Homeಮುಖಪುಟ'ಲವ್ ಜಿಹಾದ್' ಎಂದು ಆರೋಪಿಸಿ ಪ್ರಯಾಣಿಕರಿಬ್ಬರನ್ನು ರೈಲಿನಿಂದ ಹೊರಗೆಳೆದು ಹಲ್ಲೆಗೈದ VHP ದುಷ್ಕರ್ಮಿಗಳ ವಿರುದ್ಧ ಪ್ರಕರಣ...

‘ಲವ್ ಜಿಹಾದ್’ ಎಂದು ಆರೋಪಿಸಿ ಪ್ರಯಾಣಿಕರಿಬ್ಬರನ್ನು ರೈಲಿನಿಂದ ಹೊರಗೆಳೆದು ಹಲ್ಲೆಗೈದ VHP ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರು!

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿಯ ಕಾರ್ಯಕರ್ತರು ಮಧ್ಯಪ್ರದೇಶದ ಉಜ್ಜಯಿನಿ ರೈಲ್ವೇ ನಿಲ್ದಾಣದಲ್ಲಿ ಅಜ್ಮೀರ್‌ಗೆ ತೆರಳುತ್ತಿದ್ದ ರೈಲಿನಿಂದ ಮುಸ್ಲಿಂ ಯುವಕ ಮತ್ತು ಆತನೊಂದಿಗೆ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯನ್ನು ರೈಲಿನಿಂದ ಹೊರಗೆ ಎಳೆದು ಹಾಕಿದ್ದರು. ಜನವರಿ 14ರ ಸಂಜೆ ಈ ಘಟನೆ ನಡೆದಿದ್ದು, ಈ ವೇಳೆ ದುಷ್ಕರ್ಮಿಗಳು ಲವ್ ಜಿಹಾದ್ ಎಂದು ಆರೋಪಿಸಿ ಯುವಕನಿಗೆ ಹಲ್ಲೆ ಕೂಡಾ ನಡೆಸಿದ್ದಾರೆ.

ಮೂವತ್ತು ವರ್ಷದ ಆಸಿಫ್ ಶೇಖ್ ತನ್ನ ಕುಟುಂಬದ ಸ್ನೇಹಿತರಾದ 26 ವರ್ಷದ ಸಾಕ್ಷಿ ಜೈನ್ ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ವಿಎಚ್‌ಪಿ ದುಷ್ಕರ್ಮಿಗಳು ಅವರನ್ನು ರೈಲಿನಿಂದ ಹೊರಗೆ ಎಳೆದು ಹಾಕಿದ್ದಾರೆ. ಈ ಇಬ್ಬರೂ ಇಂದೋರ್ ನಿವಾಸಿಗಳಾಗಿದ್ದಾರೆ.

ವಿಎಚ್‌ಪಿ ದುಷ್ಕರ್ಮಿಗಳು ಅವರನ್ನು ಬಲವಂತವಾಗಿ ಉಜ್ಜಯಿನಿ ರೈಲ್ವೆ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

ಪೊಲೀಸರು ಅವರ ಹೇಳಿಕೆಗಳನ್ನು ದಾಖಲಿಸಿಕೊಂಡು, ಅವರಿಬ್ಬರೂ ಕುಟುಂಬ ಸ್ನೇಹಿತರು ಎಂದು ಪತ್ತೆ ಹಚ್ಚಿದ್ದಾರೆ. ಇದರ ನಂತರ ಅವರನ್ನು ಹೋಗಲು ಬಿಟ್ಟಿದ್ದಾರೆ. ಇಬ್ಬರು ಪ್ರಯಾಣಿಕರು ಕೂಡಾ ದೂರುಗಳನ್ನು ದಾಖಲಿಸಲು ನಿರಾಕರಿಸಿದ್ದರು ಮತ್ತು ರೈಲ್ವೆ ಪೊಲೀಸರು ಕೂಡಾ VHP ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ.

“ಆಸಿಫ್‌ ಇಂದೋರ್‌ನಲ್ಲಿ ಸ್ಟಿಕ್ಕರ್ ಅಂಗಡಿಯನ್ನು ನಡೆಸುತ್ತಿದ್ದಾರೆ ಮತ್ತು ವಿವಾಹಿತರಾಗಿದ್ದಾರೆ. ಸಾಕ್ಷಿ ಜೈನ್ ಕೂಡಾ ವಿವಾಹಿತೆಯಾಗಿದ್ದು, ಇಂದೋರ್‌ನ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದಾರೆ. ಅವರಿಬ್ಬರೂ ಫ್ಯಾಮಿಲಿ ಸ್ನೇಹಿತರಾಗಿದ್ದು, ಪುಷ್ಕರ್‌‌ ಮೇಳದಲ್ಲಿ ಪಾಲ್ಗೊಳ್ಳಲು ಅಜ್ಮೀರ್‌ಗೆ ತೆರಳುತ್ತಿದ್ದರು” ಎಂದು ಉಜ್ಜಯಿನಿ ರೈಲ್ವೆ ಪೊಲೀಸರು ಹೇಳಿದ್ದಾರೆ.

