Homeಮುಖಪುಟ”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ": ಸದ್ದಾಂ ಹುಸೇನ್‌

”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ”: ಸದ್ದಾಂ ಹುಸೇನ್‌

- Advertisement -
- Advertisement -

ಸುಪ್ರೀಂಕೋರ್ಟ್‌ ನೀಡಿರುವ ಅಯೋಧ್ಯೆ ತೀರ್ಪನ್ನು ಇಡೀ ದೇಶವೇ ಗೌರವಿಸಿದೆ. ಕೆಲ ಭಿನ್ನಾಭಿಪ್ರಾಯ, ಮುನಿಸಿನ ಮಧ್ಯೆಯೂ ಸುಪ್ರೀಂ ತೀರ್ಪಿಗೆ ಎಲ್ಲರೂ ತಲೆಬಾಗಿದ್ದಾರೆ. ಆದರೆ ಕೆಲವರು ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ, ಶಾಂತಿ, ನೆಮ್ಮದಿಯಿಂದ ನಾವೆಲ್ಲಾ ಒಂದೇ ಎಂಬ ಮಂತ್ರವನ್ನೇ ಜೀವನದ ಉಸಿರಾಗಿಸಿಕೊಂಡು ಬದುಕುತ್ತಿದ್ದಾರೆ. ಇದೇ ನಮ್ಮ ದೇಶದ ಭಾವೈಕ್ಯತೆಯ ಸಂದೇಶ ಕೂಡ.

ಇಷ್ಟೆಲ್ಲಾ ಪೀಠಿಕೆ ಯಾಕೆ ಅಂದ್ರೆ… ಬೆಂಗಳೂರಿನಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲರಿಗೂ ಆದರ್ಶಪ್ರಾಯವಾಗುವಂಥ ಮಾತು ಹೇಳಿದ್ದಾನೆ. ಮಾತಷ್ಟೇ ಅಲ್ಲ, ಕೃತಿಯೂ ಕೂಡ ಹಾಗೇ ಇದೆ. ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಾಗಿರುವ ಸದ್ದಾಂ ಹುಸೇನ್‌ ಎಂಬ ಮುಸ್ಲಿಂ ಯುವಕ ಮಂದಿರ, ಮಸೀದಿಯಲ್ಲಿ ನನಗೆ ಯಾವುದೇ ವ್ಯತ್ಯಾಸ ಕಾಣುವುದಿಲ್ಲ ಎಂದು ಹೇಳಿದ್ದಾನೆ.

ಜಾತಿ, ಧರ್ಮ ಎಂದು ಹೊಡೆದಾಡುವವರು ತಲೆತಗ್ಗಿಸುವಂತಿದೆ 27 ವರ್ಷದ ಸದ್ದಾಂ ಹುಸೇನ್‌ ಬದುಕು. ಸದ್ದಾಂ ಮುಸ್ಲಿಂನಾದರೂ ಮಸೀದಿ ಮತ್ತು ಮಂದಿರ ಎರಡಕ್ಕೂ ಹೋಗುತ್ತಾನೆ. ನಮಾಜ್‌ ಮಾಡುತ್ತಾನೆ, ಪೂಜೆಯನ್ನೂ ಮಾಡುತ್ತಾನೆ. ದಿನ ಬೆಳಗಾದರೆ ಮಸೀದಿಗೆ ಹೋಗಿ ಸ್ವಚ್ಛತಾ ಕಾರ್ಯ ಮಾಡುತ್ತಾನೆ. ಹಾಗೆಯೇ ಹಬ್ಬ-ಹರಿದಿನಗಳಲ್ಲಿ, ಬಿಡುವು ಸಿಕ್ಕಾಗ ಮಂದಿರಗಳಿಗೂ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ನಿರತನಾಗುತ್ತಾನೆ.

’ನನಗೆ ಶಾಂತಿ, ನೆಮ್ಮದಿ ಮುಖ್ಯ. ಯಾವ ಧರ್ಮವಾದರೇನು, ಜಾತಿಯಾದರೇನು..? ನನಗೆ ಮಂದಿರ ಮತ್ತು ಮಸೀದಿ ಎರಡರಲ್ಲೂ ಸಂತೋಷ ಸಿಗುತ್ತದೆ’ ಎನ್ನುವುದು ಸದ್ದಾಂ ಅವರ ಮನದಾಳದ ಮಾತು. ’ನಾನು ಟಿವಿ ಹಾಗೂ ನ್ಯೂಸ್‌ ನೋಡುವುದಿಲ್ಲ. ನನ್ನ ಸಹೋದರ ಬಂದು ನನಗೆ ಅಯೋಧ್ಯೆ ತೀರ್ಪಿನ ಕುರಿತು ಹೇಳಿದ. ಆದರೆ ನನಗೆ ಅದ್ಯಾವುದಕ್ಕೂ ಏನೂ ಅನ್ನಿಸಲಿಲ್ಲ. ನನಗೆ ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸ ಕಾಣಿಸುವುದಿಲ್ಲ’ ಅಂತಾರೆ ಸದ್ದಾಂ.

