Homeಮುಖಪುಟ”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ": ಸದ್ದಾಂ ಹುಸೇನ್‌

”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ”: ಸದ್ದಾಂ ಹುಸೇನ್‌

- Advertisement -
- Advertisement -

ಸುಪ್ರೀಂಕೋರ್ಟ್‌ ನೀಡಿರುವ ಅಯೋಧ್ಯೆ ತೀರ್ಪನ್ನು ಇಡೀ ದೇಶವೇ ಗೌರವಿಸಿದೆ. ಕೆಲ ಭಿನ್ನಾಭಿಪ್ರಾಯ, ಮುನಿಸಿನ ಮಧ್ಯೆಯೂ ಸುಪ್ರೀಂ ತೀರ್ಪಿಗೆ ಎಲ್ಲರೂ ತಲೆಬಾಗಿದ್ದಾರೆ. ಆದರೆ ಕೆಲವರು ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ, ಶಾಂತಿ, ನೆಮ್ಮದಿಯಿಂದ ನಾವೆಲ್ಲಾ ಒಂದೇ ಎಂಬ ಮಂತ್ರವನ್ನೇ ಜೀವನದ ಉಸಿರಾಗಿಸಿಕೊಂಡು ಬದುಕುತ್ತಿದ್ದಾರೆ. ಇದೇ ನಮ್ಮ ದೇಶದ ಭಾವೈಕ್ಯತೆಯ ಸಂದೇಶ ಕೂಡ.

ಇಷ್ಟೆಲ್ಲಾ ಪೀಠಿಕೆ ಯಾಕೆ ಅಂದ್ರೆ… ಬೆಂಗಳೂರಿನಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲರಿಗೂ ಆದರ್ಶಪ್ರಾಯವಾಗುವಂಥ ಮಾತು ಹೇಳಿದ್ದಾನೆ. ಮಾತಷ್ಟೇ ಅಲ್ಲ, ಕೃತಿಯೂ ಕೂಡ ಹಾಗೇ ಇದೆ. ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಾಗಿರುವ ಸದ್ದಾಂ ಹುಸೇನ್‌ ಎಂಬ ಮುಸ್ಲಿಂ ಯುವಕ ಮಂದಿರ, ಮಸೀದಿಯಲ್ಲಿ ನನಗೆ ಯಾವುದೇ ವ್ಯತ್ಯಾಸ ಕಾಣುವುದಿಲ್ಲ ಎಂದು ಹೇಳಿದ್ದಾನೆ.

ಜಾತಿ, ಧರ್ಮ ಎಂದು ಹೊಡೆದಾಡುವವರು ತಲೆತಗ್ಗಿಸುವಂತಿದೆ 27 ವರ್ಷದ ಸದ್ದಾಂ ಹುಸೇನ್‌ ಬದುಕು. ಸದ್ದಾಂ ಮುಸ್ಲಿಂನಾದರೂ ಮಸೀದಿ ಮತ್ತು ಮಂದಿರ ಎರಡಕ್ಕೂ ಹೋಗುತ್ತಾನೆ. ನಮಾಜ್‌ ಮಾಡುತ್ತಾನೆ, ಪೂಜೆಯನ್ನೂ ಮಾಡುತ್ತಾನೆ. ದಿನ ಬೆಳಗಾದರೆ ಮಸೀದಿಗೆ ಹೋಗಿ ಸ್ವಚ್ಛತಾ ಕಾರ್ಯ ಮಾಡುತ್ತಾನೆ. ಹಾಗೆಯೇ ಹಬ್ಬ-ಹರಿದಿನಗಳಲ್ಲಿ, ಬಿಡುವು ಸಿಕ್ಕಾಗ ಮಂದಿರಗಳಿಗೂ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ನಿರತನಾಗುತ್ತಾನೆ.

’ನನಗೆ ಶಾಂತಿ, ನೆಮ್ಮದಿ ಮುಖ್ಯ. ಯಾವ ಧರ್ಮವಾದರೇನು, ಜಾತಿಯಾದರೇನು..? ನನಗೆ ಮಂದಿರ ಮತ್ತು ಮಸೀದಿ ಎರಡರಲ್ಲೂ ಸಂತೋಷ ಸಿಗುತ್ತದೆ’ ಎನ್ನುವುದು ಸದ್ದಾಂ ಅವರ ಮನದಾಳದ ಮಾತು. ’ನಾನು ಟಿವಿ ಹಾಗೂ ನ್ಯೂಸ್‌ ನೋಡುವುದಿಲ್ಲ. ನನ್ನ ಸಹೋದರ ಬಂದು ನನಗೆ ಅಯೋಧ್ಯೆ ತೀರ್ಪಿನ ಕುರಿತು ಹೇಳಿದ. ಆದರೆ ನನಗೆ ಅದ್ಯಾವುದಕ್ಕೂ ಏನೂ ಅನ್ನಿಸಲಿಲ್ಲ. ನನಗೆ ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸ ಕಾಣಿಸುವುದಿಲ್ಲ’ ಅಂತಾರೆ ಸದ್ದಾಂ.

