Homeಮುಖಪುಟ'ಲವ್ ಜಿಹಾದ್' ಎಂದು ಆರೋಪಿಸಿ ಪ್ರಯಾಣಿಕರಿಬ್ಬರನ್ನು ರೈಲಿನಿಂದ ಹೊರಗೆಳೆದು ಹಲ್ಲೆಗೈದ VHP ದುಷ್ಕರ್ಮಿಗಳ ವಿರುದ್ಧ ಪ್ರಕರಣ...

‘ಲವ್ ಜಿಹಾದ್’ ಎಂದು ಆರೋಪಿಸಿ ಪ್ರಯಾಣಿಕರಿಬ್ಬರನ್ನು ರೈಲಿನಿಂದ ಹೊರಗೆಳೆದು ಹಲ್ಲೆಗೈದ VHP ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರು!

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿಯ ಕಾರ್ಯಕರ್ತರು ಮಧ್ಯಪ್ರದೇಶದ ಉಜ್ಜಯಿನಿ ರೈಲ್ವೇ ನಿಲ್ದಾಣದಲ್ಲಿ ಅಜ್ಮೀರ್‌ಗೆ ತೆರಳುತ್ತಿದ್ದ ರೈಲಿನಿಂದ ಮುಸ್ಲಿಂ ಯುವಕ ಮತ್ತು ಆತನೊಂದಿಗೆ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯನ್ನು ರೈಲಿನಿಂದ ಹೊರಗೆ ಎಳೆದು ಹಾಕಿದ್ದರು. ಜನವರಿ 14ರ ಸಂಜೆ ಈ ಘಟನೆ ನಡೆದಿದ್ದು, ಈ ವೇಳೆ ದುಷ್ಕರ್ಮಿಗಳು ಲವ್ ಜಿಹಾದ್ ಎಂದು ಆರೋಪಿಸಿ ಯುವಕನಿಗೆ ಹಲ್ಲೆ ಕೂಡಾ ನಡೆಸಿದ್ದಾರೆ.

ಮೂವತ್ತು ವರ್ಷದ ಆಸಿಫ್ ಶೇಖ್ ತನ್ನ ಕುಟುಂಬದ ಸ್ನೇಹಿತರಾದ 26 ವರ್ಷದ ಸಾಕ್ಷಿ ಜೈನ್ ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ವಿಎಚ್‌ಪಿ ದುಷ್ಕರ್ಮಿಗಳು ಅವರನ್ನು ರೈಲಿನಿಂದ ಹೊರಗೆ ಎಳೆದು ಹಾಕಿದ್ದಾರೆ. ಈ ಇಬ್ಬರೂ ಇಂದೋರ್ ನಿವಾಸಿಗಳಾಗಿದ್ದಾರೆ.

ವಿಎಚ್‌ಪಿ ದುಷ್ಕರ್ಮಿಗಳು ಅವರನ್ನು ಬಲವಂತವಾಗಿ ಉಜ್ಜಯಿನಿ ರೈಲ್ವೆ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

ಪೊಲೀಸರು ಅವರ ಹೇಳಿಕೆಗಳನ್ನು ದಾಖಲಿಸಿಕೊಂಡು, ಅವರಿಬ್ಬರೂ ಕುಟುಂಬ ಸ್ನೇಹಿತರು ಎಂದು ಪತ್ತೆ ಹಚ್ಚಿದ್ದಾರೆ. ಇದರ ನಂತರ ಅವರನ್ನು ಹೋಗಲು ಬಿಟ್ಟಿದ್ದಾರೆ. ಇಬ್ಬರು ಪ್ರಯಾಣಿಕರು ಕೂಡಾ ದೂರುಗಳನ್ನು ದಾಖಲಿಸಲು ನಿರಾಕರಿಸಿದ್ದರು ಮತ್ತು ರೈಲ್ವೆ ಪೊಲೀಸರು ಕೂಡಾ VHP ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ.

“ಆಸಿಫ್‌ ಇಂದೋರ್‌ನಲ್ಲಿ ಸ್ಟಿಕ್ಕರ್ ಅಂಗಡಿಯನ್ನು ನಡೆಸುತ್ತಿದ್ದಾರೆ ಮತ್ತು ವಿವಾಹಿತರಾಗಿದ್ದಾರೆ. ಸಾಕ್ಷಿ ಜೈನ್ ಕೂಡಾ ವಿವಾಹಿತೆಯಾಗಿದ್ದು, ಇಂದೋರ್‌ನ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದಾರೆ. ಅವರಿಬ್ಬರೂ ಫ್ಯಾಮಿಲಿ ಸ್ನೇಹಿತರಾಗಿದ್ದು, ಪುಷ್ಕರ್‌‌ ಮೇಳದಲ್ಲಿ ಪಾಲ್ಗೊಳ್ಳಲು ಅಜ್ಮೀರ್‌ಗೆ ತೆರಳುತ್ತಿದ್ದರು” ಎಂದು ಉಜ್ಜಯಿನಿ ರೈಲ್ವೆ ಪೊಲೀಸರು ಹೇಳಿದ್ದಾರೆ.

