Homeಕರ್ನಾಟಕಸಾರಿಗೆ ಸಂಬಂಧ ಬಜೆಟ್‌ನಲ್ಲಿ ಸ್ಪಷ್ಟ ಉತ್ತರ ಸಿಕ್ಕಿಲ್ಲ; ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ

ಸಾರಿಗೆ ಸಂಬಂಧ ಬಜೆಟ್‌ನಲ್ಲಿ ಸ್ಪಷ್ಟ ಉತ್ತರ ಸಿಕ್ಕಿಲ್ಲ; ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ

- Advertisement -
- Advertisement -

ಈ ಬಜೆಟ್ ಬಸ್ ಪ್ರಯಾಣಿಕರಿಗೆ ಸ್ವಲ್ಪ ಸಿಹಿ ತಂದಿದೆಯಾದರೂ ಇನ್ನು ಹಲವಾರು ಪ್ರಶ್ನೆಗಳು, ಗೊಂದಲಗಳು ಹಾಗೆ ಉಳಿದಿದೆ ಎಂದು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಪ್ರತಿಕ್ರಿಯಿಸಿದೆ.

‘ಮಕ್ಕಳ ಬಸ್ ಯೋಜನೆ’ಯನ್ನು ನಾವು ಸ್ವಾಗತಿಸುತ್ತೇವೆ, ಅದರ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೆಚ್ಚುವರಿ ವೇಳಾಪಟ್ಟಿಗಳನ್ನು ರಾಜ್ಯಾದ್ಯಂತ ಕಾರ್ಯಗತಗೊಳಿಸಲಾಗುವುದು ಒಳ್ಳೆಯದು. ಕರ್ನಾಟಕದಾದ್ಯಂತ ಸಾರ್ವಜನಿಕ ಸಾರಿಗೆಯ ಕೊರತೆಯಿಂದಾಗಿ ಶಿಕ್ಷಣ ಪಡೆಯುವುದರಲ್ಲಿ ತೊಂದರೆಗಳಾಗಿವೆ ಎಂದು ಸರ್ಕಾರವು ಗುರುತಿಸಿರುವುದು ಒಳ್ಳೆಯದು. ಇದಕ್ಕಾಗಿ 100 ಕೋಟಿಗಳನ್ನು ನಿಗದಿಪಡಿಸಲಾಗಿದೆ. ಆದರೆ ಇದು ರಾಜ್ಯದಾದ್ಯಂತ ವಿದ್ಯಾರ್ಥಿಗಳ ಅಗತ್ಯಗಳನ್ನು ಪೂರೈಸಲು ಸಮರ್ಪಕವಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಹಿಳೆಯರಿಗೆ ಉಚಿತ ಬಸ್ ಯೋಜನೆ ಸರಿಯಾದ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ. ಆದಾಗ್ಯೂ, ಇದು ಇಡೀ ಕರ್ನಾಟಕಕ್ಕೆ ಇದ್ದರೆ, ಮೊತ್ತವು ಸಾಕಾಗುವುದಿಲ್ಲ. ಎರಡನೆಯದಾಗಿ, ಅಸಂಘಟಿತ ವಲಯದ ಮಹಿಳಾ ಕಾರ್ಮಿಕರು ಹೆಚ್ಚು ದುರ್ಬಲರಾಗಿದ್ದಾರೆ, ಆದ್ದರಿಂದ ಅಸಂಘಟಿತ ಮಹಿಳಾ ಕಾರ್ಮಿಕರನ್ನು ಯೋಜನೆಯಿಂದ ಏಕೆ ಹೊರಗಿಡಲಾಗಿದೆ ಎಂಬುದು ಗೊಂದಲದ ಸಂಗತಿಯಾಗಿದೆ ಎಂದು ತಿಳಿಸಿದೆ.