ಈ ಘಟನೆಯ ವೀಡಿಯೊವನ್ನು ಬಲಪಂಥೀಯ ಹ್ಯಾಂಡಲ್‌‌ಗಳು ತಪ್ಪಾಗಿ ಬಿಂಬಿಸಿ ವೈರಲ್ ಮಾಡಿದ ನಂತರ ಈ ವಿಷಯವು ಜನವರಿ 18 ರಂದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ:ಗುಂಪು ಹಲ್ಲೆ ಸರಣಿ ಮುಂದುವರಿಕೆ – ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ವಿಎಚ್‌ಪಿ ಕಾರ್ಯಕರ್ತರು ಅಜ್ಮೀರ್‌ಗೆ ಹೋಗುವ ರೈಲಿನ ಎಸಿ ಕೋಚ್‌ನಿಂದ ಪೊಲೀಸ್ ಠಾಣೆಗೆ ಹೋಗುವ ದಾರಿಯಲ್ಲಿ, ಆಸಿಫ್‌ ಶೇಖ್‌ನನ್ನು ಎಳೆದುಕೊಂಡು ಹೋಗುತ್ತಿರುವಾಗ ಥಳಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ಅವರ ಲಗೇಜ್‌ಗಳನ್ನು ಹಿಡಿದ ಮತ್ತಿಬ್ಬರು ಕಾರ್ಯಕರ್ತರು ಸಾಕ್ಷಿ ಜೈನ್ ಅವರನ್ನು ಹಿಂಬಾಲಿಸಿದ್ದಾರೆ.

ಘಟನೆಯ ಮತ್ತೊಂದು ವೀಡಿಯೊದಲ್ಲಿ, ಯುವತಿಯು ತನ್ನನ್ನು ಚಿತ್ರೀಕರಣ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸ್ ಠಾಣೆಯೊಳಗೆ ವಿಎಚ್‌ಪಿ ದುಷ್ಕರ್ಮಿಗಳಲ್ಲಿ ಕೇಳಿಕೊಂಡಿದ್ದಾರೆ.

ಈ ವಿಡಿಯೊದಲ್ಲಿ ಅವರು, “ನೀವು ನಮ್ಮನ್ನು ತಪ್ಪಾಗಿ ತಿಳಿದುಕೊಂಡಿದ್ದೀರಿ, ಇದರಿಂದ ನನ್ನ ಜೀವನ ನಾಶವಾಗುತ್ತದೆ. ನನ್ನನ್ನು ವಿಡಿಯೊ ಮಾಡುತ್ತಿದ್ದೀರಿ, ನನ್ನ ಮಾತು ಕೇಳಿ… ನಾನು ವಯಸ್ಕಳಿದ್ದೇನೆ, ನಾನು ಏನು ಮಾಡುತ್ತಿದ್ದೇನೆಂದು ನನಗೆ ತಿಳಿದಿದೆ…ನಾನು ಶಿಕ್ಷಕಿ…” ಎಂದು ಹೇಳುತ್ತಾರೆ. ಯುವತಿಯು ಕಿರುಚುತ್ತಿರುವುದನ್ನು ಕೇಳಿಸಿಕೊಂಡರೂ ಸಹ, ಪೊಲೀಸರು ಅವರನ್ನು ನೋಡುತ್ತಾ ಕುಳಿತಿರುವುದನ್ನು ಕಾಣಬಹುದು.

ದಿ ವೈರ್ ಜೊತೆ ಮಾತನಾಡಿದ ಉಜ್ಜಯಿನಿಯ ಜಿಆರ್‌ಪಿ ಇನ್ಸ್‌ಪೆಕ್ಟರ್ ಆರ್.ಎಸ್. ಮಹಾಜನ್‌, ‘‘ಲವ್ ಜಿಹಾದ್ ಎಂದು ಶಂಕಿಸಿ ಜನವರಿ 14 ರಂದು ವಿಎಚ್‌ಪಿ ಕಾರ್ಯಕರ್ತರು ಇಬ್ಬರು ಪ್ರಯಾಣಿಕರನ್ನು ಕರೆತಂದರು, ಅವರನ್ನು ವಿಚಾರಿಸಿದಾಗ ಅದು ಸುಳ್ಳು ಎಂದು ತಿಳಿದುಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

ಅವರಿಬ್ಬರು ಒಟ್ಟಿಗೆ ಪ್ರಯಾಣಿಸುತ್ತಿರುವುದು ಅವರ ಕುಟುಂಬಗಳಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಅದಾಗಿಯು, ಅಸಿಫ್‌ ಮತ್ತು ಸಾಕ್ಷಿ ಅವರ ಪೋಷಕರು 65 ಕಿಮೀ ದೂರದ ಇಂದೋರ್‌ನಿಂದ ಉಜ್ಜಯಿನಿಗೆ ಬರುವವರೆಗೆ ಪೊಲೀಸ್ ಠಾಣೆಯಲ್ಲಿ ಅವರನ್ನು ಕಾಯುವಂತೆ ಮಾಡಲಾಯಿತು ಎಂದು ವೈರ್ ಉಲ್ಲೇಖಿಸಿದೆ.

ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಮತ್ತು ಪ್ರಯಾಣಿಕರನ್ನು ಎಳೆದೊಯ್ದು ಹಲ್ಲೆ ಮಾಡಿದ ವಿಎಚ್‌ಪಿ ದುಷ್ಕರ್ಮಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂಬ ವೈರ್‌ ಪ್ರಶ್ನೆಗೆ ಉತ್ತರಿಸಿದ ಪೊಲೀಸ್ ಅಧೀಕ್ಷಕ ನಿವೇದಿತಾ ಗುಪ್ತಾ, “ಉಜ್ಜಯಿನಿ ಘಟನೆಯಲ್ಲಿ ಪ್ರಯಾಣಿಕರೊಬ್ಬರನ್ನು ಅನುಚಿತವಾಗಿ ನಡೆಸಿಕೊಂಡ ಘಟನೆ ನಮಗೆ ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರವೇ ವಿಎಚ್‌ಪಿಯವರಿಗೆ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಪ್ರಶ್ನಿಸಿದಾಗ, ಇಬ್ಬರೂ ಪ್ರಯಾಣಿಕರು ಒಂದೇ ದಿನದಲ್ಲಿ ಬಿಡುಗಡೆಗೊಂಡು ಅಲ್ಲಿಂದ ತೆರಳಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ಆದರೆ ಅವರು ವಿಎಚ್‌ಪಿ ಕಾರ್ಯಕರ್ತರ ವಿರುದ್ಧ ಯಾವುದೇ ದೂರು ನೀಡಿಲ್ಲ” ಎಂದು ಹೇಳಿದ್ದಾರೆ.

ಈ ಮಧ್ಯೆ, ವಿಎಚ್‌ಪಿಯ ಮಾಲ್ವಾ ಪ್ರಾಂತ್‌ನ ಪ್ರಚಾರ್ ಪ್ರಮುಖ್ ಕುಂದನ್ ಚಂದ್ರಾಕರ್, “ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯನ್ನು ಆಮಿಷವೊಡ್ಡುತ್ತಿದ್ದಾನೆ ಮತ್ತು ಮದುವೆಗಾಗಿ ಅಜ್ಮೀರ್‌ಗೆ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ನಮ್ಮ ಮೂಲಗಳು ತಿಳಿಸಿವೆ. ‘ ಲವ್ ಜಿಹಾದ್ ’ ಎಂದು ಶಂಕಿಸಿ ನಮ್ಮ ಕಾರ್ಯಕರ್ತರು ಅವರನ್ನು ಹಿಡಿದು ಜಿಆರ್‌ಪಿ ಪೊಲೀಸ್ ಠಾಣೆಗೆ ಕರೆದೊಯ್ದು ಬಿಟ್ಟರು. ನಂತರ ಪೊಲೀಸರು ಏನು ಮಾಡಿದರು ಎಂಬುದು ನಮಗೆ ತಿಳಿದಿಲ್ಲ” ಎಂದು ತಿಳಿಸಿದ್ದಾರೆ.

ಯುವತಿಯು ಮುಸ್ಲಿಂ ಯುವಕನೊಂದಿಗೆ ಆಕರ್ಷಿತಳಾಗಿದ್ದಾಳೆ ಎಂದು ಅವರಿಗೆ ಹೇಗೆ ತಿಳಿಯಿತು ಎಂಬ ಪ್ರಶ್ನೆಗೆ, “ನಮ್ಮ ಹಿಂದೂ ಹೆಣ್ಣುಮಕ್ಕಳು ‘ಲವ್ ಜಿಹಾದ್’ ಮಾಡುವ ಮುಸ್ಲಿಂ ಪುರುಷರಿಂದ ಶೋಷಣೆಗೆ ಒಳಗಾಗುತ್ತಿರುವ ಬಗ್ಗೆ ಜನರು ಕಾಳಜಿ ವಹಿಸುವ ಸಮಾಜದಲ್ಲಿ ನಾವು ವಾಸಿಸುತ್ತಿದ್ದೇವೆ. ನಮ್ಮ ಸಹೋದರಿಯರ ಮೇಲಿನ ಕಾಳಜಿಯಿಂದ ನಮ್ಮ ಕಾರ್ಯಕರ್ತರು ಮಧ್ಯಪ್ರವೇಶಿಸಿದ್ದಾರೆ” ಎಂದು ಚಂದ್ರಾಕರ್‌‌ ತಿಳಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...