Homeಮುಖಪುಟ”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ": ಸದ್ದಾಂ ಹುಸೇನ್‌

”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ”: ಸದ್ದಾಂ ಹುಸೇನ್‌

- Advertisement -
- Advertisement -

ಸುಪ್ರೀಂಕೋರ್ಟ್‌ ನೀಡಿರುವ ಅಯೋಧ್ಯೆ ತೀರ್ಪನ್ನು ಇಡೀ ದೇಶವೇ ಗೌರವಿಸಿದೆ. ಕೆಲ ಭಿನ್ನಾಭಿಪ್ರಾಯ, ಮುನಿಸಿನ ಮಧ್ಯೆಯೂ ಸುಪ್ರೀಂ ತೀರ್ಪಿಗೆ ಎಲ್ಲರೂ ತಲೆಬಾಗಿದ್ದಾರೆ. ಆದರೆ ಕೆಲವರು ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ, ಶಾಂತಿ, ನೆಮ್ಮದಿಯಿಂದ ನಾವೆಲ್ಲಾ ಒಂದೇ ಎಂಬ ಮಂತ್ರವನ್ನೇ ಜೀವನದ ಉಸಿರಾಗಿಸಿಕೊಂಡು ಬದುಕುತ್ತಿದ್ದಾರೆ. ಇದೇ ನಮ್ಮ ದೇಶದ ಭಾವೈಕ್ಯತೆಯ ಸಂದೇಶ ಕೂಡ.

ಇಷ್ಟೆಲ್ಲಾ ಪೀಠಿಕೆ ಯಾಕೆ ಅಂದ್ರೆ… ಬೆಂಗಳೂರಿನಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲರಿಗೂ ಆದರ್ಶಪ್ರಾಯವಾಗುವಂಥ ಮಾತು ಹೇಳಿದ್ದಾನೆ. ಮಾತಷ್ಟೇ ಅಲ್ಲ, ಕೃತಿಯೂ ಕೂಡ ಹಾಗೇ ಇದೆ. ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಾಗಿರುವ ಸದ್ದಾಂ ಹುಸೇನ್‌ ಎಂಬ ಮುಸ್ಲಿಂ ಯುವಕ ಮಂದಿರ, ಮಸೀದಿಯಲ್ಲಿ ನನಗೆ ಯಾವುದೇ ವ್ಯತ್ಯಾಸ ಕಾಣುವುದಿಲ್ಲ ಎಂದು ಹೇಳಿದ್ದಾನೆ.

ಜಾತಿ, ಧರ್ಮ ಎಂದು ಹೊಡೆದಾಡುವವರು ತಲೆತಗ್ಗಿಸುವಂತಿದೆ 27 ವರ್ಷದ ಸದ್ದಾಂ ಹುಸೇನ್‌ ಬದುಕು. ಸದ್ದಾಂ ಮುಸ್ಲಿಂನಾದರೂ ಮಸೀದಿ ಮತ್ತು ಮಂದಿರ ಎರಡಕ್ಕೂ ಹೋಗುತ್ತಾನೆ. ನಮಾಜ್‌ ಮಾಡುತ್ತಾನೆ, ಪೂಜೆಯನ್ನೂ ಮಾಡುತ್ತಾನೆ. ದಿನ ಬೆಳಗಾದರೆ ಮಸೀದಿಗೆ ಹೋಗಿ ಸ್ವಚ್ಛತಾ ಕಾರ್ಯ ಮಾಡುತ್ತಾನೆ. ಹಾಗೆಯೇ ಹಬ್ಬ-ಹರಿದಿನಗಳಲ್ಲಿ, ಬಿಡುವು ಸಿಕ್ಕಾಗ ಮಂದಿರಗಳಿಗೂ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ನಿರತನಾಗುತ್ತಾನೆ.

’ನನಗೆ ಶಾಂತಿ, ನೆಮ್ಮದಿ ಮುಖ್ಯ. ಯಾವ ಧರ್ಮವಾದರೇನು, ಜಾತಿಯಾದರೇನು..? ನನಗೆ ಮಂದಿರ ಮತ್ತು ಮಸೀದಿ ಎರಡರಲ್ಲೂ ಸಂತೋಷ ಸಿಗುತ್ತದೆ’ ಎನ್ನುವುದು ಸದ್ದಾಂ ಅವರ ಮನದಾಳದ ಮಾತು. ’ನಾನು ಟಿವಿ ಹಾಗೂ ನ್ಯೂಸ್‌ ನೋಡುವುದಿಲ್ಲ. ನನ್ನ ಸಹೋದರ ಬಂದು ನನಗೆ ಅಯೋಧ್ಯೆ ತೀರ್ಪಿನ ಕುರಿತು ಹೇಳಿದ. ಆದರೆ ನನಗೆ ಅದ್ಯಾವುದಕ್ಕೂ ಏನೂ ಅನ್ನಿಸಲಿಲ್ಲ. ನನಗೆ ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸ ಕಾಣಿಸುವುದಿಲ್ಲ’ ಅಂತಾರೆ ಸದ್ದಾಂ.

