Homeಮುಖಪುಟಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು. - ಸುಪ್ರೀಂ ಕೋರ್ಟ್

- Advertisement -
- Advertisement -

ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂದು ಸೆಪ್ಟಂಬರ್ 30 ರಂದು ಸಿಬಿಐ ಕೋರ್ಟ್ ತೀರ್ಪು ನೀಡಿರುವುದು ಗೊತ್ತಿರುವ ವಿಚಾರ. ಆದರೆ ಏಕ್ ಧಕ್ಕಾ ಔರ್ ಧೋ-ಬಾಬ್ರಿ ಮಸ್ಜಿದ್ ಥೋಡ್ ದೋ ಎಂದು ಅದ್ವಾನಿಯಾದಿಯಾಗಿ ಎಲ್ಲಾ ಆರೋಪಿಗಳು ದೇಶಾದ್ಯಂತ ಪ್ರಚೋದನಾತ್ಮಕ ಭಾಷಣ ಮಾಡಿ ಮಸೀದಿಯನ್ನು ಬೀಳಿಸಲೆಂದೇ ಅಯೋಧ್ಯೆಗೆ ಕರಸೇವಕರನ್ನು ಕರೆತಂದದ್ದು ಜಗತ್ತಿಗೇ ಗೊತ್ತಿತ್ತು. ಹಾಗಿದ್ದರೂ ನ್ಯಾಯಾಧೀಶರು ಯಾವ ನ್ಯಾಯ-ನೀತಿ-ತರ್ಕ-ಸಾಕ್ಶ್ಯ-ಆಧಾರಗಳ ಮೇಲೆ ಇವರನ್ನೆಲ್ಲಾ ಬಿಡುಗಡೆ ಮಾಡಿದರು?

ನ್ಯಾಯಾಧೀಶ ಯಾದವ್ ಅವರ ತೀರ್ಪು 2300 ಪುಟಗಳಷ್ಟಿದೆ ಮತ್ತು ಹಿಂದಿಯಲ್ಲಿದೆ. ನ್ಯಾಯಾಧೀಶ ಯಾದವ್ ಅವರು ತಮ್ಮ ಅಂತಿಮ ತೀರ್ಪಿಗೆ ಕೊಟ್ಟಿರುವ 10 ಪ್ರಮುಖ ಕಾರಣಗಳನ್ನು ದೆಹಲಿ ವಿಶ್ವವಿದ್ಯಾಲಯದ ಹಿಂದಿ ಪ್ರೊಫೆಸರ್ ಆಗಿರುವ ಅಪೂರ್ವಾನಂದ್ ಅವರು The Wire ಪತ್ರಿಕೆಗಾಗಿ ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. ಅದನ್ನು ಚಿಂತಕ ಶಿವಸುಂದರ್ ಕನ್ನಡೀಕರಿಸಿದ್ದಾರೆ ಅದರ ಕನ್ನಡಾನುವಾದ ಇಲ್ಲಿದೆ.

1. ಲಾಲ್ ಕೃಷ್ಣ ಅದ್ವಾನಿಯವರು ಬಾಬ್ರಿ ಮಸೀದಿ ನಾಶದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅವರು ಈ ಅಪರಾಧದಲ್ಲಿ ಪಾಲುದಾರರಾಗಿರಲು ಸಾಧ್ಯವೇ ಇಲ್ಲ. ಹಾಗೂ ಅವರ ವ್ಯಕ್ತಪಡಿಸಿದ ದುಃಖದ ಬಗ್ಗೆ ಇತರ ಸಹ ಆರೋಪಿಗಳೂ ಕೂಡಾ ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಿಲ್ಲ. (ಅಂದರೆ ಉಳಿದ ಆರೋಪಿಗಳೂ ಈ ದುಃಖದಲ್ಲಿ ಭಾಗಿಯಾಗಿದ್ದಾರೆಂಬ ತಾತ್ಪರ್ಯವಾಗುವುದರಿಂದ ಅವರುಗಳೂ ಕೂಡಾ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ!)

2. ಆಗ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರು ಅಯೋಧ್ಯೆಯಲ್ಲಿ ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಾಗುವುದು ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದರಿಂದ ಅವರು ಈ ಅಪರಾಧದಲ್ಲಿ ಭಾಗಿಯಾಗಿರಲು ಸಾಧ್ಯವೇ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಅವರು ಸ್ಥಳದಲ್ಲಿ ಬೇರೆ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಯಾವ ಮಾತುಗಳನ್ನೂ ಆಡಿಲ್ಲ.

3. ಘಟನೆ ನಡೆದ ಸ್ಥಳದಲ್ಲಿ ಅಸಂಖ್ಯಾತ ಜನರು ಸೇರಿದ್ದರಿಂದ ಮತ್ತು ಅವರನ್ನು ಚದುರಿಸಲು ಪ್ರಯತ್ನಿಸಿದ್ದರೆ ಅಸಂಖ್ಯಾತ ಜನರು ಸಾವು-ನೋವುಗಳಿಗೆ ಗುರಿಯಾಗುವ ಸಾಧ್ಯತೆಯೂ ಇದ್ದಿದ್ದರಿಂದ ಜನರನ್ನು ನಿಯಂತ್ರಣ ಮಾಡದಿರುವುದಕ್ಕೆ ಯಾರನ್ನೂ ದೂರಲೂ ಸಾಧ್ಯವಿಲ್ಲ. ಅಲ್ಲದೆ ಮಹಿಳಾ ಕರಸೇವಕರು ರಾಸ್ತಾ ರೋಖೋ ಮಾಡುತ್ತಿದ್ದರಿಂದ ಹೆಚ್ಚುವರಿ ಪೊಲೀಸರು ಸ್ಥಳವನ್ನು ತಲುಪಲಾಗಲಿಲ್ಲ.

