Homeಮುಖಪುಟ'ಲವ್ ಜಿಹಾದ್' ಎಂದು ಆರೋಪಿಸಿ ಪ್ರಯಾಣಿಕರಿಬ್ಬರನ್ನು ರೈಲಿನಿಂದ ಹೊರಗೆಳೆದು ಹಲ್ಲೆಗೈದ VHP ದುಷ್ಕರ್ಮಿಗಳ ವಿರುದ್ಧ ಪ್ರಕರಣ...

‘ಲವ್ ಜಿಹಾದ್’ ಎಂದು ಆರೋಪಿಸಿ ಪ್ರಯಾಣಿಕರಿಬ್ಬರನ್ನು ರೈಲಿನಿಂದ ಹೊರಗೆಳೆದು ಹಲ್ಲೆಗೈದ VHP ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರು!

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿಯ ಕಾರ್ಯಕರ್ತರು ಮಧ್ಯಪ್ರದೇಶದ ಉಜ್ಜಯಿನಿ ರೈಲ್ವೇ ನಿಲ್ದಾಣದಲ್ಲಿ ಅಜ್ಮೀರ್‌ಗೆ ತೆರಳುತ್ತಿದ್ದ ರೈಲಿನಿಂದ ಮುಸ್ಲಿಂ ಯುವಕ ಮತ್ತು ಆತನೊಂದಿಗೆ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯನ್ನು ರೈಲಿನಿಂದ ಹೊರಗೆ ಎಳೆದು ಹಾಕಿದ್ದರು. ಜನವರಿ 14ರ ಸಂಜೆ ಈ ಘಟನೆ ನಡೆದಿದ್ದು, ಈ ವೇಳೆ ದುಷ್ಕರ್ಮಿಗಳು ಲವ್ ಜಿಹಾದ್ ಎಂದು ಆರೋಪಿಸಿ ಯುವಕನಿಗೆ ಹಲ್ಲೆ ಕೂಡಾ ನಡೆಸಿದ್ದಾರೆ.

ಮೂವತ್ತು ವರ್ಷದ ಆಸಿಫ್ ಶೇಖ್ ತನ್ನ ಕುಟುಂಬದ ಸ್ನೇಹಿತರಾದ 26 ವರ್ಷದ ಸಾಕ್ಷಿ ಜೈನ್ ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ವಿಎಚ್‌ಪಿ ದುಷ್ಕರ್ಮಿಗಳು ಅವರನ್ನು ರೈಲಿನಿಂದ ಹೊರಗೆ ಎಳೆದು ಹಾಕಿದ್ದಾರೆ. ಈ ಇಬ್ಬರೂ ಇಂದೋರ್ ನಿವಾಸಿಗಳಾಗಿದ್ದಾರೆ.

ವಿಎಚ್‌ಪಿ ದುಷ್ಕರ್ಮಿಗಳು ಅವರನ್ನು ಬಲವಂತವಾಗಿ ಉಜ್ಜಯಿನಿ ರೈಲ್ವೆ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

ಪೊಲೀಸರು ಅವರ ಹೇಳಿಕೆಗಳನ್ನು ದಾಖಲಿಸಿಕೊಂಡು, ಅವರಿಬ್ಬರೂ ಕುಟುಂಬ ಸ್ನೇಹಿತರು ಎಂದು ಪತ್ತೆ ಹಚ್ಚಿದ್ದಾರೆ. ಇದರ ನಂತರ ಅವರನ್ನು ಹೋಗಲು ಬಿಟ್ಟಿದ್ದಾರೆ. ಇಬ್ಬರು ಪ್ರಯಾಣಿಕರು ಕೂಡಾ ದೂರುಗಳನ್ನು ದಾಖಲಿಸಲು ನಿರಾಕರಿಸಿದ್ದರು ಮತ್ತು ರೈಲ್ವೆ ಪೊಲೀಸರು ಕೂಡಾ VHP ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ.

“ಆಸಿಫ್‌ ಇಂದೋರ್‌ನಲ್ಲಿ ಸ್ಟಿಕ್ಕರ್ ಅಂಗಡಿಯನ್ನು ನಡೆಸುತ್ತಿದ್ದಾರೆ ಮತ್ತು ವಿವಾಹಿತರಾಗಿದ್ದಾರೆ. ಸಾಕ್ಷಿ ಜೈನ್ ಕೂಡಾ ವಿವಾಹಿತೆಯಾಗಿದ್ದು, ಇಂದೋರ್‌ನ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದಾರೆ. ಅವರಿಬ್ಬರೂ ಫ್ಯಾಮಿಲಿ ಸ್ನೇಹಿತರಾಗಿದ್ದು, ಪುಷ್ಕರ್‌‌ ಮೇಳದಲ್ಲಿ ಪಾಲ್ಗೊಳ್ಳಲು ಅಜ್ಮೀರ್‌ಗೆ ತೆರಳುತ್ತಿದ್ದರು” ಎಂದು ಉಜ್ಜಯಿನಿ ರೈಲ್ವೆ ಪೊಲೀಸರು ಹೇಳಿದ್ದಾರೆ.

