Homeಮುಖಪುಟ”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ": ಸದ್ದಾಂ ಹುಸೇನ್‌

”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ”: ಸದ್ದಾಂ ಹುಸೇನ್‌

- Advertisement -
- Advertisement -

ಸುಪ್ರೀಂಕೋರ್ಟ್‌ ನೀಡಿರುವ ಅಯೋಧ್ಯೆ ತೀರ್ಪನ್ನು ಇಡೀ ದೇಶವೇ ಗೌರವಿಸಿದೆ. ಕೆಲ ಭಿನ್ನಾಭಿಪ್ರಾಯ, ಮುನಿಸಿನ ಮಧ್ಯೆಯೂ ಸುಪ್ರೀಂ ತೀರ್ಪಿಗೆ ಎಲ್ಲರೂ ತಲೆಬಾಗಿದ್ದಾರೆ. ಆದರೆ ಕೆಲವರು ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ, ಶಾಂತಿ, ನೆಮ್ಮದಿಯಿಂದ ನಾವೆಲ್ಲಾ ಒಂದೇ ಎಂಬ ಮಂತ್ರವನ್ನೇ ಜೀವನದ ಉಸಿರಾಗಿಸಿಕೊಂಡು ಬದುಕುತ್ತಿದ್ದಾರೆ. ಇದೇ ನಮ್ಮ ದೇಶದ ಭಾವೈಕ್ಯತೆಯ ಸಂದೇಶ ಕೂಡ.

ಇಷ್ಟೆಲ್ಲಾ ಪೀಠಿಕೆ ಯಾಕೆ ಅಂದ್ರೆ… ಬೆಂಗಳೂರಿನಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲರಿಗೂ ಆದರ್ಶಪ್ರಾಯವಾಗುವಂಥ ಮಾತು ಹೇಳಿದ್ದಾನೆ. ಮಾತಷ್ಟೇ ಅಲ್ಲ, ಕೃತಿಯೂ ಕೂಡ ಹಾಗೇ ಇದೆ. ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಾಗಿರುವ ಸದ್ದಾಂ ಹುಸೇನ್‌ ಎಂಬ ಮುಸ್ಲಿಂ ಯುವಕ ಮಂದಿರ, ಮಸೀದಿಯಲ್ಲಿ ನನಗೆ ಯಾವುದೇ ವ್ಯತ್ಯಾಸ ಕಾಣುವುದಿಲ್ಲ ಎಂದು ಹೇಳಿದ್ದಾನೆ.

ಜಾತಿ, ಧರ್ಮ ಎಂದು ಹೊಡೆದಾಡುವವರು ತಲೆತಗ್ಗಿಸುವಂತಿದೆ 27 ವರ್ಷದ ಸದ್ದಾಂ ಹುಸೇನ್‌ ಬದುಕು. ಸದ್ದಾಂ ಮುಸ್ಲಿಂನಾದರೂ ಮಸೀದಿ ಮತ್ತು ಮಂದಿರ ಎರಡಕ್ಕೂ ಹೋಗುತ್ತಾನೆ. ನಮಾಜ್‌ ಮಾಡುತ್ತಾನೆ, ಪೂಜೆಯನ್ನೂ ಮಾಡುತ್ತಾನೆ. ದಿನ ಬೆಳಗಾದರೆ ಮಸೀದಿಗೆ ಹೋಗಿ ಸ್ವಚ್ಛತಾ ಕಾರ್ಯ ಮಾಡುತ್ತಾನೆ. ಹಾಗೆಯೇ ಹಬ್ಬ-ಹರಿದಿನಗಳಲ್ಲಿ, ಬಿಡುವು ಸಿಕ್ಕಾಗ ಮಂದಿರಗಳಿಗೂ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ನಿರತನಾಗುತ್ತಾನೆ.

’ನನಗೆ ಶಾಂತಿ, ನೆಮ್ಮದಿ ಮುಖ್ಯ. ಯಾವ ಧರ್ಮವಾದರೇನು, ಜಾತಿಯಾದರೇನು..? ನನಗೆ ಮಂದಿರ ಮತ್ತು ಮಸೀದಿ ಎರಡರಲ್ಲೂ ಸಂತೋಷ ಸಿಗುತ್ತದೆ’ ಎನ್ನುವುದು ಸದ್ದಾಂ ಅವರ ಮನದಾಳದ ಮಾತು. ’ನಾನು ಟಿವಿ ಹಾಗೂ ನ್ಯೂಸ್‌ ನೋಡುವುದಿಲ್ಲ. ನನ್ನ ಸಹೋದರ ಬಂದು ನನಗೆ ಅಯೋಧ್ಯೆ ತೀರ್ಪಿನ ಕುರಿತು ಹೇಳಿದ. ಆದರೆ ನನಗೆ ಅದ್ಯಾವುದಕ್ಕೂ ಏನೂ ಅನ್ನಿಸಲಿಲ್ಲ. ನನಗೆ ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸ ಕಾಣಿಸುವುದಿಲ್ಲ’ ಅಂತಾರೆ ಸದ್ದಾಂ.

