Homeಕರ್ನಾಟಕದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

- Advertisement -
- Advertisement -

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ‘ಸಂವಿಧಾನ ಸಂರಕ್ಷಿಸಿ ಮನುಸ್ಮೃತಿ ಹಿಮ್ಮೆಟ್ಟಿಸೋಣ’ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

“ಸಂವಿಧಾನಕ್ಕೆ ಪರ್ಯಾಯವಾಗಿ ಮನುವಾದ ಜಾರಿಗೆ ತರುವ ಪ್ರಯತ್ನ ಹಲವು ವರ್ಷಗಳಿಂದ ನಡೆಯುತ್ತಿದೆ. ಅಂಬೇಡ್ಕರ್ ಮತ್ತು ಬುದ್ಧನ ಅನುಯಾಯಿಗಳಾದ ನಮ್ಮ ಮೇಲೆ ಬಹಳಷ್ಟು ಜವಾಬ್ದಾರಿ ಇದೆ. ಕಳೆದ 12 ವರ್ಷಗಳ ಬಿಜೆಪಿ ಆಡಳಿತದಲ್ಲಿ ದೇಶದ ವಾತಾವರಣ ಸಾಕಷ್ಟು ಬದಲಾಗಿದೆ, ಮನುವಾದಿಗಳು ಶರವೇಗದಲ್ಲಿ ಬೆಳೆಯುತ್ತಿದ್ದಾರೆ. ಏಕೆಂದರೆ, ನಮ್ಮ ನಡುವೆ ಸಾಕಷ್ಟು ಭಿನ್ನಾಭಿಪ್ರಾಯ ಇದೆ. ನಾವು ಒಂದಾಗದೇ ಅವರ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ. ನಮ್ಮ ನಡುವಿನ ಸಮಸ್ಯೆಗಳ ಬಗ್ಗೆಯೂ ಚರ್ಚೆ ಆಗಬೇಕು. ಆಗ ಮಾತ್ರ ಸಂವಿಧಾನ ರಕ್ಷಣೆ ಸಾಧ್ಯ” ಎಂದು ಕಿವಿಮಾತು ಹೇಳಿದರು.

“ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಹಾರದ ಹಿಂದುಳಿದವರು ಏನು ಮಾಡಿದರು ಎಂಬುದು ನಮಗೆಲ್ಲಾ ಗೊತ್ತಿದೆ. ಕರ್ನಾಟಕದಲ್ಲೂ ಹೀಗೆ ಆದರೆ ಆಶ್ಚರ್ಯಪಡಬೇಕಿಲ್ಲ. ‘ಸಂವಿಧಾನ ನಮಗೆ ಬೇಕಿಲ್ಲ.. ಬೇರೆ ಸಂವಿಧಾನ ಬೇಕು’ ಎಂದು ಮನುವಾದಿಗಳು ಬಹಿರಂಗವಾಗಿ ಹೇಳುತ್ತಿದ್ದಾರೆ. ಬಸವಣ್ಣನ ಅಭಿಮಾನಿಗಳು ತಾಲಿಬಾನಿಗಳು ಎಂದು ಸ್ವಾಮೀಜಿಯೊಬ್ಬರು ಹೇಳಿದ್ದಾರೆ. ಏಕೆಂದರೆ. ಇಂದು ಅವರ ಶಕ್ತಿ, ಸದಸ್ಯರು ಮತ್ತು ಶಾಖೆಗಳು ಹೆಚ್ಚಾಗಿವೆ, ನಮ್ಮಲ್ಲಿ ಶಾಖೆಗಳು ಇಲ್ಲ. ನಾವು ಒಂದು ಕರೆ ಕೊಟ್ಟಾಗ ಲಕ್ಷಾಂತರ ಜನ ಸೇರಿದರೆ ಮಾತ್ರ ಸಂವಿಧಾನ ರಕ್ಷಣೆ ಸಾಧ್ಯ. ಹೀಗೆ ನೂರಿನ್ನೂರು ಜನ ಸೇರಿಕೊಂಡು ಕಾರ್ಯಕ್ರಮ ಮಾಡಿದರೆ ಪ್ರಯೋಜನವಿಲ್ಲ” ಎಂದರು.

“ಎಲ್ಲವನ್ನೂ ಮರೆತು ನಾವು ಒಂದಾದರೆ ಮಾತ್ರ ಸಂವಿಧಾನ ರಕ್ಷಣೆ ಸಾಧ್ಯ. ನಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟಾಗಬೇಕು. ಬಿ.ಕೃಷ್ಣಪ್ಪ ದಲಿತ ಸಂಘರ್ಷ ಸಮಿತಿ (ದಸಂಸ) ಸ್ಥಾಪನೆ ಮಾಡಿದ ಬಳಿಕ ಸರ್ಕಾರಗಳು ಅವರ ಮಾತು ಕೇಳುತ್ತಿದ್ದವು. ಆದರೆ, ಇಂದು ನಮ್ಮಲ್ಲಿ ಒಡಕು ಹೆಚ್ಚಾಗಿದ್ದು ನಮ್ಮ ಮಾತು ಯಾರೂ ಕೇಳುತ್ತಿಲ್ಲ. ನಾವು ರಾಜಕೀಯ ಅಧಿಕಾರ ಹಿಡಿಯಬೇಕಾದರೆ ಒಗ್ಗಟಾಗಬೇಕು” ಎಂದರು.

“ಮನುಸ್ಮೃತಿ ಮತ್ತು ಸಂವಿಧಾನ ನಡುವಿನ ವ್ಯತ್ಯಾಸಗಳನ್ನು ನಾವು ನಮ್ಮವರಿಗೆ ಬಿಸಿಡಿ ಹೇಳಬೇಕು. ಇಲ್ಲದಿದ್ದರೆ ಅದನ್ನೂ ಒಂದು ಪುಸ್ತಕ ಎಂದುಕೊಳ್ಳುತ್ತಾರೆ. ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಬೇಕು. ನಾವು ಮಾತ್ರ ಬದಲಾವಣೆಯಾಗುವುದು ಪರಿಹಾರವಲ್ಲ. ನಾವು ನಮ್ಮ ಮನೆಯನ್ನು ಬದಲಾವಣೆ ಮಾಡಿದರೆ ಮಾತ್ರ ಬಾಬಾ ಸಾಹೇಬರ ಕನಸು ನನಸು ಮಾಡಲು ಸಾಧ್ಯ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...