ಈ ಘಟನೆಯ ವೀಡಿಯೊವನ್ನು ಬಲಪಂಥೀಯ ಹ್ಯಾಂಡಲ್‌‌ಗಳು ತಪ್ಪಾಗಿ ಬಿಂಬಿಸಿ ವೈರಲ್ ಮಾಡಿದ ನಂತರ ಈ ವಿಷಯವು ಜನವರಿ 18 ರಂದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ:ಗುಂಪು ಹಲ್ಲೆ ಸರಣಿ ಮುಂದುವರಿಕೆ – ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ವಿಎಚ್‌ಪಿ ಕಾರ್ಯಕರ್ತರು ಅಜ್ಮೀರ್‌ಗೆ ಹೋಗುವ ರೈಲಿನ ಎಸಿ ಕೋಚ್‌ನಿಂದ ಪೊಲೀಸ್ ಠಾಣೆಗೆ ಹೋಗುವ ದಾರಿಯಲ್ಲಿ, ಆಸಿಫ್‌ ಶೇಖ್‌ನನ್ನು ಎಳೆದುಕೊಂಡು ಹೋಗುತ್ತಿರುವಾಗ ಥಳಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ಅವರ ಲಗೇಜ್‌ಗಳನ್ನು ಹಿಡಿದ ಮತ್ತಿಬ್ಬರು ಕಾರ್ಯಕರ್ತರು ಸಾಕ್ಷಿ ಜೈನ್ ಅವರನ್ನು ಹಿಂಬಾಲಿಸಿದ್ದಾರೆ.

ಘಟನೆಯ ಮತ್ತೊಂದು ವೀಡಿಯೊದಲ್ಲಿ, ಯುವತಿಯು ತನ್ನನ್ನು ಚಿತ್ರೀಕರಣ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸ್ ಠಾಣೆಯೊಳಗೆ ವಿಎಚ್‌ಪಿ ದುಷ್ಕರ್ಮಿಗಳಲ್ಲಿ ಕೇಳಿಕೊಂಡಿದ್ದಾರೆ.

ಈ ವಿಡಿಯೊದಲ್ಲಿ ಅವರು, “ನೀವು ನಮ್ಮನ್ನು ತಪ್ಪಾಗಿ ತಿಳಿದುಕೊಂಡಿದ್ದೀರಿ, ಇದರಿಂದ ನನ್ನ ಜೀವನ ನಾಶವಾಗುತ್ತದೆ. ನನ್ನನ್ನು ವಿಡಿಯೊ ಮಾಡುತ್ತಿದ್ದೀರಿ, ನನ್ನ ಮಾತು ಕೇಳಿ… ನಾನು ವಯಸ್ಕಳಿದ್ದೇನೆ, ನಾನು ಏನು ಮಾಡುತ್ತಿದ್ದೇನೆಂದು ನನಗೆ ತಿಳಿದಿದೆ…ನಾನು ಶಿಕ್ಷಕಿ…” ಎಂದು ಹೇಳುತ್ತಾರೆ. ಯುವತಿಯು ಕಿರುಚುತ್ತಿರುವುದನ್ನು ಕೇಳಿಸಿಕೊಂಡರೂ ಸಹ, ಪೊಲೀಸರು ಅವರನ್ನು ನೋಡುತ್ತಾ ಕುಳಿತಿರುವುದನ್ನು ಕಾಣಬಹುದು.

ದಿ ವೈರ್ ಜೊತೆ ಮಾತನಾಡಿದ ಉಜ್ಜಯಿನಿಯ ಜಿಆರ್‌ಪಿ ಇನ್ಸ್‌ಪೆಕ್ಟರ್ ಆರ್.ಎಸ್. ಮಹಾಜನ್‌, ‘‘ಲವ್ ಜಿಹಾದ್ ಎಂದು ಶಂಕಿಸಿ ಜನವರಿ 14 ರಂದು ವಿಎಚ್‌ಪಿ ಕಾರ್ಯಕರ್ತರು ಇಬ್ಬರು ಪ್ರಯಾಣಿಕರನ್ನು ಕರೆತಂದರು, ಅವರನ್ನು ವಿಚಾರಿಸಿದಾಗ ಅದು ಸುಳ್ಳು ಎಂದು ತಿಳಿದುಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

ಅವರಿಬ್ಬರು ಒಟ್ಟಿಗೆ ಪ್ರಯಾಣಿಸುತ್ತಿರುವುದು ಅವರ ಕುಟುಂಬಗಳಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಅದಾಗಿಯು, ಅಸಿಫ್‌ ಮತ್ತು ಸಾಕ್ಷಿ ಅವರ ಪೋಷಕರು 65 ಕಿಮೀ ದೂರದ ಇಂದೋರ್‌ನಿಂದ ಉಜ್ಜಯಿನಿಗೆ ಬರುವವರೆಗೆ ಪೊಲೀಸ್ ಠಾಣೆಯಲ್ಲಿ ಅವರನ್ನು ಕಾಯುವಂತೆ ಮಾಡಲಾಯಿತು ಎಂದು ವೈರ್ ಉಲ್ಲೇಖಿಸಿದೆ.

ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಮತ್ತು ಪ್ರಯಾಣಿಕರನ್ನು ಎಳೆದೊಯ್ದು ಹಲ್ಲೆ ಮಾಡಿದ ವಿಎಚ್‌ಪಿ ದುಷ್ಕರ್ಮಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂಬ ವೈರ್‌ ಪ್ರಶ್ನೆಗೆ ಉತ್ತರಿಸಿದ ಪೊಲೀಸ್ ಅಧೀಕ್ಷಕ ನಿವೇದಿತಾ ಗುಪ್ತಾ, “ಉಜ್ಜಯಿನಿ ಘಟನೆಯಲ್ಲಿ ಪ್ರಯಾಣಿಕರೊಬ್ಬರನ್ನು ಅನುಚಿತವಾಗಿ ನಡೆಸಿಕೊಂಡ ಘಟನೆ ನಮಗೆ ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರವೇ ವಿಎಚ್‌ಪಿಯವರಿಗೆ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಪ್ರಶ್ನಿಸಿದಾಗ, ಇಬ್ಬರೂ ಪ್ರಯಾಣಿಕರು ಒಂದೇ ದಿನದಲ್ಲಿ ಬಿಡುಗಡೆಗೊಂಡು ಅಲ್ಲಿಂದ ತೆರಳಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ಆದರೆ ಅವರು ವಿಎಚ್‌ಪಿ ಕಾರ್ಯಕರ್ತರ ವಿರುದ್ಧ ಯಾವುದೇ ದೂರು ನೀಡಿಲ್ಲ” ಎಂದು ಹೇಳಿದ್ದಾರೆ.

ಈ ಮಧ್ಯೆ, ವಿಎಚ್‌ಪಿಯ ಮಾಲ್ವಾ ಪ್ರಾಂತ್‌ನ ಪ್ರಚಾರ್ ಪ್ರಮುಖ್ ಕುಂದನ್ ಚಂದ್ರಾಕರ್, “ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯನ್ನು ಆಮಿಷವೊಡ್ಡುತ್ತಿದ್ದಾನೆ ಮತ್ತು ಮದುವೆಗಾಗಿ ಅಜ್ಮೀರ್‌ಗೆ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ನಮ್ಮ ಮೂಲಗಳು ತಿಳಿಸಿವೆ. ‘ ಲವ್ ಜಿಹಾದ್ ’ ಎಂದು ಶಂಕಿಸಿ ನಮ್ಮ ಕಾರ್ಯಕರ್ತರು ಅವರನ್ನು ಹಿಡಿದು ಜಿಆರ್‌ಪಿ ಪೊಲೀಸ್ ಠಾಣೆಗೆ ಕರೆದೊಯ್ದು ಬಿಟ್ಟರು. ನಂತರ ಪೊಲೀಸರು ಏನು ಮಾಡಿದರು ಎಂಬುದು ನಮಗೆ ತಿಳಿದಿಲ್ಲ” ಎಂದು ತಿಳಿಸಿದ್ದಾರೆ.

ಯುವತಿಯು ಮುಸ್ಲಿಂ ಯುವಕನೊಂದಿಗೆ ಆಕರ್ಷಿತಳಾಗಿದ್ದಾಳೆ ಎಂದು ಅವರಿಗೆ ಹೇಗೆ ತಿಳಿಯಿತು ಎಂಬ ಪ್ರಶ್ನೆಗೆ, “ನಮ್ಮ ಹಿಂದೂ ಹೆಣ್ಣುಮಕ್ಕಳು ‘ಲವ್ ಜಿಹಾದ್’ ಮಾಡುವ ಮುಸ್ಲಿಂ ಪುರುಷರಿಂದ ಶೋಷಣೆಗೆ ಒಳಗಾಗುತ್ತಿರುವ ಬಗ್ಗೆ ಜನರು ಕಾಳಜಿ ವಹಿಸುವ ಸಮಾಜದಲ್ಲಿ ನಾವು ವಾಸಿಸುತ್ತಿದ್ದೇವೆ. ನಮ್ಮ ಸಹೋದರಿಯರ ಮೇಲಿನ ಕಾಳಜಿಯಿಂದ ನಮ್ಮ ಕಾರ್ಯಕರ್ತರು ಮಧ್ಯಪ್ರವೇಶಿಸಿದ್ದಾರೆ” ಎಂದು ಚಂದ್ರಾಕರ್‌‌ ತಿಳಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...