Homeಮುಖಪುಟ”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ": ಸದ್ದಾಂ ಹುಸೇನ್‌

”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ”: ಸದ್ದಾಂ ಹುಸೇನ್‌

- Advertisement -
- Advertisement -

ಸುಪ್ರೀಂಕೋರ್ಟ್‌ ನೀಡಿರುವ ಅಯೋಧ್ಯೆ ತೀರ್ಪನ್ನು ಇಡೀ ದೇಶವೇ ಗೌರವಿಸಿದೆ. ಕೆಲ ಭಿನ್ನಾಭಿಪ್ರಾಯ, ಮುನಿಸಿನ ಮಧ್ಯೆಯೂ ಸುಪ್ರೀಂ ತೀರ್ಪಿಗೆ ಎಲ್ಲರೂ ತಲೆಬಾಗಿದ್ದಾರೆ. ಆದರೆ ಕೆಲವರು ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ, ಶಾಂತಿ, ನೆಮ್ಮದಿಯಿಂದ ನಾವೆಲ್ಲಾ ಒಂದೇ ಎಂಬ ಮಂತ್ರವನ್ನೇ ಜೀವನದ ಉಸಿರಾಗಿಸಿಕೊಂಡು ಬದುಕುತ್ತಿದ್ದಾರೆ. ಇದೇ ನಮ್ಮ ದೇಶದ ಭಾವೈಕ್ಯತೆಯ ಸಂದೇಶ ಕೂಡ.

ಇಷ್ಟೆಲ್ಲಾ ಪೀಠಿಕೆ ಯಾಕೆ ಅಂದ್ರೆ… ಬೆಂಗಳೂರಿನಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲರಿಗೂ ಆದರ್ಶಪ್ರಾಯವಾಗುವಂಥ ಮಾತು ಹೇಳಿದ್ದಾನೆ. ಮಾತಷ್ಟೇ ಅಲ್ಲ, ಕೃತಿಯೂ ಕೂಡ ಹಾಗೇ ಇದೆ. ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಾಗಿರುವ ಸದ್ದಾಂ ಹುಸೇನ್‌ ಎಂಬ ಮುಸ್ಲಿಂ ಯುವಕ ಮಂದಿರ, ಮಸೀದಿಯಲ್ಲಿ ನನಗೆ ಯಾವುದೇ ವ್ಯತ್ಯಾಸ ಕಾಣುವುದಿಲ್ಲ ಎಂದು ಹೇಳಿದ್ದಾನೆ.

ಜಾತಿ, ಧರ್ಮ ಎಂದು ಹೊಡೆದಾಡುವವರು ತಲೆತಗ್ಗಿಸುವಂತಿದೆ 27 ವರ್ಷದ ಸದ್ದಾಂ ಹುಸೇನ್‌ ಬದುಕು. ಸದ್ದಾಂ ಮುಸ್ಲಿಂನಾದರೂ ಮಸೀದಿ ಮತ್ತು ಮಂದಿರ ಎರಡಕ್ಕೂ ಹೋಗುತ್ತಾನೆ. ನಮಾಜ್‌ ಮಾಡುತ್ತಾನೆ, ಪೂಜೆಯನ್ನೂ ಮಾಡುತ್ತಾನೆ. ದಿನ ಬೆಳಗಾದರೆ ಮಸೀದಿಗೆ ಹೋಗಿ ಸ್ವಚ್ಛತಾ ಕಾರ್ಯ ಮಾಡುತ್ತಾನೆ. ಹಾಗೆಯೇ ಹಬ್ಬ-ಹರಿದಿನಗಳಲ್ಲಿ, ಬಿಡುವು ಸಿಕ್ಕಾಗ ಮಂದಿರಗಳಿಗೂ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ನಿರತನಾಗುತ್ತಾನೆ.

’ನನಗೆ ಶಾಂತಿ, ನೆಮ್ಮದಿ ಮುಖ್ಯ. ಯಾವ ಧರ್ಮವಾದರೇನು, ಜಾತಿಯಾದರೇನು..? ನನಗೆ ಮಂದಿರ ಮತ್ತು ಮಸೀದಿ ಎರಡರಲ್ಲೂ ಸಂತೋಷ ಸಿಗುತ್ತದೆ’ ಎನ್ನುವುದು ಸದ್ದಾಂ ಅವರ ಮನದಾಳದ ಮಾತು. ’ನಾನು ಟಿವಿ ಹಾಗೂ ನ್ಯೂಸ್‌ ನೋಡುವುದಿಲ್ಲ. ನನ್ನ ಸಹೋದರ ಬಂದು ನನಗೆ ಅಯೋಧ್ಯೆ ತೀರ್ಪಿನ ಕುರಿತು ಹೇಳಿದ. ಆದರೆ ನನಗೆ ಅದ್ಯಾವುದಕ್ಕೂ ಏನೂ ಅನ್ನಿಸಲಿಲ್ಲ. ನನಗೆ ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸ ಕಾಣಿಸುವುದಿಲ್ಲ’ ಅಂತಾರೆ ಸದ್ದಾಂ.

