಯುವಕನಿಗೆ ಹಲ್ಲೆ ಕೂಡಾ ನಡೆಸಿದ್ದಾರೆ.

ಮೂವತ್ತು ವರ್ಷದ ಆಸಿಫ್ ಶೇಖ್ ತನ್ನ ಕುಟುಂಬದ ಸ್ನೇಹಿತರಾದ 26 ವರ್ಷದ ಸಾಕ್ಷಿ ಜೈನ್ ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ವಿಎಚ್‌ಪಿ ದುಷ್ಕರ್ಮಿಗಳು ಅವರನ್ನು ರೈಲಿನಿಂದ ಹೊರಗೆ ಎಳೆದು ಹಾಕಿದ್ದಾರೆ. ಈ ಇಬ್ಬರೂ ಇಂದೋರ್ ನಿವಾಸಿಗಳಾಗಿದ್ದಾರೆ.

ವಿಎಚ್‌ಪಿ ದುಷ್ಕರ್ಮಿಗಳು ಅವರನ್ನು ಬಲವಂತವಾಗಿ ಉಜ್ಜಯಿನಿ ರೈಲ್ವೆ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

ಪೊಲೀಸರು ಅವರ ಹೇಳಿಕೆಗಳನ್ನು ದಾಖಲಿಸಿಕೊಂಡು, ಅವರಿಬ್ಬರೂ ಕುಟುಂಬ ಸ್ನೇಹಿತರು ಎಂದು ಪತ್ತೆ ಹಚ್ಚಿದ್ದಾರೆ. ಇದರ ನಂತರ ಅವರನ್ನು ಹೋಗಲು ಬಿಟ್ಟಿದ್ದಾರೆ. ಇಬ್ಬರು ಪ್ರಯಾಣಿಕರು ಕೂಡಾ ದೂರುಗಳನ್ನು ದಾಖಲಿಸಲು ನಿರಾಕರಿಸಿದ್ದರು ಮತ್ತು ರೈಲ್ವೆ ಪೊಲೀಸರು ಕೂಡಾ VHP ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ.

“ಆಸಿಫ್‌ ಇಂದೋರ್‌ನಲ್ಲಿ ಸ್ಟಿಕ್ಕರ್ ಅಂಗಡಿಯನ್ನು ನಡೆಸುತ್ತಿದ್ದಾರೆ ಮತ್ತು ವಿವಾಹಿತರಾಗಿದ್ದಾರೆ. ಸಾಕ್ಷಿ ಜೈನ್ ಕೂಡಾ ವಿವಾಹಿತೆಯಾಗಿದ್ದು, ಇಂದೋರ್‌ನ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದಾರೆ. ಅವರಿಬ್ಬರೂ ಫ್ಯಾಮಿಲಿ ಸ್ನೇಹಿತರಾಗಿದ್ದು, ಪುಷ್ಕರ್‌‌ ಮೇಳದಲ್ಲಿ ಪಾಲ್ಗೊಳ್ಳಲು ಅಜ್ಮೀರ್‌ಗೆ ತೆರಳುತ್ತಿದ್ದರು” ಎಂದು ಉಜ್ಜಯಿನಿ ರೈಲ್ವೆ ಪೊಲೀಸರು ಹೇಳಿದ್ದಾರೆ.

ಈ ಘಟನೆಯ ವೀಡಿಯೊವನ್ನು ಬಲಪಂಥೀಯ ಹ್ಯಾಂಡಲ್‌‌ಗಳು ತಪ್ಪಾಗಿ ಬಿಂಬಿಸಿ ವೈರಲ್ ಮಾಡಿದ ನಂತರ ಈ ವಿಷಯವು ಜನವರಿ 18 ರಂದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ:ಗುಂಪು ಹಲ್ಲೆ ಸರಣಿ ಮುಂದುವರಿಕೆ – ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ವಿಎಚ್‌ಪಿ ಕಾರ್ಯಕರ್ತರು ಅಜ್ಮೀರ್‌ಗೆ ಹೋಗುವ ರೈಲಿನ ಎಸಿ ಕೋಚ್‌ನಿಂದ ಪೊಲೀಸ್ ಠಾಣೆಗೆ ಹೋಗುವ ದಾರಿಯಲ್ಲಿ, ಆಸಿಫ್‌ ಶೇಖ್‌ನನ್ನು ಎಳೆದುಕೊಂಡು ಹೋಗುತ್ತಿರುವಾಗ ಥಳಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ಅವರ ಲಗೇಜ್‌ಗಳನ್ನು ಹಿಡಿದ ಮತ್ತಿಬ್ಬರು ಕಾರ್ಯಕರ್ತರು ಸಾಕ್ಷಿ ಜೈನ್ ಅವರನ್ನು ಹಿಂಬಾಲಿಸಿದ್ದಾರೆ.

