Homeಮುಖಪುಟ”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ": ಸದ್ದಾಂ ಹುಸೇನ್‌

”ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸವಿಲ್ಲ”: ಸದ್ದಾಂ ಹುಸೇನ್‌

- Advertisement -
- Advertisement -

ಸುಪ್ರೀಂಕೋರ್ಟ್‌ ನೀಡಿರುವ ಅಯೋಧ್ಯೆ ತೀರ್ಪನ್ನು ಇಡೀ ದೇಶವೇ ಗೌರವಿಸಿದೆ. ಕೆಲ ಭಿನ್ನಾಭಿಪ್ರಾಯ, ಮುನಿಸಿನ ಮಧ್ಯೆಯೂ ಸುಪ್ರೀಂ ತೀರ್ಪಿಗೆ ಎಲ್ಲರೂ ತಲೆಬಾಗಿದ್ದಾರೆ. ಆದರೆ ಕೆಲವರು ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ, ಶಾಂತಿ, ನೆಮ್ಮದಿಯಿಂದ ನಾವೆಲ್ಲಾ ಒಂದೇ ಎಂಬ ಮಂತ್ರವನ್ನೇ ಜೀವನದ ಉಸಿರಾಗಿಸಿಕೊಂಡು ಬದುಕುತ್ತಿದ್ದಾರೆ. ಇದೇ ನಮ್ಮ ದೇಶದ ಭಾವೈಕ್ಯತೆಯ ಸಂದೇಶ ಕೂಡ.

ಇಷ್ಟೆಲ್ಲಾ ಪೀಠಿಕೆ ಯಾಕೆ ಅಂದ್ರೆ… ಬೆಂಗಳೂರಿನಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲರಿಗೂ ಆದರ್ಶಪ್ರಾಯವಾಗುವಂಥ ಮಾತು ಹೇಳಿದ್ದಾನೆ. ಮಾತಷ್ಟೇ ಅಲ್ಲ, ಕೃತಿಯೂ ಕೂಡ ಹಾಗೇ ಇದೆ. ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಾಗಿರುವ ಸದ್ದಾಂ ಹುಸೇನ್‌ ಎಂಬ ಮುಸ್ಲಿಂ ಯುವಕ ಮಂದಿರ, ಮಸೀದಿಯಲ್ಲಿ ನನಗೆ ಯಾವುದೇ ವ್ಯತ್ಯಾಸ ಕಾಣುವುದಿಲ್ಲ ಎಂದು ಹೇಳಿದ್ದಾನೆ.

ಜಾತಿ, ಧರ್ಮ ಎಂದು ಹೊಡೆದಾಡುವವರು ತಲೆತಗ್ಗಿಸುವಂತಿದೆ 27 ವರ್ಷದ ಸದ್ದಾಂ ಹುಸೇನ್‌ ಬದುಕು. ಸದ್ದಾಂ ಮುಸ್ಲಿಂನಾದರೂ ಮಸೀದಿ ಮತ್ತು ಮಂದಿರ ಎರಡಕ್ಕೂ ಹೋಗುತ್ತಾನೆ. ನಮಾಜ್‌ ಮಾಡುತ್ತಾನೆ, ಪೂಜೆಯನ್ನೂ ಮಾಡುತ್ತಾನೆ. ದಿನ ಬೆಳಗಾದರೆ ಮಸೀದಿಗೆ ಹೋಗಿ ಸ್ವಚ್ಛತಾ ಕಾರ್ಯ ಮಾಡುತ್ತಾನೆ. ಹಾಗೆಯೇ ಹಬ್ಬ-ಹರಿದಿನಗಳಲ್ಲಿ, ಬಿಡುವು ಸಿಕ್ಕಾಗ ಮಂದಿರಗಳಿಗೂ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ನಿರತನಾಗುತ್ತಾನೆ.

’ನನಗೆ ಶಾಂತಿ, ನೆಮ್ಮದಿ ಮುಖ್ಯ. ಯಾವ ಧರ್ಮವಾದರೇನು, ಜಾತಿಯಾದರೇನು..? ನನಗೆ ಮಂದಿರ ಮತ್ತು ಮಸೀದಿ ಎರಡರಲ್ಲೂ ಸಂತೋಷ ಸಿಗುತ್ತದೆ’ ಎನ್ನುವುದು ಸದ್ದಾಂ ಅವರ ಮನದಾಳದ ಮಾತು. ’ನಾನು ಟಿವಿ ಹಾಗೂ ನ್ಯೂಸ್‌ ನೋಡುವುದಿಲ್ಲ. ನನ್ನ ಸಹೋದರ ಬಂದು ನನಗೆ ಅಯೋಧ್ಯೆ ತೀರ್ಪಿನ ಕುರಿತು ಹೇಳಿದ. ಆದರೆ ನನಗೆ ಅದ್ಯಾವುದಕ್ಕೂ ಏನೂ ಅನ್ನಿಸಲಿಲ್ಲ. ನನಗೆ ರಾಮ ಮತ್ತು ಅಲ್ಲಾ ನಡುವೆ ಯಾವುದೇ ವ್ಯತ್ಯಾಸ ಕಾಣಿಸುವುದಿಲ್ಲ’ ಅಂತಾರೆ ಸದ್ದಾಂ.

