Homeಮುಖಪುಟಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು. - ಸುಪ್ರೀಂ ಕೋರ್ಟ್

- Advertisement -
- Advertisement -

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂದು ಸೆಪ್ಟಂಬರ್ 30 ರಂದು ಸಿಬಿಐ ಕೋರ್ಟ್ ತೀರ್ಪು ನೀಡಿರುವುದು ಗೊತ್ತಿರುವ ವಿಚಾರ. ಆದರೆ ಏಕ್ ಧಕ್ಕಾ ಔರ್ ಧೋ-ಬಾಬ್ರಿ ಮಸ್ಜಿದ್ ಥೋಡ್ ದೋ ಎಂದು ಅದ್ವಾನಿಯಾದಿಯಾಗಿ ಎಲ್ಲಾ ಆರೋಪಿಗಳು ದೇಶಾದ್ಯಂತ ಪ್ರಚೋದನಾತ್ಮಕ ಭಾಷಣ ಮಾಡಿ ಮಸೀದಿಯನ್ನು ಬೀಳಿಸಲೆಂದೇ ಅಯೋಧ್ಯೆಗೆ ಕರಸೇವಕರನ್ನು ಕರೆತಂದದ್ದು ಜಗತ್ತಿಗೇ ಗೊತ್ತಿತ್ತು. ಹಾಗಿದ್ದರೂ ನ್ಯಾಯಾಧೀಶರು ಯಾವ ನ್ಯಾಯ-ನೀತಿ-ತರ್ಕ-ಸಾಕ್ಶ್ಯ-ಆಧಾರಗಳ ಮೇಲೆ ಇವರನ್ನೆಲ್ಲಾ ಬಿಡುಗಡೆ ಮಾಡಿದರು?

ನ್ಯಾಯಾಧೀಶ ಯಾದವ್ ಅವರ ತೀರ್ಪು 2300 ಪುಟಗಳಷ್ಟಿದೆ ಮತ್ತು ಹಿಂದಿಯಲ್ಲಿದೆ. ನ್ಯಾಯಾಧೀಶ ಯಾದವ್ ಅವರು ತಮ್ಮ ಅಂತಿಮ ತೀರ್ಪಿಗೆ ಕೊಟ್ಟಿರುವ 10 ಪ್ರಮುಖ ಕಾರಣಗಳನ್ನು ದೆಹಲಿ ವಿಶ್ವವಿದ್ಯಾಲಯದ ಹಿಂದಿ ಪ್ರೊಫೆಸರ್ ಆಗಿರುವ ಅಪೂರ್ವಾನಂದ್ ಅವರು The Wire ಪತ್ರಿಕೆಗಾಗಿ ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. ಅದನ್ನು ಚಿಂತಕ ಶಿವಸುಂದರ್ ಕನ್ನಡೀಕರಿಸಿದ್ದಾರೆ ಅದರ ಕನ್ನಡಾನುವಾದ ಇಲ್ಲಿದೆ.

1. ಲಾಲ್ ಕೃಷ್ಣ ಅದ್ವಾನಿಯವರು ಬಾಬ್ರಿ ಮಸೀದಿ ನಾಶದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅವರು ಈ ಅಪರಾಧದಲ್ಲಿ ಪಾಲುದಾರರಾಗಿರಲು ಸಾಧ್ಯವೇ ಇಲ್ಲ. ಹಾಗೂ ಅವರ ವ್ಯಕ್ತಪಡಿಸಿದ ದುಃಖದ ಬಗ್ಗೆ ಇತರ ಸಹ ಆರೋಪಿಗಳೂ ಕೂಡಾ ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಿಲ್ಲ. (ಅಂದರೆ ಉಳಿದ ಆರೋಪಿಗಳೂ ಈ ದುಃಖದಲ್ಲಿ ಭಾಗಿಯಾಗಿದ್ದಾರೆಂಬ ತಾತ್ಪರ್ಯವಾಗುವುದರಿಂದ ಅವರುಗಳೂ ಕೂಡಾ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ!)

2. ಆಗ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರು ಅಯೋಧ್ಯೆಯಲ್ಲಿ ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಾಗುವುದು ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರಿಂದ ಅವರು ಈ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವೇ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಅವರು ಸ್ಥಳದಲ್ಲಿ ಬೇರೆ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಯಾವ ಮಾತುಗಳನ್ನೂ ಆಡಿಲ್ಲ.

3. ಘಟನೆ ನಡೆದ ಸ್ಥಳದಲ್ಲಿ ಅಸಂಖ್ಯಾತ ಜನರು ಸೇರಿದ್ದರಿಂದ ಮತ್ತು ಅವರನ್ನು ಚದುರಿಸಲು ಪ್ರಯತ್ನಿಸಿದ್ದರೆ ಅಸಂಖ್ಯಾತ ಜನರು ಸಾವು-ನೋವುಗಳಿಗೆ ಗುರಿಯಾಗುವ ಸಾಧ್ಯತೆಯೂ ಇದ್ದಿದ್ದರಿಂದ ಜನರನ್ನು ನಿಯಂತ್ರಣ ಮಾಡದಿರುವುದಕ್ಕೆ ಯಾರನ್ನೂ ದೂರಲೂ ಸಾಧ್ಯವಿಲ್ಲ. ಅಲ್ಲದೆ ಮಹಿಳಾ ಕರಸೇವಕರು ರಾಸ್ತಾ ರೋಖೋ ಮಾಡುತ್ತಿದ್ದರಿಂದ ಹೆಚ್ಚುವರಿ ಪೊಲೀಸರು ಸ್ಥಳವನ್ನು ತಲುಪಲಾಗಲಿಲ್ಲ.

4. ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು.

5. ಆಡಳಿತ ವ್ಯವಸ್ಥೆಗೆ ಮತ್ತು ಪೊಲೀಸರಿಗೆ ಆ ಕಟ್ಟಡದ ಭದ್ರತೆಯನ್ನು ನೋಡಿಕೊಳ್ಳುವುದರ ಜೊತೆಗೆ ಇನ್ನೂ ಎಷ್ಟೋ ಬೇರೆ ಕೆಲಸಗಳಿದ್ದವು.

6. ವಿವಾದಿತ ಸ್ಥಳದಲ್ಲಿ ಇತರ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಥವಾ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಬರುವ ಯಾವ ಕೃತ್ಯಗಳೂ ಜರುಗಿಲ್ಲ. ಅಯೋಧ್ಯಾದ ಮುಸ್ಲಿಮರಿಗೆ ಕರಸೇವೆಯಿಂದ ಯಾವುದೇ ಭೀತಿಯುಂಟಾಗಿರಲಿಲ್ಲ. ಅದರ ಬಗ್ಗೆ ಅವರಿಗೆ ನಿರಾಸಕ್ತ ಭಾವನೆಯೇ ಇದ್ದಿತು. ಅಲ್ಲದೇ ಒಬ್ಬ ಹಿಂದೂ ಮಹಿಳೆಯು ಮುಸ್ಲಿಂ ಪುರುಷನನ್ನು ರಕ್ಷಿಸಿದ ವಿಷಯವು ದಾಖಲಾಗಿರುವುದರಿಂದ ಅಯೋಧ್ಯೆಯಲ್ಲಿ ಖಂಡಿತವಾದ ಕೋಮು ಸೌಹಾರ್ದವಿತ್ತು ಎಂಬ ನಿರ್ಣಯಕ್ಕೆ ನಿಶ್ಚಿತವಾಗಿ ಬರಬಹುದು.

7. ಬಿಜೆಪಿ ನಾಯಕರು ಬಾಬರ್ ಮತ್ತು ಔರಂಗಜೇಬ್‌ಗಳಂತಾಗ ಬಯಸುವವರ ವಿರುದ್ಧವಿದ್ದಾರೆಯೇ ವಿನಾ ಇಡೀ ಮುಸ್ಲಿಂ ಸಮುದಾಯದ ವಿರುದ್ಧವಲ್ಲ.

8. ಒಂದೆಡೆ ಕರಸೇವಕರು ಕರಸೇವೆಯ ಬಗ್ಗೆ ಅತ್ಯುತ್ಸಾಹದಲ್ಲಿದ್ದರೆ ಕೆಲವು ಮುಸ್ಲಿಮ್ ಪುಂಡರು ಗೋರಿಗಳಿಗೆ ಹಾನಿ ಮಾಡಿ ಕೋಮುದ್ವೇಷ ಹುಟ್ಟಿಸುವ ಪ್ರಯತ್ನ ಮಾಡಿದ್ದರು.

9. ಸುಪ್ರೀಂ ಕೋರ್ಟನ್ನು ಎಲ್ಲರೂ ಗೌರವಿಸುತ್ತಾರೆ ಮತ್ತು ಅದರ ಆದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಹಾಗಿರುವಾಗ ಸುಪ್ರಿಂಕೋರ್ಟೇ ವಿವಾದಿತ ಸ್ಥಳದಲ್ಲಿ ಯಥಾಸ್ಥಿತಿ ಕಾಪಾಡಬೇಕೆಂದು ಆದೇಶ ನೀಡಿದ್ದಾಗ ಅದರ ವಿರುದ್ಧ ಯಾರೂ ನಡೆಯಬಯಸಲು ಸಾಧ್ಯವೇ ಇಲ್ಲ.

10. ಆ ಕಟ್ಟಡಕ್ಕೆ ಹಾನಿಯುಂಟಾಗುತ್ತದೆಂಬುದನ್ನಾಗಲೀ ಅಥವಾ ನೆಲಸಮ ಮಾಡಲಾಗುತ್ತದೆಂಬುದನ್ನಾಗಲೀ ಯಾರೂ ನಿರೀಕ್ಷಿಸಿರಲು ಸಾಧ್ಯವಿರಲಿಲ್ಲ. ಅದೇನೇ ಇದ್ದರೂ ಆ ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡುತ್ತಿದ್ದ ಬಗ್ಗೆಯೂ ಯಾವುದೇ ಸಾಕ್ಷಿ ಇಲ್ಲ.

ಕೃಪೆ: ಶಿವಸುಂದರ್


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...