4. ಭದ್ರತಾ ವ್ಯವಸ್ಥೆಗಳು ಸೂಕ್ತವಾಗಿತ್ತೋ ಇಲ್ಲವೋ ಎಂಬುದನ್ನು ನಮಗೆ ಪತ್ರಕರ್ತರು ಹೇಳಬೇಕಿಲ್ಲ. ನಮಗೆ ಅದನ್ನು ತಿಳಿಸಬೇಕಿರುವವರು ಪೊಲೀಸ್ ಅಧಿಕಾರಿಗಳು.

5. ಆಡಳಿತ ವ್ಯವಸ್ಥೆಗೆ ಮತ್ತು ಪೊಲೀಸರಿಗೆ ಆ ಕಟ್ಟಡದ ಭದ್ರತೆಯನ್ನು ನೋಡಿಕೊಳ್ಳುವುದರ ಜೊತೆಗೆ ಇನ್ನೂ ಎಷ್ಟೋ ಬೇರೆ ಕೆಲಸಗಳಿದ್ದವು.

6. ವಿವಾದಿತ ಸ್ಥಳದಲ್ಲಿ ಇತರ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಥವಾ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಬರುವ ಯಾವ ಕೃತ್ಯಗಳೂ ಜರುಗಿಲ್ಲ. ಅಯೋಧ್ಯಾದ ಮುಸ್ಲಿಮರಿಗೆ ಕರಸೇವೆಯಿಂದ ಯಾವುದೇ ಭೀತಿಯುಂಟಾಗಿರಲಿಲ್ಲ. ಅದರ ಬಗ್ಗೆ ಅವರಿಗೆ ನಿರಾಸಕ್ತ ಭಾವನೆಯೇ ಇದ್ದಿತು. ಅಲ್ಲದೇ ಒಬ್ಬ ಹಿಂದೂ ಮಹಿಳೆಯು ಮುಸ್ಲಿಂ ಪುರುಷನನ್ನು ರಕ್ಷಿಸಿದ ವಿಷಯವು ದಾಖಲಾಗಿರುವುದರಿಂದ ಅಯೋಧ್ಯೆಯಲ್ಲಿ ಖಂಡಿತವಾದ ಕೋಮು ಸೌಹಾರ್ದವಿತ್ತು ಎಂಬ ನಿರ್ಣಯಕ್ಕೆ ನಿಶ್ಚಿತವಾಗಿ ಬರಬಹುದು.

7. ಬಿಜೆಪಿ ನಾಯಕರು ಬಾಬರ್ ಮತ್ತು ಔರಂಗಜೇಬ್‌ಗಳಂತಾಗ ಬಯಸುವವರ ವಿರುದ್ಧವಿದ್ದಾರೆಯೇ ವಿನಾ ಇಡೀ ಮುಸ್ಲಿಂ ಸಮುದಾಯದ ವಿರುದ್ಧವಲ್ಲ.

8. ಒಂದೆಡೆ ಕರಸೇವಕರು ಕರಸೇವೆಯ ಬಗ್ಗೆ ಅತ್ಯುತ್ಸಾಹದಲ್ಲಿದ್ದರೆ ಕೆಲವು ಮುಸ್ಲಿಮ್ ಪುಂಡರು ಗೋರಿಗಳಿಗೆ ಹಾನಿ ಮಾಡಿ ಕೋಮುದ್ವೇಷ ಹುಟ್ಟಿಸುವ ಪ್ರಯತ್ನ ಮಾಡಿದ್ದರು.

9. ಸುಪ್ರೀಂ ಕೋರ್ಟನ್ನು ಎಲ್ಲರೂ ಗೌರವಿಸುತ್ತಾರೆ ಮತ್ತು ಅದರ ಆದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಹಾಗಿರುವಾಗ ಸುಪ್ರಿಂಕೋರ್ಟೇ ವಿವಾದಿತ ಸ್ಥಳದಲ್ಲಿ ಯಥಾಸ್ಥಿತಿ ಕಾಪಾಡಬೇಕೆಂದು ಆದೇಶ ನೀಡಿದ್ದಾಗ ಅದರ ವಿರುದ್ಧ ಯಾರೂ ನಡೆಯಬಯಸಲು ಸಾಧ್ಯವೇ ಇಲ್ಲ.

10. ಆ ಕಟ್ಟಡಕ್ಕೆ ಹಾನಿಯುಂಟಾಗುತ್ತದೆಂಬುದನ್ನಾಗಲೀ ಅಥವಾ ನೆಲಸಮ ಮಾಡಲಾಗುತ್ತದೆಂಬುದನ್ನಾಗಲೀ ಯಾರೂ ನಿರೀಕ್ಷಿಸಿರಲು ಸಾಧ್ಯವಿರಲಿಲ್ಲ. ಅದೇನೇ ಇದ್ದರೂ ಆ ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡುತ್ತಿದ್ದ ಬಗ್ಗೆಯೂ ಯಾವುದೇ ಸಾಕ್ಷಿ ಇಲ್ಲ.

ಕೃಪೆ: ಶಿವಸುಂದರ್


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...