Homeಮುಖಪುಟಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು. - ಸುಪ್ರೀಂ ಕೋರ್ಟ್

- Advertisement -
- Advertisement -

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂದು ಸೆಪ್ಟಂಬರ್ 30 ರಂದು ಸಿಬಿಐ ಕೋರ್ಟ್ ತೀರ್ಪು ನೀಡಿರುವುದು ಗೊತ್ತಿರುವ ವಿಚಾರ. ಆದರೆ ಏಕ್ ಧಕ್ಕಾ ಔರ್ ಧೋ-ಬಾಬ್ರಿ ಮಸ್ಜಿದ್ ಥೋಡ್ ದೋ ಎಂದು ಅದ್ವಾನಿಯಾದಿಯಾಗಿ ಎಲ್ಲಾ ಆರೋಪಿಗಳು ದೇಶಾದ್ಯಂತ ಪ್ರಚೋದನಾತ್ಮಕ ಭಾಷಣ ಮಾಡಿ ಮಸೀದಿಯನ್ನು ಬೀಳಿಸಲೆಂದೇ ಅಯೋಧ್ಯೆಗೆ ಕರಸೇವಕರನ್ನು ಕರೆತಂದದ್ದು ಜಗತ್ತಿಗೇ ಗೊತ್ತಿತ್ತು. ಹಾಗಿದ್ದರೂ ನ್ಯಾಯಾಧೀಶರು ಯಾವ ನ್ಯಾಯ-ನೀತಿ-ತರ್ಕ-ಸಾಕ್ಶ್ಯ-ಆಧಾರಗಳ ಮೇಲೆ ಇವರನ್ನೆಲ್ಲಾ ಬಿಡುಗಡೆ ಮಾಡಿದರು?

ನ್ಯಾಯಾಧೀಶ ಯಾದವ್ ಅವರ ತೀರ್ಪು 2300 ಪುಟಗಳಷ್ಟಿದೆ ಮತ್ತು ಹಿಂದಿಯಲ್ಲಿದೆ. ನ್ಯಾಯಾಧೀಶ ಯಾದವ್ ಅವರು ತಮ್ಮ ಅಂತಿಮ ತೀರ್ಪಿಗೆ ಕೊಟ್ಟಿರುವ 10 ಪ್ರಮುಖ ಕಾರಣಗಳನ್ನು ದೆಹಲಿ ವಿಶ್ವವಿದ್ಯಾಲಯದ ಹಿಂದಿ ಪ್ರೊಫೆಸರ್ ಆಗಿರುವ ಅಪೂರ್ವಾನಂದ್ ಅವರು The Wire ಪತ್ರಿಕೆಗಾಗಿ ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. ಅದನ್ನು ಚಿಂತಕ ಶಿವಸುಂದರ್ ಕನ್ನಡೀಕರಿಸಿದ್ದಾರೆ ಅದರ ಕನ್ನಡಾನುವಾದ ಇಲ್ಲಿದೆ.

1. ಲಾಲ್ ಕೃಷ್ಣ ಅದ್ವಾನಿಯವರು ಬಾಬ್ರಿ ಮಸೀದಿ ನಾಶದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅವರು ಈ ಅಪರಾಧದಲ್ಲಿ ಪಾಲುದಾರರಾಗಿರಲು ಸಾಧ್ಯವೇ ಇಲ್ಲ. ಹಾಗೂ ಅವರ ವ್ಯಕ್ತಪಡಿಸಿದ ದುಃಖದ ಬಗ್ಗೆ ಇತರ ಸಹ ಆರೋಪಿಗಳೂ ಕೂಡಾ ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಿಲ್ಲ. (ಅಂದರೆ ಉಳಿದ ಆರೋಪಿಗಳೂ ಈ ದುಃಖದಲ್ಲಿ ಭಾಗಿಯಾಗಿದ್ದಾರೆಂಬ ತಾತ್ಪರ್ಯವಾಗುವುದರಿಂದ ಅವರುಗಳೂ ಕೂಡಾ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ!)

2. ಆಗ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರು ಅಯೋಧ್ಯೆಯಲ್ಲಿ ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಾಗುವುದು ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರಿಂದ ಅವರು ಈ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವೇ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಅವರು ಸ್ಥಳದಲ್ಲಿ ಬೇರೆ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಯಾವ ಮಾತುಗಳನ್ನೂ ಆಡಿಲ್ಲ.

3. ಘಟನೆ ನಡೆದ ಸ್ಥಳದಲ್ಲಿ ಅಸಂಖ್ಯಾತ ಜನರು ಸೇರಿದ್ದರಿಂದ ಮತ್ತು ಅವರನ್ನು ಚದುರಿಸಲು ಪ್ರಯತ್ನಿಸಿದ್ದರೆ ಅಸಂಖ್ಯಾತ ಜನರು ಸಾವು-ನೋವುಗಳಿಗೆ ಗುರಿಯಾಗುವ ಸಾಧ್ಯತೆಯೂ ಇದ್ದಿದ್ದರಿಂದ ಜನರನ್ನು ನಿಯಂತ್ರಣ ಮಾಡದಿರುವುದಕ್ಕೆ ಯಾರನ್ನೂ ದೂರಲೂ ಸಾಧ್ಯವಿಲ್ಲ. ಅಲ್ಲದೆ ಮಹಿಳಾ ಕರಸೇವಕರು ರಾಸ್ತಾ ರೋಖೋ ಮಾಡುತ್ತಿದ್ದರಿಂದ ಹೆಚ್ಚುವರಿ ಪೊಲೀಸರು ಸ್ಥಳವನ್ನು ತಲುಪಲಾಗಲಿಲ್ಲ.

4. ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು.

5. ಆಡಳಿತ ವ್ಯವಸ್ಥೆಗೆ ಮತ್ತು ಪೊಲೀಸರಿಗೆ ಆ ಕಟ್ಟಡದ ಭದ್ರತೆಯನ್ನು ನೋಡಿಕೊಳ್ಳುವುದರ ಜೊತೆಗೆ ಇನ್ನೂ ಎಷ್ಟೋ ಬೇರೆ ಕೆಲಸಗಳಿದ್ದವು.

6. ವಿವಾದಿತ ಸ್ಥಳದಲ್ಲಿ ಇತರ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಥವಾ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಬರುವ ಯಾವ ಕೃತ್ಯಗಳೂ ಜರುಗಿಲ್ಲ. ಅಯೋಧ್ಯಾದ ಮುಸ್ಲಿಮರಿಗೆ ಕರಸೇವೆಯಿಂದ ಯಾವುದೇ ಭೀತಿಯುಂಟಾಗಿರಲಿಲ್ಲ. ಅದರ ಬಗ್ಗೆ ಅವರಿಗೆ ನಿರಾಸಕ್ತ ಭಾವನೆಯೇ ಇದ್ದಿತು. ಅಲ್ಲದೇ ಒಬ್ಬ ಹಿಂದೂ ಮಹಿಳೆಯು ಮುಸ್ಲಿಂ ಪುರುಷನನ್ನು ರಕ್ಷಿಸಿದ ವಿಷಯವು ದಾಖಲಾಗಿರುವುದರಿಂದ ಅಯೋಧ್ಯೆಯಲ್ಲಿ ಖಂಡಿತವಾದ ಕೋಮು ಸೌಹಾರ್ದವಿತ್ತು ಎಂಬ ನಿರ್ಣಯಕ್ಕೆ ನಿಶ್ಚಿತವಾಗಿ ಬರಬಹುದು.

7. ಬಿಜೆಪಿ ನಾಯಕರು ಬಾಬರ್ ಮತ್ತು ಔರಂಗಜೇಬ್‌ಗಳಂತಾಗ ಬಯಸುವವರ ವಿರುದ್ಧವಿದ್ದಾರೆಯೇ ವಿನಾ ಇಡೀ ಮುಸ್ಲಿಂ ಸಮುದಾಯದ ವಿರುದ್ಧವಲ್ಲ.

8. ಒಂದೆಡೆ ಕರಸೇವಕರು ಕರಸೇವೆಯ ಬಗ್ಗೆ ಅತ್ಯುತ್ಸಾಹದಲ್ಲಿದ್ದರೆ ಕೆಲವು ಮುಸ್ಲಿಮ್ ಪುಂಡರು ಗೋರಿಗಳಿಗೆ ಹಾನಿ ಮಾಡಿ ಕೋಮುದ್ವೇಷ ಹುಟ್ಟಿಸುವ ಪ್ರಯತ್ನ ಮಾಡಿದ್ದರು.

9. ಸುಪ್ರೀಂ ಕೋರ್ಟನ್ನು ಎಲ್ಲರೂ ಗೌರವಿಸುತ್ತಾರೆ ಮತ್ತು ಅದರ ಆದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಹಾಗಿರುವಾಗ ಸುಪ್ರಿಂಕೋರ್ಟೇ ವಿವಾದಿತ ಸ್ಥಳದಲ್ಲಿ ಯಥಾಸ್ಥಿತಿ ಕಾಪಾಡಬೇಕೆಂದು ಆದೇಶ ನೀಡಿದ್ದಾಗ ಅದರ ವಿರುದ್ಧ ಯಾರೂ ನಡೆಯಬಯಸಲು ಸಾಧ್ಯವೇ ಇಲ್ಲ.

10. ಆ ಕಟ್ಟಡಕ್ಕೆ ಹಾನಿಯುಂಟಾಗುತ್ತದೆಂಬುದನ್ನಾಗಲೀ ಅಥವಾ ನೆಲಸಮ ಮಾಡಲಾಗುತ್ತದೆಂಬುದನ್ನಾಗಲೀ ಯಾರೂ ನಿರೀಕ್ಷಿಸಿರಲು ಸಾಧ್ಯವಿರಲಿಲ್ಲ. ಅದೇನೇ ಇದ್ದರೂ ಆ ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡುತ್ತಿದ್ದ ಬಗ್ಗೆಯೂ ಯಾವುದೇ ಸಾಕ್ಷಿ ಇಲ್ಲ.

ಕೃಪೆ: ಶಿವಸುಂದರ್


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...