Homeಮುಖಪುಟಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು. - ಸುಪ್ರೀಂ ಕೋರ್ಟ್

- Advertisement -
- Advertisement -

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂದು ಸೆಪ್ಟಂಬರ್ 30 ರಂದು ಸಿಬಿಐ ಕೋರ್ಟ್ ತೀರ್ಪು ನೀಡಿರುವುದು ಗೊತ್ತಿರುವ ವಿಚಾರ. ಆದರೆ ಏಕ್ ಧಕ್ಕಾ ಔರ್ ಧೋ-ಬಾಬ್ರಿ ಮಸ್ಜಿದ್ ಥೋಡ್ ದೋ ಎಂದು ಅದ್ವಾನಿಯಾದಿಯಾಗಿ ಎಲ್ಲಾ ಆರೋಪಿಗಳು ದೇಶಾದ್ಯಂತ ಪ್ರಚೋದನಾತ್ಮಕ ಭಾಷಣ ಮಾಡಿ ಮಸೀದಿಯನ್ನು ಬೀಳಿಸಲೆಂದೇ ಅಯೋಧ್ಯೆಗೆ ಕರಸೇವಕರನ್ನು ಕರೆತಂದದ್ದು ಜಗತ್ತಿಗೇ ಗೊತ್ತಿತ್ತು. ಹಾಗಿದ್ದರೂ ನ್ಯಾಯಾಧೀಶರು ಯಾವ ನ್ಯಾಯ-ನೀತಿ-ತರ್ಕ-ಸಾಕ್ಶ್ಯ-ಆಧಾರಗಳ ಮೇಲೆ ಇವರನ್ನೆಲ್ಲಾ ಬಿಡುಗಡೆ ಮಾಡಿದರು?

ನ್ಯಾಯಾಧೀಶ ಯಾದವ್ ಅವರ ತೀರ್ಪು 2300 ಪುಟಗಳಷ್ಟಿದೆ ಮತ್ತು ಹಿಂದಿಯಲ್ಲಿದೆ. ನ್ಯಾಯಾಧೀಶ ಯಾದವ್ ಅವರು ತಮ್ಮ ಅಂತಿಮ ತೀರ್ಪಿಗೆ ಕೊಟ್ಟಿರುವ 10 ಪ್ರಮುಖ ಕಾರಣಗಳನ್ನು ದೆಹಲಿ ವಿಶ್ವವಿದ್ಯಾಲಯದ ಹಿಂದಿ ಪ್ರೊಫೆಸರ್ ಆಗಿರುವ ಅಪೂರ್ವಾನಂದ್ ಅವರು The Wire ಪತ್ರಿಕೆಗಾಗಿ ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. ಅದನ್ನು ಚಿಂತಕ ಶಿವಸುಂದರ್ ಕನ್ನಡೀಕರಿಸಿದ್ದಾರೆ ಅದರ ಕನ್ನಡಾನುವಾದ ಇಲ್ಲಿದೆ.

1. ಲಾಲ್ ಕೃಷ್ಣ ಅದ್ವಾನಿಯವರು ಬಾಬ್ರಿ ಮಸೀದಿ ನಾಶದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅವರು ಈ ಅಪರಾಧದಲ್ಲಿ ಪಾಲುದಾರರಾಗಿರಲು ಸಾಧ್ಯವೇ ಇಲ್ಲ. ಹಾಗೂ ಅವರ ವ್ಯಕ್ತಪಡಿಸಿದ ದುಃಖದ ಬಗ್ಗೆ ಇತರ ಸಹ ಆರೋಪಿಗಳೂ ಕೂಡಾ ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಿಲ್ಲ. (ಅಂದರೆ ಉಳಿದ ಆರೋಪಿಗಳೂ ಈ ದುಃಖದಲ್ಲಿ ಭಾಗಿಯಾಗಿದ್ದಾರೆಂಬ ತಾತ್ಪರ್ಯವಾಗುವುದರಿಂದ ಅವರುಗಳೂ ಕೂಡಾ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ!)

2. ಆಗ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರು ಅಯೋಧ್ಯೆಯಲ್ಲಿ ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಾಗುವುದು ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರಿಂದ ಅವರು ಈ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವೇ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಅವರು ಸ್ಥಳದಲ್ಲಿ ಬೇರೆ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಯಾವ ಮಾತುಗಳನ್ನೂ ಆಡಿಲ್ಲ.

3. ಘಟನೆ ನಡೆದ ಸ್ಥಳದಲ್ಲಿ ಅಸಂಖ್ಯಾತ ಜನರು ಸೇರಿದ್ದರಿಂದ ಮತ್ತು ಅವರನ್ನು ಚದುರಿಸಲು ಪ್ರಯತ್ನಿಸಿದ್ದರೆ ಅಸಂಖ್ಯಾತ ಜನರು ಸಾವು-ನೋವುಗಳಿಗೆ ಗುರಿಯಾಗುವ ಸಾಧ್ಯತೆಯೂ ಇದ್ದಿದ್ದರಿಂದ ಜನರನ್ನು ನಿಯಂತ್ರಣ ಮಾಡದಿರುವುದಕ್ಕೆ ಯಾರನ್ನೂ ದೂರಲೂ ಸಾಧ್ಯವಿಲ್ಲ. ಅಲ್ಲದೆ ಮಹಿಳಾ ಕರಸೇವಕರು ರಾಸ್ತಾ ರೋಖೋ ಮಾಡುತ್ತಿದ್ದರಿಂದ ಹೆಚ್ಚುವರಿ ಪೊಲೀಸರು ಸ್ಥಳವನ್ನು ತಲುಪಲಾಗಲಿಲ್ಲ.

4. ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು.

5. ಆಡಳಿತ ವ್ಯವಸ್ಥೆಗೆ ಮತ್ತು ಪೊಲೀಸರಿಗೆ ಆ ಕಟ್ಟಡದ ಭದ್ರತೆಯನ್ನು ನೋಡಿಕೊಳ್ಳುವುದರ ಜೊತೆಗೆ ಇನ್ನೂ ಎಷ್ಟೋ ಬೇರೆ ಕೆಲಸಗಳಿದ್ದವು.

6. ವಿವಾದಿತ ಸ್ಥಳದಲ್ಲಿ ಇತರ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಥವಾ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಬರುವ ಯಾವ ಕೃತ್ಯಗಳೂ ಜರುಗಿಲ್ಲ. ಅಯೋಧ್ಯಾದ ಮುಸ್ಲಿಮರಿಗೆ ಕರಸೇವೆಯಿಂದ ಯಾವುದೇ ಭೀತಿಯುಂಟಾಗಿರಲಿಲ್ಲ. ಅದರ ಬಗ್ಗೆ ಅವರಿಗೆ ನಿರಾಸಕ್ತ ಭಾವನೆಯೇ ಇದ್ದಿತು. ಅಲ್ಲದೇ ಒಬ್ಬ ಹಿಂದೂ ಮಹಿಳೆಯು ಮುಸ್ಲಿಂ ಪುರುಷನನ್ನು ರಕ್ಷಿಸಿದ ವಿಷಯವು ದಾಖಲಾಗಿರುವುದರಿಂದ ಅಯೋಧ್ಯೆಯಲ್ಲಿ ಖಂಡಿತವಾದ ಕೋಮು ಸೌಹಾರ್ದವಿತ್ತು ಎಂಬ ನಿರ್ಣಯಕ್ಕೆ ನಿಶ್ಚಿತವಾಗಿ ಬರಬಹುದು.

7. ಬಿಜೆಪಿ ನಾಯಕರು ಬಾಬರ್ ಮತ್ತು ಔರಂಗಜೇಬ್‌ಗಳಂತಾಗ ಬಯಸುವವರ ವಿರುದ್ಧವಿದ್ದಾರೆಯೇ ವಿನಾ ಇಡೀ ಮುಸ್ಲಿಂ ಸಮುದಾಯದ ವಿರುದ್ಧವಲ್ಲ.

8. ಒಂದೆಡೆ ಕರಸೇವಕರು ಕರಸೇವೆಯ ಬಗ್ಗೆ ಅತ್ಯುತ್ಸಾಹದಲ್ಲಿದ್ದರೆ ಕೆಲವು ಮುಸ್ಲಿಮ್ ಪುಂಡರು ಗೋರಿಗಳಿಗೆ ಹಾನಿ ಮಾಡಿ ಕೋಮುದ್ವೇಷ ಹುಟ್ಟಿಸುವ ಪ್ರಯತ್ನ ಮಾಡಿದ್ದರು.

9. ಸುಪ್ರೀಂ ಕೋರ್ಟನ್ನು ಎಲ್ಲರೂ ಗೌರವಿಸುತ್ತಾರೆ ಮತ್ತು ಅದರ ಆದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಹಾಗಿರುವಾಗ ಸುಪ್ರಿಂಕೋರ್ಟೇ ವಿವಾದಿತ ಸ್ಥಳದಲ್ಲಿ ಯಥಾಸ್ಥಿತಿ ಕಾಪಾಡಬೇಕೆಂದು ಆದೇಶ ನೀಡಿದ್ದಾಗ ಅದರ ವಿರುದ್ಧ ಯಾರೂ ನಡೆಯಬಯಸಲು ಸಾಧ್ಯವೇ ಇಲ್ಲ.

10. ಆ ಕಟ್ಟಡಕ್ಕೆ ಹಾನಿಯುಂಟಾಗುತ್ತದೆಂಬುದನ್ನಾಗಲೀ ಅಥವಾ ನೆಲಸಮ ಮಾಡಲಾಗುತ್ತದೆಂಬುದನ್ನಾಗಲೀ ಯಾರೂ ನಿರೀಕ್ಷಿಸಿರಲು ಸಾಧ್ಯವಿರಲಿಲ್ಲ. ಅದೇನೇ ಇದ್ದರೂ ಆ ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡುತ್ತಿದ್ದ ಬಗ್ಗೆಯೂ ಯಾವುದೇ ಸಾಕ್ಷಿ ಇಲ್ಲ.

ಕೃಪೆ: ಶಿವಸುಂದರ್


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...