ರಂಜಾನ್‌ ಆಗಿರಲಿ ಅಥವಾ ರಾಮನವಮಿಯೇ ಬರಲಿ, ಎಲ್ಲರೂ ನನ್ನನ್ನು ಸ್ವಚ್ಛತಾ ಕೆಲಸಕ್ಕೆ ಕರೆಯುತ್ತಾರೆ. ಮಿನಾರ್‌ ಕಂಬಗಳನ್ನು ಹತ್ತಿ ಕ್ಲೀನ್‌ ಮಾಡಿದ್ದೇನೆ, ಮಸೀದಿ ಗೋಡೆಗಳಿಗೆ ಬಣ್ಣವನ್ನೂ ಬಳಿದಿದ್ದೇನೆ. ಮಂದಿರಗಳನ್ನು ಸ್ವಚ್ಛಗೊಳಿಸಿದ್ದೇನೆ. ರಂಜಾನ್‌ ದಿನಗಳಲ್ಲಿ ಉಪವಾಸ ಬಿಡುವ ಮುನ್ನ ಪ್ರಾರ್ಥನೆಗೆ ಬರುವ ಜನರಿಗೆ ಹಣ್ಣು-ಹಂಪಲು  ಹಂಚುತ್ತೇನೆ. ದೇವರ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ.

ಇಷ್ಟೇ ಅಲ್ಲ.. ರಾಮಮಂದಿರಕ್ಕೂ ಹೋಗುತ್ತೇನೆ. ಗೋಪುರಗಳನ್ನು ಹತ್ತಿ ಶುಚಿಗೊಳಿಸುತ್ತೇನೆ. ರಾಮನವಮಿ ಹಬ್ಬಕ್ಕೂ ಮೊದಲು ಮಂದಿರಕ್ಕೆ ಪೇಂಟಿಂಗ್‌ ಮಾಡುತ್ತೇನೆ ಎನ್ನುತ್ತಾನೆ. ಅಂದ ಹಾಗೇ ಸದ್ದಾಂ ಓದಿರುವುದು ಕೇವಲ ಎರಡನೇ ತರಗತಿ ಮಾತ್ರ. ಗಂದಿಗೆ ಹೆಸರಿನ ಅಂಗಡಿಯಲ್ಲಿ ಕೆಲಸ ಮಾಡುತ್ತಾನೆ. ತಾಯಿ ಮತ್ತು ಸಹೋದರನೊಂದಿಗೆ ವಾಸ್ತವ್ಯ ಹೂಡಿರುವ ಸದ್ದಾಂ ಏರಿಯಾ ಜನರಿಗೆ ಕೈಲಾದಷ್ಟು ಸಹಾಯ ಮಾಡುತ್ತಾನೆ. ಕಷ್ಟದಲ್ಲಿರುವವರಿಗೆ ಹೆಗಲು ಕೊಡುತ್ತಾನೆ.

ದೇವರು ಎಲ್ಲರಿಗೂ ಒಬ್ಬನೇ ಮತ್ತು ಒಂದೇ. ಹಿಂದೂ ಮತ್ತು ಮುಸ್ಲಿಂರು ಸಹೋದರರಿದ್ದಂತೆ ಎಂದು ನಂಬಿರುವ ಸದ್ದಾಂ ಅವರ ಗುಣಗಾನ ಮಾಡಿದ್ದಾರೆ ಗಂದಿಗೆ ಅಂಗಡಿ ಮಾಲೀಕ ವೆಂಕಟೇಶ್‌ ಬಾಬು. ನಾವೆಲ್ಲಾ ಸಮಾಜದ ಶಾಂತಿ, ಏಕತೆ, ಐಕ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸಮಾಜಕ್ಕೆ ಧಕ್ಕೆ ಬಾರದಂತೆ ಜೀವಿಸಬೇಕು ಎನ್ನುವುದೇ ಸದ್ದಾಂ ಬದುಕಿನ ಉದ್ದೇಶ.

ಕೃಪೆ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...