Homeಮುಖಪುಟಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು. - ಸುಪ್ರೀಂ ಕೋರ್ಟ್

- Advertisement -
- Advertisement -

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂದು ಸೆಪ್ಟಂಬರ್ 30 ರಂದು ಸಿಬಿಐ ಕೋರ್ಟ್ ತೀರ್ಪು ನೀಡಿರುವುದು ಗೊತ್ತಿರುವ ವಿಚಾರ. ಆದರೆ ಏಕ್ ಧಕ್ಕಾ ಔರ್ ಧೋ-ಬಾಬ್ರಿ ಮಸ್ಜಿದ್ ಥೋಡ್ ದೋ ಎಂದು ಅದ್ವಾನಿಯಾದಿಯಾಗಿ ಎಲ್ಲಾ ಆರೋಪಿಗಳು ದೇಶಾದ್ಯಂತ ಪ್ರಚೋದನಾತ್ಮಕ ಭಾಷಣ ಮಾಡಿ ಮಸೀದಿಯನ್ನು ಬೀಳಿಸಲೆಂದೇ ಅಯೋಧ್ಯೆಗೆ ಕರಸೇವಕರನ್ನು ಕರೆತಂದದ್ದು ಜಗತ್ತಿಗೇ ಗೊತ್ತಿತ್ತು. ಹಾಗಿದ್ದರೂ ನ್ಯಾಯಾಧೀಶರು ಯಾವ ನ್ಯಾಯ-ನೀತಿ-ತರ್ಕ-ಸಾಕ್ಶ್ಯ-ಆಧಾರಗಳ ಮೇಲೆ ಇವರನ್ನೆಲ್ಲಾ ಬಿಡುಗಡೆ ಮಾಡಿದರು?

ನ್ಯಾಯಾಧೀಶ ಯಾದವ್ ಅವರ ತೀರ್ಪು 2300 ಪುಟಗಳಷ್ಟಿದೆ ಮತ್ತು ಹಿಂದಿಯಲ್ಲಿದೆ. ನ್ಯಾಯಾಧೀಶ ಯಾದವ್ ಅವರು ತಮ್ಮ ಅಂತಿಮ ತೀರ್ಪಿಗೆ ಕೊಟ್ಟಿರುವ 10 ಪ್ರಮುಖ ಕಾರಣಗಳನ್ನು ದೆಹಲಿ ವಿಶ್ವವಿದ್ಯಾಲಯದ ಹಿಂದಿ ಪ್ರೊಫೆಸರ್ ಆಗಿರುವ ಅಪೂರ್ವಾನಂದ್ ಅವರು The Wire ಪತ್ರಿಕೆಗಾಗಿ ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. ಅದನ್ನು ಚಿಂತಕ ಶಿವಸುಂದರ್ ಕನ್ನಡೀಕರಿಸಿದ್ದಾರೆ ಅದರ ಕನ್ನಡಾನುವಾದ ಇಲ್ಲಿದೆ.

1. ಲಾಲ್ ಕೃಷ್ಣ ಅದ್ವಾನಿಯವರು ಬಾಬ್ರಿ ಮಸೀದಿ ನಾಶದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅವರು ಈ ಅಪರಾಧದಲ್ಲಿ ಪಾಲುದಾರರಾಗಿರಲು ಸಾಧ್ಯವೇ ಇಲ್ಲ. ಹಾಗೂ ಅವರ ವ್ಯಕ್ತಪಡಿಸಿದ ದುಃಖದ ಬಗ್ಗೆ ಇತರ ಸಹ ಆರೋಪಿಗಳೂ ಕೂಡಾ ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಿಲ್ಲ. (ಅಂದರೆ ಉಳಿದ ಆರೋಪಿಗಳೂ ಈ ದುಃಖದಲ್ಲಿ ಭಾಗಿಯಾಗಿದ್ದಾರೆಂಬ ತಾತ್ಪರ್ಯವಾಗುವುದರಿಂದ ಅವರುಗಳೂ ಕೂಡಾ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ!)

2. ಆಗ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರು ಅಯೋಧ್ಯೆಯಲ್ಲಿ ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಾಗುವುದು ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರಿಂದ ಅವರು ಈ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವೇ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಅವರು ಸ್ಥಳದಲ್ಲಿ ಬೇರೆ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಯಾವ ಮಾತುಗಳನ್ನೂ ಆಡಿಲ್ಲ.

3. ಘಟನೆ ನಡೆದ ಸ್ಥಳದಲ್ಲಿ ಅಸಂಖ್ಯಾತ ಜನರು ಸೇರಿದ್ದರಿಂದ ಮತ್ತು ಅವರನ್ನು ಚದುರಿಸಲು ಪ್ರಯತ್ನಿಸಿದ್ದರೆ ಅಸಂಖ್ಯಾತ ಜನರು ಸಾವು-ನೋವುಗಳಿಗೆ ಗುರಿಯಾಗುವ ಸಾಧ್ಯತೆಯೂ ಇದ್ದಿದ್ದರಿಂದ ಜನರನ್ನು ನಿಯಂತ್ರಣ ಮಾಡದಿರುವುದಕ್ಕೆ ಯಾರನ್ನೂ ದೂರಲೂ ಸಾಧ್ಯವಿಲ್ಲ. ಅಲ್ಲದೆ ಮಹಿಳಾ ಕರಸೇವಕರು ರಾಸ್ತಾ ರೋಖೋ ಮಾಡುತ್ತಿದ್ದರಿಂದ ಹೆಚ್ಚುವರಿ ಪೊಲೀಸರು ಸ್ಥಳವನ್ನು ತಲುಪಲಾಗಲಿಲ್ಲ.

4. ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು.

5. ಆಡಳಿತ ವ್ಯವಸ್ಥೆಗೆ ಮತ್ತು ಪೊಲೀಸರಿಗೆ ಆ ಕಟ್ಟಡದ ಭದ್ರತೆಯನ್ನು ನೋಡಿಕೊಳ್ಳುವುದರ ಜೊತೆಗೆ ಇನ್ನೂ ಎಷ್ಟೋ ಬೇರೆ ಕೆಲಸಗಳಿದ್ದವು.

6. ವಿವಾದಿತ ಸ್ಥಳದಲ್ಲಿ ಇತರ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಥವಾ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಬರುವ ಯಾವ ಕೃತ್ಯಗಳೂ ಜರುಗಿಲ್ಲ. ಅಯೋಧ್ಯಾದ ಮುಸ್ಲಿಮರಿಗೆ ಕರಸೇವೆಯಿಂದ ಯಾವುದೇ ಭೀತಿಯುಂಟಾಗಿರಲಿಲ್ಲ. ಅದರ ಬಗ್ಗೆ ಅವರಿಗೆ ನಿರಾಸಕ್ತ ಭಾವನೆಯೇ ಇದ್ದಿತು. ಅಲ್ಲದೇ ಒಬ್ಬ ಹಿಂದೂ ಮಹಿಳೆಯು ಮುಸ್ಲಿಂ ಪುರುಷನನ್ನು ರಕ್ಷಿಸಿದ ವಿಷಯವು ದಾಖಲಾಗಿರುವುದರಿಂದ ಅಯೋಧ್ಯೆಯಲ್ಲಿ ಖಂಡಿತವಾದ ಕೋಮು ಸೌಹಾರ್ದವಿತ್ತು ಎಂಬ ನಿರ್ಣಯಕ್ಕೆ ನಿಶ್ಚಿತವಾಗಿ ಬರಬಹುದು.

7. ಬಿಜೆಪಿ ನಾಯಕರು ಬಾಬರ್ ಮತ್ತು ಔರಂಗಜೇಬ್‌ಗಳಂತಾಗ ಬಯಸುವವರ ವಿರುದ್ಧವಿದ್ದಾರೆಯೇ ವಿನಾ ಇಡೀ ಮುಸ್ಲಿಂ ಸಮುದಾಯದ ವಿರುದ್ಧವಲ್ಲ.

8. ಒಂದೆಡೆ ಕರಸೇವಕರು ಕರಸೇವೆಯ ಬಗ್ಗೆ ಅತ್ಯುತ್ಸಾಹದಲ್ಲಿದ್ದರೆ ಕೆಲವು ಮುಸ್ಲಿಮ್ ಪುಂಡರು ಗೋರಿಗಳಿಗೆ ಹಾನಿ ಮಾಡಿ ಕೋಮುದ್ವೇಷ ಹುಟ್ಟಿಸುವ ಪ್ರಯತ್ನ ಮಾಡಿದ್ದರು.

9. ಸುಪ್ರೀಂ ಕೋರ್ಟನ್ನು ಎಲ್ಲರೂ ಗೌರವಿಸುತ್ತಾರೆ ಮತ್ತು ಅದರ ಆದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಹಾಗಿರುವಾಗ ಸುಪ್ರಿಂಕೋರ್ಟೇ ವಿವಾದಿತ ಸ್ಥಳದಲ್ಲಿ ಯಥಾಸ್ಥಿತಿ ಕಾಪಾಡಬೇಕೆಂದು ಆದೇಶ ನೀಡಿದ್ದಾಗ ಅದರ ವಿರುದ್ಧ ಯಾರೂ ನಡೆಯಬಯಸಲು ಸಾಧ್ಯವೇ ಇಲ್ಲ.

10. ಆ ಕಟ್ಟಡಕ್ಕೆ ಹಾನಿಯುಂಟಾಗುತ್ತದೆಂಬುದನ್ನಾಗಲೀ ಅಥವಾ ನೆಲಸಮ ಮಾಡಲಾಗುತ್ತದೆಂಬುದನ್ನಾಗಲೀ ಯಾರೂ ನಿರೀಕ್ಷಿಸಿರಲು ಸಾಧ್ಯವಿರಲಿಲ್ಲ. ಅದೇನೇ ಇದ್ದರೂ ಆ ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡುತ್ತಿದ್ದ ಬಗ್ಗೆಯೂ ಯಾವುದೇ ಸಾಕ್ಷಿ ಇಲ್ಲ.

ಕೃಪೆ: ಶಿವಸುಂದರ್


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...