ರಂಜಾನ್‌ ಆಗಿರಲಿ ಅಥವಾ ರಾಮನವಮಿಯೇ ಬರಲಿ, ಎಲ್ಲರೂ ನನ್ನನ್ನು ಸ್ವಚ್ಛತಾ ಕೆಲಸಕ್ಕೆ ಕರೆಯುತ್ತಾರೆ. ಮಿನಾರ್‌ ಕಂಬಗಳನ್ನು ಹತ್ತಿ ಕ್ಲೀನ್‌ ಮಾಡಿದ್ದೇನೆ, ಮಸೀದಿ ಗೋಡೆಗಳಿಗೆ ಬಣ್ಣವನ್ನೂ ಬಳಿದಿದ್ದೇನೆ. ಮಂದಿರಗಳನ್ನು ಸ್ವಚ್ಛಗೊಳಿಸಿದ್ದೇನೆ. ರಂಜಾನ್‌ ದಿನಗಳಲ್ಲಿ ಉಪವಾಸ ಬಿಡುವ ಮುನ್ನ ಪ್ರಾರ್ಥನೆಗೆ ಬರುವ ಜನರಿಗೆ ಹಣ್ಣು-ಹಂಪಲು  ಹಂಚುತ್ತೇನೆ. ದೇವರ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ.

ಇಷ್ಟೇ ಅಲ್ಲ.. ರಾಮಮಂದಿರಕ್ಕೂ ಹೋಗುತ್ತೇನೆ. ಗೋಪುರಗಳನ್ನು ಹತ್ತಿ ಶುಚಿಗೊಳಿಸುತ್ತೇನೆ. ರಾಮನವಮಿ ಹಬ್ಬಕ್ಕೂ ಮೊದಲು ಮಂದಿರಕ್ಕೆ ಪೇಂಟಿಂಗ್‌ ಮಾಡುತ್ತೇನೆ ಎನ್ನುತ್ತಾನೆ. ಅಂದ ಹಾಗೇ ಸದ್ದಾಂ ಓದಿರುವುದು ಕೇವಲ ಎರಡನೇ ತರಗತಿ ಮಾತ್ರ. ಗಂದಿಗೆ ಹೆಸರಿನ ಅಂಗಡಿಯಲ್ಲಿ ಕೆಲಸ ಮಾಡುತ್ತಾನೆ. ತಾಯಿ ಮತ್ತು ಸಹೋದರನೊಂದಿಗೆ ವಾಸ್ತವ್ಯ ಹೂಡಿರುವ ಸದ್ದಾಂ ಏರಿಯಾ ಜನರಿಗೆ ಕೈಲಾದಷ್ಟು ಸಹಾಯ ಮಾಡುತ್ತಾನೆ. ಕಷ್ಟದಲ್ಲಿರುವವರಿಗೆ ಹೆಗಲು ಕೊಡುತ್ತಾನೆ.

ದೇವರು ಎಲ್ಲರಿಗೂ ಒಬ್ಬನೇ ಮತ್ತು ಒಂದೇ. ಹಿಂದೂ ಮತ್ತು ಮುಸ್ಲಿಂರು ಸಹೋದರರಿದ್ದಂತೆ ಎಂದು ನಂಬಿರುವ ಸದ್ದಾಂ ಅವರ ಗುಣಗಾನ ಮಾಡಿದ್ದಾರೆ ಗಂದಿಗೆ ಅಂಗಡಿ ಮಾಲೀಕ ವೆಂಕಟೇಶ್‌ ಬಾಬು. ನಾವೆಲ್ಲಾ ಸಮಾಜದ ಶಾಂತಿ, ಏಕತೆ, ಐಕ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸಮಾಜಕ್ಕೆ ಧಕ್ಕೆ ಬಾರದಂತೆ ಜೀವಿಸಬೇಕು ಎನ್ನುವುದೇ ಸದ್ದಾಂ ಬದುಕಿನ ಉದ್ದೇಶ.

ಕೃಪೆ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...