ಈ ಘಟನೆಯ ವೀಡಿಯೊವನ್ನು ಬಲಪಂಥೀಯ ಹ್ಯಾಂಡಲ್‌‌ಗಳು ತಪ್ಪಾಗಿ ಬಿಂಬಿಸಿ ವೈರಲ್ ಮಾಡಿದ ನಂತರ ಈ ವಿಷಯವು ಜನವರಿ 18 ರಂದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ:ಗುಂಪು ಹಲ್ಲೆ ಸರಣಿ ಮುಂದುವರಿಕೆ – ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ವಿಎಚ್‌ಪಿ ಕಾರ್ಯಕರ್ತರು ಅಜ್ಮೀರ್‌ಗೆ ಹೋಗುವ ರೈಲಿನ ಎಸಿ ಕೋಚ್‌ನಿಂದ ಪೊಲೀಸ್ ಠಾಣೆಗೆ ಹೋಗುವ ದಾರಿಯಲ್ಲಿ, ಆಸಿಫ್‌ ಶೇಖ್‌ನನ್ನು ಎಳೆದುಕೊಂಡು ಹೋಗುತ್ತಿರುವಾಗ ಥಳಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ಅವರ ಲಗೇಜ್‌ಗಳನ್ನು ಹಿಡಿದ ಮತ್ತಿಬ್ಬರು ಕಾರ್ಯಕರ್ತರು ಸಾಕ್ಷಿ ಜೈನ್ ಅವರನ್ನು ಹಿಂಬಾಲಿಸಿದ್ದಾರೆ.

ಘಟನೆಯ ಮತ್ತೊಂದು ವೀಡಿಯೊದಲ್ಲಿ, ಯುವತಿಯು ತನ್ನನ್ನು ಚಿತ್ರೀಕರಣ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸ್ ಠಾಣೆಯೊಳಗೆ ವಿಎಚ್‌ಪಿ ದುಷ್ಕರ್ಮಿಗಳಲ್ಲಿ ಕೇಳಿಕೊಂಡಿದ್ದಾರೆ.

ಈ ವಿಡಿಯೊದಲ್ಲಿ ಅವರು, “ನೀವು ನಮ್ಮನ್ನು ತಪ್ಪಾಗಿ ತಿಳಿದುಕೊಂಡಿದ್ದೀರಿ, ಇದರಿಂದ ನನ್ನ ಜೀವನ ನಾಶವಾಗುತ್ತದೆ. ನನ್ನನ್ನು ವಿಡಿಯೊ ಮಾಡುತ್ತಿದ್ದೀರಿ, ನನ್ನ ಮಾತು ಕೇಳಿ… ನಾನು ವಯಸ್ಕಳಿದ್ದೇನೆ, ನಾನು ಏನು ಮಾಡುತ್ತಿದ್ದೇನೆಂದು ನನಗೆ ತಿಳಿದಿದೆ…ನಾನು ಶಿಕ್ಷಕಿ…” ಎಂದು ಹೇಳುತ್ತಾರೆ. ಯುವತಿಯು ಕಿರುಚುತ್ತಿರುವುದನ್ನು ಕೇಳಿಸಿಕೊಂಡರೂ ಸಹ, ಪೊಲೀಸರು ಅವರನ್ನು ನೋಡುತ್ತಾ ಕುಳಿತಿರುವುದನ್ನು ಕಾಣಬಹುದು.

ದಿ ವೈರ್ ಜೊತೆ ಮಾತನಾಡಿದ ಉಜ್ಜಯಿನಿಯ ಜಿಆರ್‌ಪಿ ಇನ್ಸ್‌ಪೆಕ್ಟರ್ ಆರ್.ಎಸ್. ಮಹಾಜನ್‌, ‘‘ಲವ್ ಜಿಹಾದ್ ಎಂದು ಶಂಕಿಸಿ ಜನವರಿ 14 ರಂದು ವಿಎಚ್‌ಪಿ ಕಾರ್ಯಕರ್ತರು ಇಬ್ಬರು ಪ್ರಯಾಣಿಕರನ್ನು ಕರೆತಂದರು, ಅವರನ್ನು ವಿಚಾರಿಸಿದಾಗ ಅದು ಸುಳ್ಳು ಎಂದು ತಿಳಿದುಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

ಅವರಿಬ್ಬರು ಒಟ್ಟಿಗೆ ಪ್ರಯಾಣಿಸುತ್ತಿರುವುದು ಅವರ ಕುಟುಂಬಗಳಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಅದಾಗಿಯು, ಅಸಿಫ್‌ ಮತ್ತು ಸಾಕ್ಷಿ ಅವರ ಪೋಷಕರು 65 ಕಿಮೀ ದೂರದ ಇಂದೋರ್‌ನಿಂದ ಉಜ್ಜಯಿನಿಗೆ ಬರುವವರೆಗೆ ಪೊಲೀಸ್ ಠಾಣೆಯಲ್ಲಿ ಅವರನ್ನು ಕಾಯುವಂತೆ ಮಾಡಲಾಯಿತು ಎಂದು ವೈರ್ ಉಲ್ಲೇಖಿಸಿದೆ.

ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಮತ್ತು ಪ್ರಯಾಣಿಕರನ್ನು ಎಳೆದೊಯ್ದು ಹಲ್ಲೆ ಮಾಡಿದ ವಿಎಚ್‌ಪಿ ದುಷ್ಕರ್ಮಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂಬ ವೈರ್‌ ಪ್ರಶ್ನೆಗೆ ಉತ್ತರಿಸಿದ ಪೊಲೀಸ್ ಅಧೀಕ್ಷಕ ನಿವೇದಿತಾ ಗುಪ್ತಾ, “ಉಜ್ಜಯಿನಿ ಘಟನೆಯಲ್ಲಿ ಪ್ರಯಾಣಿಕರೊಬ್ಬರನ್ನು ಅನುಚಿತವಾಗಿ ನಡೆಸಿಕೊಂಡ ಘಟನೆ ನಮಗೆ ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರವೇ ವಿಎಚ್‌ಪಿಯವರಿಗೆ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಪ್ರಶ್ನಿಸಿದಾಗ, ಇಬ್ಬರೂ ಪ್ರಯಾಣಿಕರು ಒಂದೇ ದಿನದಲ್ಲಿ ಬಿಡುಗಡೆಗೊಂಡು ಅಲ್ಲಿಂದ ತೆರಳಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ಆದರೆ ಅವರು ವಿಎಚ್‌ಪಿ ಕಾರ್ಯಕರ್ತರ ವಿರುದ್ಧ ಯಾವುದೇ ದೂರು ನೀಡಿಲ್ಲ” ಎಂದು ಹೇಳಿದ್ದಾರೆ.

ಈ ಮಧ್ಯೆ, ವಿಎಚ್‌ಪಿಯ ಮಾಲ್ವಾ ಪ್ರಾಂತ್‌ನ ಪ್ರಚಾರ್ ಪ್ರಮುಖ್ ಕುಂದನ್ ಚಂದ್ರಾಕರ್, “ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯನ್ನು ಆಮಿಷವೊಡ್ಡುತ್ತಿದ್ದಾನೆ ಮತ್ತು ಮದುವೆಗಾಗಿ ಅಜ್ಮೀರ್‌ಗೆ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ನಮ್ಮ ಮೂಲಗಳು ತಿಳಿಸಿವೆ. ‘ ಲವ್ ಜಿಹಾದ್ ’ ಎಂದು ಶಂಕಿಸಿ ನಮ್ಮ ಕಾರ್ಯಕರ್ತರು ಅವರನ್ನು ಹಿಡಿದು ಜಿಆರ್‌ಪಿ ಪೊಲೀಸ್ ಠಾಣೆಗೆ ಕರೆದೊಯ್ದು ಬಿಟ್ಟರು. ನಂತರ ಪೊಲೀಸರು ಏನು ಮಾಡಿದರು ಎಂಬುದು ನಮಗೆ ತಿಳಿದಿಲ್ಲ” ಎಂದು ತಿಳಿಸಿದ್ದಾರೆ.

ಯುವತಿಯು ಮುಸ್ಲಿಂ ಯುವಕನೊಂದಿಗೆ ಆಕರ್ಷಿತಳಾಗಿದ್ದಾಳೆ ಎಂದು ಅವರಿಗೆ ಹೇಗೆ ತಿಳಿಯಿತು ಎಂಬ ಪ್ರಶ್ನೆಗೆ, “ನಮ್ಮ ಹಿಂದೂ ಹೆಣ್ಣುಮಕ್ಕಳು ‘ಲವ್ ಜಿಹಾದ್’ ಮಾಡುವ ಮುಸ್ಲಿಂ ಪುರುಷರಿಂದ ಶೋಷಣೆಗೆ ಒಳಗಾಗುತ್ತಿರುವ ಬಗ್ಗೆ ಜನರು ಕಾಳಜಿ ವಹಿಸುವ ಸಮಾಜದಲ್ಲಿ ನಾವು ವಾಸಿಸುತ್ತಿದ್ದೇವೆ. ನಮ್ಮ ಸಹೋದರಿಯರ ಮೇಲಿನ ಕಾಳಜಿಯಿಂದ ನಮ್ಮ ಕಾರ್ಯಕರ್ತರು ಮಧ್ಯಪ್ರವೇಶಿಸಿದ್ದಾರೆ” ಎಂದು ಚಂದ್ರಾಕರ್‌‌ ತಿಳಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...