Homeಮುಖಪುಟಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು. - ಸುಪ್ರೀಂ ಕೋರ್ಟ್

- Advertisement -
- Advertisement -

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂದು ಸೆಪ್ಟಂಬರ್ 30 ರಂದು ಸಿಬಿಐ ಕೋರ್ಟ್ ತೀರ್ಪು ನೀಡಿರುವುದು ಗೊತ್ತಿರುವ ವಿಚಾರ. ಆದರೆ ಏಕ್ ಧಕ್ಕಾ ಔರ್ ಧೋ-ಬಾಬ್ರಿ ಮಸ್ಜಿದ್ ಥೋಡ್ ದೋ ಎಂದು ಅದ್ವಾನಿಯಾದಿಯಾಗಿ ಎಲ್ಲಾ ಆರೋಪಿಗಳು ದೇಶಾದ್ಯಂತ ಪ್ರಚೋದನಾತ್ಮಕ ಭಾಷಣ ಮಾಡಿ ಮಸೀದಿಯನ್ನು ಬೀಳಿಸಲೆಂದೇ ಅಯೋಧ್ಯೆಗೆ ಕರಸೇವಕರನ್ನು ಕರೆತಂದದ್ದು ಜಗತ್ತಿಗೇ ಗೊತ್ತಿತ್ತು. ಹಾಗಿದ್ದರೂ ನ್ಯಾಯಾಧೀಶರು ಯಾವ ನ್ಯಾಯ-ನೀತಿ-ತರ್ಕ-ಸಾಕ್ಶ್ಯ-ಆಧಾರಗಳ ಮೇಲೆ ಇವರನ್ನೆಲ್ಲಾ ಬಿಡುಗಡೆ ಮಾಡಿದರು?

ನ್ಯಾಯಾಧೀಶ ಯಾದವ್ ಅವರ ತೀರ್ಪು 2300 ಪುಟಗಳಷ್ಟಿದೆ ಮತ್ತು ಹಿಂದಿಯಲ್ಲಿದೆ. ನ್ಯಾಯಾಧೀಶ ಯಾದವ್ ಅವರು ತಮ್ಮ ಅಂತಿಮ ತೀರ್ಪಿಗೆ ಕೊಟ್ಟಿರುವ 10 ಪ್ರಮುಖ ಕಾರಣಗಳನ್ನು ದೆಹಲಿ ವಿಶ್ವವಿದ್ಯಾಲಯದ ಹಿಂದಿ ಪ್ರೊಫೆಸರ್ ಆಗಿರುವ ಅಪೂರ್ವಾನಂದ್ ಅವರು The Wire ಪತ್ರಿಕೆಗಾಗಿ ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. ಅದನ್ನು ಚಿಂತಕ ಶಿವಸುಂದರ್ ಕನ್ನಡೀಕರಿಸಿದ್ದಾರೆ ಅದರ ಕನ್ನಡಾನುವಾದ ಇಲ್ಲಿದೆ.

1. ಲಾಲ್ ಕೃಷ್ಣ ಅದ್ವಾನಿಯವರು ಬಾಬ್ರಿ ಮಸೀದಿ ನಾಶದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅವರು ಈ ಅಪರಾಧದಲ್ಲಿ ಪಾಲುದಾರರಾಗಿರಲು ಸಾಧ್ಯವೇ ಇಲ್ಲ. ಹಾಗೂ ಅವರ ವ್ಯಕ್ತಪಡಿಸಿದ ದುಃಖದ ಬಗ್ಗೆ ಇತರ ಸಹ ಆರೋಪಿಗಳೂ ಕೂಡಾ ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಿಲ್ಲ. (ಅಂದರೆ ಉಳಿದ ಆರೋಪಿಗಳೂ ಈ ದುಃಖದಲ್ಲಿ ಭಾಗಿಯಾಗಿದ್ದಾರೆಂಬ ತಾತ್ಪರ್ಯವಾಗುವುದರಿಂದ ಅವರುಗಳೂ ಕೂಡಾ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ!)

2. ಆಗ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರು ಅಯೋಧ್ಯೆಯಲ್ಲಿ ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಾಗುವುದು ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರಿಂದ ಅವರು ಈ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವೇ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಅವರು ಸ್ಥಳದಲ್ಲಿ ಬೇರೆ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಯಾವ ಮಾತುಗಳನ್ನೂ ಆಡಿಲ್ಲ.

3. ಘಟನೆ ನಡೆದ ಸ್ಥಳದಲ್ಲಿ ಅಸಂಖ್ಯಾತ ಜನರು ಸೇರಿದ್ದರಿಂದ ಮತ್ತು ಅವರನ್ನು ಚದುರಿಸಲು ಪ್ರಯತ್ನಿಸಿದ್ದರೆ ಅಸಂಖ್ಯಾತ ಜನರು ಸಾವು-ನೋವುಗಳಿಗೆ ಗುರಿಯಾಗುವ ಸಾಧ್ಯತೆಯೂ ಇದ್ದಿದ್ದರಿಂದ ಜನರನ್ನು ನಿಯಂತ್ರಣ ಮಾಡದಿರುವುದಕ್ಕೆ ಯಾರನ್ನೂ ದೂರಲೂ ಸಾಧ್ಯವಿಲ್ಲ. ಅಲ್ಲದೆ ಮಹಿಳಾ ಕರಸೇವಕರು ರಾಸ್ತಾ ರೋಖೋ ಮಾಡುತ್ತಿದ್ದರಿಂದ ಹೆಚ್ಚುವರಿ ಪೊಲೀಸರು ಸ್ಥಳವನ್ನು ತಲುಪಲಾಗಲಿಲ್ಲ.

4. ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು.

5. ಆಡಳಿತ ವ್ಯವಸ್ಥೆಗೆ ಮತ್ತು ಪೊಲೀಸರಿಗೆ ಆ ಕಟ್ಟಡದ ಭದ್ರತೆಯನ್ನು ನೋಡಿಕೊಳ್ಳುವುದರ ಜೊತೆಗೆ ಇನ್ನೂ ಎಷ್ಟೋ ಬೇರೆ ಕೆಲಸಗಳಿದ್ದವು.

6. ವಿವಾದಿತ ಸ್ಥಳದಲ್ಲಿ ಇತರ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಥವಾ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಬರುವ ಯಾವ ಕೃತ್ಯಗಳೂ ಜರುಗಿಲ್ಲ. ಅಯೋಧ್ಯಾದ ಮುಸ್ಲಿಮರಿಗೆ ಕರಸೇವೆಯಿಂದ ಯಾವುದೇ ಭೀತಿಯುಂಟಾಗಿರಲಿಲ್ಲ. ಅದರ ಬಗ್ಗೆ ಅವರಿಗೆ ನಿರಾಸಕ್ತ ಭಾವನೆಯೇ ಇದ್ದಿತು. ಅಲ್ಲದೇ ಒಬ್ಬ ಹಿಂದೂ ಮಹಿಳೆಯು ಮುಸ್ಲಿಂ ಪುರುಷನನ್ನು ರಕ್ಷಿಸಿದ ವಿಷಯವು ದಾಖಲಾಗಿರುವುದರಿಂದ ಅಯೋಧ್ಯೆಯಲ್ಲಿ ಖಂಡಿತವಾದ ಕೋಮು ಸೌಹಾರ್ದವಿತ್ತು ಎಂಬ ನಿರ್ಣಯಕ್ಕೆ ನಿಶ್ಚಿತವಾಗಿ ಬರಬಹುದು.

7. ಬಿಜೆಪಿ ನಾಯಕರು ಬಾಬರ್ ಮತ್ತು ಔರಂಗಜೇಬ್‌ಗಳಂತಾಗ ಬಯಸುವವರ ವಿರುದ್ಧವಿದ್ದಾರೆಯೇ ವಿನಾ ಇಡೀ ಮುಸ್ಲಿಂ ಸಮುದಾಯದ ವಿರುದ್ಧವಲ್ಲ.

8. ಒಂದೆಡೆ ಕರಸೇವಕರು ಕರಸೇವೆಯ ಬಗ್ಗೆ ಅತ್ಯುತ್ಸಾಹದಲ್ಲಿದ್ದರೆ ಕೆಲವು ಮುಸ್ಲಿಮ್ ಪುಂಡರು ಗೋರಿಗಳಿಗೆ ಹಾನಿ ಮಾಡಿ ಕೋಮುದ್ವೇಷ ಹುಟ್ಟಿಸುವ ಪ್ರಯತ್ನ ಮಾಡಿದ್ದರು.

9. ಸುಪ್ರೀಂ ಕೋರ್ಟನ್ನು ಎಲ್ಲರೂ ಗೌರವಿಸುತ್ತಾರೆ ಮತ್ತು ಅದರ ಆದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಹಾಗಿರುವಾಗ ಸುಪ್ರಿಂಕೋರ್ಟೇ ವಿವಾದಿತ ಸ್ಥಳದಲ್ಲಿ ಯಥಾಸ್ಥಿತಿ ಕಾಪಾಡಬೇಕೆಂದು ಆದೇಶ ನೀಡಿದ್ದಾಗ ಅದರ ವಿರುದ್ಧ ಯಾರೂ ನಡೆಯಬಯಸಲು ಸಾಧ್ಯವೇ ಇಲ್ಲ.

10. ಆ ಕಟ್ಟಡಕ್ಕೆ ಹಾನಿಯುಂಟಾಗುತ್ತದೆಂಬುದನ್ನಾಗಲೀ ಅಥವಾ ನೆಲಸಮ ಮಾಡಲಾಗುತ್ತದೆಂಬುದನ್ನಾಗಲೀ ಯಾರೂ ನಿರೀಕ್ಷಿಸಿರಲು ಸಾಧ್ಯವಿರಲಿಲ್ಲ. ಅದೇನೇ ಇದ್ದರೂ ಆ ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡುತ್ತಿದ್ದ ಬಗ್ಗೆಯೂ ಯಾವುದೇ ಸಾಕ್ಷಿ ಇಲ್ಲ.

ಕೃಪೆ: ಶಿವಸುಂದರ್


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...