ರಂಜಾನ್‌ ಆಗಿರಲಿ ಅಥವಾ ರಾಮನವಮಿಯೇ ಬರಲಿ, ಎಲ್ಲರೂ ನನ್ನನ್ನು ಸ್ವಚ್ಛತಾ ಕೆಲಸಕ್ಕೆ ಕರೆಯುತ್ತಾರೆ. ಮಿನಾರ್‌ ಕಂಬಗಳನ್ನು ಹತ್ತಿ ಕ್ಲೀನ್‌ ಮಾಡಿದ್ದೇನೆ, ಮಸೀದಿ ಗೋಡೆಗಳಿಗೆ ಬಣ್ಣವನ್ನೂ ಬಳಿದಿದ್ದೇನೆ. ಮಂದಿರಗಳನ್ನು ಸ್ವಚ್ಛಗೊಳಿಸಿದ್ದೇನೆ. ರಂಜಾನ್‌ ದಿನಗಳಲ್ಲಿ ಉಪವಾಸ ಬಿಡುವ ಮುನ್ನ ಪ್ರಾರ್ಥನೆಗೆ ಬರುವ ಜನರಿಗೆ ಹಣ್ಣು-ಹಂಪಲು  ಹಂಚುತ್ತೇನೆ. ದೇವರ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ.

ಇಷ್ಟೇ ಅಲ್ಲ.. ರಾಮಮಂದಿರಕ್ಕೂ ಹೋಗುತ್ತೇನೆ. ಗೋಪುರಗಳನ್ನು ಹತ್ತಿ ಶುಚಿಗೊಳಿಸುತ್ತೇನೆ. ರಾಮನವಮಿ ಹಬ್ಬಕ್ಕೂ ಮೊದಲು ಮಂದಿರಕ್ಕೆ ಪೇಂಟಿಂಗ್‌ ಮಾಡುತ್ತೇನೆ ಎನ್ನುತ್ತಾನೆ. ಅಂದ ಹಾಗೇ ಸದ್ದಾಂ ಓದಿರುವುದು ಕೇವಲ ಎರಡನೇ ತರಗತಿ ಮಾತ್ರ. ಗಂದಿಗೆ ಹೆಸರಿನ ಅಂಗಡಿಯಲ್ಲಿ ಕೆಲಸ ಮಾಡುತ್ತಾನೆ. ತಾಯಿ ಮತ್ತು ಸಹೋದರನೊಂದಿಗೆ ವಾಸ್ತವ್ಯ ಹೂಡಿರುವ ಸದ್ದಾಂ ಏರಿಯಾ ಜನರಿಗೆ ಕೈಲಾದಷ್ಟು ಸಹಾಯ ಮಾಡುತ್ತಾನೆ. ಕಷ್ಟದಲ್ಲಿರುವವರಿಗೆ ಹೆಗಲು ಕೊಡುತ್ತಾನೆ.

ದೇವರು ಎಲ್ಲರಿಗೂ ಒಬ್ಬನೇ ಮತ್ತು ಒಂದೇ. ಹಿಂದೂ ಮತ್ತು ಮುಸ್ಲಿಂರು ಸಹೋದರರಿದ್ದಂತೆ ಎಂದು ನಂಬಿರುವ ಸದ್ದಾಂ ಅವರ ಗುಣಗಾನ ಮಾಡಿದ್ದಾರೆ ಗಂದಿಗೆ ಅಂಗಡಿ ಮಾಲೀಕ ವೆಂಕಟೇಶ್‌ ಬಾಬು. ನಾವೆಲ್ಲಾ ಸಮಾಜದ ಶಾಂತಿ, ಏಕತೆ, ಐಕ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸಮಾಜಕ್ಕೆ ಧಕ್ಕೆ ಬಾರದಂತೆ ಜೀವಿಸಬೇಕು ಎನ್ನುವುದೇ ಸದ್ದಾಂ ಬದುಕಿನ ಉದ್ದೇಶ.

ಕೃಪೆ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...