ರಂಜಾನ್‌ ಆಗಿರಲಿ ಅಥವಾ ರಾಮನವಮಿಯೇ ಬರಲಿ, ಎಲ್ಲರೂ ನನ್ನನ್ನು ಸ್ವಚ್ಛತಾ ಕೆಲಸಕ್ಕೆ ಕರೆಯುತ್ತಾರೆ. ಮಿನಾರ್‌ ಕಂಬಗಳನ್ನು ಹತ್ತಿ ಕ್ಲೀನ್‌ ಮಾಡಿದ್ದೇನೆ, ಮಸೀದಿ ಗೋಡೆಗಳಿಗೆ ಬಣ್ಣವನ್ನೂ ಬಳಿದಿದ್ದೇನೆ. ಮಂದಿರಗಳನ್ನು ಸ್ವಚ್ಛಗೊಳಿಸಿದ್ದೇನೆ. ರಂಜಾನ್‌ ದಿನಗಳಲ್ಲಿ ಉಪವಾಸ ಬಿಡುವ ಮುನ್ನ ಪ್ರಾರ್ಥನೆಗೆ ಬರುವ ಜನರಿಗೆ ಹಣ್ಣು-ಹಂಪಲು  ಹಂಚುತ್ತೇನೆ. ದೇವರ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ.

ಇಷ್ಟೇ ಅಲ್ಲ.. ರಾಮಮಂದಿರಕ್ಕೂ ಹೋಗುತ್ತೇನೆ. ಗೋಪುರಗಳನ್ನು ಹತ್ತಿ ಶುಚಿಗೊಳಿಸುತ್ತೇನೆ. ರಾಮನವಮಿ ಹಬ್ಬಕ್ಕೂ ಮೊದಲು ಮಂದಿರಕ್ಕೆ ಪೇಂಟಿಂಗ್‌ ಮಾಡುತ್ತೇನೆ ಎನ್ನುತ್ತಾನೆ. ಅಂದ ಹಾಗೇ ಸದ್ದಾಂ ಓದಿರುವುದು ಕೇವಲ ಎರಡನೇ ತರಗತಿ ಮಾತ್ರ. ಗಂದಿಗೆ ಹೆಸರಿನ ಅಂಗಡಿಯಲ್ಲಿ ಕೆಲಸ ಮಾಡುತ್ತಾನೆ. ತಾಯಿ ಮತ್ತು ಸಹೋದರನೊಂದಿಗೆ ವಾಸ್ತವ್ಯ ಹೂಡಿರುವ ಸದ್ದಾಂ ಏರಿಯಾ ಜನರಿಗೆ ಕೈಲಾದಷ್ಟು ಸಹಾಯ ಮಾಡುತ್ತಾನೆ. ಕಷ್ಟದಲ್ಲಿರುವವರಿಗೆ ಹೆಗಲು ಕೊಡುತ್ತಾನೆ.

ದೇವರು ಎಲ್ಲರಿಗೂ ಒಬ್ಬನೇ ಮತ್ತು ಒಂದೇ. ಹಿಂದೂ ಮತ್ತು ಮುಸ್ಲಿಂರು ಸಹೋದರರಿದ್ದಂತೆ ಎಂದು ನಂಬಿರುವ ಸದ್ದಾಂ ಅವರ ಗುಣಗಾನ ಮಾಡಿದ್ದಾರೆ ಗಂದಿಗೆ ಅಂಗಡಿ ಮಾಲೀಕ ವೆಂಕಟೇಶ್‌ ಬಾಬು. ನಾವೆಲ್ಲಾ ಸಮಾಜದ ಶಾಂತಿ, ಏಕತೆ, ಐಕ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸಮಾಜಕ್ಕೆ ಧಕ್ಕೆ ಬಾರದಂತೆ ಜೀವಿಸಬೇಕು ಎನ್ನುವುದೇ ಸದ್ದಾಂ ಬದುಕಿನ ಉದ್ದೇಶ.

ಕೃಪೆ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...