ರಂಜಾನ್‌ ಆಗಿರಲಿ ಅಥವಾ ರಾಮನವಮಿಯೇ ಬರಲಿ, ಎಲ್ಲರೂ ನನ್ನನ್ನು ಸ್ವಚ್ಛತಾ ಕೆಲಸಕ್ಕೆ ಕರೆಯುತ್ತಾರೆ. ಮಿನಾರ್‌ ಕಂಬಗಳನ್ನು ಹತ್ತಿ ಕ್ಲೀನ್‌ ಮಾಡಿದ್ದೇನೆ, ಮಸೀದಿ ಗೋಡೆಗಳಿಗೆ ಬಣ್ಣವನ್ನೂ ಬಳಿದಿದ್ದೇನೆ. ಮಂದಿರಗಳನ್ನು ಸ್ವಚ್ಛಗೊಳಿಸಿದ್ದೇನೆ. ರಂಜಾನ್‌ ದಿನಗಳಲ್ಲಿ ಉಪವಾಸ ಬಿಡುವ ಮುನ್ನ ಪ್ರಾರ್ಥನೆಗೆ ಬರುವ ಜನರಿಗೆ ಹಣ್ಣು-ಹಂಪಲು  ಹಂಚುತ್ತೇನೆ. ದೇವರ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ.

ಇಷ್ಟೇ ಅಲ್ಲ.. ರಾಮಮಂದಿರಕ್ಕೂ ಹೋಗುತ್ತೇನೆ. ಗೋಪುರಗಳನ್ನು ಹತ್ತಿ ಶುಚಿಗೊಳಿಸುತ್ತೇನೆ. ರಾಮನವಮಿ ಹಬ್ಬಕ್ಕೂ ಮೊದಲು ಮಂದಿರಕ್ಕೆ ಪೇಂಟಿಂಗ್‌ ಮಾಡುತ್ತೇನೆ ಎನ್ನುತ್ತಾನೆ. ಅಂದ ಹಾಗೇ ಸದ್ದಾಂ ಓದಿರುವುದು ಕೇವಲ ಎರಡನೇ ತರಗತಿ ಮಾತ್ರ. ಗಂದಿಗೆ ಹೆಸರಿನ ಅಂಗಡಿಯಲ್ಲಿ ಕೆಲಸ ಮಾಡುತ್ತಾನೆ. ತಾಯಿ ಮತ್ತು ಸಹೋದರನೊಂದಿಗೆ ವಾಸ್ತವ್ಯ ಹೂಡಿರುವ ಸದ್ದಾಂ ಏರಿಯಾ ಜನರಿಗೆ ಕೈಲಾದಷ್ಟು ಸಹಾಯ ಮಾಡುತ್ತಾನೆ. ಕಷ್ಟದಲ್ಲಿರುವವರಿಗೆ ಹೆಗಲು ಕೊಡುತ್ತಾನೆ.

ದೇವರು ಎಲ್ಲರಿಗೂ ಒಬ್ಬನೇ ಮತ್ತು ಒಂದೇ. ಹಿಂದೂ ಮತ್ತು ಮುಸ್ಲಿಂರು ಸಹೋದರರಿದ್ದಂತೆ ಎಂದು ನಂಬಿರುವ ಸದ್ದಾಂ ಅವರ ಗುಣಗಾನ ಮಾಡಿದ್ದಾರೆ ಗಂದಿಗೆ ಅಂಗಡಿ ಮಾಲೀಕ ವೆಂಕಟೇಶ್‌ ಬಾಬು. ನಾವೆಲ್ಲಾ ಸಮಾಜದ ಶಾಂತಿ, ಏಕತೆ, ಐಕ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸಮಾಜಕ್ಕೆ ಧಕ್ಕೆ ಬಾರದಂತೆ ಜೀವಿಸಬೇಕು ಎನ್ನುವುದೇ ಸದ್ದಾಂ ಬದುಕಿನ ಉದ್ದೇಶ.

ಕೃಪೆ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...