Homeಮುಖಪುಟಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು. - ಸುಪ್ರೀಂ ಕೋರ್ಟ್

- Advertisement -
- Advertisement -

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂದು ಸೆಪ್ಟಂಬರ್ 30 ರಂದು ಸಿಬಿಐ ಕೋರ್ಟ್ ತೀರ್ಪು ನೀಡಿರುವುದು ಗೊತ್ತಿರುವ ವಿಚಾರ. ಆದರೆ ಏಕ್ ಧಕ್ಕಾ ಔರ್ ಧೋ-ಬಾಬ್ರಿ ಮಸ್ಜಿದ್ ಥೋಡ್ ದೋ ಎಂದು ಅದ್ವಾನಿಯಾದಿಯಾಗಿ ಎಲ್ಲಾ ಆರೋಪಿಗಳು ದೇಶಾದ್ಯಂತ ಪ್ರಚೋದನಾತ್ಮಕ ಭಾಷಣ ಮಾಡಿ ಮಸೀದಿಯನ್ನು ಬೀಳಿಸಲೆಂದೇ ಅಯೋಧ್ಯೆಗೆ ಕರಸೇವಕರನ್ನು ಕರೆತಂದದ್ದು ಜಗತ್ತಿಗೇ ಗೊತ್ತಿತ್ತು. ಹಾಗಿದ್ದರೂ ನ್ಯಾಯಾಧೀಶರು ಯಾವ ನ್ಯಾಯ-ನೀತಿ-ತರ್ಕ-ಸಾಕ್ಶ್ಯ-ಆಧಾರಗಳ ಮೇಲೆ ಇವರನ್ನೆಲ್ಲಾ ಬಿಡುಗಡೆ ಮಾಡಿದರು?

ನ್ಯಾಯಾಧೀಶ ಯಾದವ್ ಅವರ ತೀರ್ಪು 2300 ಪುಟಗಳಷ್ಟಿದೆ ಮತ್ತು ಹಿಂದಿಯಲ್ಲಿದೆ. ನ್ಯಾಯಾಧೀಶ ಯಾದವ್ ಅವರು ತಮ್ಮ ಅಂತಿಮ ತೀರ್ಪಿಗೆ ಕೊಟ್ಟಿರುವ 10 ಪ್ರಮುಖ ಕಾರಣಗಳನ್ನು ದೆಹಲಿ ವಿಶ್ವವಿದ್ಯಾಲಯದ ಹಿಂದಿ ಪ್ರೊಫೆಸರ್ ಆಗಿರುವ ಅಪೂರ್ವಾನಂದ್ ಅವರು The Wire ಪತ್ರಿಕೆಗಾಗಿ ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. ಅದನ್ನು ಚಿಂತಕ ಶಿವಸುಂದರ್ ಕನ್ನಡೀಕರಿಸಿದ್ದಾರೆ ಅದರ ಕನ್ನಡಾನುವಾದ ಇಲ್ಲಿದೆ.

1. ಲಾಲ್ ಕೃಷ್ಣ ಅದ್ವಾನಿಯವರು ಬಾಬ್ರಿ ಮಸೀದಿ ನಾಶದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅವರು ಈ ಅಪರಾಧದಲ್ಲಿ ಪಾಲುದಾರರಾಗಿರಲು ಸಾಧ್ಯವೇ ಇಲ್ಲ. ಹಾಗೂ ಅವರ ವ್ಯಕ್ತಪಡಿಸಿದ ದುಃಖದ ಬಗ್ಗೆ ಇತರ ಸಹ ಆರೋಪಿಗಳೂ ಕೂಡಾ ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಿಲ್ಲ. (ಅಂದರೆ ಉಳಿದ ಆರೋಪಿಗಳೂ ಈ ದುಃಖದಲ್ಲಿ ಭಾಗಿಯಾಗಿದ್ದಾರೆಂಬ ತಾತ್ಪರ್ಯವಾಗುವುದರಿಂದ ಅವರುಗಳೂ ಕೂಡಾ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ!)

2. ಆಗ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರು ಅಯೋಧ್ಯೆಯಲ್ಲಿ ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಾಗುವುದು ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರಿಂದ ಅವರು ಈ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವೇ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಅವರು ಸ್ಥಳದಲ್ಲಿ ಬೇರೆ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಯಾವ ಮಾತುಗಳನ್ನೂ ಆಡಿಲ್ಲ.

3. ಘಟನೆ ನಡೆದ ಸ್ಥಳದಲ್ಲಿ ಅಸಂಖ್ಯಾತ ಜನರು ಸೇರಿದ್ದರಿಂದ ಮತ್ತು ಅವರನ್ನು ಚದುರಿಸಲು ಪ್ರಯತ್ನಿಸಿದ್ದರೆ ಅಸಂಖ್ಯಾತ ಜನರು ಸಾವು-ನೋವುಗಳಿಗೆ ಗುರಿಯಾಗುವ ಸಾಧ್ಯತೆಯೂ ಇದ್ದಿದ್ದರಿಂದ ಜನರನ್ನು ನಿಯಂತ್ರಣ ಮಾಡದಿರುವುದಕ್ಕೆ ಯಾರನ್ನೂ ದೂರಲೂ ಸಾಧ್ಯವಿಲ್ಲ. ಅಲ್ಲದೆ ಮಹಿಳಾ ಕರಸೇವಕರು ರಾಸ್ತಾ ರೋಖೋ ಮಾಡುತ್ತಿದ್ದರಿಂದ ಹೆಚ್ಚುವರಿ ಪೊಲೀಸರು ಸ್ಥಳವನ್ನು ತಲುಪಲಾಗಲಿಲ್ಲ.

4. ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು.

5. ಆಡಳಿತ ವ್ಯವಸ್ಥೆಗೆ ಮತ್ತು ಪೊಲೀಸರಿಗೆ ಆ ಕಟ್ಟಡದ ಭದ್ರತೆಯನ್ನು ನೋಡಿಕೊಳ್ಳುವುದರ ಜೊತೆಗೆ ಇನ್ನೂ ಎಷ್ಟೋ ಬೇರೆ ಕೆಲಸಗಳಿದ್ದವು.

6. ವಿವಾದಿತ ಸ್ಥಳದಲ್ಲಿ ಇತರ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಥವಾ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಬರುವ ಯಾವ ಕೃತ್ಯಗಳೂ ಜರುಗಿಲ್ಲ. ಅಯೋಧ್ಯಾದ ಮುಸ್ಲಿಮರಿಗೆ ಕರಸೇವೆಯಿಂದ ಯಾವುದೇ ಭೀತಿಯುಂಟಾಗಿರಲಿಲ್ಲ. ಅದರ ಬಗ್ಗೆ ಅವರಿಗೆ ನಿರಾಸಕ್ತ ಭಾವನೆಯೇ ಇದ್ದಿತು. ಅಲ್ಲದೇ ಒಬ್ಬ ಹಿಂದೂ ಮಹಿಳೆಯು ಮುಸ್ಲಿಂ ಪುರುಷನನ್ನು ರಕ್ಷಿಸಿದ ವಿಷಯವು ದಾಖಲಾಗಿರುವುದರಿಂದ ಅಯೋಧ್ಯೆಯಲ್ಲಿ ಖಂಡಿತವಾದ ಕೋಮು ಸೌಹಾರ್ದವಿತ್ತು ಎಂಬ ನಿರ್ಣಯಕ್ಕೆ ನಿಶ್ಚಿತವಾಗಿ ಬರಬಹುದು.

7. ಬಿಜೆಪಿ ನಾಯಕರು ಬಾಬರ್ ಮತ್ತು ಔರಂಗಜೇಬ್‌ಗಳಂತಾಗ ಬಯಸುವವರ ವಿರುದ್ಧವಿದ್ದಾರೆಯೇ ವಿನಾ ಇಡೀ ಮುಸ್ಲಿಂ ಸಮುದಾಯದ ವಿರುದ್ಧವಲ್ಲ.

8. ಒಂದೆಡೆ ಕರಸೇವಕರು ಕರಸೇವೆಯ ಬಗ್ಗೆ ಅತ್ಯುತ್ಸಾಹದಲ್ಲಿದ್ದರೆ ಕೆಲವು ಮುಸ್ಲಿಮ್ ಪುಂಡರು ಗೋರಿಗಳಿಗೆ ಹಾನಿ ಮಾಡಿ ಕೋಮುದ್ವೇಷ ಹುಟ್ಟಿಸುವ ಪ್ರಯತ್ನ ಮಾಡಿದ್ದರು.

9. ಸುಪ್ರೀಂ ಕೋರ್ಟನ್ನು ಎಲ್ಲರೂ ಗೌರವಿಸುತ್ತಾರೆ ಮತ್ತು ಅದರ ಆದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಹಾಗಿರುವಾಗ ಸುಪ್ರಿಂಕೋರ್ಟೇ ವಿವಾದಿತ ಸ್ಥಳದಲ್ಲಿ ಯಥಾಸ್ಥಿತಿ ಕಾಪಾಡಬೇಕೆಂದು ಆದೇಶ ನೀಡಿದ್ದಾಗ ಅದರ ವಿರುದ್ಧ ಯಾರೂ ನಡೆಯಬಯಸಲು ಸಾಧ್ಯವೇ ಇಲ್ಲ.

10. ಆ ಕಟ್ಟಡಕ್ಕೆ ಹಾನಿಯುಂಟಾಗುತ್ತದೆಂಬುದನ್ನಾಗಲೀ ಅಥವಾ ನೆಲಸಮ ಮಾಡಲಾಗುತ್ತದೆಂಬುದನ್ನಾಗಲೀ ಯಾರೂ ನಿರೀಕ್ಷಿಸಿರಲು ಸಾಧ್ಯವಿರಲಿಲ್ಲ. ಅದೇನೇ ಇದ್ದರೂ ಆ ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡುತ್ತಿದ್ದ ಬಗ್ಗೆಯೂ ಯಾವುದೇ ಸಾಕ್ಷಿ ಇಲ್ಲ.

ಕೃಪೆ: ಶಿವಸುಂದರ್


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...