ಘಟನೆಯ ಮತ್ತೊಂದು ವೀಡಿಯೊದಲ್ಲಿ, ಯುವತಿಯು ತನ್ನನ್ನು ಚಿತ್ರೀಕರಣ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸ್ ಠಾಣೆಯೊಳಗೆ ವಿಎಚ್‌ಪಿ ದುಷ್ಕರ್ಮಿಗಳಲ್ಲಿ ಕೇಳಿಕೊಂಡಿದ್ದಾರೆ.

ಈ ವಿಡಿಯೊದಲ್ಲಿ ಅವರು, “ನೀವು ನಮ್ಮನ್ನು ತಪ್ಪಾಗಿ ತಿಳಿದುಕೊಂಡಿದ್ದೀರಿ, ಇದರಿಂದ ನನ್ನ ಜೀವನ ನಾಶವಾಗುತ್ತದೆ. ನನ್ನನ್ನು ವಿಡಿಯೊ ಮಾಡುತ್ತಿದ್ದೀರಿ, ನನ್ನ ಮಾತು ಕೇಳಿ… ನಾನು ವಯಸ್ಕಳಿದ್ದೇನೆ, ನಾನು ಏನು ಮಾಡುತ್ತಿದ್ದೇನೆಂದು ನನಗೆ ತಿಳಿದಿದೆ…ನಾನು ಶಿಕ್ಷಕಿ…” ಎಂದು ಹೇಳುತ್ತಾರೆ. ಯುವತಿಯು ಕಿರುಚುತ್ತಿರುವುದನ್ನು ಕೇಳಿಸಿಕೊಂಡರೂ ಸಹ, ಪೊಲೀಸರು ಅವರನ್ನು ನೋಡುತ್ತಾ ಕುಳಿತಿರುವುದನ್ನು ಕಾಣಬಹುದು.

ದಿ ವೈರ್ ಜೊತೆ ಮಾತನಾಡಿದ ಉಜ್ಜಯಿನಿಯ ಜಿಆರ್‌ಪಿ ಇನ್ಸ್‌ಪೆಕ್ಟರ್ ಆರ್.ಎಸ್. ಮಹಾಜನ್‌, ‘‘ಲವ್ ಜಿಹಾದ್ ಎಂದು ಶಂಕಿಸಿ ಜನವರಿ 14 ರಂದು ವಿಎಚ್‌ಪಿ ಕಾರ್ಯಕರ್ತರು ಇಬ್ಬರು ಪ್ರಯಾಣಿಕರನ್ನು ಕರೆತಂದರು, ಅವರನ್ನು ವಿಚಾರಿಸಿದಾಗ ಅದು ಸುಳ್ಳು ಎಂದು ತಿಳಿದುಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

ಅವರಿಬ್ಬರು ಒಟ್ಟಿಗೆ ಪ್ರಯಾಣಿಸುತ್ತಿರುವುದು ಅವರ ಕುಟುಂಬಗಳಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಅದಾಗಿಯು, ಅಸಿಫ್‌ ಮತ್ತು ಸಾಕ್ಷಿ ಅವರ ಪೋಷಕರು 65 ಕಿಮೀ ದೂರದ ಇಂದೋರ್‌ನಿಂದ ಉಜ್ಜಯಿನಿಗೆ ಬರುವವರೆಗೆ ಪೊಲೀಸ್ ಠಾಣೆಯಲ್ಲಿ ಅವರನ್ನು ಕಾಯುವಂತೆ ಮಾಡಲಾಯಿತು ಎಂದು ವೈರ್ ಉಲ್ಲೇಖಿಸಿದೆ.

ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಮತ್ತು ಪ್ರಯಾಣಿಕರನ್ನು ಎಳೆದೊಯ್ದು ಹಲ್ಲೆ ಮಾಡಿದ ವಿಎಚ್‌ಪಿ ದುಷ್ಕರ್ಮಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂಬ ವೈರ್‌ ಪ್ರಶ್ನೆಗೆ ಉತ್ತರಿಸಿದ ಪೊಲೀಸ್ ಅಧೀಕ್ಷಕ ನಿವೇದಿತಾ ಗುಪ್ತಾ, “ಉಜ್ಜಯಿನಿ ಘಟನೆಯಲ್ಲಿ ಪ್ರಯಾಣಿಕರೊಬ್ಬರನ್ನು ಅನುಚಿತವಾಗಿ ನಡೆಸಿಕೊಂಡ ಘಟನೆ ನಮಗೆ ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರವೇ ವಿಎಚ್‌ಪಿಯವರಿಗೆ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಪ್ರಶ್ನಿಸಿದಾಗ, ಇಬ್ಬರೂ ಪ್ರಯಾಣಿಕರು ಒಂದೇ ದಿನದಲ್ಲಿ ಬಿಡುಗಡೆಗೊಂಡು ಅಲ್ಲಿಂದ ತೆರಳಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ಆದರೆ ಅವರು ವಿಎಚ್‌ಪಿ ಕಾರ್ಯಕರ್ತರ ವಿರುದ್ಧ ಯಾವುದೇ ದೂರು ನೀಡಿಲ್ಲ” ಎಂದು ಹೇಳಿದ್ದಾರೆ.

ಈ ಮಧ್ಯೆ, ವಿಎಚ್‌ಪಿಯ ಮಾಲ್ವಾ ಪ್ರಾಂತ್‌ನ ಪ್ರಚಾರ್ ಪ್ರಮುಖ್ ಕುಂದನ್ ಚಂದ್ರಾಕರ್, “ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯನ್ನು ಆಮಿಷವೊಡ್ಡುತ್ತಿದ್ದಾನೆ ಮತ್ತು ಮದುವೆಗಾಗಿ ಅಜ್ಮೀರ್‌ಗೆ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ನಮ್ಮ ಮೂಲಗಳು ತಿಳಿಸಿವೆ. ‘ ಲವ್ ಜಿಹಾದ್ ’ ಎಂದು ಶಂಕಿಸಿ ನಮ್ಮ ಕಾರ್ಯಕರ್ತರು ಅವರನ್ನು ಹಿಡಿದು ಜಿಆರ್‌ಪಿ ಪೊಲೀಸ್ ಠಾಣೆಗೆ ಕರೆದೊಯ್ದು ಬಿಟ್ಟರು. ನಂತರ ಪೊಲೀಸರು ಏನು ಮಾಡಿದರು ಎಂಬುದು ನಮಗೆ ತಿಳಿದಿಲ್ಲ” ಎಂದು ತಿಳಿಸಿದ್ದಾರೆ.

ಯುವತಿಯು ಮುಸ್ಲಿಂ ಯುವಕನೊಂದಿಗೆ ಆಕರ್ಷಿತಳಾಗಿದ್ದಾಳೆ ಎಂದು ಅವರಿಗೆ ಹೇಗೆ ತಿಳಿಯಿತು ಎಂಬ ಪ್ರಶ್ನೆಗೆ, “ನಮ್ಮ ಹಿಂದೂ ಹೆಣ್ಣುಮಕ್ಕಳು ‘ಲವ್ ಜಿಹಾದ್’ ಮಾಡುವ ಮುಸ್ಲಿಂ ಪುರುಷರಿಂದ ಶೋಷಣೆಗೆ ಒಳಗಾಗುತ್ತಿರುವ ಬಗ್ಗೆ ಜನರು ಕಾಳಜಿ ವಹಿಸುವ ಸಮಾಜದಲ್ಲಿ ನಾವು ವಾಸಿಸುತ್ತಿದ್ದೇವೆ. ನಮ್ಮ ಸಹೋದರಿಯರ ಮೇಲಿನ ಕಾಳಜಿಯಿಂದ ನಮ್ಮ ಕಾರ್ಯಕರ್ತರು ಮಧ್ಯಪ್ರವೇಶಿಸಿದ್ದಾರೆ” ಎಂದು ಚಂದ್ರಾಕರ್‌‌ ತಿಳಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...