ರಂಜಾನ್‌ ಆಗಿರಲಿ ಅಥವಾ ರಾಮನವಮಿಯೇ ಬರಲಿ, ಎಲ್ಲರೂ ನನ್ನನ್ನು ಸ್ವಚ್ಛತಾ ಕೆಲಸಕ್ಕೆ ಕರೆಯುತ್ತಾರೆ. ಮಿನಾರ್‌ ಕಂಬಗಳನ್ನು ಹತ್ತಿ ಕ್ಲೀನ್‌ ಮಾಡಿದ್ದೇನೆ, ಮಸೀದಿ ಗೋಡೆಗಳಿಗೆ ಬಣ್ಣವನ್ನೂ ಬಳಿದಿದ್ದೇನೆ. ಮಂದಿರಗಳನ್ನು ಸ್ವಚ್ಛಗೊಳಿಸಿದ್ದೇನೆ. ರಂಜಾನ್‌ ದಿನಗಳಲ್ಲಿ ಉಪವಾಸ ಬಿಡುವ ಮುನ್ನ ಪ್ರಾರ್ಥನೆಗೆ ಬರುವ ಜನರಿಗೆ ಹಣ್ಣು-ಹಂಪಲು  ಹಂಚುತ್ತೇನೆ. ದೇವರ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ.

ಇಷ್ಟೇ ಅಲ್ಲ.. ರಾಮಮಂದಿರಕ್ಕೂ ಹೋಗುತ್ತೇನೆ. ಗೋಪುರಗಳನ್ನು ಹತ್ತಿ ಶುಚಿಗೊಳಿಸುತ್ತೇನೆ. ರಾಮನವಮಿ ಹಬ್ಬಕ್ಕೂ ಮೊದಲು ಮಂದಿರಕ್ಕೆ ಪೇಂಟಿಂಗ್‌ ಮಾಡುತ್ತೇನೆ ಎನ್ನುತ್ತಾನೆ. ಅಂದ ಹಾಗೇ ಸದ್ದಾಂ ಓದಿರುವುದು ಕೇವಲ ಎರಡನೇ ತರಗತಿ ಮಾತ್ರ. ಗಂದಿಗೆ ಹೆಸರಿನ ಅಂಗಡಿಯಲ್ಲಿ ಕೆಲಸ ಮಾಡುತ್ತಾನೆ. ತಾಯಿ ಮತ್ತು ಸಹೋದರನೊಂದಿಗೆ ವಾಸ್ತವ್ಯ ಹೂಡಿರುವ ಸದ್ದಾಂ ಏರಿಯಾ ಜನರಿಗೆ ಕೈಲಾದಷ್ಟು ಸಹಾಯ ಮಾಡುತ್ತಾನೆ. ಕಷ್ಟದಲ್ಲಿರುವವರಿಗೆ ಹೆಗಲು ಕೊಡುತ್ತಾನೆ.

ದೇವರು ಎಲ್ಲರಿಗೂ ಒಬ್ಬನೇ ಮತ್ತು ಒಂದೇ. ಹಿಂದೂ ಮತ್ತು ಮುಸ್ಲಿಂರು ಸಹೋದರರಿದ್ದಂತೆ ಎಂದು ನಂಬಿರುವ ಸದ್ದಾಂ ಅವರ ಗುಣಗಾನ ಮಾಡಿದ್ದಾರೆ ಗಂದಿಗೆ ಅಂಗಡಿ ಮಾಲೀಕ ವೆಂಕಟೇಶ್‌ ಬಾಬು. ನಾವೆಲ್ಲಾ ಸಮಾಜದ ಶಾಂತಿ, ಏಕತೆ, ಐಕ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸಮಾಜಕ್ಕೆ ಧಕ್ಕೆ ಬಾರದಂತೆ ಜೀವಿಸಬೇಕು ಎನ್ನುವುದೇ ಸದ್ದಾಂ ಬದುಕಿನ ಉದ್ದೇಶ.

ಕೃಪೆ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...