ಸರ್ಕಾರವು ವಿದ್ಯಾರ್ಥಿಗಳಿಗಾಗಿ ವಿದ್ಯಾವಾಹಿನಿ ಯೋಜನೆಯನ್ನು ತಂದಿರುವುದು ಒಳ್ಳೆಯದು. ಆದಾಗ್ಯೂ, ಇದು 8 ಲಕ್ಷ ವಿದ್ಯಾರ್ಥಿನಿಯರಿಗೆ ಸೀಮಿತವಾಗಿದೆ, ಇದು ಕರ್ನಾಟಕದ ವಿದ್ಯಾರ್ಥಿನಿಯರ ಸಂಖ್ಯೆಗಿಂತ ತೀರಾ ಕಡಿಮೆ. ನಮ್ಮ ಬೇಡಿಕೆಯಂತೆ ಈ ಯೋಜನೆ ಎಲ್ಲ ವಿದ್ಯಾರ್ಥಿಗಳಿಗೆ ಲಭ್ಯವಾಗಬೇಕು ಎಂದು ಆಗ್ರಹಿಸಿದೆ.

ಹೊಸ ಬಸ್‌ಗಳ ವಿಷಯದಲ್ಲಿ, ಆಯವ್ಯಯವು ಎಲ್ಲಾ 4 RTC ಗಳಿಗೆ 1200 ಬಸ್‌ಗಳಿಗೆ 500 ಕೋಟಿಗಳನ್ನು ನಿಗದಿಪಡಿಸಿದೆ. ಇದು ಎಲ್ಲಿಯೂ ಸಾಕಾಗುವುದಿಲ್ಲ. ನಾವು ಬಿಎಂಟಿಸಿಗೆ ಬರೋಬ್ಬರಿ 3000 ಬಸ್‌ಗಳ ಬೇಡಿಕೆ ಇಟ್ಟಿದ್ದೆವು. ಈಗ ಬಿಎಂಟಿಸಿಗೆ 300ಕ್ಕಿಂತ ಸ್ವಲ್ಪ ಹೆಚ್ಚು ಸಿಗಬಹುದು ಎಂದು ಹೇಳಿದೆ.

ಸರ್ಕಾರವು ಬಿಎಂಟಿಸಿಯಲ್ಲಿ ನೇಮಕಾತಿ ಸ್ಥಗಿತಗೊಳಿಸಿದೆ, ಅದು ನಿಗಮವನ್ನು ದುರ್ಬಲಗೊಳಿಸುತ್ತಿದೆ. ಕೆಲವು ಹೊಸ ಬಸ್‌ಗಳು ಬಂದರೂ ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಬಜೆಟ್ ಇಲ್ಲ. ಇದು ಮತ್ತೆ ಹೊರಗುತ್ತಿಗೆಗೆ ಕಾರಣವಾಗಬಹುದು ಮತ್ತು BMTC ಯನ್ನು ಮತ್ತಷ್ಟು ದುರ್ಬಲಗೊಳಿಸಬಹುದು ಎಂದು ಆತಂಕ ವ್ಯಕ್ತಪಡಿಸಿದೆ.

ನಾವು ಬೇಡಿಕೆ ಇಟ್ಟಿರುವಂತೆ ಸರ್ಕಾರವು ಕೆಲವು ಯೋಜನೆಗಳನ್ನು ಘೋಷಿಸಿದ್ದರೂ, ಜನರಿಗೆ ದೊಡ್ಡ ಪ್ರಮಾಣದಲ್ಲಿ ಅಥವಾ ಬಿಎಂಟಿಸಿಯನ್ನು ಸಮರ್ಪಕವಾಗಿ ಬೆಂಬಲಿಸಲು ಬಜೆಟ್‌ ಅನುದಾನ ಎಲ್ಲಿಯೂ ಸಾಕಾಗುವುದಿಲ್ಲ. ಬಿಎಂಟಿಸಿಯನ್ನು ದುರ್ಬಲಗೊಳಿಸಲಾಗುತ್ತಿದೆ. ಬೆಂಗಳೂರಿಗೆ ಅರ್ಹವಾದ, ಸದೃಢವಾದ, ಕೈಗಟುಕುವ ದರವಿರುವ ಬಸ್ ಸೇವೆಯನ್ನು ನಿರ್ಮಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿಲ್ಲ ಎಂದು ವೇದಿಕೆ ಕಳವಳ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...